Homeಮುಖಪುಟಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬ್ರಜ್‍ಗೋಪಾಲ್ ಹರಕಿಷನ್ ಲೋಯಾ ಸಿಬಿಐ ಕೋರ್ಟಿನ ಜಡ್ಜ್. ಗುಜರಾತಿನ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‍ಕೌಂಟರ್ ಕೇಸಿನ ವಿಚಾರಣೆ ನಡೆಸುತ್ತಿದ್ದವರು. ಇವರು 2014ರ ಡಿಸೆಂಬರ್ 1ರಂದು ಸಂಬಂದಿಕರ ಮದುವೆಗೆಂದು ನಾಗಪುರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅನುಮಾನಾಸ್ಪದ ‘ಹೃದಯಾಘಾತ’ದಿಂದ ಸಾವನ್ನಪ್ಪಿದರು. ಅವರ ಅಂತ್ಯಕ್ರಿಯೆಗಳನ್ನೂ ಕೂಡ ತರಾತುರಿಯಲ್ಲಿ ಮುಗಿಸಲಾಗಿತ್ತು.

ಇದಾದ ಕೆಲದಿನಗಳಲ್ಲಿ ಜ.ಲೋಯಾ ಕುಟುಂಬದವರು ಸ್ಫೋಟಕ ವಿಷಯಗಳನ್ನು ಬಿಚ್ಚಿಟ್ಟರು. ಅವರ ಪ್ರಕಾರ ‘ಈ ಕೇಸಿನಲ್ಲಿ ತಮಗೆ ಅನುಕೂಲಕರ ತೀರ್ಪು ನೀಡುವಂತೆ ಲೋಯಾ ಅವರ ಮೇಲೆ ಭಾರೀ ಒತ್ತಡ ಇತ್ತು. ಅದಕ್ಕಾಗಿ ನೂರು ಕೋಟಿ ರೂಪಾಯಿಗಳ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ನ್ಯಾಯಪ್ರಜ್ಞೆಗೆ ಹೆಸರಾಗಿದ್ದ ಲೋಯಾ ಅವರು ಇಂಥ ಆಮಿಷವನ್ನು ತಿರಸ್ಕರಿಸಿದರು. ಬೆದರಿಕೆಗೆ ಅವರು ಸೊಪ್ಪು ಹಾಕಲಿಲ್ಲ. ಪರಿಣಾಮವಾಗಿಯೇ ಅವರನ್ನು ಕೊಲೆ ಮಾಡಲಾಗಿದೆ’ ಎಂಬ ಸ್ಫೋಟಕ ಸುದ್ದಿಗಳನ್ನು ಹೊರಹಾಕಿದ್ದರು.ಇಷ್ಟಕ್ಕೂ ಈ ಕೇಸಿನಲ್ಲಿ ಆರೋಪಿ ಸ್ಥಾನದಲ್ಲಿದ್ದದ್ದು ಯಾರಂತೀರಿ? ಪ್ರಧಾನಿ ಮೋದಿಯವರಿಗೆ ಪರಮಾಪ್ತ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಗಿದ್ದು ಹಾಲಿ ಭಾರತದ ಗೃಹ ಸಚಿವ ಅಮಿತ್ ಶಾ. ಸೊಹ್ರಾಬುದ್ದೀನ್ ನಕಲಿ ಎನ್‍ಕೌಂಟರ್ ಕೇಸಿನಲ್ಲಿ 2010ರಲ್ಲಿ ಅಮಿತ್ ಶಾ 3 ತಿಂಗಳ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಈ ಕೇಸಿನಲ್ಲಿ ಶಾ ಕೈವಾಡದ ಬಗ್ಗೆ ಅನೇಕ ಸಾಕ್ಷ್ಯಾಧಾರಗಳನ್ನು ಸುಪ್ರಿಂ ಕೋರ್ಟ್ ಪರಿಗಣಿಸಿತ್ತು. ಸಾಕ್ಷ್ಯನಾಶ ಮಾಡುವ ಸಾಧ್ಯತೆಯನ್ನು ಮನಗಂಡು ಈತನನ್ನು ಎರಡು ವರ್ಷಗಳ ಕಾಲ ಗುಜರಾತ್‍ನಿಂದ ಗಡಿಪಾರು ಮಾಡಿತ್ತು. ಅಂದಹಾಗೆ ಆಗ ಅಮಿತ್ ಶಾ ಗುಜರಾತ್‍ನ ಗೃಹಮಂತ್ರಿಯಾಗಿದ್ದರು ಎಂಬುದನ್ನು ಮರೆಯುವಂತಿಲ್ಲ.

ಈ ಕೇಸಿನಲ್ಲಿ ಅಮಿತ್ ಶಾ ಜೊತೆ ಡಿಐಜಿ ವಂಜಾರ ಒಳಗೊಂಡು 6 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳೂ ಜೈಲು ಪಾಲಾಗಿದ್ದರು. ಮೋದಿ ಪ್ರಧಾನಿಯಾಗಿ ಪಂಜರದ ಗಿಳಿ ಕುಖ್ಯಾತಿಯ ಸಿಬಿಐ ಅವರ ಹಿಡಿತಕ್ಕೆ ಬಂದ ಮೇಲೆ ಈ ಅಧಿಕಾರಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದ್ದು ಕಾಕತಾಳಿಯವೇನಲ್ಲ.

ಗುಜರಾತ್‍ನಿಂದ ಹೊರಗಡೆ ಈ ಕೇಸಿನ ವಿಚಾರಣೆ ನಡೆಸಬೇಕೆಂಬ ಸುಪ್ರಿಂ ಆದೇಶದ ಪ್ರಕಾರ ಸಿಬಿಐ ಕೋರ್ಟ್ ವಿಚಾರಣೆ ನಡೆಸಿತ್ತು. ಈ ಹಿಂದೆ ವಿಚಾರಣೆ ನಡೆಸುತ್ತಿದ್ದ ಜ.ಉತ್ಪಾತ್ ಅವರು ಅಮಿತ್ ಶಾ ಕೋರ್ಟಿನ ಮುಂದೆ ಖುದ್ದು ಹಾಜರಾಗಬೇಕೆಂದು ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಎತ್ತಂಗಡಿಯಾದರು. ಅವರ ಸ್ಥಾನಕ್ಕೆ ಬಂದವರೇ ನತದೃಷ್ಟ ಜ.ಲೋಯಾ.

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

ನ್ಯಾಯಾಧೀಶರ ನಿಗೂಡ ಸಾವಿನ ತನಿಖೆ ಕೈಗೊಂಡ ಕ್ಯಾರವಾನ್ ಪತ್ರಿಕೆ ಅವರ ಕುಟುಂಬದವರು, ಬಂಧುಮಿತ್ರರು, ಸಹೋದ್ಯೋಗಿಗಳು ಮುಂತಾದವರಿಂದ ಮಾಹಿತಿ ಸಂಗ್ರಹಿಸಿ 2017ರ ನವೆಂಬರ್‍ನಲ್ಲಿ ತನಿಖಾ ವರದಿ ಪ್ರಕಟಿಸಿತು. ಮೂರು ವರ್ಷಗಳ ಹಿಂದೆ ಹೂತುಹೋಗಿದ್ದ ನಿಗೂಡ ಸಾವಿನ ಪ್ರಕರಣಕ್ಕೆ ಆಗಲೇ ಮರುಜೀವ ಬಂದಿದ್ದು. ಇಂಥಾ ಪ್ರಾಮಾಣಿಕ ನ್ಯಾಯಾಧೀಶರ ನಿಗೂಡ ಸಾವಿನ ಪೋಸ್ಟ್‍ಮಾರ್ಟಂ ವರದಿ ಹಾಗೂ ಕಾನೂನು ಪ್ರಕ್ರಿಯೆಗಳಲ್ಲಿ ಹಲವಾರು ಲೋಪದೋಷಗಳು ಕಂಡುಬಂದಿರುವುದರಿಂದ ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ಸುಪ್ರಿಂಕೋರ್ಟ್‍ನಲ್ಲಿ ಒಂದು ಪಿಐಎಲ್ ದಾಖಲಾಯಿತು. ಇದೇ ಅವಧಿಯಲ್ಲಿ ಬಾಂಬೆ ಹೈಕೋರ್ಟ್‍ನಲ್ಲೂ ಒಂದು ಪಿಐಎಲ್ ದಾಖಲಾಯ್ತು.2018ರ ಜನವರಿಯಲ್ಲಿ ದಾಖಲಾದ ಇಂಥಾ ಘನಗಂಭೀರವಾದ ಪ್ರಕರಣವನ್ನು ಏಪ್ರಿಲ್ 19ರಂದು ಸುಪ್ರಿಂಕೋರ್ಟ್ ಇತ್ಯರ್ಥಪಡಿಸಿದೆ. ‘ಜಸ್ಟೀಸ್ ಲೋಯಾ ಸಾವು ಸಹಜವಾಗಿಯೇ ಸಂಭವಿಸಿದೆ, ಈ ಬಗ್ಗೆ ಯಾವುದೇ ತನಿಖೆಯ ಅಗತ್ಯವಿಲ್ಲ’ ಎಂದು ತೀರ್ಪು ನೀಡಿದ್ದು ಮಾತ್ರವಲ್ಲದೆ ಅರ್ಜಿದಾರರ ಉದ್ದೇಶವನ್ನೇ ಪ್ರಶ್ನೆ ಮಾಡಿದೆ. ನೆನಪಿಡಿ. ಜಸ್ಟೀಸ್ ಲೋಯಾ ಸಾವು ಹೃದಯಾಘಾತದಿಂದ ಸಂಭವಿಸಿದ್ದಲ್ಲ ಎಂದು ಫಾರೆನ್ಸಿಕ್ ತಜ್ಞರು ಅಭಿಪ್ರಾಯಪಟ್ಟಿರುವ ವರದಿಗಳು ಬಂದಿವೆ. ಪೋಸ್ಟ್ ಮಾರ್ಟಂ ವರದಿ ತಯಾರಿಸುವಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವರೊಬ್ಬರು ಭಾಗಿಯಾಗಿದ್ದರೆಂಬ ಬಗ್ಗೆಯೂ ವರದಿಗಳು ಪ್ರಕಟವಾಗಿವೆ.

ಈಗ ಸೋಹ್ರಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಭಾರತದ ಗೃಹ ಮಂತ್ರಿಯಾಗಿದ್ದಾರೆ. ಗುಜರಾತ್ ಗಲಭೆಗಳಿಗೆ ನ್ಯಾಯ ಸಿಗುತ್ತದೆ ಎಂದು ನಿರೀಕ್ಷಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...