Homeಎಂಟರ್ತೈನ್ಮೆಂಟ್ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ 'ಜಸ್ಟೀಸ್ ಹೇಮಾ ಸಮಿತಿ' ವರದಿ

ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ಲೈಂಗಿಕವಾಗಿ ಒಗ್ಗಿಕೊಂಡು ಹೋಗದಿದ್ದರೆ ಮಹಿಳಾ ಕಲಾವಿದರು ಚಿತ್ರರಂಗದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂದ ರಿಪೋರ್ಟ್‌

- Advertisement -
- Advertisement -

ಆಗಸ್ಟ್ 19, 2024ರಂದು ಬಹಿರಂಗಗೊಂಡ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಮಲಯಾಳಂ ಚಿತ್ರರಂಗದ ಇನ್ನೊಂದು ಮುಖ ಅಥವಾ ಭಯಾನಕತೆ ತೆರೆದಿಟ್ಟಿದೆ.

ಲೈಂಗಿಕವಾಗಿ ಒಗ್ಗಿಕೊಂಡು ಹೋಗದಿದ್ದರೆ ಮಹಿಳಾ ಕಲಾವಿದರು ಚಿತ್ರರಂಗದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂಬ ಸತ್ಯವನ್ನು ಹೇಮಾ ಸಮಿತಿ ವರದಿ ಬಿಚ್ಚಿಟ್ಟಿದೆ. ವರದಿಯಲ್ಲಿ ಉಲ್ಲೇಖಿಸಿರುವ ಕೆಲವೊಂದು ಬೆಚ್ಚಿ ಬೀಳಿಸುವ ವಿಷಯಗಳು ಆರ್‌ಟಿಐ ಮೂಲಕ ಮಾಧ್ಯಮಗಳಿಗೆ ಲಭ್ಯವಾಗಿದೆ.

ವರದಿ ಹೇಳುವಂತೆ ಪ್ರೊಡಕ್ಷನ್ ಕಂಟ್ರೋಲರ್ ಅಥವಾ ಸಿನಿಮಾದಲ್ಲಿ ಪಾತ್ರವನ್ನು ನೀಡುವವರು ಮೊದಲು ಮಹಿಳೆ/ಹುಡುಗಿಯನ್ನು ಸಂಪರ್ಕಿಸುತ್ತಾರೆ. ಆಕೆಗೆ ಅವಕಾಶ ನೀಡಬೇಕಾದರೆ ಲೈಂಗಿಕವಾಗಿ ಹೊಂದಾಣಿಕೆ ಮಾಡಿಕೊಳ್ಳುವ ಬೇಡಿಕೆಯನ್ನು ನೇರವಾಗಿ ಇಡುತ್ತಾರೆ. ಈ ಸಂದರ್ಭದಲ್ಲೇ ಪ್ರತಿಭೆಗೆ ಅವಕಾಶ ಸಿಗುವ ಆಸೆಯಿಂದ ಹೋಗಿರುವ ಹೆಣ್ಣು ಮಕ್ಕಳು ಕುಗ್ಗಿ ಹೋಗುತ್ತಾರೆ.

ವರದಿಯ ಪ್ರಕಾರ, ಸಿನಿಮಾಗಳಲ್ಲಿ ನಟಿಸುವ ಮಹಿಳೆಯರು/ ಹುಡುಗಿಯರು ಅವರ ಕುಟುಂಬದ ಜೊತೇನೆ ಹೆಚ್ಚಾಗಿ ಇರಲು ಬಯಸುತ್ತಾರೆ. ಏಕೆಂದರೆ, ಚಿತ್ರತಂಡದ ಜೊತೆ ಹೋಟೆಲ್ ರೂಮ್‌ಗಳಲ್ಲಿ ಉಳಿದುಕೊಂಡರೆ, ಅದೇ ತಂಡದ ಪುರುಷರು ಅವರ ಮೇಲೆ ಲೈಂಗಿಕವಾಗಿ ಕಣ್ಣು ಹಾಕುವ ಭಯವಿರುತ್ತದೆ.

ಹೋಟೆಲ್‌ನಲ್ಲಿ ಉಳಿದುಕೊಂಡರೆ ರಾತ್ರಿ ಹೊತ್ತು ಮದ್ಯಪಾನ ಮಾಡಿ ಬರುವ ಚಿತ್ರ ತಂಡದ ಪುರುಷರು, ಮಹಿಳೆ/ ಹುಡುಗಿ ತಂಗಿರುವ ಕೊಠಡಿಯ ಬಾಗಿಲು ಬಡಿಯುತ್ತಾರೆ. ಅದೂ ಕೂಡ ಜೋರಾಗಿ ಬಾಗಿಲು ಬಡಿಯುತ್ತಾರೆ. ಒಂದು ವೇಳೆ ಬಾಗಿಲು ತೆರೆಯದಿದ್ದರೆ ಬಾಗಿಲು ಒಡೆದು ಬಲವಂತವಾಗಿ ಒಳ ನುಗ್ಗುತ್ತಾರೆ. ಲೈಂಗಿಕ ಶೋಷಣೆ ಮಾಡುತ್ತಾರೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯ ಪತ್ನಿಯಾಗಿ ನಟಿಯೊಬ್ಬರು ನಟಿಸಬೇಕಾದ ಘಟನೆಯನ್ನು ಉಲ್ಲೇಖಿಸಿ ಸಮಿತಿಯ ವರದಿಯು ಹೀಗೆ ಹೇಳಿದೆ “ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯ ಜೊತೆ ಮರುದಿನ ಆಕೆ ಹೆಂಡತಿಯ ಪಾತ್ರ ಮಾಡಬೇಕಿತ್ತು. ಈ ಮೊದಲೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯಾದ್ದರಿಂದ, ಶೂಟಿಂಗ್ ವೇಳೆಯೂ ಆಕೆಯನ್ನು ಆತ ಅದೇ ರೀತಿ ಬಳಸಿಕೊಂಡಿದ್ದ. ಹೇಳಿಕೊಳ್ಳಲಾಗದ ಈ ನೋವು ಆಕೆಯ ಮುಖದಲ್ಲಿ ಮೂಡಿತ್ತು. ಆದ್ದರಿಂದ ಆಕೆ ಒಂದು ಶಾಟ್‌ಗೆ ಹದಿನೇಳು ರೀಟೇಕ್ ತೆಗದುಕೊಂಡಿದ್ದರು. ಈ ಕಾರಣಕ್ಕೆ ಆಕೆ ನಿರ್ದೇಶಕರಿಂದ ಅವಮಾನ ಎದುರಿಸಬೇಕಾಯಿತು”.

ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್, ಅಸಭ್ಯ ಫೋಟೋ, ವಿಡಿಯೋಗಳನ್ನು ಹಾಕುವ ಮೂಲಕ ನಮ್ಮ ಮಾನನಷ್ಟ ಮಾಡಲಾಗಿದೆ. ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ಅನೇಕ ಮಹಿಳಾ ನಟಿಯರು ಹೇಳಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಪುರುಷರೊಂದಿಗೆ ಲೈಂಗಿಕವಾಗಿ ಒಗ್ಗಿಕೊಂಡು ಹೋಗದ ಮಹಿಳಾ ನಟಿಯರನ್ನು ಸುಖಾ ಸುಮ್ಮನೆ ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಿಸಲಾಗುತ್ತದೆ. ಅವರ ವಿರುದ್ದ ಇಲ್ಲ ಸಲ್ಲದ ಲೈಂಗಿಕ ಆರೋಪಗಳನ್ನು ತೇಲಿ ಬಿಟ್ಟು ಗುರಿಪಡಿಸಲಾಗುತ್ತದೆ. ಶಿಶ್ನ ಸೇರಿದಂತೆ ಖಾಸಗಿ ಭಾಗಗಳ ಫೋಟೋಗಳನ್ನು ನಟಿಯರ ಗೋಡೆ ಮೇಲೆ ಹಾಕಿ ಅವಮಾನಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

2017ರಲ್ಲಿ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಕೇರಳ ಸರ್ಕಾರ, ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ಕುರಿತಂತೆ ವರದಿ ನೀಡಲು ನ್ಯಾಯಮೂರ್ತಿ ಕೆ ಹೇಮಾ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ಚಿತ್ರರಂಗದ ಕರಾಳ ಮುಖವನ್ನು ಎಲೆ ಎಲೆಯಾಗಿ ಬಿಚ್ಚಿಟ್ಟಿದೆ.

ಭಾರತದ ಎಲ್ಲಾ ಚಿತ್ರರಂಗಗಳಲ್ಲೂ ಕಾಸ್ಟಿಂಗ್ ಕೌಚ್‌ನಂತ ಲೈಂಗಿಕ ದೌರ್ಜನ್ಯಗಳ ಬಗ್ಗೆ ಹಿಂದಿನಿಂದಲೂ ಅಪವಾದವಿದೆ. ‘ಮೀ ಟೂ’ ಅಭಿಯಾನದ ಮೂಲಕ ಮಹಿಳಾ ಕಲಾವಿದರು ಧ್ವನಿ ಎತ್ತಿರುವುದು ಇದಕ್ಕೊಂದು ಸಾಕ್ಷಿ. ಆದರೆ, ಹೇಮಾ ಸಮಿತಿ ವರದಿ ಬಿಚ್ಚಿಟ್ಟ ಮಲಯಾಳಂ ಸಿನಿಮಾ ರಂಗದ ಸತ್ಯ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.

ನ್ಯಾಯಮೂರ್ತಿ ಹೇಮಾ ಸಮಿತಿಯು ತನ್ನ ವರದಿಯನ್ನು 2019 ರಲ್ಲಿ ಕೇರಳ ಮುಖ್ಯಮಂತ್ರಿಗೆ ಸಲ್ಲಿಸಿತ್ತು. ವರದಿಯನ್ನು ಸಾರ್ವಜನಿಕಗೊಳಿಸುವ ನಿರ್ಧಾರವನ್ನು ಜುಲೈ 5, 2024ರಲ್ಲಿ ತೆಗೆದುಕೊಳ್ಳಲಾಗಿತ್ತು. ಆದರೆ, ಚಿತ್ರ ನಿರ್ಮಾಪಕ ಸಜಿಮೋನ್ ಪರಾಯಿಲ್ ಸಲ್ಲಿಸಿದ್ದ ರಿಟ್ ಅರ್ಜಿ ಆಧರಿಸಿ ವರದಿ ಸಾರ್ವಜನಿಕಗೊಳಿಸುವುದಕ್ಕೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

ಬಳಿಕ ಹೈಕೋರ್ಟ್‌ನ ಏಕಸದಸ್ಯ ಪೀಠ ರಿಟ್ ಅರ್ಜಿಯನ್ನು ವಜಾಗೊಳಿಸಿ ವರದಿಯನ್ನು ಸಾರ್ವಜನಿಕಗೊಳಿಸಬಹುದು ಎಂದು ಆದೇಶಿಸಿತ್ತು. ಈ ನಡುವೆ ವರದಿಯ ಕುರಿತು ಸಲ್ಲಿಕೆಯಾಗಿದ್ದ ಅನೇಕ ಆರ್‌ಟಿಐ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿತ್ತು. ವರದಿಯ ಮಾಹಿತಿ ನೀಡಿದರೆ, ಹಲವರ ಗೌಪ್ಯತೆಗೆ ಧಕ್ಕೆಯಾಗಲಿದೆ ಎಂದಿತ್ತು.

ರಿಟ್ ಅರ್ಜಿಯಲ್ಲಿ ಕಕ್ಷಿದಾರರಲ್ಲದಿದ್ದರೂ ಚಲನಚಿತ್ರ ನಟಿ ರೆಂಜಿನಿ ಅವರು ಅರ್ಜಿ ಬಹಿರಂಗಗೊಳಿಸಲು ಇದ್ದ ತಡೆ ತೆಗೆದು ಹಾಕಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯನ್ನು ಹೈಕೋರ್ಟ್ ಆಗಸ್ಟ್ 19ರಂದು ವಜಾಗೊಳಿಸಿದೆ ಮತ್ತು ಹೊಸ ರಿಟ್ ಅರ್ಜಿಯನ್ನು ಸಲ್ಲಿಸಲು ಅವರಿಗೆ ಅವಕಾಶ ನೀಡಿದೆ. ಏಕ ಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಸರ್ಕಾರ ವರದಿ ಬಹಿರಂಗಗೊಳಿಸಿದೆ.

ಹೇಮಾ ಸಮಿತಿ ವರದಿ ಸಂಬಂಧಿತ ಇನ್ನಷ್ಟು ಬರಹಗಳು ಕೆಳಗಿವೆ

ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ ‘ಜಸ್ಟೀಸ್ ಹೇಮಾ ಸಮಿತಿ’ ವರದಿ 

‘ಜಸ್ಟೀಸ್ ಹೇಮಾ ಸಮಿತಿ’ ವರದಿ ಬಹಿರಂಗಕ್ಕೆ ವಿಳಂಬ; ಕೇರಳ ಸರ್ಕಾರದ ಉದಾಸೀನತೆಯನ್ನು ಟೀಕಿಸಿದ ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...