Homeಮುಖಪುಟನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು 'ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ' ಹೇರಿತ್ತು: ನ್ಯಾ. ಲೋಕೂರ್ ಆರೋಪ

ನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು ‘ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ’ ಹೇರಿತ್ತು: ನ್ಯಾ. ಲೋಕೂರ್ ಆರೋಪ

- Advertisement -
- Advertisement -

ದೆಹಲಿ ಹೈಕೋರ್ಟ್‌ನಿಂದ ನ್ಯಾಯಮೂರ್ತಿ ಎಸ್. ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರವು ಕೊಲಿಜಿಯಂ ಮೇಲೆ ಪದೇ ಪದೇ ಒತ್ತಡ ಹೇರುತ್ತಿತ್ತು. ಆದರೆ, ವರ್ಗಾವಣೆಯನ್ನು ವಿರೋಧಿಸಿದ ಪ್ರಮುಖ ನ್ಯಾಯಾಧೀಶರು ನಿವೃತ್ತರಾಗುವವರೆಗೂ ಅದು ಸಾಧ್ಯವಾಗಿರಲಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ಆರೋಪಿಸಿದ್ದಾರೆ.

“ತಾನು ಸುಪ್ರೀಂ ಕೋರ್ಟ್‌ನಲ್ಲಿದ್ದಾಗ ನ್ಯಾ. ಎಸ್. ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರ ಒತ್ತಾಯಿಸಿತ್ತು. ಆದರೆ, ನಾನು ವಿರೋಧಿಸಿದ್ದರಿಂದ ಅದು ಕಾರ್ಯಸಾಧ್ಯ ಆಗಲಿಲ್ಲ ಎಂದು ನ್ಯಾ. ಮರಳೀಧರ್ ಸಂಗ್ರಹದ ಇತ್ತೀಚೆಗೆ ಪ್ರಕಟಗೊಂಡ “[ಇನ್]ಕಂಪ್ಲೀಟ್ ಜಸ್ಟೀಸ್? ಸುಪ್ರೀಂ ಕೋರ್ಟ್ ಅಟ್ 75” ಎಂಬ ಪುಸ್ತಕದಲ್ಲಿ ಬರೆದ ಪ್ರಬಂಧದಲ್ಲಿ ನ್ಯಾ.ಲೋಕೂರ್ ನೆನಪಿಸಿಕೊಂಡಿದ್ದಾರೆ ಎಂದು livelaw.in ವರದಿ ಮಾಡಿದೆ.

“ಡಿಸೆಂಬರ್ 2018ರಲ್ಲಿ ತಾನು ನಿವೃತ್ತಿ ಹೊಂದಿದ ನಂತರ ಮುರಳೀಧರ್ ಅವರ ವರ್ಗಾವಣೆ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿತ್ತು. ಆ ಕೊಲಿಜಿಯಂನಲ್ಲಿದ್ದ ನ್ಯಾ. ಎ.ಕೆ ಸಿಕ್ರಿ ಅವರು ಅದನ್ನು ವಿರೋಧಿಸಿದ್ದರು. ನ್ಯಾ. ಸಿಕ್ರಿ ಮಾರ್ಚ್ 2019ರಲ್ಲಿ ನಿವೃತ್ತರಾದ ನಂತರ, ಮುರಳೀಧರ್ ಅವರ ವರ್ಗಾವಣೆ ವಿಷಯ ಮತ್ತೆ ಚರ್ಚೆಗೆ ಬಂತು.  ಅಂತಿಮವಾಗಿ, ಫೆಬ್ರವರಿ 2020ರಲ್ಲಿ ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ‘ನಿರಂಕುಶವಾಗಿ’ ವರ್ಗಾಯಿಸಲಾಯಿತು ಎಂದು ನ್ಯಾಯಮೂರ್ತಿ ಲೋಕೂರ್ ತಮ್ಮ ಪ್ರಬಂಧದಲ್ಲಿ ಬರೆದಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

“ಸುಪ್ರೀಂ ಕೋರ್ಟ್ ಕೊಲಿಜಿಯಂನ ಕಾರ್ಯನಿರ್ವಹಣೆಯ ಪಾರದರ್ಶಕತೆಯ ಬಗ್ಗೆ ಹೇಳಲೇಬೇಕಾದ ವಿಷಯವಿದೆ. ಒಂದು ಸಂದರ್ಭದಲ್ಲಿ, ಕಾರ್ಯಾಂಗವು ಸಿಜೆಐ ಅವರಿಗೆ ವರ್ಗಾವಣೆ ಮಾಡಲು ಸಲಹೆ ನೀಡಿದೆ ಎಂಬ ಸ್ಪಷ್ಟವಾದ ಅನಿಸಿಕೆ ನನಗೆ ಬಂತು. ಅದು ನ್ಯಾ. ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ವರ್ಗಾವಣೆ ಮಾಡಿದ ವಿಷಯದಲ್ಲಿ. ಏನೋ ಒಂದು ವಿಷಯ ಖಂಡಿತವಾಗಿಯೂ ವರ್ಗಾವಣೆಗೆ ಆಧಾರವಾಗುವುದಿಲ್ಲ. ಹಾಗಾಗಿ, ನಾನು ವರ್ಗಾವಣೆ ಪ್ರಸ್ತಾವನೆಗೆ ನನ್ನ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದೆ. ಸಿಜೆಐ ನನ್ನ ಅಭಿಪ್ರಾಯವನ್ನು ಸುಲಭವಾಗಿ ಒಪ್ಪಿಕೊಂಡಿದ್ದರು. ನಾನು ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿಯಾದ ನಂತರ, ವರ್ಗಾವಣೆ ವಿಷಯ ಮತ್ತೆ ಮುನ್ನಲೆಗೆ ಬಂದಿತ್ತು. ಆದರೆ, ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ಹೊಸದಾಗಿ ಸೇರ್ಪಡೆಯಾದ ನ್ಯಾ. ಸಿಕ್ರಿ ಕೂಡ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರು. ಅವರು ಕೂಡ ಪ್ರಸ್ತಾವಿತ ವರ್ಗಾವಣೆಯನ್ನು ವಿರೋಧಿಸಿದ್ದರು. ಸಿಕ್ರಿ ಅವರ ನಿವೃತ್ತಿಯ ನಂತರ, ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ನಿರಂಕುಶವಾಗಿ ವರ್ಗಾಯಿಸಲಾಯಿತು” ಎಂದು ಲೋಕೂರ್ ಬರೆದಿದುಕೊಂಡಿದ್ದಾರೆ.

ಸ್ವತಂತ್ರ ಮತ್ತು ತೀಕ್ಷ್ಣ ತೀರ್ಪುಗಳಿಗೆ ಹೆಸರುವಾಸಿಯಾಗಿದ್ದ ನ್ಯಾಯಮೂರ್ತಿ ಮುರಳೀಧರ್ ಅವರನ್ನು ಅಂತಿಮವಾಗಿ ಫೆಬ್ರವರಿ 2020ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಈ ನಿರ್ಧಾರವು ಆ ಸಮಯದಲ್ಲಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. ಏಕೆಂದರೆ, 2020ರ ದೆಹಲಿ ಗಲಭೆಯ ಸಮಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹೊತ್ತಿರುವ ರಾಜಕಾರಣಿಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲು ವಿಫಲವಾದ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳ ನಂತರ ಮುರಳೀಧರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು ಎಂದು livelaw.in ವಿವರಿಸಿದೆ. 

ದೆಹಲಿ ಗಲಭೆ ವಿಷಯದಲ್ಲಿ ನ್ಯಾಯಮೂರ್ತಿ ಮುರಳೀಧರ್ ಅವರು ನೀಡಿದ್ದ ದಿಟ್ಟ ಆದೇಶಗಳಿಂದಾಗಿ ಅವರು ಪರಿಣಾಮಗಳನ್ನು ಎದುರಿಸಿರಬಹುದು ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಓಕಾ ಇತ್ತೀಚಿಗೆ ಹೇಳಿದ್ದರು ಎಂದು ವರದಿ ಹೇಳಿದೆ.

Courtesy :livelaw.in

ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...