Homeಮುಖಪುಟಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬ್ರಜ್‍ಗೋಪಾಲ್ ಹರಕಿಷನ್ ಲೋಯಾ ಸಿಬಿಐ ಕೋರ್ಟಿನ ಜಡ್ಜ್. ಗುಜರಾತಿನ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‍ಕೌಂಟರ್ ಕೇಸಿನ ವಿಚಾರಣೆ ನಡೆಸುತ್ತಿದ್ದವರು. ಇವರು 2014ರ ಡಿಸೆಂಬರ್ 1ರಂದು ಸಂಬಂದಿಕರ ಮದುವೆಗೆಂದು ನಾಗಪುರಕ್ಕೆ ತೆರಳಿದ್ದ ಸಂದರ್ಭದಲ್ಲಿ ಅನುಮಾನಾಸ್ಪದ ‘ಹೃದಯಾಘಾತ’ದಿಂದ ಸಾವನ್ನಪ್ಪಿದರು. ಅವರ ಅಂತ್ಯಕ್ರಿಯೆಗಳನ್ನೂ ಕೂಡ ತರಾತುರಿಯಲ್ಲಿ ಮುಗಿಸಲಾಗಿತ್ತು.

ಇದಾದ ಕೆಲದಿನಗಳಲ್ಲಿ ಜ.ಲೋಯಾ ಕುಟುಂಬದವರು ಸ್ಫೋಟಕ ವಿಷಯಗಳನ್ನು ಬಿಚ್ಚಿಟ್ಟರು. ಅವರ ಪ್ರಕಾರ ‘ಈ ಕೇಸಿನಲ್ಲಿ ತಮಗೆ ಅನುಕೂಲಕರ ತೀರ್ಪು ನೀಡುವಂತೆ ಲೋಯಾ ಅವರ ಮೇಲೆ ಭಾರೀ ಒತ್ತಡ ಇತ್ತು. ಅದಕ್ಕಾಗಿ ನೂರು ಕೋಟಿ ರೂಪಾಯಿಗಳ ಆಮಿಷವನ್ನೂ ಒಡ್ಡಲಾಗಿತ್ತು. ಆದರೆ ನ್ಯಾಯಪ್ರಜ್ಞೆಗೆ ಹೆಸರಾಗಿದ್ದ ಲೋಯಾ ಅವರು ಇಂಥ ಆಮಿಷವನ್ನು ತಿರಸ್ಕರಿಸಿದರು. ಬೆದರಿಕೆಗೆ ಅವರು ಸೊಪ್ಪು ಹಾಕಲಿಲ್ಲ. ಪರಿಣಾಮವಾಗಿಯೇ ಅವರನ್ನು ಕೊಲೆ ಮಾಡಲಾಗಿದೆ’ ಎಂಬ ಸ್ಫೋಟಕ ಸುದ್ದಿಗಳನ್ನು ಹೊರಹಾಕಿದ್ದರು.ಇಷ್ಟಕ್ಕೂ ಈ ಕೇಸಿನಲ್ಲಿ ಆರೋಪಿ ಸ್ಥಾನದಲ್ಲಿದ್ದದ್ದು ಯಾರಂತೀರಿ? ಪ್ರಧಾನಿ ಮೋದಿಯವರಿಗೆ ಪರಮಾಪ್ತ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಗಿದ್ದು ಹಾಲಿ ಭಾರತದ ಗೃಹ ಸಚಿವ ಅಮಿತ್ ಶಾ. ಸೊಹ್ರಾಬುದ್ದೀನ್ ನಕಲಿ ಎನ್‍ಕೌಂಟರ್ ಕೇಸಿನಲ್ಲಿ 2010ರಲ್ಲಿ ಅಮಿತ್ ಶಾ 3 ತಿಂಗಳ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಈ ಕೇಸಿನಲ್ಲಿ ಶಾ ಕೈವಾಡದ ಬಗ್ಗೆ ಅನೇಕ ಸಾಕ್ಷ್ಯಾಧಾರಗಳನ್ನು ಸುಪ್ರಿಂ ಕೋರ್ಟ್ ಪರಿಗಣಿಸಿತ್ತು. ಸಾಕ್ಷ್ಯನಾಶ ಮಾಡುವ ಸಾಧ್ಯತೆಯನ್ನು ಮನಗಂಡು ಈತನನ್ನು ಎರಡು ವರ್ಷಗಳ ಕಾಲ ಗುಜರಾತ್‍ನಿಂದ ಗಡಿಪಾರು ಮಾಡಿತ್ತು. ಅಂದಹಾಗೆ ಆಗ ಅಮಿತ್ ಶಾ ಗುಜರಾತ್‍ನ ಗೃಹಮಂತ್ರಿಯಾಗಿದ್ದರು ಎಂಬುದನ್ನು ಮರೆಯುವಂತಿಲ್ಲ.

ಈ ಕೇಸಿನಲ್ಲಿ ಅಮಿತ್ ಶಾ ಜೊತೆ ಡಿಐಜಿ ವಂಜಾರ ಒಳಗೊಂಡು 6 ಮಂದಿ ಹಿರಿಯ ಪೊಲೀಸ್ ಅಧಿಕಾರಿಗಳೂ ಜೈಲು ಪಾಲಾಗಿದ್ದರು. ಮೋದಿ ಪ್ರಧಾನಿಯಾಗಿ ಪಂಜರದ ಗಿಳಿ ಕುಖ್ಯಾತಿಯ ಸಿಬಿಐ ಅವರ ಹಿಡಿತಕ್ಕೆ ಬಂದ ಮೇಲೆ ಈ ಅಧಿಕಾರಿಗಳಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದ್ದು ಕಾಕತಾಳಿಯವೇನಲ್ಲ.

ಗುಜರಾತ್‍ನಿಂದ ಹೊರಗಡೆ ಈ ಕೇಸಿನ ವಿಚಾರಣೆ ನಡೆಸಬೇಕೆಂಬ ಸುಪ್ರಿಂ ಆದೇಶದ ಪ್ರಕಾರ ಸಿಬಿಐ ಕೋರ್ಟ್ ವಿಚಾರಣೆ ನಡೆಸಿತ್ತು. ಈ ಹಿಂದೆ ವಿಚಾರಣೆ ನಡೆಸುತ್ತಿದ್ದ ಜ.ಉತ್ಪಾತ್ ಅವರು ಅಮಿತ್ ಶಾ ಕೋರ್ಟಿನ ಮುಂದೆ ಖುದ್ದು ಹಾಜರಾಗಬೇಕೆಂದು ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಎತ್ತಂಗಡಿಯಾದರು. ಅವರ ಸ್ಥಾನಕ್ಕೆ ಬಂದವರೇ ನತದೃಷ್ಟ ಜ.ಲೋಯಾ.

ಜಸ್ಟೀಸ್ ಲೋಯಾ ಅನುಮಾನಾಸ್ಪದ ಸಾವಿನ ನಂತರ ಏನಾಯ್ತು ಗೊತ್ತೆ? ಅವರ ಸ್ಥಾನಕ್ಕೆ ಬಂದ ಜ.ಗೋಸ್ವಾಮಿ ಎಂಬುವವರು ಈ ಕೇಸಿನಲ್ಲಿ ಅಮಿತ್ ಶಾಗೆ ಕ್ಲೀನ್ ಚಿಟ್ ದಯಪಾಲಿಸಿಬಿಟ್ಟರು. ಅಲ್ಲಿಗೆ ಒಂದು ಅಧ್ಯಾಯ ಮುಗಿದಂತಾಯ್ತು.

ನ್ಯಾಯಾಧೀಶರ ನಿಗೂಡ ಸಾವಿನ ತನಿಖೆ ಕೈಗೊಂಡ ಕ್ಯಾರವಾನ್ ಪತ್ರಿಕೆ ಅವರ ಕುಟುಂಬದವರು, ಬಂಧುಮಿತ್ರರು, ಸಹೋದ್ಯೋಗಿಗಳು ಮುಂತಾದವರಿಂದ ಮಾಹಿತಿ ಸಂಗ್ರಹಿಸಿ 2017ರ ನವೆಂಬರ್‍ನಲ್ಲಿ ತನಿಖಾ ವರದಿ ಪ್ರಕಟಿಸಿತು. ಮೂರು ವರ್ಷಗಳ ಹಿಂದೆ ಹೂತುಹೋಗಿದ್ದ ನಿಗೂಡ ಸಾವಿನ ಪ್ರಕರಣಕ್ಕೆ ಆಗಲೇ ಮರುಜೀವ ಬಂದಿದ್ದು. ಇಂಥಾ ಪ್ರಾಮಾಣಿಕ ನ್ಯಾಯಾಧೀಶರ ನಿಗೂಡ ಸಾವಿನ ಪೋಸ್ಟ್‍ಮಾರ್ಟಂ ವರದಿ ಹಾಗೂ ಕಾನೂನು ಪ್ರಕ್ರಿಯೆಗಳಲ್ಲಿ ಹಲವಾರು ಲೋಪದೋಷಗಳು ಕಂಡುಬಂದಿರುವುದರಿಂದ ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ಸುಪ್ರಿಂಕೋರ್ಟ್‍ನಲ್ಲಿ ಒಂದು ಪಿಐಎಲ್ ದಾಖಲಾಯಿತು. ಇದೇ ಅವಧಿಯಲ್ಲಿ ಬಾಂಬೆ ಹೈಕೋರ್ಟ್‍ನಲ್ಲೂ ಒಂದು ಪಿಐಎಲ್ ದಾಖಲಾಯ್ತು.2018ರ ಜನವರಿಯಲ್ಲಿ ದಾಖಲಾದ ಇಂಥಾ ಘನಗಂಭೀರವಾದ ಪ್ರಕರಣವನ್ನು ಏಪ್ರಿಲ್ 19ರಂದು ಸುಪ್ರಿಂಕೋರ್ಟ್ ಇತ್ಯರ್ಥಪಡಿಸಿದೆ. ‘ಜಸ್ಟೀಸ್ ಲೋಯಾ ಸಾವು ಸಹಜವಾಗಿಯೇ ಸಂಭವಿಸಿದೆ, ಈ ಬಗ್ಗೆ ಯಾವುದೇ ತನಿಖೆಯ ಅಗತ್ಯವಿಲ್ಲ’ ಎಂದು ತೀರ್ಪು ನೀಡಿದ್ದು ಮಾತ್ರವಲ್ಲದೆ ಅರ್ಜಿದಾರರ ಉದ್ದೇಶವನ್ನೇ ಪ್ರಶ್ನೆ ಮಾಡಿದೆ. ನೆನಪಿಡಿ. ಜಸ್ಟೀಸ್ ಲೋಯಾ ಸಾವು ಹೃದಯಾಘಾತದಿಂದ ಸಂಭವಿಸಿದ್ದಲ್ಲ ಎಂದು ಫಾರೆನ್ಸಿಕ್ ತಜ್ಞರು ಅಭಿಪ್ರಾಯಪಟ್ಟಿರುವ ವರದಿಗಳು ಬಂದಿವೆ. ಪೋಸ್ಟ್ ಮಾರ್ಟಂ ವರದಿ ತಯಾರಿಸುವಲ್ಲಿ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವರೊಬ್ಬರು ಭಾಗಿಯಾಗಿದ್ದರೆಂಬ ಬಗ್ಗೆಯೂ ವರದಿಗಳು ಪ್ರಕಟವಾಗಿವೆ.

ಈಗ ಸೋಹ್ರಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ಭಾರತದ ಗೃಹ ಮಂತ್ರಿಯಾಗಿದ್ದಾರೆ. ಗುಜರಾತ್ ಗಲಭೆಗಳಿಗೆ ನ್ಯಾಯ ಸಿಗುತ್ತದೆ ಎಂದು ನಿರೀಕ್ಷಿಸಬಹುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...