Homeಎಂಟರ್ತೈನ್ಮೆಂಟ್ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ 'ಜಸ್ಟೀಸ್ ಹೇಮಾ ಸಮಿತಿ' ವರದಿ

ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ಲೈಂಗಿಕವಾಗಿ ಒಗ್ಗಿಕೊಂಡು ಹೋಗದಿದ್ದರೆ ಮಹಿಳಾ ಕಲಾವಿದರು ಚಿತ್ರರಂಗದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂದ ರಿಪೋರ್ಟ್‌

- Advertisement -
- Advertisement -

ಆಗಸ್ಟ್ 19, 2024ರಂದು ಬಹಿರಂಗಗೊಂಡ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಮಲಯಾಳಂ ಚಿತ್ರರಂಗದ ಇನ್ನೊಂದು ಮುಖ ಅಥವಾ ಭಯಾನಕತೆ ತೆರೆದಿಟ್ಟಿದೆ.

ಲೈಂಗಿಕವಾಗಿ ಒಗ್ಗಿಕೊಂಡು ಹೋಗದಿದ್ದರೆ ಮಹಿಳಾ ಕಲಾವಿದರು ಚಿತ್ರರಂಗದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂಬ ಸತ್ಯವನ್ನು ಹೇಮಾ ಸಮಿತಿ ವರದಿ ಬಿಚ್ಚಿಟ್ಟಿದೆ. ವರದಿಯಲ್ಲಿ ಉಲ್ಲೇಖಿಸಿರುವ ಕೆಲವೊಂದು ಬೆಚ್ಚಿ ಬೀಳಿಸುವ ವಿಷಯಗಳು ಆರ್‌ಟಿಐ ಮೂಲಕ ಮಾಧ್ಯಮಗಳಿಗೆ ಲಭ್ಯವಾಗಿದೆ.

ವರದಿ ಹೇಳುವಂತೆ ಪ್ರೊಡಕ್ಷನ್ ಕಂಟ್ರೋಲರ್ ಅಥವಾ ಸಿನಿಮಾದಲ್ಲಿ ಪಾತ್ರವನ್ನು ನೀಡುವವರು ಮೊದಲು ಮಹಿಳೆ/ಹುಡುಗಿಯನ್ನು ಸಂಪರ್ಕಿಸುತ್ತಾರೆ. ಆಕೆಗೆ ಅವಕಾಶ ನೀಡಬೇಕಾದರೆ ಲೈಂಗಿಕವಾಗಿ ಹೊಂದಾಣಿಕೆ ಮಾಡಿಕೊಳ್ಳುವ ಬೇಡಿಕೆಯನ್ನು ನೇರವಾಗಿ ಇಡುತ್ತಾರೆ. ಈ ಸಂದರ್ಭದಲ್ಲೇ ಪ್ರತಿಭೆಗೆ ಅವಕಾಶ ಸಿಗುವ ಆಸೆಯಿಂದ ಹೋಗಿರುವ ಹೆಣ್ಣು ಮಕ್ಕಳು ಕುಗ್ಗಿ ಹೋಗುತ್ತಾರೆ.

ವರದಿಯ ಪ್ರಕಾರ, ಸಿನಿಮಾಗಳಲ್ಲಿ ನಟಿಸುವ ಮಹಿಳೆಯರು/ ಹುಡುಗಿಯರು ಅವರ ಕುಟುಂಬದ ಜೊತೇನೆ ಹೆಚ್ಚಾಗಿ ಇರಲು ಬಯಸುತ್ತಾರೆ. ಏಕೆಂದರೆ, ಚಿತ್ರತಂಡದ ಜೊತೆ ಹೋಟೆಲ್ ರೂಮ್‌ಗಳಲ್ಲಿ ಉಳಿದುಕೊಂಡರೆ, ಅದೇ ತಂಡದ ಪುರುಷರು ಅವರ ಮೇಲೆ ಲೈಂಗಿಕವಾಗಿ ಕಣ್ಣು ಹಾಕುವ ಭಯವಿರುತ್ತದೆ.

ಹೋಟೆಲ್‌ನಲ್ಲಿ ಉಳಿದುಕೊಂಡರೆ ರಾತ್ರಿ ಹೊತ್ತು ಮದ್ಯಪಾನ ಮಾಡಿ ಬರುವ ಚಿತ್ರ ತಂಡದ ಪುರುಷರು, ಮಹಿಳೆ/ ಹುಡುಗಿ ತಂಗಿರುವ ಕೊಠಡಿಯ ಬಾಗಿಲು ಬಡಿಯುತ್ತಾರೆ. ಅದೂ ಕೂಡ ಜೋರಾಗಿ ಬಾಗಿಲು ಬಡಿಯುತ್ತಾರೆ. ಒಂದು ವೇಳೆ ಬಾಗಿಲು ತೆರೆಯದಿದ್ದರೆ ಬಾಗಿಲು ಒಡೆದು ಬಲವಂತವಾಗಿ ಒಳ ನುಗ್ಗುತ್ತಾರೆ. ಲೈಂಗಿಕ ಶೋಷಣೆ ಮಾಡುತ್ತಾರೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯ ಪತ್ನಿಯಾಗಿ ನಟಿಯೊಬ್ಬರು ನಟಿಸಬೇಕಾದ ಘಟನೆಯನ್ನು ಉಲ್ಲೇಖಿಸಿ ಸಮಿತಿಯ ವರದಿಯು ಹೀಗೆ ಹೇಳಿದೆ “ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯ ಜೊತೆ ಮರುದಿನ ಆಕೆ ಹೆಂಡತಿಯ ಪಾತ್ರ ಮಾಡಬೇಕಿತ್ತು. ಈ ಮೊದಲೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯಾದ್ದರಿಂದ, ಶೂಟಿಂಗ್ ವೇಳೆಯೂ ಆಕೆಯನ್ನು ಆತ ಅದೇ ರೀತಿ ಬಳಸಿಕೊಂಡಿದ್ದ. ಹೇಳಿಕೊಳ್ಳಲಾಗದ ಈ ನೋವು ಆಕೆಯ ಮುಖದಲ್ಲಿ ಮೂಡಿತ್ತು. ಆದ್ದರಿಂದ ಆಕೆ ಒಂದು ಶಾಟ್‌ಗೆ ಹದಿನೇಳು ರೀಟೇಕ್ ತೆಗದುಕೊಂಡಿದ್ದರು. ಈ ಕಾರಣಕ್ಕೆ ಆಕೆ ನಿರ್ದೇಶಕರಿಂದ ಅವಮಾನ ಎದುರಿಸಬೇಕಾಯಿತು”.

ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್, ಅಸಭ್ಯ ಫೋಟೋ, ವಿಡಿಯೋಗಳನ್ನು ಹಾಕುವ ಮೂಲಕ ನಮ್ಮ ಮಾನನಷ್ಟ ಮಾಡಲಾಗಿದೆ. ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ಅನೇಕ ಮಹಿಳಾ ನಟಿಯರು ಹೇಳಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಪುರುಷರೊಂದಿಗೆ ಲೈಂಗಿಕವಾಗಿ ಒಗ್ಗಿಕೊಂಡು ಹೋಗದ ಮಹಿಳಾ ನಟಿಯರನ್ನು ಸುಖಾ ಸುಮ್ಮನೆ ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಿಸಲಾಗುತ್ತದೆ. ಅವರ ವಿರುದ್ದ ಇಲ್ಲ ಸಲ್ಲದ ಲೈಂಗಿಕ ಆರೋಪಗಳನ್ನು ತೇಲಿ ಬಿಟ್ಟು ಗುರಿಪಡಿಸಲಾಗುತ್ತದೆ. ಶಿಶ್ನ ಸೇರಿದಂತೆ ಖಾಸಗಿ ಭಾಗಗಳ ಫೋಟೋಗಳನ್ನು ನಟಿಯರ ಗೋಡೆ ಮೇಲೆ ಹಾಕಿ ಅವಮಾನಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

2017ರಲ್ಲಿ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಕೇರಳ ಸರ್ಕಾರ, ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ಕುರಿತಂತೆ ವರದಿ ನೀಡಲು ನ್ಯಾಯಮೂರ್ತಿ ಕೆ ಹೇಮಾ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ಚಿತ್ರರಂಗದ ಕರಾಳ ಮುಖವನ್ನು ಎಲೆ ಎಲೆಯಾಗಿ ಬಿಚ್ಚಿಟ್ಟಿದೆ.

ಭಾರತದ ಎಲ್ಲಾ ಚಿತ್ರರಂಗಗಳಲ್ಲೂ ಕಾಸ್ಟಿಂಗ್ ಕೌಚ್‌ನಂತ ಲೈಂಗಿಕ ದೌರ್ಜನ್ಯಗಳ ಬಗ್ಗೆ ಹಿಂದಿನಿಂದಲೂ ಅಪವಾದವಿದೆ. ‘ಮೀ ಟೂ’ ಅಭಿಯಾನದ ಮೂಲಕ ಮಹಿಳಾ ಕಲಾವಿದರು ಧ್ವನಿ ಎತ್ತಿರುವುದು ಇದಕ್ಕೊಂದು ಸಾಕ್ಷಿ. ಆದರೆ, ಹೇಮಾ ಸಮಿತಿ ವರದಿ ಬಿಚ್ಚಿಟ್ಟ ಮಲಯಾಳಂ ಸಿನಿಮಾ ರಂಗದ ಸತ್ಯ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.

ನ್ಯಾಯಮೂರ್ತಿ ಹೇಮಾ ಸಮಿತಿಯು ತನ್ನ ವರದಿಯನ್ನು 2019 ರಲ್ಲಿ ಕೇರಳ ಮುಖ್ಯಮಂತ್ರಿಗೆ ಸಲ್ಲಿಸಿತ್ತು. ವರದಿಯನ್ನು ಸಾರ್ವಜನಿಕಗೊಳಿಸುವ ನಿರ್ಧಾರವನ್ನು ಜುಲೈ 5, 2024ರಲ್ಲಿ ತೆಗೆದುಕೊಳ್ಳಲಾಗಿತ್ತು. ಆದರೆ, ಚಿತ್ರ ನಿರ್ಮಾಪಕ ಸಜಿಮೋನ್ ಪರಾಯಿಲ್ ಸಲ್ಲಿಸಿದ್ದ ರಿಟ್ ಅರ್ಜಿ ಆಧರಿಸಿ ವರದಿ ಸಾರ್ವಜನಿಕಗೊಳಿಸುವುದಕ್ಕೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

ಬಳಿಕ ಹೈಕೋರ್ಟ್‌ನ ಏಕಸದಸ್ಯ ಪೀಠ ರಿಟ್ ಅರ್ಜಿಯನ್ನು ವಜಾಗೊಳಿಸಿ ವರದಿಯನ್ನು ಸಾರ್ವಜನಿಕಗೊಳಿಸಬಹುದು ಎಂದು ಆದೇಶಿಸಿತ್ತು. ಈ ನಡುವೆ ವರದಿಯ ಕುರಿತು ಸಲ್ಲಿಕೆಯಾಗಿದ್ದ ಅನೇಕ ಆರ್‌ಟಿಐ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿತ್ತು. ವರದಿಯ ಮಾಹಿತಿ ನೀಡಿದರೆ, ಹಲವರ ಗೌಪ್ಯತೆಗೆ ಧಕ್ಕೆಯಾಗಲಿದೆ ಎಂದಿತ್ತು.

ರಿಟ್ ಅರ್ಜಿಯಲ್ಲಿ ಕಕ್ಷಿದಾರರಲ್ಲದಿದ್ದರೂ ಚಲನಚಿತ್ರ ನಟಿ ರೆಂಜಿನಿ ಅವರು ಅರ್ಜಿ ಬಹಿರಂಗಗೊಳಿಸಲು ಇದ್ದ ತಡೆ ತೆಗೆದು ಹಾಕಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯನ್ನು ಹೈಕೋರ್ಟ್ ಆಗಸ್ಟ್ 19ರಂದು ವಜಾಗೊಳಿಸಿದೆ ಮತ್ತು ಹೊಸ ರಿಟ್ ಅರ್ಜಿಯನ್ನು ಸಲ್ಲಿಸಲು ಅವರಿಗೆ ಅವಕಾಶ ನೀಡಿದೆ. ಏಕ ಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಸರ್ಕಾರ ವರದಿ ಬಹಿರಂಗಗೊಳಿಸಿದೆ.

ಹೇಮಾ ಸಮಿತಿ ವರದಿ ಸಂಬಂಧಿತ ಇನ್ನಷ್ಟು ಬರಹಗಳು ಕೆಳಗಿವೆ

ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ ‘ಜಸ್ಟೀಸ್ ಹೇಮಾ ಸಮಿತಿ’ ವರದಿ 

‘ಜಸ್ಟೀಸ್ ಹೇಮಾ ಸಮಿತಿ’ ವರದಿ ಬಹಿರಂಗಕ್ಕೆ ವಿಳಂಬ; ಕೇರಳ ಸರ್ಕಾರದ ಉದಾಸೀನತೆಯನ್ನು ಟೀಕಿಸಿದ ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...