Homeಮುಖಪುಟನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು 'ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ' ಹೇರಿತ್ತು: ನ್ಯಾ. ಲೋಕೂರ್ ಆರೋಪ

ನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾಯಿಸಲು ‘ಕೊಲಿಜಿಯಂ ಮೇಲೆ ಸರ್ಕಾರ ಒತ್ತಡ’ ಹೇರಿತ್ತು: ನ್ಯಾ. ಲೋಕೂರ್ ಆರೋಪ

- Advertisement -
- Advertisement -

ದೆಹಲಿ ಹೈಕೋರ್ಟ್‌ನಿಂದ ನ್ಯಾಯಮೂರ್ತಿ ಎಸ್. ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರವು ಕೊಲಿಜಿಯಂ ಮೇಲೆ ಪದೇ ಪದೇ ಒತ್ತಡ ಹೇರುತ್ತಿತ್ತು. ಆದರೆ, ವರ್ಗಾವಣೆಯನ್ನು ವಿರೋಧಿಸಿದ ಪ್ರಮುಖ ನ್ಯಾಯಾಧೀಶರು ನಿವೃತ್ತರಾಗುವವರೆಗೂ ಅದು ಸಾಧ್ಯವಾಗಿರಲಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್ ಬಿ. ಲೋಕೂರ್ ಆರೋಪಿಸಿದ್ದಾರೆ.

“ತಾನು ಸುಪ್ರೀಂ ಕೋರ್ಟ್‌ನಲ್ಲಿದ್ದಾಗ ನ್ಯಾ. ಎಸ್. ಮುರಳೀಧರ್ ಅವರನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರ ಒತ್ತಾಯಿಸಿತ್ತು. ಆದರೆ, ನಾನು ವಿರೋಧಿಸಿದ್ದರಿಂದ ಅದು ಕಾರ್ಯಸಾಧ್ಯ ಆಗಲಿಲ್ಲ ಎಂದು ನ್ಯಾ. ಮರಳೀಧರ್ ಸಂಗ್ರಹದ ಇತ್ತೀಚೆಗೆ ಪ್ರಕಟಗೊಂಡ “[ಇನ್]ಕಂಪ್ಲೀಟ್ ಜಸ್ಟೀಸ್? ಸುಪ್ರೀಂ ಕೋರ್ಟ್ ಅಟ್ 75” ಎಂಬ ಪುಸ್ತಕದಲ್ಲಿ ಬರೆದ ಪ್ರಬಂಧದಲ್ಲಿ ನ್ಯಾ.ಲೋಕೂರ್ ನೆನಪಿಸಿಕೊಂಡಿದ್ದಾರೆ ಎಂದು livelaw.in ವರದಿ ಮಾಡಿದೆ.

“ಡಿಸೆಂಬರ್ 2018ರಲ್ಲಿ ತಾನು ನಿವೃತ್ತಿ ಹೊಂದಿದ ನಂತರ ಮುರಳೀಧರ್ ಅವರ ವರ್ಗಾವಣೆ ಬೇಡಿಕೆ ಮತ್ತೆ ಮುನ್ನಲೆಗೆ ಬಂದಿತ್ತು. ಆ ಕೊಲಿಜಿಯಂನಲ್ಲಿದ್ದ ನ್ಯಾ. ಎ.ಕೆ ಸಿಕ್ರಿ ಅವರು ಅದನ್ನು ವಿರೋಧಿಸಿದ್ದರು. ನ್ಯಾ. ಸಿಕ್ರಿ ಮಾರ್ಚ್ 2019ರಲ್ಲಿ ನಿವೃತ್ತರಾದ ನಂತರ, ಮುರಳೀಧರ್ ಅವರ ವರ್ಗಾವಣೆ ವಿಷಯ ಮತ್ತೆ ಚರ್ಚೆಗೆ ಬಂತು.  ಅಂತಿಮವಾಗಿ, ಫೆಬ್ರವರಿ 2020ರಲ್ಲಿ ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ‘ನಿರಂಕುಶವಾಗಿ’ ವರ್ಗಾಯಿಸಲಾಯಿತು ಎಂದು ನ್ಯಾಯಮೂರ್ತಿ ಲೋಕೂರ್ ತಮ್ಮ ಪ್ರಬಂಧದಲ್ಲಿ ಬರೆದಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

“ಸುಪ್ರೀಂ ಕೋರ್ಟ್ ಕೊಲಿಜಿಯಂನ ಕಾರ್ಯನಿರ್ವಹಣೆಯ ಪಾರದರ್ಶಕತೆಯ ಬಗ್ಗೆ ಹೇಳಲೇಬೇಕಾದ ವಿಷಯವಿದೆ. ಒಂದು ಸಂದರ್ಭದಲ್ಲಿ, ಕಾರ್ಯಾಂಗವು ಸಿಜೆಐ ಅವರಿಗೆ ವರ್ಗಾವಣೆ ಮಾಡಲು ಸಲಹೆ ನೀಡಿದೆ ಎಂಬ ಸ್ಪಷ್ಟವಾದ ಅನಿಸಿಕೆ ನನಗೆ ಬಂತು. ಅದು ನ್ಯಾ. ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ವರ್ಗಾವಣೆ ಮಾಡಿದ ವಿಷಯದಲ್ಲಿ. ಏನೋ ಒಂದು ವಿಷಯ ಖಂಡಿತವಾಗಿಯೂ ವರ್ಗಾವಣೆಗೆ ಆಧಾರವಾಗುವುದಿಲ್ಲ. ಹಾಗಾಗಿ, ನಾನು ವರ್ಗಾವಣೆ ಪ್ರಸ್ತಾವನೆಗೆ ನನ್ನ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದೆ. ಸಿಜೆಐ ನನ್ನ ಅಭಿಪ್ರಾಯವನ್ನು ಸುಲಭವಾಗಿ ಒಪ್ಪಿಕೊಂಡಿದ್ದರು. ನಾನು ಸುಪ್ರೀಂ ಕೋರ್ಟ್‌ನಿಂದ ನಿವೃತ್ತಿಯಾದ ನಂತರ, ವರ್ಗಾವಣೆ ವಿಷಯ ಮತ್ತೆ ಮುನ್ನಲೆಗೆ ಬಂದಿತ್ತು. ಆದರೆ, ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ಹೊಸದಾಗಿ ಸೇರ್ಪಡೆಯಾದ ನ್ಯಾ. ಸಿಕ್ರಿ ಕೂಡ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರು. ಅವರು ಕೂಡ ಪ್ರಸ್ತಾವಿತ ವರ್ಗಾವಣೆಯನ್ನು ವಿರೋಧಿಸಿದ್ದರು. ಸಿಕ್ರಿ ಅವರ ನಿವೃತ್ತಿಯ ನಂತರ, ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ನಿರಂಕುಶವಾಗಿ ವರ್ಗಾಯಿಸಲಾಯಿತು” ಎಂದು ಲೋಕೂರ್ ಬರೆದಿದುಕೊಂಡಿದ್ದಾರೆ.

ಸ್ವತಂತ್ರ ಮತ್ತು ತೀಕ್ಷ್ಣ ತೀರ್ಪುಗಳಿಗೆ ಹೆಸರುವಾಸಿಯಾಗಿದ್ದ ನ್ಯಾಯಮೂರ್ತಿ ಮುರಳೀಧರ್ ಅವರನ್ನು ಅಂತಿಮವಾಗಿ ಫೆಬ್ರವರಿ 2020ರಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು. ಈ ನಿರ್ಧಾರವು ಆ ಸಮಯದಲ್ಲಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. ಏಕೆಂದರೆ, 2020ರ ದೆಹಲಿ ಗಲಭೆಯ ಸಮಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಹೊತ್ತಿರುವ ರಾಜಕಾರಣಿಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲು ವಿಫಲವಾದ ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳ ನಂತರ ಮುರಳೀಧರ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು ಎಂದು livelaw.in ವಿವರಿಸಿದೆ. 

ದೆಹಲಿ ಗಲಭೆ ವಿಷಯದಲ್ಲಿ ನ್ಯಾಯಮೂರ್ತಿ ಮುರಳೀಧರ್ ಅವರು ನೀಡಿದ್ದ ದಿಟ್ಟ ಆದೇಶಗಳಿಂದಾಗಿ ಅವರು ಪರಿಣಾಮಗಳನ್ನು ಎದುರಿಸಿರಬಹುದು ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಓಕಾ ಇತ್ತೀಚಿಗೆ ಹೇಳಿದ್ದರು ಎಂದು ವರದಿ ಹೇಳಿದೆ.

Courtesy :livelaw.in

ಅನುಕೂಲಕರ ಆದೇಶ ಪಡೆಯಲು ನ್ಯಾಯಾಧೀಶರನ್ನು ಸಂಪರ್ಕಿಸಿದ ಆರೋಪ: ತನಿಖೆಗೆ ಆದೇಶಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...