Homeಮುಖಪುಟಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬ್ರಜ್‍ಗೋಪಾಲ್ ಹರಕಿಷನ್ ಲೋಯಾ ಸಿಬಿಐ ಕೋರ್ಟಿನ ಜಡ್ಜ್. ಗುಜರಾತಿನ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‍ಕೌಂಟರ್ ಕೇಸಿನ ವಿಚಾರಣೆ ನಡೆಸುತ್ತಿದ್ದವರು. ಇವರು 2014ರ ಡಿಸೆಂಬರ್ 1ರಂದು ಸಂಬಂದಿಕರ ಮದುವೆಗೆಂದು ನಾಗಪುರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅನುಮಾನಾಸ್ಪದ ‘ಹೃದಯಾಘಾತ’ದಿಂದ ಸಾವನ್ನಪ್ಪಿದರು. ಅವರ ಅಂತ್ಯಕ್ರಿಯೆಗಳನ್ನೂ ಕೂಡ ತರಾತುರಿಯಲ್ಲಿ ಮುಗಿಸಲಾಗಿತ್ತು.

ಇದಾದ ಕೆಲದಿನಗಳಲ್ಲಿ ಜ.ಲೋಯಾ ಕುಟುಂಬದವರು ಸ್ಫೋಟಕ ವಿಷಯಗಳನ್ನು ಬಿಚ್ಚಿಟ್ಟರು. ಅವರ ಪ್ರಕಾರ ‘ಈ ಕೇಸಿನಲ್ಲಿ ತಮಗೆ ಅನುಕೂಲಕರ ತೀರ್ಪು ನೀಡುವಂತೆ ಲೋಯಾ ಅವರ ಮೇಲೆ ಭಾರೀ ಒತ್ತಡ ಇತ್ತು. ಅದಕ್ಕಾಗಿ ನೂರು ಕೋಟಿ ರೂಪಾಯಿಗಳ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ನ್ಯಾಯಪ್ರಜ್ಞೆಗೆ ಹೆಸರಾಗಿದ್ದ ಲೋಯಾ ಅವರು ಇಂಥ ಆಮಿಷವನ್ನು ತಿರಸ್ಕರಿಸಿದರು. ಬೆದರಿಕೆಗೆ ಅವರು ಸೊಪ್ಪು ಹಾಕಲಿಲ್ಲ. ಪರಿಣಾಮವಾಗಿಯೇ ಅವರನ್ನು ಕೊಲೆ ಮಾಡಲಾಗಿದೆ’ ಎಂಬ ಸ್ಫೋಟಕ ಸುದ್ದಿಗಳನ್ನು ಹೊರಹಾಕಿದ್ದರು.ಇಷ್ಟಕ್ಕೂ ಈ ಕೇಸಿನಲ್ಲಿ ಆರೋಪಿ ಸ್ಥಾನದಲ್ಲಿದ್ದದ್ದು ಯಾರಂತೀರಿ? ಪ್ರಧಾನಿ ಮೋದಿಯವರಿಗೆ ಪರಮಾಪ್ತ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಗಿದ್ದು ಹಾಲಿ ಭಾರತದ ಗೃಹ ಸಚಿವ ಅಮಿತ್ ಶಾ. ಸೊಹ್ರಾಬುದ್ದೀನ್ ನಕಲಿ ಎನ್‍ಕೌಂಟರ್ ಕೇಸಿನಲ್ಲಿ 2010ರಲ್ಲಿ ಅಮಿತ್ ಶಾ 3 ತಿಂಗಳ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಈ ಕೇಸಿನಲ್ಲಿ ಶಾ ಕೈವಾಡದ ಬಗ್ಗೆ ಅನೇಕ ಸಾಕ್ಷ್ಯಾಧಾರಗಳನ್ನು ಸುಪ್ರಿಂ ಕೋರ್ಟ್ ಪರಿಗಣಿಸಿತ್ತು. ಸಾಕ್ಷ್ಯನಾಶ ಮಾಡುವ ಸಾಧ್ಯತೆಯನ್ನು ಮನಗಂಡು ಈತನನ್ನು ಎರಡು ವರ್ಷಗಳ ಕಾಲ ಗುಜರಾತ್‍ನಿಂದ ಗಡಿಪಾರು ಮಾಡಿತ್ತು. ಅಂದಹಾಗೆ ಆಗ ಅಮಿತ್ ಶಾ ಗುಜರಾತ್‍ನ ಗೃಹಮಂತ್ರಿಯಾಗಿದ್ದರು ಎಂಬುದನ್ನು ಮರೆಯುವಂತಿಲ್ಲ.

ಈ ಕೇಸಿನಲ್ಲಿ ಅಮಿತ್ ಶಾ ಜೊತೆ ಡಿಐಜಿ ವಂಜಾರ ಒಳಗೊಂಡು 6 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳೂ ಜೈಲು ಪಾಲಾಗಿದ್ದರು. ಮೋದಿ ಪ್ರಧಾನಿಯಾಗಿ ಪಂಜರದ ಗಿಳಿ ಕುಖ್ಯಾತಿಯ ಸಿಬಿಐ ಅವರ ಹಿಡಿತಕ್ಕೆ ಬಂದ ಮೇಲೆ ಈ ಅಧಿಕಾರಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದ್ದು ಕಾಕತಾಳಿಯವೇನಲ್ಲ.

ಗುಜರಾತ್‍ನಿಂದ ಹೊರಗಡೆ ಈ ಕೇಸಿನ ವಿಚಾರಣೆ ನಡೆಸಬೇಕೆಂಬ ಸುಪ್ರಿಂ ಆದೇಶದ ಪ್ರಕಾರ ಸಿಬಿಐ ಕೋರ್ಟ್ ವಿಚಾರಣೆ ನಡೆಸಿತ್ತು. ಈ ಹಿಂದೆ ವಿಚಾರಣೆ ನಡೆಸುತ್ತಿದ್ದ ಜ.ಉತ್ಪಾತ್ ಅವರು ಅಮಿತ್ ಶಾ ಕೋರ್ಟಿನ ಮುಂದೆ ಖುದ್ದು ಹಾಜರಾಗಬೇಕೆಂದು ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಎತ್ತಂಗಡಿಯಾದರು. ಅವರ ಸ್ಥಾನಕ್ಕೆ ಬಂದವರೇ ನತದೃಷ್ಟ ಜ.ಲೋಯಾ.

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

ನ್ಯಾಯಾಧೀಶರ ನಿಗೂಡ ಸಾವಿನ ತನಿಖೆ ಕೈಗೊಂಡ ಕ್ಯಾರವಾನ್ ಪತ್ರಿಕೆ ಅವರ ಕುಟುಂಬದವರು, ಬಂಧುಮಿತ್ರರು, ಸಹೋದ್ಯೋಗಿಗಳು ಮುಂತಾದವರಿಂದ ಮಾಹಿತಿ ಸಂಗ್ರಹಿಸಿ 2017ರ ನವೆಂಬರ್‍ನಲ್ಲಿ ತನಿಖಾ ವರದಿ ಪ್ರಕಟಿಸಿತು. ಮೂರು ವರ್ಷಗಳ ಹಿಂದೆ ಹೂತುಹೋಗಿದ್ದ ನಿಗೂಡ ಸಾವಿನ ಪ್ರಕರಣಕ್ಕೆ ಆಗಲೇ ಮರುಜೀವ ಬಂದಿದ್ದು. ಇಂಥಾ ಪ್ರಾಮಾಣಿಕ ನ್ಯಾಯಾಧೀಶರ ನಿಗೂಡ ಸಾವಿನ ಪೋಸ್ಟ್‍ಮಾರ್ಟಂ ವರದಿ ಹಾಗೂ ಕಾನೂನು ಪ್ರಕ್ರಿಯೆಗಳಲ್ಲಿ ಹಲವಾರು ಲೋಪದೋಷಗಳು ಕಂಡುಬಂದಿರುವುದರಿಂದ ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ಸುಪ್ರಿಂಕೋರ್ಟ್‍ನಲ್ಲಿ ಒಂದು ಪಿಐಎಲ್ ದಾಖಲಾಯಿತು. ಇದೇ ಅವಧಿಯಲ್ಲಿ ಬಾಂಬೆ ಹೈಕೋರ್ಟ್‍ನಲ್ಲೂ ಒಂದು ಪಿಐಎಲ್ ದಾಖಲಾಯ್ತು.2018ರ ಜನವರಿಯಲ್ಲಿ ದಾಖಲಾದ ಇಂಥಾ ಘನಗಂಭೀರವಾದ ಪ್ರಕರಣವನ್ನು ಏಪ್ರಿಲ್ 19ರಂದು ಸುಪ್ರಿಂಕೋರ್ಟ್ ಇತ್ಯರ್ಥಪಡಿಸಿದೆ. ‘ಜಸ್ಟೀಸ್ ಲೋಯಾ ಸಾವು ಸಹಜವಾಗಿಯೇ ಸಂಭವಿಸಿದೆ, ಈ ಬಗ್ಗೆ ಯಾವುದೇ ತನಿಖೆಯ ಅಗತ್ಯವಿಲ್ಲ’ ಎಂದು ತೀರ್ಪು ನೀಡಿದ್ದು ಮಾತ್ರವಲ್ಲದೆ ಅರ್ಜಿದಾರರ ಉದ್ದೇಶವನ್ನೇ ಪ್ರಶ್ನೆ ಮಾಡಿದೆ. ನೆನಪಿಡಿ. ಜಸ್ಟೀಸ್ ಲೋಯಾ ಸಾವು ಹೃದಯಾಘಾತದಿಂದ ಸಂಭವಿಸಿದ್ದಲ್ಲ ಎಂದು ಫಾರೆನ್ಸಿಕ್ ತಜ್ಞರು ಅಭಿಪ್ರಾಯಪಟ್ಟಿರುವ ವರದಿಗಳು ಬಂದಿವೆ. ಪೋಸ್ಟ್ ಮಾರ್ಟಂ ವರದಿ ತಯಾರಿಸುವಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವರೊಬ್ಬರು ಭಾಗಿಯಾಗಿದ್ದರೆಂಬ ಬಗ್ಗೆಯೂ ವರದಿಗಳು ಪ್ರಕಟವಾಗಿವೆ.

ಈಗ ಸೋಹ್ರಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಭಾರತದ ಗೃಹ ಮಂತ್ರಿಯಾಗಿದ್ದಾರೆ. ಗುಜರಾತ್ ಗಲಭೆಗಳಿಗೆ ನ್ಯಾಯ ಸಿಗುತ್ತದೆ ಎಂದು ನಿರೀಕ್ಷಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....