Homeಮುಖಪುಟಗುಜರಾತ್ ಗಲಭೆ ಕೇಸ್‌ ಸೇರಿ ಪ್ರಮುಖ ಕೇಸ್‌ಗಳಲ್ಲಿ ತೀರ್ಪು ನೀಡಿದ್ದ ನೂತನ ಲೋಕಪಾಲ್ ಖಾನ್ವಿಲ್ಕರ್

ಗುಜರಾತ್ ಗಲಭೆ ಕೇಸ್‌ ಸೇರಿ ಪ್ರಮುಖ ಕೇಸ್‌ಗಳಲ್ಲಿ ತೀರ್ಪು ನೀಡಿದ್ದ ನೂತನ ಲೋಕಪಾಲ್ ಖಾನ್ವಿಲ್ಕರ್

- Advertisement -
- Advertisement -

ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಎ.ಎಂ.ಖಾನ್ವಿಲ್ಕರ್ ಅವರು ಸುಪ್ರೀಂಕೋರ್ಟ್‌ನಿಂದ ನಿವೃತ್ತರಾದ ಒಂದೂವರೆ ವರ್ಷಗಳ ನಂತರ ಲೋಕಪಾಲ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಜುಲೈ 2022ರಲ್ಲಿ ಸುಪ್ರೀಂಕೋರ್ಟ್‌ನಿಂದ ನಿವೃತ್ತರಾಗಿದ್ದರು. ಅವರನ್ನು ಫೆಬ್ರವರಿ 27, 2024ರಂದು ಲೋಕಪಾಲ್‌ ಆಗಿ ನೇಮಕ ಮಾಡಲಾಗಿದೆ. ಇವರು ಎರಡನೇ ಲೋಕಪಾಲ್‌ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರರಾಗಿದ್ದಾರೆ. ಇದಲ್ಲದೆ ರಾಷ್ಟ್ರಪತಿಗಳು ಮಾಜಿ ಹೈಕೋರ್ಟ್ ನ್ಯಾಯಮೂರ್ತಿಗಳಾದ ಲಿಂಗಪ್ಪ ನಾರಾಯಣ ಸ್ವಾಮಿ, ಸಂಜಯ್ ಯಾದವ್ ಮತ್ತು ರಿತು ರಾಜ್ ಅವಸ್ತಿ ಅವರನ್ನು ಲೋಕಪಾಲ್‌ಗೆ  ನ್ಯಾಯಾಂಗ ಸದಸ್ಯರನ್ನಾಗಿ ನೇಮಿಸಿದೆ. ನ್ಯಾಯಾಂಗೇತರ ಸದಸ್ಯರಾಗಿ ಸುಶೀಲ್ ಚಂದ್ರ, ಪಂಕಜ್ ಕುಮಾರ್ ಮತ್ತು ಅಜಯ್ ಟಿರ್ಕಿ ಅವರನ್ನು ನೇಮಕ ಮಾಡಲಾಗಿದೆ.

ಜಾರ್ಖಂಡ್ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪ್ರದೀಪ್ ಕುಮಾರ್ ಮೊಹಾಂತಿ ಅವರು ಲೋಕಪಾಲ್‌ನ ಪ್ರಸ್ತುತ ಹಂಗಾಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2019ರಲ್ಲಿ ಲೋಕಪಾಲ್‌ ನ್ಯಾಯಾಂಗ ಸದಸ್ಯರಾಗಿ ನೇಮಕಗೊಂಡ ಅವರನ್ನು ಮೇ.2022ರಲ್ಲಿ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ನ್ಯಾಯಮೂರ್ತಿ ಖಾನ್ವಿಲ್ಕರ್ ಅವರ ನೇಮಕಾತಿಯು ನಿವೃತ್ತಿಯ ನಂತರದ ಉನ್ನತ ಹುದ್ದೆಗಳು ನೀಡುವ ಸಂಪ್ರದಾಯಕ್ಕೆ ನಿದರ್ಶನವಾಗಿದೆ. ನರೇಂದ್ರ ಮೋದಿ ಸರ್ಕಾರವು, ಬಾಬರಿ ಮಸೀದಿ- ರಾಮಜನ್ಮ ಭೂಮಿ ವಿವಾದದ ತೀರ್ಪು ನೀಡಿದ್ದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರನ್ನು ಸುಪ್ರೀಂಕೋರ್ಟ್‌ನಿಂದ ಸಿಜೆಐ ಆಗಿ ನಿವೃತ್ತರಾದ ನಾಲ್ಕು ತಿಂಗಳಲ್ಲಿ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಜುಲೈ 2021ರಲ್ಲಿ ನಿವೃತ್ತರಾದ ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರು ಅದೇ ವರ್ಷದ ನಂತರ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ ಮುಖ್ಯಸ್ಥರಾದರು. 2021ರಲ್ಲಿ ಮೋದಿ ಸರ್ಕಾರವು ಮಾಜಿ ಸುಪ್ರೀಂಕೋರ್ಟ್ ನ್ಯಾಯಾಧೀಶ ಅರುಣ್ ಕುಮಾರ್ ಮಿಶ್ರಾ ಅವರ ಹೆಸರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಹುದ್ದೆಗೆ ಶಿಫಾರಸ್ಸು ಮಾಡಿತ್ತು. 2023ರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ಗವರ್ನರ್ ಆಗಿ ನೇಮಿಸಿದ್ದರು.

ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ನರೇಂದ್ರ ಮೋದಿ ಸರ್ಕಾರದ ನಿರ್ಧಾರಗಳ ಮೇಲೆ ವ್ಯಾಪಕ ಪರಿಣಾಮ ಬೀರುವ ಪ್ರಮುಖ ತೀರ್ಪುಗಳನ್ನು ಬರೆದಿದ್ದಾರೆ.

377, ಆಧಾರ್, ಶಬರಿಮಲೆ

2018ರಲ್ಲಿ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಭಾಗವಾಗಿದ್ದರು. ಪೀಠದಲ್ಲಿ ನ್ಯಾಯಮೂರ್ತಿಗಳಾದ ರೋಹಿಂಟನ್ ಫಾಲಿ ನಾರಿಮನ್, ಡಿವೈ ಚಂದ್ರಚೂಡ್ ಮತ್ತು ಇಂದೂ ಮಲ್ಹೋತ್ರಾ ಇದ್ದರು. ಈ ಪೀಠ ಸಲಿಂಗಕಾಮವನ್ನು ಅಪರಾಧವಲ್ಲ ಎಂದು ತೀರ್ಪು ನೀಡಿತ್ತು.

ಅದೇ ವರ್ಷ 2018ರಲ್ಲಿ, ನ್ಯಾಯಮೂರ್ತಿ ಖಾನ್ವಿಲ್ಕರ್ ಅವರ ಪೀಠವು ಆಧಾರ್ ಕಾಯಿದೆಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದೆ. ನ್ಯಾಯಮೂರ್ತಿ ಸಿಕ್ರಿ ಅವರು ಬರೆದ ಬಹುಮತದ ಅಭಿಪ್ರಾಯವು ಅಂದಿನ ಸಿಜೆಐ ಮಿಶ್ರಾ ಮತ್ತು ನ್ಯಾಯಮೂರ್ತಿ ಖಾನ್ವಿಲ್ಕರ್ ಅವರ ಪರವಾಗಿತ್ತು. ಆಧಾರ್‌ ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಹೇಳಿದ್ದರು, ಇದನ್ನು ನ್ಯಾಯಾಲಯವು ಒಪ್ಪಿರಲಿಲ್ಲ.

2018ರಲ್ಲಿ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶವನ್ನು ಅನುಮತಿಸಿದ ಸುಪ್ರೀಂ ಕೋರ್ಟ್ ಪೀಠದ ಭಾಗವಾಗಿದ್ದ ನ್ಯಾಯಮೂರ್ತಿ ಖಾನ್ವಿಲ್ಕರ್, ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ನಿಷೇಧಿಸುವುದು ಲಿಂಗ ತಾರತಮ್ಯ ಮತ್ತು ಆಚರಣೆಯು ಹಿಂದೂ ಮಹಿಳೆಯರ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದರು.

ಗುಜರಾತ್ ಗಲಭೆ

2002ರ ಗುಜರಾತ್‌ ಗಲಭೆಗೆ ಸಂಬಂಧಿಸಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ 64 ಜನರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಹತ್ಯೆಯಾದ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರ ಮನವಿಯನ್ನು ವಜಾಗೊಳಿಸಿದ ಪೀಠದಲ್ಲಿ ನ್ಯಾಯಮೂರ್ತಿ ಖಾನ್ವಿಲ್ಕರ್ ಅವರಿದ್ದರು. ಸುಪ್ರೀಂ ಕೋರ್ಟ್‌ನ ತೀರ್ಪಿನ ಆಧಾರದ ಮೇಲೆ, ಗುಜರಾತ್ ಪೊಲೀಸರು ಮರುದಿನ, ಗಲಭೆಗೆ ಸಂಬಂಧಿಸಿದ ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಐಪಿಎಸ್ ಅಧಿಕಾರಿ ಆರ್.ಬಿ.ಶ್ರೀಕುಮಾರ್ ಅವರನ್ನು ಬಂಧಿಸಿದ್ದರು.

2022ರಲ್ಲಿ ನ್ಯಾಯಮೂರ್ತಿ ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ  ಪೀಠ, ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಕಾಯಿದೆ- 2020ನ್ನು ಎತ್ತಿಹಿಡಿದಿತ್ತು.

ಅದೇ ವರ್ಷದಲ್ಲಿ, ಅವರ ನಿವೃತ್ತಿಗೆ ಎರಡು ದಿನಗಳ ಮೊದಲು, ನ್ಯಾಯಮೂರ್ತಿ ಖಾನ್ವಿಲ್ಕರ್ ಅವರು ಮನಿ ಲಾಂಡರಿಂಗ್ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಜಾರಿ ನಿರ್ದೇಶನಾಲಯಕ್ಕೆ ಅಗಾಧ ಅಧಿಕಾರವನ್ನು ನೀಡುವ ತೀರ್ಪನ್ನು ನೀಡಿದ್ದರು.

ಇದನ್ನು ಓದಿ: ತುಮಕೂರು: ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಅಟ್ಟಹಾಸ; ಡಿವೈಎಸ್ಪಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...