Homeಮುಖಪುಟಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬ್ರಜ್‍ಗೋಪಾಲ್ ಹರಕಿಷನ್ ಲೋಯಾ ಸಿಬಿಐ ಕೋರ್ಟಿನ ಜಡ್ಜ್. ಗುಜರಾತಿನ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‍ಕೌಂಟರ್ ಕೇಸಿನ ವಿಚಾರಣೆ ನಡೆಸುತ್ತಿದ್ದವರು. ಇವರು 2014ರ ಡಿಸೆಂಬರ್ 1ರಂದು ಸಂಬಂದಿಕರ ಮದುವೆಗೆಂದು ನಾಗಪುರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅನುಮಾನಾಸ್ಪದ ‘ಹೃದಯಾಘಾತ’ದಿಂದ ಸಾವನ್ನಪ್ಪಿದರು. ಅವರ ಅಂತ್ಯಕ್ರಿಯೆಗಳನ್ನೂ ಕೂಡ ತರಾತುರಿಯಲ್ಲಿ ಮುಗಿಸಲಾಗಿತ್ತು.

ಇದಾದ ಕೆಲದಿನಗಳಲ್ಲಿ ಜ.ಲೋಯಾ ಕುಟುಂಬದವರು ಸ್ಫೋಟಕ ವಿಷಯಗಳನ್ನು ಬಿಚ್ಚಿಟ್ಟರು. ಅವರ ಪ್ರಕಾರ ‘ಈ ಕೇಸಿನಲ್ಲಿ ತಮಗೆ ಅನುಕೂಲಕರ ತೀರ್ಪು ನೀಡುವಂತೆ ಲೋಯಾ ಅವರ ಮೇಲೆ ಭಾರೀ ಒತ್ತಡ ಇತ್ತು. ಅದಕ್ಕಾಗಿ ನೂರು ಕೋಟಿ ರೂಪಾಯಿಗಳ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ನ್ಯಾಯಪ್ರಜ್ಞೆಗೆ ಹೆಸರಾಗಿದ್ದ ಲೋಯಾ ಅವರು ಇಂಥ ಆಮಿಷವನ್ನು ತಿರಸ್ಕರಿಸಿದರು. ಬೆದರಿಕೆಗೆ ಅವರು ಸೊಪ್ಪು ಹಾಕಲಿಲ್ಲ. ಪರಿಣಾಮವಾಗಿಯೇ ಅವರನ್ನು ಕೊಲೆ ಮಾಡಲಾಗಿದೆ’ ಎಂಬ ಸ್ಫೋಟಕ ಸುದ್ದಿಗಳನ್ನು ಹೊರಹಾಕಿದ್ದರು.ಇಷ್ಟಕ್ಕೂ ಈ ಕೇಸಿನಲ್ಲಿ ಆರೋಪಿ ಸ್ಥಾನದಲ್ಲಿದ್ದದ್ದು ಯಾರಂತೀರಿ? ಪ್ರಧಾನಿ ಮೋದಿಯವರಿಗೆ ಪರಮಾಪ್ತ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಗಿದ್ದು ಹಾಲಿ ಭಾರತದ ಗೃಹ ಸಚಿವ ಅಮಿತ್ ಶಾ. ಸೊಹ್ರಾಬುದ್ದೀನ್ ನಕಲಿ ಎನ್‍ಕೌಂಟರ್ ಕೇಸಿನಲ್ಲಿ 2010ರಲ್ಲಿ ಅಮಿತ್ ಶಾ 3 ತಿಂಗಳ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಈ ಕೇಸಿನಲ್ಲಿ ಶಾ ಕೈವಾಡದ ಬಗ್ಗೆ ಅನೇಕ ಸಾಕ್ಷ್ಯಾಧಾರಗಳನ್ನು ಸುಪ್ರಿಂ ಕೋರ್ಟ್ ಪರಿಗಣಿಸಿತ್ತು. ಸಾಕ್ಷ್ಯನಾಶ ಮಾಡುವ ಸಾಧ್ಯತೆಯನ್ನು ಮನಗಂಡು ಈತನನ್ನು ಎರಡು ವರ್ಷಗಳ ಕಾಲ ಗುಜರಾತ್‍ನಿಂದ ಗಡಿಪಾರು ಮಾಡಿತ್ತು. ಅಂದಹಾಗೆ ಆಗ ಅಮಿತ್ ಶಾ ಗುಜರಾತ್‍ನ ಗೃಹಮಂತ್ರಿಯಾಗಿದ್ದರು ಎಂಬುದನ್ನು ಮರೆಯುವಂತಿಲ್ಲ.

ಈ ಕೇಸಿನಲ್ಲಿ ಅಮಿತ್ ಶಾ ಜೊತೆ ಡಿಐಜಿ ವಂಜಾರ ಒಳಗೊಂಡು 6 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳೂ ಜೈಲು ಪಾಲಾಗಿದ್ದರು. ಮೋದಿ ಪ್ರಧಾನಿಯಾಗಿ ಪಂಜರದ ಗಿಳಿ ಕುಖ್ಯಾತಿಯ ಸಿಬಿಐ ಅವರ ಹಿಡಿತಕ್ಕೆ ಬಂದ ಮೇಲೆ ಈ ಅಧಿಕಾರಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದ್ದು ಕಾಕತಾಳಿಯವೇನಲ್ಲ.

ಗುಜರಾತ್‍ನಿಂದ ಹೊರಗಡೆ ಈ ಕೇಸಿನ ವಿಚಾರಣೆ ನಡೆಸಬೇಕೆಂಬ ಸುಪ್ರಿಂ ಆದೇಶದ ಪ್ರಕಾರ ಸಿಬಿಐ ಕೋರ್ಟ್ ವಿಚಾರಣೆ ನಡೆಸಿತ್ತು. ಈ ಹಿಂದೆ ವಿಚಾರಣೆ ನಡೆಸುತ್ತಿದ್ದ ಜ.ಉತ್ಪಾತ್ ಅವರು ಅಮಿತ್ ಶಾ ಕೋರ್ಟಿನ ಮುಂದೆ ಖುದ್ದು ಹಾಜರಾಗಬೇಕೆಂದು ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಎತ್ತಂಗಡಿಯಾದರು. ಅವರ ಸ್ಥಾನಕ್ಕೆ ಬಂದವರೇ ನತದೃಷ್ಟ ಜ.ಲೋಯಾ.

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

ನ್ಯಾಯಾಧೀಶರ ನಿಗೂಡ ಸಾವಿನ ತನಿಖೆ ಕೈಗೊಂಡ ಕ್ಯಾರವಾನ್ ಪತ್ರಿಕೆ ಅವರ ಕುಟುಂಬದವರು, ಬಂಧುಮಿತ್ರರು, ಸಹೋದ್ಯೋಗಿಗಳು ಮುಂತಾದವರಿಂದ ಮಾಹಿತಿ ಸಂಗ್ರಹಿಸಿ 2017ರ ನವೆಂಬರ್‍ನಲ್ಲಿ ತನಿಖಾ ವರದಿ ಪ್ರಕಟಿಸಿತು. ಮೂರು ವರ್ಷಗಳ ಹಿಂದೆ ಹೂತುಹೋಗಿದ್ದ ನಿಗೂಡ ಸಾವಿನ ಪ್ರಕರಣಕ್ಕೆ ಆಗಲೇ ಮರುಜೀವ ಬಂದಿದ್ದು. ಇಂಥಾ ಪ್ರಾಮಾಣಿಕ ನ್ಯಾಯಾಧೀಶರ ನಿಗೂಡ ಸಾವಿನ ಪೋಸ್ಟ್‍ಮಾರ್ಟಂ ವರದಿ ಹಾಗೂ ಕಾನೂನು ಪ್ರಕ್ರಿಯೆಗಳಲ್ಲಿ ಹಲವಾರು ಲೋಪದೋಷಗಳು ಕಂಡುಬಂದಿರುವುದರಿಂದ ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ಸುಪ್ರಿಂಕೋರ್ಟ್‍ನಲ್ಲಿ ಒಂದು ಪಿಐಎಲ್ ದಾಖಲಾಯಿತು. ಇದೇ ಅವಧಿಯಲ್ಲಿ ಬಾಂಬೆ ಹೈಕೋರ್ಟ್‍ನಲ್ಲೂ ಒಂದು ಪಿಐಎಲ್ ದಾಖಲಾಯ್ತು.2018ರ ಜನವರಿಯಲ್ಲಿ ದಾಖಲಾದ ಇಂಥಾ ಘನಗಂಭೀರವಾದ ಪ್ರಕರಣವನ್ನು ಏಪ್ರಿಲ್ 19ರಂದು ಸುಪ್ರಿಂಕೋರ್ಟ್ ಇತ್ಯರ್ಥಪಡಿಸಿದೆ. ‘ಜಸ್ಟೀಸ್ ಲೋಯಾ ಸಾವು ಸಹಜವಾಗಿಯೇ ಸಂಭವಿಸಿದೆ, ಈ ಬಗ್ಗೆ ಯಾವುದೇ ತನಿಖೆಯ ಅಗತ್ಯವಿಲ್ಲ’ ಎಂದು ತೀರ್ಪು ನೀಡಿದ್ದು ಮಾತ್ರವಲ್ಲದೆ ಅರ್ಜಿದಾರರ ಉದ್ದೇಶವನ್ನೇ ಪ್ರಶ್ನೆ ಮಾಡಿದೆ. ನೆನಪಿಡಿ. ಜಸ್ಟೀಸ್ ಲೋಯಾ ಸಾವು ಹೃದಯಾಘಾತದಿಂದ ಸಂಭವಿಸಿದ್ದಲ್ಲ ಎಂದು ಫಾರೆನ್ಸಿಕ್ ತಜ್ಞರು ಅಭಿಪ್ರಾಯಪಟ್ಟಿರುವ ವರದಿಗಳು ಬಂದಿವೆ. ಪೋಸ್ಟ್ ಮಾರ್ಟಂ ವರದಿ ತಯಾರಿಸುವಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವರೊಬ್ಬರು ಭಾಗಿಯಾಗಿದ್ದರೆಂಬ ಬಗ್ಗೆಯೂ ವರದಿಗಳು ಪ್ರಕಟವಾಗಿವೆ.

ಈಗ ಸೋಹ್ರಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಭಾರತದ ಗೃಹ ಮಂತ್ರಿಯಾಗಿದ್ದಾರೆ. ಗುಜರಾತ್ ಗಲಭೆಗಳಿಗೆ ನ್ಯಾಯ ಸಿಗುತ್ತದೆ ಎಂದು ನಿರೀಕ್ಷಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...