Homeಮುಖಪುಟಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬ್ರಜ್‍ಗೋಪಾಲ್ ಹರಕಿಷನ್ ಲೋಯಾ ಸಿಬಿಐ ಕೋರ್ಟಿನ ಜಡ್ಜ್. ಗುಜರಾತಿನ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‍ಕೌಂಟರ್ ಕೇಸಿನ ವಿಚಾರಣೆ ನಡೆಸುತ್ತಿದ್ದವರು. ಇವರು 2014ರ ಡಿಸೆಂಬರ್ 1ರಂದು ಸಂಬಂದಿಕರ ಮದುವೆಗೆಂದು ನಾಗಪುರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅನುಮಾನಾಸ್ಪದ ‘ಹೃದಯಾಘಾತ’ದಿಂದ ಸಾವನ್ನಪ್ಪಿದರು. ಅವರ ಅಂತ್ಯಕ್ರಿಯೆಗಳನ್ನೂ ಕೂಡ ತರಾತುರಿಯಲ್ಲಿ ಮುಗಿಸಲಾಗಿತ್ತು.

ಇದಾದ ಕೆಲದಿನಗಳಲ್ಲಿ ಜ.ಲೋಯಾ ಕುಟುಂಬದವರು ಸ್ಫೋಟಕ ವಿಷಯಗಳನ್ನು ಬಿಚ್ಚಿಟ್ಟರು. ಅವರ ಪ್ರಕಾರ ‘ಈ ಕೇಸಿನಲ್ಲಿ ತಮಗೆ ಅನುಕೂಲಕರ ತೀರ್ಪು ನೀಡುವಂತೆ ಲೋಯಾ ಅವರ ಮೇಲೆ ಭಾರೀ ಒತ್ತಡ ಇತ್ತು. ಅದಕ್ಕಾಗಿ ನೂರು ಕೋಟಿ ರೂಪಾಯಿಗಳ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ನ್ಯಾಯಪ್ರಜ್ಞೆಗೆ ಹೆಸರಾಗಿದ್ದ ಲೋಯಾ ಅವರು ಇಂಥ ಆಮಿಷವನ್ನು ತಿರಸ್ಕರಿಸಿದರು. ಬೆದರಿಕೆಗೆ ಅವರು ಸೊಪ್ಪು ಹಾಕಲಿಲ್ಲ. ಪರಿಣಾಮವಾಗಿಯೇ ಅವರನ್ನು ಕೊಲೆ ಮಾಡಲಾಗಿದೆ’ ಎಂಬ ಸ್ಫೋಟಕ ಸುದ್ದಿಗಳನ್ನು ಹೊರಹಾಕಿದ್ದರು.ಇಷ್ಟಕ್ಕೂ ಈ ಕೇಸಿನಲ್ಲಿ ಆರೋಪಿ ಸ್ಥಾನದಲ್ಲಿದ್ದದ್ದು ಯಾರಂತೀರಿ? ಪ್ರಧಾನಿ ಮೋದಿಯವರಿಗೆ ಪರಮಾಪ್ತ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಗಿದ್ದು ಹಾಲಿ ಭಾರತದ ಗೃಹ ಸಚಿವ ಅಮಿತ್ ಶಾ. ಸೊಹ್ರಾಬುದ್ದೀನ್ ನಕಲಿ ಎನ್‍ಕೌಂಟರ್ ಕೇಸಿನಲ್ಲಿ 2010ರಲ್ಲಿ ಅಮಿತ್ ಶಾ 3 ತಿಂಗಳ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಈ ಕೇಸಿನಲ್ಲಿ ಶಾ ಕೈವಾಡದ ಬಗ್ಗೆ ಅನೇಕ ಸಾಕ್ಷ್ಯಾಧಾರಗಳನ್ನು ಸುಪ್ರಿಂ ಕೋರ್ಟ್ ಪರಿಗಣಿಸಿತ್ತು. ಸಾಕ್ಷ್ಯನಾಶ ಮಾಡುವ ಸಾಧ್ಯತೆಯನ್ನು ಮನಗಂಡು ಈತನನ್ನು ಎರಡು ವರ್ಷಗಳ ಕಾಲ ಗುಜರಾತ್‍ನಿಂದ ಗಡಿಪಾರು ಮಾಡಿತ್ತು. ಅಂದಹಾಗೆ ಆಗ ಅಮಿತ್ ಶಾ ಗುಜರಾತ್‍ನ ಗೃಹಮಂತ್ರಿಯಾಗಿದ್ದರು ಎಂಬುದನ್ನು ಮರೆಯುವಂತಿಲ್ಲ.

ಈ ಕೇಸಿನಲ್ಲಿ ಅಮಿತ್ ಶಾ ಜೊತೆ ಡಿಐಜಿ ವಂಜಾರ ಒಳಗೊಂಡು 6 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳೂ ಜೈಲು ಪಾಲಾಗಿದ್ದರು. ಮೋದಿ ಪ್ರಧಾನಿಯಾಗಿ ಪಂಜರದ ಗಿಳಿ ಕುಖ್ಯಾತಿಯ ಸಿಬಿಐ ಅವರ ಹಿಡಿತಕ್ಕೆ ಬಂದ ಮೇಲೆ ಈ ಅಧಿಕಾರಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದ್ದು ಕಾಕತಾಳಿಯವೇನಲ್ಲ.

ಗುಜರಾತ್‍ನಿಂದ ಹೊರಗಡೆ ಈ ಕೇಸಿನ ವಿಚಾರಣೆ ನಡೆಸಬೇಕೆಂಬ ಸುಪ್ರಿಂ ಆದೇಶದ ಪ್ರಕಾರ ಸಿಬಿಐ ಕೋರ್ಟ್ ವಿಚಾರಣೆ ನಡೆಸಿತ್ತು. ಈ ಹಿಂದೆ ವಿಚಾರಣೆ ನಡೆಸುತ್ತಿದ್ದ ಜ.ಉತ್ಪಾತ್ ಅವರು ಅಮಿತ್ ಶಾ ಕೋರ್ಟಿನ ಮುಂದೆ ಖುದ್ದು ಹಾಜರಾಗಬೇಕೆಂದು ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಎತ್ತಂಗಡಿಯಾದರು. ಅವರ ಸ್ಥಾನಕ್ಕೆ ಬಂದವರೇ ನತದೃಷ್ಟ ಜ.ಲೋಯಾ.

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

ನ್ಯಾಯಾಧೀಶರ ನಿಗೂಡ ಸಾವಿನ ತನಿಖೆ ಕೈಗೊಂಡ ಕ್ಯಾರವಾನ್ ಪತ್ರಿಕೆ ಅವರ ಕುಟುಂಬದವರು, ಬಂಧುಮಿತ್ರರು, ಸಹೋದ್ಯೋಗಿಗಳು ಮುಂತಾದವರಿಂದ ಮಾಹಿತಿ ಸಂಗ್ರಹಿಸಿ 2017ರ ನವೆಂಬರ್‍ನಲ್ಲಿ ತನಿಖಾ ವರದಿ ಪ್ರಕಟಿಸಿತು. ಮೂರು ವರ್ಷಗಳ ಹಿಂದೆ ಹೂತುಹೋಗಿದ್ದ ನಿಗೂಡ ಸಾವಿನ ಪ್ರಕರಣಕ್ಕೆ ಆಗಲೇ ಮರುಜೀವ ಬಂದಿದ್ದು. ಇಂಥಾ ಪ್ರಾಮಾಣಿಕ ನ್ಯಾಯಾಧೀಶರ ನಿಗೂಡ ಸಾವಿನ ಪೋಸ್ಟ್‍ಮಾರ್ಟಂ ವರದಿ ಹಾಗೂ ಕಾನೂನು ಪ್ರಕ್ರಿಯೆಗಳಲ್ಲಿ ಹಲವಾರು ಲೋಪದೋಷಗಳು ಕಂಡುಬಂದಿರುವುದರಿಂದ ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ಸುಪ್ರಿಂಕೋರ್ಟ್‍ನಲ್ಲಿ ಒಂದು ಪಿಐಎಲ್ ದಾಖಲಾಯಿತು. ಇದೇ ಅವಧಿಯಲ್ಲಿ ಬಾಂಬೆ ಹೈಕೋರ್ಟ್‍ನಲ್ಲೂ ಒಂದು ಪಿಐಎಲ್ ದಾಖಲಾಯ್ತು.2018ರ ಜನವರಿಯಲ್ಲಿ ದಾಖಲಾದ ಇಂಥಾ ಘನಗಂಭೀರವಾದ ಪ್ರಕರಣವನ್ನು ಏಪ್ರಿಲ್ 19ರಂದು ಸುಪ್ರಿಂಕೋರ್ಟ್ ಇತ್ಯರ್ಥಪಡಿಸಿದೆ. ‘ಜಸ್ಟೀಸ್ ಲೋಯಾ ಸಾವು ಸಹಜವಾಗಿಯೇ ಸಂಭವಿಸಿದೆ, ಈ ಬಗ್ಗೆ ಯಾವುದೇ ತನಿಖೆಯ ಅಗತ್ಯವಿಲ್ಲ’ ಎಂದು ತೀರ್ಪು ನೀಡಿದ್ದು ಮಾತ್ರವಲ್ಲದೆ ಅರ್ಜಿದಾರರ ಉದ್ದೇಶವನ್ನೇ ಪ್ರಶ್ನೆ ಮಾಡಿದೆ. ನೆನಪಿಡಿ. ಜಸ್ಟೀಸ್ ಲೋಯಾ ಸಾವು ಹೃದಯಾಘಾತದಿಂದ ಸಂಭವಿಸಿದ್ದಲ್ಲ ಎಂದು ಫಾರೆನ್ಸಿಕ್ ತಜ್ಞರು ಅಭಿಪ್ರಾಯಪಟ್ಟಿರುವ ವರದಿಗಳು ಬಂದಿವೆ. ಪೋಸ್ಟ್ ಮಾರ್ಟಂ ವರದಿ ತಯಾರಿಸುವಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವರೊಬ್ಬರು ಭಾಗಿಯಾಗಿದ್ದರೆಂಬ ಬಗ್ಗೆಯೂ ವರದಿಗಳು ಪ್ರಕಟವಾಗಿವೆ.

ಈಗ ಸೋಹ್ರಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಭಾರತದ ಗೃಹ ಮಂತ್ರಿಯಾಗಿದ್ದಾರೆ. ಗುಜರಾತ್ ಗಲಭೆಗಳಿಗೆ ನ್ಯಾಯ ಸಿಗುತ್ತದೆ ಎಂದು ನಿರೀಕ್ಷಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...