Homeಎಂಟರ್ತೈನ್ಮೆಂಟ್ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ 'ಜಸ್ಟೀಸ್ ಹೇಮಾ ಸಮಿತಿ' ವರದಿ

ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ಲೈಂಗಿಕವಾಗಿ ಒಗ್ಗಿಕೊಂಡು ಹೋಗದಿದ್ದರೆ ಮಹಿಳಾ ಕಲಾವಿದರು ಚಿತ್ರರಂಗದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂದ ರಿಪೋರ್ಟ್‌

- Advertisement -
- Advertisement -

ಆಗಸ್ಟ್ 19, 2024ರಂದು ಬಹಿರಂಗಗೊಂಡ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಮಲಯಾಳಂ ಚಿತ್ರರಂಗದ ಇನ್ನೊಂದು ಮುಖ ಅಥವಾ ಭಯಾನಕತೆ ತೆರೆದಿಟ್ಟಿದೆ.

ಲೈಂಗಿಕವಾಗಿ ಒಗ್ಗಿಕೊಂಡು ಹೋಗದಿದ್ದರೆ ಮಹಿಳಾ ಕಲಾವಿದರು ಚಿತ್ರರಂಗದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂಬ ಸತ್ಯವನ್ನು ಹೇಮಾ ಸಮಿತಿ ವರದಿ ಬಿಚ್ಚಿಟ್ಟಿದೆ. ವರದಿಯಲ್ಲಿ ಉಲ್ಲೇಖಿಸಿರುವ ಕೆಲವೊಂದು ಬೆಚ್ಚಿ ಬೀಳಿಸುವ ವಿಷಯಗಳು ಆರ್‌ಟಿಐ ಮೂಲಕ ಮಾಧ್ಯಮಗಳಿಗೆ ಲಭ್ಯವಾಗಿದೆ.

ವರದಿ ಹೇಳುವಂತೆ ಪ್ರೊಡಕ್ಷನ್ ಕಂಟ್ರೋಲರ್ ಅಥವಾ ಸಿನಿಮಾದಲ್ಲಿ ಪಾತ್ರವನ್ನು ನೀಡುವವರು ಮೊದಲು ಮಹಿಳೆ/ಹುಡುಗಿಯನ್ನು ಸಂಪರ್ಕಿಸುತ್ತಾರೆ. ಆಕೆಗೆ ಅವಕಾಶ ನೀಡಬೇಕಾದರೆ ಲೈಂಗಿಕವಾಗಿ ಹೊಂದಾಣಿಕೆ ಮಾಡಿಕೊಳ್ಳುವ ಬೇಡಿಕೆಯನ್ನು ನೇರವಾಗಿ ಇಡುತ್ತಾರೆ. ಈ ಸಂದರ್ಭದಲ್ಲೇ ಪ್ರತಿಭೆಗೆ ಅವಕಾಶ ಸಿಗುವ ಆಸೆಯಿಂದ ಹೋಗಿರುವ ಹೆಣ್ಣು ಮಕ್ಕಳು ಕುಗ್ಗಿ ಹೋಗುತ್ತಾರೆ.

ವರದಿಯ ಪ್ರಕಾರ, ಸಿನಿಮಾಗಳಲ್ಲಿ ನಟಿಸುವ ಮಹಿಳೆಯರು/ ಹುಡುಗಿಯರು ಅವರ ಕುಟುಂಬದ ಜೊತೇನೆ ಹೆಚ್ಚಾಗಿ ಇರಲು ಬಯಸುತ್ತಾರೆ. ಏಕೆಂದರೆ, ಚಿತ್ರತಂಡದ ಜೊತೆ ಹೋಟೆಲ್ ರೂಮ್‌ಗಳಲ್ಲಿ ಉಳಿದುಕೊಂಡರೆ, ಅದೇ ತಂಡದ ಪುರುಷರು ಅವರ ಮೇಲೆ ಲೈಂಗಿಕವಾಗಿ ಕಣ್ಣು ಹಾಕುವ ಭಯವಿರುತ್ತದೆ.

ಹೋಟೆಲ್‌ನಲ್ಲಿ ಉಳಿದುಕೊಂಡರೆ ರಾತ್ರಿ ಹೊತ್ತು ಮದ್ಯಪಾನ ಮಾಡಿ ಬರುವ ಚಿತ್ರ ತಂಡದ ಪುರುಷರು, ಮಹಿಳೆ/ ಹುಡುಗಿ ತಂಗಿರುವ ಕೊಠಡಿಯ ಬಾಗಿಲು ಬಡಿಯುತ್ತಾರೆ. ಅದೂ ಕೂಡ ಜೋರಾಗಿ ಬಾಗಿಲು ಬಡಿಯುತ್ತಾರೆ. ಒಂದು ವೇಳೆ ಬಾಗಿಲು ತೆರೆಯದಿದ್ದರೆ ಬಾಗಿಲು ಒಡೆದು ಬಲವಂತವಾಗಿ ಒಳ ನುಗ್ಗುತ್ತಾರೆ. ಲೈಂಗಿಕ ಶೋಷಣೆ ಮಾಡುತ್ತಾರೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯ ಪತ್ನಿಯಾಗಿ ನಟಿಯೊಬ್ಬರು ನಟಿಸಬೇಕಾದ ಘಟನೆಯನ್ನು ಉಲ್ಲೇಖಿಸಿ ಸಮಿತಿಯ ವರದಿಯು ಹೀಗೆ ಹೇಳಿದೆ “ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯ ಜೊತೆ ಮರುದಿನ ಆಕೆ ಹೆಂಡತಿಯ ಪಾತ್ರ ಮಾಡಬೇಕಿತ್ತು. ಈ ಮೊದಲೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯಾದ್ದರಿಂದ, ಶೂಟಿಂಗ್ ವೇಳೆಯೂ ಆಕೆಯನ್ನು ಆತ ಅದೇ ರೀತಿ ಬಳಸಿಕೊಂಡಿದ್ದ. ಹೇಳಿಕೊಳ್ಳಲಾಗದ ಈ ನೋವು ಆಕೆಯ ಮುಖದಲ್ಲಿ ಮೂಡಿತ್ತು. ಆದ್ದರಿಂದ ಆಕೆ ಒಂದು ಶಾಟ್‌ಗೆ ಹದಿನೇಳು ರೀಟೇಕ್ ತೆಗದುಕೊಂಡಿದ್ದರು. ಈ ಕಾರಣಕ್ಕೆ ಆಕೆ ನಿರ್ದೇಶಕರಿಂದ ಅವಮಾನ ಎದುರಿಸಬೇಕಾಯಿತು”.

ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್, ಅಸಭ್ಯ ಫೋಟೋ, ವಿಡಿಯೋಗಳನ್ನು ಹಾಕುವ ಮೂಲಕ ನಮ್ಮ ಮಾನನಷ್ಟ ಮಾಡಲಾಗಿದೆ. ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ಅನೇಕ ಮಹಿಳಾ ನಟಿಯರು ಹೇಳಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಪುರುಷರೊಂದಿಗೆ ಲೈಂಗಿಕವಾಗಿ ಒಗ್ಗಿಕೊಂಡು ಹೋಗದ ಮಹಿಳಾ ನಟಿಯರನ್ನು ಸುಖಾ ಸುಮ್ಮನೆ ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಿಸಲಾಗುತ್ತದೆ. ಅವರ ವಿರುದ್ದ ಇಲ್ಲ ಸಲ್ಲದ ಲೈಂಗಿಕ ಆರೋಪಗಳನ್ನು ತೇಲಿ ಬಿಟ್ಟು ಗುರಿಪಡಿಸಲಾಗುತ್ತದೆ. ಶಿಶ್ನ ಸೇರಿದಂತೆ ಖಾಸಗಿ ಭಾಗಗಳ ಫೋಟೋಗಳನ್ನು ನಟಿಯರ ಗೋಡೆ ಮೇಲೆ ಹಾಕಿ ಅವಮಾನಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

2017ರಲ್ಲಿ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಕೇರಳ ಸರ್ಕಾರ, ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ಕುರಿತಂತೆ ವರದಿ ನೀಡಲು ನ್ಯಾಯಮೂರ್ತಿ ಕೆ ಹೇಮಾ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ಚಿತ್ರರಂಗದ ಕರಾಳ ಮುಖವನ್ನು ಎಲೆ ಎಲೆಯಾಗಿ ಬಿಚ್ಚಿಟ್ಟಿದೆ.

ಭಾರತದ ಎಲ್ಲಾ ಚಿತ್ರರಂಗಗಳಲ್ಲೂ ಕಾಸ್ಟಿಂಗ್ ಕೌಚ್‌ನಂತ ಲೈಂಗಿಕ ದೌರ್ಜನ್ಯಗಳ ಬಗ್ಗೆ ಹಿಂದಿನಿಂದಲೂ ಅಪವಾದವಿದೆ. ‘ಮೀ ಟೂ’ ಅಭಿಯಾನದ ಮೂಲಕ ಮಹಿಳಾ ಕಲಾವಿದರು ಧ್ವನಿ ಎತ್ತಿರುವುದು ಇದಕ್ಕೊಂದು ಸಾಕ್ಷಿ. ಆದರೆ, ಹೇಮಾ ಸಮಿತಿ ವರದಿ ಬಿಚ್ಚಿಟ್ಟ ಮಲಯಾಳಂ ಸಿನಿಮಾ ರಂಗದ ಸತ್ಯ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.

ನ್ಯಾಯಮೂರ್ತಿ ಹೇಮಾ ಸಮಿತಿಯು ತನ್ನ ವರದಿಯನ್ನು 2019 ರಲ್ಲಿ ಕೇರಳ ಮುಖ್ಯಮಂತ್ರಿಗೆ ಸಲ್ಲಿಸಿತ್ತು. ವರದಿಯನ್ನು ಸಾರ್ವಜನಿಕಗೊಳಿಸುವ ನಿರ್ಧಾರವನ್ನು ಜುಲೈ 5, 2024ರಲ್ಲಿ ತೆಗೆದುಕೊಳ್ಳಲಾಗಿತ್ತು. ಆದರೆ, ಚಿತ್ರ ನಿರ್ಮಾಪಕ ಸಜಿಮೋನ್ ಪರಾಯಿಲ್ ಸಲ್ಲಿಸಿದ್ದ ರಿಟ್ ಅರ್ಜಿ ಆಧರಿಸಿ ವರದಿ ಸಾರ್ವಜನಿಕಗೊಳಿಸುವುದಕ್ಕೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

ಬಳಿಕ ಹೈಕೋರ್ಟ್‌ನ ಏಕಸದಸ್ಯ ಪೀಠ ರಿಟ್ ಅರ್ಜಿಯನ್ನು ವಜಾಗೊಳಿಸಿ ವರದಿಯನ್ನು ಸಾರ್ವಜನಿಕಗೊಳಿಸಬಹುದು ಎಂದು ಆದೇಶಿಸಿತ್ತು. ಈ ನಡುವೆ ವರದಿಯ ಕುರಿತು ಸಲ್ಲಿಕೆಯಾಗಿದ್ದ ಅನೇಕ ಆರ್‌ಟಿಐ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿತ್ತು. ವರದಿಯ ಮಾಹಿತಿ ನೀಡಿದರೆ, ಹಲವರ ಗೌಪ್ಯತೆಗೆ ಧಕ್ಕೆಯಾಗಲಿದೆ ಎಂದಿತ್ತು.

ರಿಟ್ ಅರ್ಜಿಯಲ್ಲಿ ಕಕ್ಷಿದಾರರಲ್ಲದಿದ್ದರೂ ಚಲನಚಿತ್ರ ನಟಿ ರೆಂಜಿನಿ ಅವರು ಅರ್ಜಿ ಬಹಿರಂಗಗೊಳಿಸಲು ಇದ್ದ ತಡೆ ತೆಗೆದು ಹಾಕಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯನ್ನು ಹೈಕೋರ್ಟ್ ಆಗಸ್ಟ್ 19ರಂದು ವಜಾಗೊಳಿಸಿದೆ ಮತ್ತು ಹೊಸ ರಿಟ್ ಅರ್ಜಿಯನ್ನು ಸಲ್ಲಿಸಲು ಅವರಿಗೆ ಅವಕಾಶ ನೀಡಿದೆ. ಏಕ ಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಸರ್ಕಾರ ವರದಿ ಬಹಿರಂಗಗೊಳಿಸಿದೆ.

ಹೇಮಾ ಸಮಿತಿ ವರದಿ ಸಂಬಂಧಿತ ಇನ್ನಷ್ಟು ಬರಹಗಳು ಕೆಳಗಿವೆ

ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ ‘ಜಸ್ಟೀಸ್ ಹೇಮಾ ಸಮಿತಿ’ ವರದಿ 

‘ಜಸ್ಟೀಸ್ ಹೇಮಾ ಸಮಿತಿ’ ವರದಿ ಬಹಿರಂಗಕ್ಕೆ ವಿಳಂಬ; ಕೇರಳ ಸರ್ಕಾರದ ಉದಾಸೀನತೆಯನ್ನು ಟೀಕಿಸಿದ ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...