Homeಮುಖಪುಟಗುಜರಾತ್ ಗಲಭೆ ಕೇಸ್‌ ಸೇರಿ ಪ್ರಮುಖ ಕೇಸ್‌ಗಳಲ್ಲಿ ತೀರ್ಪು ನೀಡಿದ್ದ ನೂತನ ಲೋಕಪಾಲ್ ಖಾನ್ವಿಲ್ಕರ್

ಗುಜರಾತ್ ಗಲಭೆ ಕೇಸ್‌ ಸೇರಿ ಪ್ರಮುಖ ಕೇಸ್‌ಗಳಲ್ಲಿ ತೀರ್ಪು ನೀಡಿದ್ದ ನೂತನ ಲೋಕಪಾಲ್ ಖಾನ್ವಿಲ್ಕರ್

- Advertisement -
- Advertisement -

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಎ.ಎಂ.ಖಾನ್ವಿಲ್ಕರ್ ಅವರು ಸುಪ್ರೀಂಕೋರ್ಟ್‌ನಿಂದ ನಿವೃತ್ತರಾದ ಒಂದೂವರೆ ವರ್ಷಗಳ ನಂತರ ಲೋಕಪಾಲ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಜುಲೈ 2022ರಲ್ಲಿ ಸುಪ್ರೀಂಕೋರ್ಟ್‌ನಿಂದ ನಿವೃತ್ತರಾಗಿದ್ದರು. ಅವರನ್ನು ಫೆಬ್ರವರಿ 27, 2024ರಂದು ಲೋಕಪಾಲ್‌ ಆಗಿ ನೇಮಕ ಮಾಡಲಾಗಿದೆ. ಇವರು ಎರಡನೇ ಲೋಕಪಾಲ್‌ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರರಾಗಿದ್ದಾರೆ. ಇದಲ್ಲದೆ ರಾಷ್ಟ್ರಪತಿಗಳು ಮಾಜಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಲಿಂಗಪ್ಪ ನಾರಾಯಣ ಸ್ವಾಮಿ, ಸಂಜಯ್ ಯಾದವ್ ಮತ್ತು ರಿತು ರಾಜ್ ಅವಸ್ತಿ ಅವರನ್ನು ಲೋಕಪಾಲ್‌ಗೆ  ನ್ಯಾಯಾಂಗ ಸದಸ್ಯರನ್ನಾಗಿ ನೇಮಿಸಿದೆ. ನ್ಯಾಯಾಂಗೇತರ ಸದಸ್ಯರಾಗಿ ಸುಶೀಲ್ ಚಂದ್ರ, ಪಂಕಜ್ ಕುಮಾರ್ ಮತ್ತು ಅಜಯ್ ಟಿರ್ಕಿ ಅವರನ್ನು ನೇಮಕ ಮಾಡಲಾಗಿದೆ.

ಜಾರ್ಖಂಡ್ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪ್ರದೀಪ್ ಕುಮಾರ್ ಮೊಹಾಂತಿ ಅವರು ಲೋಕಪಾಲ್‌ನ ಪ್ರಸ್ತುತ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2019ರಲ್ಲಿ ಲೋಕಪಾಲ್‌ ನ್ಯಾಯಾಂಗ ಸದಸ್ಯರಾಗಿ ನೇಮಕಗೊಂಡ ಅವರನ್ನು ಮೇ.2022ರಲ್ಲಿ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ನ್ಯಾಯಮೂರ್ತಿ ಖಾನ್ವಿಲ್ಕರ್ ಅವರ ನೇಮಕಾತಿಯು ನಿವೃತ್ತಿಯ ನಂತರದ ಉನ್ನತ ಹುದ್ದೆಗಳು ನೀಡುವ ಸಂಪ್ರದಾಯಕ್ಕೆ ನಿದರ್ಶನವಾಗಿದೆ. ನರೇಂದ್ರ ಮೋದಿ ಸರ್ಕಾರವು, ಬಾಬರಿ ಮಸೀದಿ- ರಾಮಜನ್ಮ ಭೂಮಿ ವಿವಾದದ ತೀರ್ಪು ನೀಡಿದ್ದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಸುಪ್ರೀಂಕೋರ್ಟ್‌ನಿಂದ ಸಿಜೆಐ ಆಗಿ ನಿವೃತ್ತರಾದ ನಾಲ್ಕು ತಿಂಗಳಲ್ಲಿ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಜುಲೈ 2021ರಲ್ಲಿ ನಿವೃತ್ತರಾದ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರು ಅದೇ ವರ್ಷದ ನಂತರ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ ಮುಖ್ಯಸ್ಥರಾದರು. 2021ರಲ್ಲಿ ಮೋದಿ ಸರ್ಕಾರವು ಮಾಜಿ ಸುಪ್ರೀಂಕೋರ್ಟ್ ನ್ಯಾಯಾಧೀಶ ಅರುಣ್ ಕುಮಾರ್ ಮಿಶ್ರಾ ಅವರ ಹೆಸರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಹುದ್ದೆಗೆ ಶಿಫಾರಸ್ಸು ಮಾಡಿತ್ತು. 2023ರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ಗವರ್ನರ್ ಆಗಿ ನೇಮಿಸಿದ್ದರು.

ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ನರೇಂದ್ರ ಮೋದಿ ಸರ್ಕಾರದ ನಿರ್ಧಾರಗಳ ಮೇಲೆ ವ್ಯಾಪಕ ಪರಿಣಾಮ ಬೀರುವ ಪ್ರಮುಖ ತೀರ್ಪುಗಳನ್ನು ಬರೆದಿದ್ದಾರೆ.

377, ಆಧಾರ್, ಶಬರಿಮಲೆ

2018ರಲ್ಲಿ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಭಾಗವಾಗಿದ್ದರು. ಪೀಠದಲ್ಲಿ ನ್ಯಾಯಮೂರ್ತಿಗಳಾದ ರೋಹಿಂಟನ್ ಫಾಲಿ ನಾರಿಮನ್, ಡಿವೈ ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರಾ ಇದ್ದರು. ಈ ಪೀಠ ಸಲಿಂಗಕಾಮವನ್ನು ಅಪರಾಧವಲ್ಲ ಎಂದು ತೀರ್ಪು ನೀಡಿತ್ತು.

ಅದೇ ವರ್ಷ 2018ರಲ್ಲಿ, ನ್ಯಾಯಮೂರ್ತಿ ಖಾನ್ವಿಲ್ಕರ್ ಅವರ ಪೀಠವು ಆಧಾರ್ ಕಾಯಿದೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ. ನ್ಯಾಯಮೂರ್ತಿ ಸಿಕ್ರಿ ಅವರು ಬರೆದ ಬಹುಮತದ ಅಭಿಪ್ರಾಯವು ಅಂದಿನ ಸಿಜೆಐ ಮಿಶ್ರಾ ಮತ್ತು ನ್ಯಾಯಮೂರ್ತಿ ಖಾನ್ವಿಲ್ಕರ್ ಅವರ ಪರವಾಗಿತ್ತು. ಆಧಾರ್‌ ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದರು, ಇದನ್ನು ನ್ಯಾಯಾಲಯವು ಒಪ್ಪಿರಲಿಲ್ಲ.

2018ರಲ್ಲಿ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶವನ್ನು ಅನುಮತಿಸಿದ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಖಾನ್ವಿಲ್ಕರ್, ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ನಿಷೇಧಿಸುವುದು ಲಿಂಗ ತಾರತಮ್ಯ ಮತ್ತು ಆಚರಣೆಯು ಹಿಂದೂ ಮಹಿಳೆಯರ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದರು.

ಗುಜರಾತ್ ಗಲಭೆ

2002ರ ಗುಜರಾತ್‌ ಗಲಭೆಗೆ ಸಂಬಂಧಿಸಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಹತ್ಯೆಯಾದ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರ ಮನವಿಯನ್ನು ವಜಾಗೊಳಿಸಿದ ಪೀಠದಲ್ಲಿ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರಿದ್ದರು. ಸುಪ್ರೀಂ ಕೋರ್ಟ್‌ನ ತೀರ್ಪಿನ ಆಧಾರದ ಮೇಲೆ, ಗುಜರಾತ್ ಪೊಲೀಸರು ಮರುದಿನ, ಗಲಭೆಗೆ ಸಂಬಂಧಿಸಿದ ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಆರ್.ಬಿ.ಶ್ರೀಕುಮಾರ್ ಅವರನ್ನು ಬಂಧಿಸಿದ್ದರು.

2022ರಲ್ಲಿ ನ್ಯಾಯಮೂರ್ತಿ ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ  ಪೀಠ, ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಕಾಯಿದೆ- 2020ನ್ನು ಎತ್ತಿಹಿಡಿದಿತ್ತು.

ಅದೇ ವರ್ಷದಲ್ಲಿ, ಅವರ ನಿವೃತ್ತಿಗೆ ಎರಡು ದಿನಗಳ ಮೊದಲು, ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಮನಿ ಲಾಂಡರಿಂಗ್ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಜಾರಿ ನಿರ್ದೇಶನಾಲಯಕ್ಕೆ ಅಗಾಧ ಅಧಿಕಾರವನ್ನು ನೀಡುವ ತೀರ್ಪನ್ನು ನೀಡಿದ್ದರು.

ಇದನ್ನು ಓದಿ: ತುಮಕೂರು: ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಅಟ್ಟಹಾಸ; ಡಿವೈಎಸ್ಪಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...