Homeಮುಖಪುಟಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬ್ರಜ್‍ಗೋಪಾಲ್ ಹರಕಿಷನ್ ಲೋಯಾ ಸಿಬಿಐ ಕೋರ್ಟಿನ ಜಡ್ಜ್. ಗುಜರಾತಿನ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‍ಕೌಂಟರ್ ಕೇಸಿನ ವಿಚಾರಣೆ ನಡೆಸುತ್ತಿದ್ದವರು. ಇವರು 2014ರ ಡಿಸೆಂಬರ್ 1ರಂದು ಸಂಬಂದಿಕರ ಮದುವೆಗೆಂದು ನಾಗಪುರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅನುಮಾನಾಸ್ಪದ ‘ಹೃದಯಾಘಾತ’ದಿಂದ ಸಾವನ್ನಪ್ಪಿದರು. ಅವರ ಅಂತ್ಯಕ್ರಿಯೆಗಳನ್ನೂ ಕೂಡ ತರಾತುರಿಯಲ್ಲಿ ಮುಗಿಸಲಾಗಿತ್ತು.

ಇದಾದ ಕೆಲದಿನಗಳಲ್ಲಿ ಜ.ಲೋಯಾ ಕುಟುಂಬದವರು ಸ್ಫೋಟಕ ವಿಷಯಗಳನ್ನು ಬಿಚ್ಚಿಟ್ಟರು. ಅವರ ಪ್ರಕಾರ ‘ಈ ಕೇಸಿನಲ್ಲಿ ತಮಗೆ ಅನುಕೂಲಕರ ತೀರ್ಪು ನೀಡುವಂತೆ ಲೋಯಾ ಅವರ ಮೇಲೆ ಭಾರೀ ಒತ್ತಡ ಇತ್ತು. ಅದಕ್ಕಾಗಿ ನೂರು ಕೋಟಿ ರೂಪಾಯಿಗಳ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ನ್ಯಾಯಪ್ರಜ್ಞೆಗೆ ಹೆಸರಾಗಿದ್ದ ಲೋಯಾ ಅವರು ಇಂಥ ಆಮಿಷವನ್ನು ತಿರಸ್ಕರಿಸಿದರು. ಬೆದರಿಕೆಗೆ ಅವರು ಸೊಪ್ಪು ಹಾಕಲಿಲ್ಲ. ಪರಿಣಾಮವಾಗಿಯೇ ಅವರನ್ನು ಕೊಲೆ ಮಾಡಲಾಗಿದೆ’ ಎಂಬ ಸ್ಫೋಟಕ ಸುದ್ದಿಗಳನ್ನು ಹೊರಹಾಕಿದ್ದರು.ಇಷ್ಟಕ್ಕೂ ಈ ಕೇಸಿನಲ್ಲಿ ಆರೋಪಿ ಸ್ಥಾನದಲ್ಲಿದ್ದದ್ದು ಯಾರಂತೀರಿ? ಪ್ರಧಾನಿ ಮೋದಿಯವರಿಗೆ ಪರಮಾಪ್ತ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಗಿದ್ದು ಹಾಲಿ ಭಾರತದ ಗೃಹ ಸಚಿವ ಅಮಿತ್ ಶಾ. ಸೊಹ್ರಾಬುದ್ದೀನ್ ನಕಲಿ ಎನ್‍ಕೌಂಟರ್ ಕೇಸಿನಲ್ಲಿ 2010ರಲ್ಲಿ ಅಮಿತ್ ಶಾ 3 ತಿಂಗಳ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಈ ಕೇಸಿನಲ್ಲಿ ಶಾ ಕೈವಾಡದ ಬಗ್ಗೆ ಅನೇಕ ಸಾಕ್ಷ್ಯಾಧಾರಗಳನ್ನು ಸುಪ್ರಿಂ ಕೋರ್ಟ್ ಪರಿಗಣಿಸಿತ್ತು. ಸಾಕ್ಷ್ಯನಾಶ ಮಾಡುವ ಸಾಧ್ಯತೆಯನ್ನು ಮನಗಂಡು ಈತನನ್ನು ಎರಡು ವರ್ಷಗಳ ಕಾಲ ಗುಜರಾತ್‍ನಿಂದ ಗಡಿಪಾರು ಮಾಡಿತ್ತು. ಅಂದಹಾಗೆ ಆಗ ಅಮಿತ್ ಶಾ ಗುಜರಾತ್‍ನ ಗೃಹಮಂತ್ರಿಯಾಗಿದ್ದರು ಎಂಬುದನ್ನು ಮರೆಯುವಂತಿಲ್ಲ.

ಈ ಕೇಸಿನಲ್ಲಿ ಅಮಿತ್ ಶಾ ಜೊತೆ ಡಿಐಜಿ ವಂಜಾರ ಒಳಗೊಂಡು 6 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳೂ ಜೈಲು ಪಾಲಾಗಿದ್ದರು. ಮೋದಿ ಪ್ರಧಾನಿಯಾಗಿ ಪಂಜರದ ಗಿಳಿ ಕುಖ್ಯಾತಿಯ ಸಿಬಿಐ ಅವರ ಹಿಡಿತಕ್ಕೆ ಬಂದ ಮೇಲೆ ಈ ಅಧಿಕಾರಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದ್ದು ಕಾಕತಾಳಿಯವೇನಲ್ಲ.

ಗುಜರಾತ್‍ನಿಂದ ಹೊರಗಡೆ ಈ ಕೇಸಿನ ವಿಚಾರಣೆ ನಡೆಸಬೇಕೆಂಬ ಸುಪ್ರಿಂ ಆದೇಶದ ಪ್ರಕಾರ ಸಿಬಿಐ ಕೋರ್ಟ್ ವಿಚಾರಣೆ ನಡೆಸಿತ್ತು. ಈ ಹಿಂದೆ ವಿಚಾರಣೆ ನಡೆಸುತ್ತಿದ್ದ ಜ.ಉತ್ಪಾತ್ ಅವರು ಅಮಿತ್ ಶಾ ಕೋರ್ಟಿನ ಮುಂದೆ ಖುದ್ದು ಹಾಜರಾಗಬೇಕೆಂದು ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಎತ್ತಂಗಡಿಯಾದರು. ಅವರ ಸ್ಥಾನಕ್ಕೆ ಬಂದವರೇ ನತದೃಷ್ಟ ಜ.ಲೋಯಾ.

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

ನ್ಯಾಯಾಧೀಶರ ನಿಗೂಡ ಸಾವಿನ ತನಿಖೆ ಕೈಗೊಂಡ ಕ್ಯಾರವಾನ್ ಪತ್ರಿಕೆ ಅವರ ಕುಟುಂಬದವರು, ಬಂಧುಮಿತ್ರರು, ಸಹೋದ್ಯೋಗಿಗಳು ಮುಂತಾದವರಿಂದ ಮಾಹಿತಿ ಸಂಗ್ರಹಿಸಿ 2017ರ ನವೆಂಬರ್‍ನಲ್ಲಿ ತನಿಖಾ ವರದಿ ಪ್ರಕಟಿಸಿತು. ಮೂರು ವರ್ಷಗಳ ಹಿಂದೆ ಹೂತುಹೋಗಿದ್ದ ನಿಗೂಡ ಸಾವಿನ ಪ್ರಕರಣಕ್ಕೆ ಆಗಲೇ ಮರುಜೀವ ಬಂದಿದ್ದು. ಇಂಥಾ ಪ್ರಾಮಾಣಿಕ ನ್ಯಾಯಾಧೀಶರ ನಿಗೂಡ ಸಾವಿನ ಪೋಸ್ಟ್‍ಮಾರ್ಟಂ ವರದಿ ಹಾಗೂ ಕಾನೂನು ಪ್ರಕ್ರಿಯೆಗಳಲ್ಲಿ ಹಲವಾರು ಲೋಪದೋಷಗಳು ಕಂಡುಬಂದಿರುವುದರಿಂದ ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ಸುಪ್ರಿಂಕೋರ್ಟ್‍ನಲ್ಲಿ ಒಂದು ಪಿಐಎಲ್ ದಾಖಲಾಯಿತು. ಇದೇ ಅವಧಿಯಲ್ಲಿ ಬಾಂಬೆ ಹೈಕೋರ್ಟ್‍ನಲ್ಲೂ ಒಂದು ಪಿಐಎಲ್ ದಾಖಲಾಯ್ತು.2018ರ ಜನವರಿಯಲ್ಲಿ ದಾಖಲಾದ ಇಂಥಾ ಘನಗಂಭೀರವಾದ ಪ್ರಕರಣವನ್ನು ಏಪ್ರಿಲ್ 19ರಂದು ಸುಪ್ರಿಂಕೋರ್ಟ್ ಇತ್ಯರ್ಥಪಡಿಸಿದೆ. ‘ಜಸ್ಟೀಸ್ ಲೋಯಾ ಸಾವು ಸಹಜವಾಗಿಯೇ ಸಂಭವಿಸಿದೆ, ಈ ಬಗ್ಗೆ ಯಾವುದೇ ತನಿಖೆಯ ಅಗತ್ಯವಿಲ್ಲ’ ಎಂದು ತೀರ್ಪು ನೀಡಿದ್ದು ಮಾತ್ರವಲ್ಲದೆ ಅರ್ಜಿದಾರರ ಉದ್ದೇಶವನ್ನೇ ಪ್ರಶ್ನೆ ಮಾಡಿದೆ. ನೆನಪಿಡಿ. ಜಸ್ಟೀಸ್ ಲೋಯಾ ಸಾವು ಹೃದಯಾಘಾತದಿಂದ ಸಂಭವಿಸಿದ್ದಲ್ಲ ಎಂದು ಫಾರೆನ್ಸಿಕ್ ತಜ್ಞರು ಅಭಿಪ್ರಾಯಪಟ್ಟಿರುವ ವರದಿಗಳು ಬಂದಿವೆ. ಪೋಸ್ಟ್ ಮಾರ್ಟಂ ವರದಿ ತಯಾರಿಸುವಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವರೊಬ್ಬರು ಭಾಗಿಯಾಗಿದ್ದರೆಂಬ ಬಗ್ಗೆಯೂ ವರದಿಗಳು ಪ್ರಕಟವಾಗಿವೆ.

ಈಗ ಸೋಹ್ರಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಭಾರತದ ಗೃಹ ಮಂತ್ರಿಯಾಗಿದ್ದಾರೆ. ಗುಜರಾತ್ ಗಲಭೆಗಳಿಗೆ ನ್ಯಾಯ ಸಿಗುತ್ತದೆ ಎಂದು ನಿರೀಕ್ಷಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...