Homeಮುಖಪುಟನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು 'ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ' ಹೇರಿತ್ತು: ನ್ಯಾ. ಲೋಕೂರ್ ಆರೋಪ

ನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು ‘ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ’ ಹೇರಿತ್ತು: ನ್ಯಾ. ಲೋಕೂರ್ ಆರೋಪ

- Advertisement -
- Advertisement -

ದೆಹಲಿ ಹೈಕೋರ್ಟ್‌ನಿಂದ ನ್ಯಾಯಮೂರ್ತಿ ಎಸ್. ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರವು ಕೊಲಿಜಿಯಂ ಮೇಲೆ ಪದೇ ಪದೇ ಒತ್ತಡ ಹೇರುತ್ತಿತ್ತು. ಆದರೆ, ವರ್ಗಾವಣೆಯನ್ನು ವಿರೋಧಿಸಿದ ಪ್ರಮುಖ ನ್ಯಾಯಾಧೀಶರು ನಿವೃತ್ತರಾಗುವವರೆಗೂ ಅದು ಸಾಧ್ಯವಾಗಿರಲಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ಆರೋಪಿಸಿದ್ದಾರೆ.

“ತಾನು ಸುಪ್ರೀಂ ಕೋರ್ಟ್‌ನಲ್ಲಿದ್ದಾಗ ನ್ಯಾ. ಎಸ್. ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರ ಒತ್ತಾಯಿಸಿತ್ತು. ಆದರೆ, ನಾನು ವಿರೋಧಿಸಿದ್ದರಿಂದ ಅದು ಕಾರ್ಯಸಾಧ್ಯ ಆಗಲಿಲ್ಲ ಎಂದು ನ್ಯಾ. ಮರಳೀಧರ್ ಸಂಗ್ರಹದ ಇತ್ತೀಚೆಗೆ ಪ್ರಕಟಗೊಂಡ “[ಇನ್]ಕಂಪ್ಲೀಟ್ ಜಸ್ಟೀಸ್? ಸುಪ್ರೀಂ ಕೋರ್ಟ್ ಅಟ್ 75” ಎಂಬ ಪುಸ್ತಕದಲ್ಲಿ ಬರೆದ ಪ್ರಬಂಧದಲ್ಲಿ ನ್ಯಾ.ಲೋಕೂರ್ ನೆನಪಿಸಿಕೊಂಡಿದ್ದಾರೆ ಎಂದು livelaw.in ವರದಿ ಮಾಡಿದೆ.

“ಡಿಸೆಂಬರ್ 2018ರಲ್ಲಿ ತಾನು ನಿವೃತ್ತಿ ಹೊಂದಿದ ನಂತರ ಮುರಳೀಧರ್ ಅವರ ವರ್ಗಾವಣೆ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿತ್ತು. ಆ ಕೊಲಿಜಿಯಂನಲ್ಲಿದ್ದ ನ್ಯಾ. ಎ.ಕೆ ಸಿಕ್ರಿ ಅವರು ಅದನ್ನು ವಿರೋಧಿಸಿದ್ದರು. ನ್ಯಾ. ಸಿಕ್ರಿ ಮಾರ್ಚ್ 2019ರಲ್ಲಿ ನಿವೃತ್ತರಾದ ನಂತರ, ಮುರಳೀಧರ್ ಅವರ ವರ್ಗಾವಣೆ ವಿಷಯ ಮತ್ತೆ ಚರ್ಚೆಗೆ ಬಂತು.  ಅಂತಿಮವಾಗಿ, ಫೆಬ್ರವರಿ 2020ರಲ್ಲಿ ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ‘ನಿರಂಕುಶವಾಗಿ’ ವರ್ಗಾಯಿಸಲಾಯಿತು ಎಂದು ನ್ಯಾಯಮೂರ್ತಿ ಲೋಕೂರ್ ತಮ್ಮ ಪ್ರಬಂಧದಲ್ಲಿ ಬರೆದಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

“ಸುಪ್ರೀಂ ಕೋರ್ಟ್ ಕೊಲಿಜಿಯಂನ ಕಾರ್ಯನಿರ್ವಹಣೆಯ ಪಾರದರ್ಶಕತೆಯ ಬಗ್ಗೆ ಹೇಳಲೇಬೇಕಾದ ವಿಷಯವಿದೆ. ಒಂದು ಸಂದರ್ಭದಲ್ಲಿ, ಕಾರ್ಯಾಂಗವು ಸಿಜೆಐ ಅವರಿಗೆ ವರ್ಗಾವಣೆ ಮಾಡಲು ಸಲಹೆ ನೀಡಿದೆ ಎಂಬ ಸ್ಪಷ್ಟವಾದ ಅನಿಸಿಕೆ ನನಗೆ ಬಂತು. ಅದು ನ್ಯಾ. ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ವರ್ಗಾವಣೆ ಮಾಡಿದ ವಿಷಯದಲ್ಲಿ. ಏನೋ ಒಂದು ವಿಷಯ ಖಂಡಿತವಾಗಿಯೂ ವರ್ಗಾವಣೆಗೆ ಆಧಾರವಾಗುವುದಿಲ್ಲ. ಹಾಗಾಗಿ, ನಾನು ವರ್ಗಾವಣೆ ಪ್ರಸ್ತಾವನೆಗೆ ನನ್ನ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದೆ. ಸಿಜೆಐ ನನ್ನ ಅಭಿಪ್ರಾಯವನ್ನು ಸುಲಭವಾಗಿ ಒಪ್ಪಿಕೊಂಡಿದ್ದರು. ನಾನು ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿಯಾದ ನಂತರ, ವರ್ಗಾವಣೆ ವಿಷಯ ಮತ್ತೆ ಮುನ್ನಲೆಗೆ ಬಂದಿತ್ತು. ಆದರೆ, ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ಹೊಸದಾಗಿ ಸೇರ್ಪಡೆಯಾದ ನ್ಯಾ. ಸಿಕ್ರಿ ಕೂಡ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರು. ಅವರು ಕೂಡ ಪ್ರಸ್ತಾವಿತ ವರ್ಗಾವಣೆಯನ್ನು ವಿರೋಧಿಸಿದ್ದರು. ಸಿಕ್ರಿ ಅವರ ನಿವೃತ್ತಿಯ ನಂತರ, ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ನಿರಂಕುಶವಾಗಿ ವರ್ಗಾಯಿಸಲಾಯಿತು” ಎಂದು ಲೋಕೂರ್ ಬರೆದಿದುಕೊಂಡಿದ್ದಾರೆ.

ಸ್ವತಂತ್ರ ಮತ್ತು ತೀಕ್ಷ್ಣ ತೀರ್ಪುಗಳಿಗೆ ಹೆಸರುವಾಸಿಯಾಗಿದ್ದ ನ್ಯಾಯಮೂರ್ತಿ ಮುರಳೀಧರ್ ಅವರನ್ನು ಅಂತಿಮವಾಗಿ ಫೆಬ್ರವರಿ 2020ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಈ ನಿರ್ಧಾರವು ಆ ಸಮಯದಲ್ಲಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. ಏಕೆಂದರೆ, 2020ರ ದೆಹಲಿ ಗಲಭೆಯ ಸಮಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹೊತ್ತಿರುವ ರಾಜಕಾರಣಿಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲು ವಿಫಲವಾದ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳ ನಂತರ ಮುರಳೀಧರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು ಎಂದು livelaw.in ವಿವರಿಸಿದೆ. 

ದೆಹಲಿ ಗಲಭೆ ವಿಷಯದಲ್ಲಿ ನ್ಯಾಯಮೂರ್ತಿ ಮುರಳೀಧರ್ ಅವರು ನೀಡಿದ್ದ ದಿಟ್ಟ ಆದೇಶಗಳಿಂದಾಗಿ ಅವರು ಪರಿಣಾಮಗಳನ್ನು ಎದುರಿಸಿರಬಹುದು ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಓಕಾ ಇತ್ತೀಚಿಗೆ ಹೇಳಿದ್ದರು ಎಂದು ವರದಿ ಹೇಳಿದೆ.

Courtesy :livelaw.in

ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...