Homeಎಂಟರ್ತೈನ್ಮೆಂಟ್ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ 'ಜಸ್ಟೀಸ್ ಹೇಮಾ ಸಮಿತಿ' ವರದಿ

ಕಲರ್‌ಫುಲ್ ಜಗತ್ತಿನ ಕರಾಳತೆ ತೆರೆದಿಟ್ಟ ‘ಜಸ್ಟೀಸ್ ಹೇಮಾ ಸಮಿತಿ’ ವರದಿ

ಲೈಂಗಿಕವಾಗಿ ಒಗ್ಗಿಕೊಂಡು ಹೋಗದಿದ್ದರೆ ಮಹಿಳಾ ಕಲಾವಿದರು ಚಿತ್ರರಂಗದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂದ ರಿಪೋರ್ಟ್‌

- Advertisement -
- Advertisement -

ಆಗಸ್ಟ್ 19, 2024ರಂದು ಬಹಿರಂಗಗೊಂಡ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಮಲಯಾಳಂ ಚಿತ್ರರಂಗದ ಇನ್ನೊಂದು ಮುಖ ಅಥವಾ ಭಯಾನಕತೆ ತೆರೆದಿಟ್ಟಿದೆ.

ಲೈಂಗಿಕವಾಗಿ ಒಗ್ಗಿಕೊಂಡು ಹೋಗದಿದ್ದರೆ ಮಹಿಳಾ ಕಲಾವಿದರು ಚಿತ್ರರಂಗದಲ್ಲಿ ಮುಂದುವರೆಯಲು ಸಾಧ್ಯವೇ ಇಲ್ಲ ಎಂಬ ಸತ್ಯವನ್ನು ಹೇಮಾ ಸಮಿತಿ ವರದಿ ಬಿಚ್ಚಿಟ್ಟಿದೆ. ವರದಿಯಲ್ಲಿ ಉಲ್ಲೇಖಿಸಿರುವ ಕೆಲವೊಂದು ಬೆಚ್ಚಿ ಬೀಳಿಸುವ ವಿಷಯಗಳು ಆರ್‌ಟಿಐ ಮೂಲಕ ಮಾಧ್ಯಮಗಳಿಗೆ ಲಭ್ಯವಾಗಿದೆ.

ವರದಿ ಹೇಳುವಂತೆ ಪ್ರೊಡಕ್ಷನ್ ಕಂಟ್ರೋಲರ್ ಅಥವಾ ಸಿನಿಮಾದಲ್ಲಿ ಪಾತ್ರವನ್ನು ನೀಡುವವರು ಮೊದಲು ಮಹಿಳೆ/ಹುಡುಗಿಯನ್ನು ಸಂಪರ್ಕಿಸುತ್ತಾರೆ. ಆಕೆಗೆ ಅವಕಾಶ ನೀಡಬೇಕಾದರೆ ಲೈಂಗಿಕವಾಗಿ ಹೊಂದಾಣಿಕೆ ಮಾಡಿಕೊಳ್ಳುವ ಬೇಡಿಕೆಯನ್ನು ನೇರವಾಗಿ ಇಡುತ್ತಾರೆ. ಈ ಸಂದರ್ಭದಲ್ಲೇ ಪ್ರತಿಭೆಗೆ ಅವಕಾಶ ಸಿಗುವ ಆಸೆಯಿಂದ ಹೋಗಿರುವ ಹೆಣ್ಣು ಮಕ್ಕಳು ಕುಗ್ಗಿ ಹೋಗುತ್ತಾರೆ.

ವರದಿಯ ಪ್ರಕಾರ, ಸಿನಿಮಾಗಳಲ್ಲಿ ನಟಿಸುವ ಮಹಿಳೆಯರು/ ಹುಡುಗಿಯರು ಅವರ ಕುಟುಂಬದ ಜೊತೇನೆ ಹೆಚ್ಚಾಗಿ ಇರಲು ಬಯಸುತ್ತಾರೆ. ಏಕೆಂದರೆ, ಚಿತ್ರತಂಡದ ಜೊತೆ ಹೋಟೆಲ್ ರೂಮ್‌ಗಳಲ್ಲಿ ಉಳಿದುಕೊಂಡರೆ, ಅದೇ ತಂಡದ ಪುರುಷರು ಅವರ ಮೇಲೆ ಲೈಂಗಿಕವಾಗಿ ಕಣ್ಣು ಹಾಕುವ ಭಯವಿರುತ್ತದೆ.

ಹೋಟೆಲ್‌ನಲ್ಲಿ ಉಳಿದುಕೊಂಡರೆ ರಾತ್ರಿ ಹೊತ್ತು ಮದ್ಯಪಾನ ಮಾಡಿ ಬರುವ ಚಿತ್ರ ತಂಡದ ಪುರುಷರು, ಮಹಿಳೆ/ ಹುಡುಗಿ ತಂಗಿರುವ ಕೊಠಡಿಯ ಬಾಗಿಲು ಬಡಿಯುತ್ತಾರೆ. ಅದೂ ಕೂಡ ಜೋರಾಗಿ ಬಾಗಿಲು ಬಡಿಯುತ್ತಾರೆ. ಒಂದು ವೇಳೆ ಬಾಗಿಲು ತೆರೆಯದಿದ್ದರೆ ಬಾಗಿಲು ಒಡೆದು ಬಲವಂತವಾಗಿ ಒಳ ನುಗ್ಗುತ್ತಾರೆ. ಲೈಂಗಿಕ ಶೋಷಣೆ ಮಾಡುತ್ತಾರೆ ಎಂದು ವರದಿಯಲ್ಲಿ ವಿವರಿಸಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯ ಪತ್ನಿಯಾಗಿ ನಟಿಯೊಬ್ಬರು ನಟಿಸಬೇಕಾದ ಘಟನೆಯನ್ನು ಉಲ್ಲೇಖಿಸಿ ಸಮಿತಿಯ ವರದಿಯು ಹೀಗೆ ಹೇಳಿದೆ “ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯ ಜೊತೆ ಮರುದಿನ ಆಕೆ ಹೆಂಡತಿಯ ಪಾತ್ರ ಮಾಡಬೇಕಿತ್ತು. ಈ ಮೊದಲೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯಾದ್ದರಿಂದ, ಶೂಟಿಂಗ್ ವೇಳೆಯೂ ಆಕೆಯನ್ನು ಆತ ಅದೇ ರೀತಿ ಬಳಸಿಕೊಂಡಿದ್ದ. ಹೇಳಿಕೊಳ್ಳಲಾಗದ ಈ ನೋವು ಆಕೆಯ ಮುಖದಲ್ಲಿ ಮೂಡಿತ್ತು. ಆದ್ದರಿಂದ ಆಕೆ ಒಂದು ಶಾಟ್‌ಗೆ ಹದಿನೇಳು ರೀಟೇಕ್ ತೆಗದುಕೊಂಡಿದ್ದರು. ಈ ಕಾರಣಕ್ಕೆ ಆಕೆ ನಿರ್ದೇಶಕರಿಂದ ಅವಮಾನ ಎದುರಿಸಬೇಕಾಯಿತು”.

ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್, ಅಸಭ್ಯ ಫೋಟೋ, ವಿಡಿಯೋಗಳನ್ನು ಹಾಕುವ ಮೂಲಕ ನಮ್ಮ ಮಾನನಷ್ಟ ಮಾಡಲಾಗಿದೆ. ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ಅನೇಕ ಮಹಿಳಾ ನಟಿಯರು ಹೇಳಿಕೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಪುರುಷರೊಂದಿಗೆ ಲೈಂಗಿಕವಾಗಿ ಒಗ್ಗಿಕೊಂಡು ಹೋಗದ ಮಹಿಳಾ ನಟಿಯರನ್ನು ಸುಖಾ ಸುಮ್ಮನೆ ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಿಸಲಾಗುತ್ತದೆ. ಅವರ ವಿರುದ್ದ ಇಲ್ಲ ಸಲ್ಲದ ಲೈಂಗಿಕ ಆರೋಪಗಳನ್ನು ತೇಲಿ ಬಿಟ್ಟು ಗುರಿಪಡಿಸಲಾಗುತ್ತದೆ. ಶಿಶ್ನ ಸೇರಿದಂತೆ ಖಾಸಗಿ ಭಾಗಗಳ ಫೋಟೋಗಳನ್ನು ನಟಿಯರ ಗೋಡೆ ಮೇಲೆ ಹಾಕಿ ಅವಮಾನಿಸಲಾಗುತ್ತದೆ ಎಂದು ವರದಿ ತಿಳಿಸಿದೆ.

2017ರಲ್ಲಿ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಕೇರಳ ಸರ್ಕಾರ, ಮಲಯಾಳಂ ಚಿತ್ರರಂಗದಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳ ಕುರಿತಂತೆ ವರದಿ ನೀಡಲು ನ್ಯಾಯಮೂರ್ತಿ ಕೆ ಹೇಮಾ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ಚಿತ್ರರಂಗದ ಕರಾಳ ಮುಖವನ್ನು ಎಲೆ ಎಲೆಯಾಗಿ ಬಿಚ್ಚಿಟ್ಟಿದೆ.

ಭಾರತದ ಎಲ್ಲಾ ಚಿತ್ರರಂಗಗಳಲ್ಲೂ ಕಾಸ್ಟಿಂಗ್ ಕೌಚ್‌ನಂತ ಲೈಂಗಿಕ ದೌರ್ಜನ್ಯಗಳ ಬಗ್ಗೆ ಹಿಂದಿನಿಂದಲೂ ಅಪವಾದವಿದೆ. ‘ಮೀ ಟೂ’ ಅಭಿಯಾನದ ಮೂಲಕ ಮಹಿಳಾ ಕಲಾವಿದರು ಧ್ವನಿ ಎತ್ತಿರುವುದು ಇದಕ್ಕೊಂದು ಸಾಕ್ಷಿ. ಆದರೆ, ಹೇಮಾ ಸಮಿತಿ ವರದಿ ಬಿಚ್ಚಿಟ್ಟ ಮಲಯಾಳಂ ಸಿನಿಮಾ ರಂಗದ ಸತ್ಯ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.

ನ್ಯಾಯಮೂರ್ತಿ ಹೇಮಾ ಸಮಿತಿಯು ತನ್ನ ವರದಿಯನ್ನು 2019 ರಲ್ಲಿ ಕೇರಳ ಮುಖ್ಯಮಂತ್ರಿಗೆ ಸಲ್ಲಿಸಿತ್ತು. ವರದಿಯನ್ನು ಸಾರ್ವಜನಿಕಗೊಳಿಸುವ ನಿರ್ಧಾರವನ್ನು ಜುಲೈ 5, 2024ರಲ್ಲಿ ತೆಗೆದುಕೊಳ್ಳಲಾಗಿತ್ತು. ಆದರೆ, ಚಿತ್ರ ನಿರ್ಮಾಪಕ ಸಜಿಮೋನ್ ಪರಾಯಿಲ್ ಸಲ್ಲಿಸಿದ್ದ ರಿಟ್ ಅರ್ಜಿ ಆಧರಿಸಿ ವರದಿ ಸಾರ್ವಜನಿಕಗೊಳಿಸುವುದಕ್ಕೆ ಕೇರಳ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.

ಬಳಿಕ ಹೈಕೋರ್ಟ್‌ನ ಏಕಸದಸ್ಯ ಪೀಠ ರಿಟ್ ಅರ್ಜಿಯನ್ನು ವಜಾಗೊಳಿಸಿ ವರದಿಯನ್ನು ಸಾರ್ವಜನಿಕಗೊಳಿಸಬಹುದು ಎಂದು ಆದೇಶಿಸಿತ್ತು. ಈ ನಡುವೆ ವರದಿಯ ಕುರಿತು ಸಲ್ಲಿಕೆಯಾಗಿದ್ದ ಅನೇಕ ಆರ್‌ಟಿಐ ಅರ್ಜಿಗಳನ್ನು ಸರ್ಕಾರ ತಿರಸ್ಕರಿಸಿತ್ತು. ವರದಿಯ ಮಾಹಿತಿ ನೀಡಿದರೆ, ಹಲವರ ಗೌಪ್ಯತೆಗೆ ಧಕ್ಕೆಯಾಗಲಿದೆ ಎಂದಿತ್ತು.

ರಿಟ್ ಅರ್ಜಿಯಲ್ಲಿ ಕಕ್ಷಿದಾರರಲ್ಲದಿದ್ದರೂ ಚಲನಚಿತ್ರ ನಟಿ ರೆಂಜಿನಿ ಅವರು ಅರ್ಜಿ ಬಹಿರಂಗಗೊಳಿಸಲು ಇದ್ದ ತಡೆ ತೆಗೆದು ಹಾಕಿರುವ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯನ್ನು ಹೈಕೋರ್ಟ್ ಆಗಸ್ಟ್ 19ರಂದು ವಜಾಗೊಳಿಸಿದೆ ಮತ್ತು ಹೊಸ ರಿಟ್ ಅರ್ಜಿಯನ್ನು ಸಲ್ಲಿಸಲು ಅವರಿಗೆ ಅವಕಾಶ ನೀಡಿದೆ. ಏಕ ಸದಸ್ಯ ಪೀಠ ರಿಟ್ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಸರ್ಕಾರ ವರದಿ ಬಹಿರಂಗಗೊಳಿಸಿದೆ.

ಹೇಮಾ ಸಮಿತಿ ವರದಿ ಸಂಬಂಧಿತ ಇನ್ನಷ್ಟು ಬರಹಗಳು ಕೆಳಗಿವೆ

ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ ‘ಜಸ್ಟೀಸ್ ಹೇಮಾ ಸಮಿತಿ’ ವರದಿ 

‘ಜಸ್ಟೀಸ್ ಹೇಮಾ ಸಮಿತಿ’ ವರದಿ ಬಹಿರಂಗಕ್ಕೆ ವಿಳಂಬ; ಕೇರಳ ಸರ್ಕಾರದ ಉದಾಸೀನತೆಯನ್ನು ಟೀಕಿಸಿದ ತಜ್ಞರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...