Homeಮುಖಪುಟಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

ಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

- Advertisement -
- Advertisement -

ನ್ಯಾಯಾಧೀಶ ಲೋಯಾ ಅವರ ಸಾವಿನ ಕುರಿತು ತನಿಖೆಯ ಬೇಡಿಕೆ ಮತ್ತು ಅಗತ್ಯವಿದ್ದರೆ ಪ್ರಕರಣವನ್ನು ಮರುಪರಿಶೀಲಿಸಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಸ್ಥಳೀಯ ಮರಾಠಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಡಿಸೆಂಬರ್ 1, 2014 ರಂದು ನ್ಯಾಯಾಧೀಶ ಲೋಯಾ ಅವರು ಮರಣಹೊಂದಿದ್ದರು. ಅವರು ಆ ಸಮಯದಲ್ಲಿ ಸೊಹ್ರಾಬುದ್ದೀನ್ ಶೇಖ್ ಎನ್ಕೌಂಟರ್ ಪ್ರಕರಣವನ್ನು ನಿರ್ವಹಿಸುತ್ತಿದ್ದು, ಅದರಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ಆರೋಪಿಯಾಗಿದ್ದರು.

ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಬಿದ್ದು ಆ ಜಾಗಕ್ಕೆ ಶಿವಸೇನೆ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಆಡಳಿತಕ್ಕೆ ಬಂದಿದೆ. ಇದರಲ್ಲಿ ಶರದ್‌ ಪವಾರ್‌ರವರ ಪಾತ್ರ ಬಹುಮುಖ್ಯವಾಗಿದ್ದು ಅವರು ಮನಸ್ಸು ಮಾಡಿದರೆ ಜಸ್ಟೀಸ್‌ ಲೋಯ ಕೇಸು ರೀಓಪನ್‌ ಆಗುವುದರಲ್ಲಿ ಸಂದೇಹವೇ ಇಲ್ಲ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಶರದ್‌ ಪವಾರ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಲು ಸಜ್ಜಾಗಿದ್ದರು. ಆದರೆ ಪವಾರ್‌ ಇದು ಚುನಾವಣಾ ಸಮಯ ಎಂದು ತಿರುಗೇಟು ನೀಡಿದ್ದರು. ಚುನಾವಣಾ ಫಲಿತಾಂಶದ ನಂತರ ಪವಾರ್‌ ಕೈ ಮೇಲಾಗಿದ್ದು ಈಗ ಅಮಿತ್‌ ಶಾ ಆರೋಪಿಯಾಗಿರುವ ಮತ್ತು ಮಹಾರಾಷ್ಟ್ರದಲ್ಲಿಯೇ ಸಂಭವಿಸಿರುವ ಜಸ್ಟೀಸ್‌ ಲೋಯಾ ಕೇಸ್‌ ರೀಓಪನ್‌ ಮಾಡುತ್ತೇವೆ ಎನ್ನುವುದು ಸಣ್ಣ ವಿಷಯವಲ್ಲ. ಇದೊಂದು ರೀತಿ ಅಮಿತ್‌ ಶಾಗೆ ಪವಾರ್‌ ಕೊಡುವ ಎಚ್ಚರಿಕೆಯೂ ಆಗಿದೆ ಎಂದು ಹಲವರು ಮಾತಡುತ್ತಿದ್ದಾರೆ.

ಇದನ್ನೂ ಓದಿ: ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ನವೆಂಬರ್ 2017 ರಲ್ಲಿ ’ದಿ ಕಾರವಾನ್’ ಪತ್ರಿಕೆಯು ಈ ಕುರಿತು ವರದಿಯನ್ನು ಪ್ರಕಟಿಸಿದ ನಂತರ ಲೋಯಾ ಅವರ ಸಾವು ಸ್ವಾಭಾವಿಕವಾಗಿದೆಯೇ ಎಂಬ ಪ್ರಶ್ನೆಗಳು ಕೇಳಿಬಂದವು. ಇದರಲ್ಲಿ ಲೋಯಾ ಅವರ ಕುಟುಂಬವು ಅವರ ಸಾವಿನ ಸಂದರ್ಭಗಳು ಅನುಮಾನಾಸ್ಪದವಾಗಿವೆ ಮತ್ತು ಅವರು ಕೆಲವರ ಪರವಾಗಿ ಅನುಕೂಲಕರ ತೀರ್ಪು ನೀಡುವ ಒತ್ತಡದಲ್ಲಿದ್ದರು ಎಂದು ಹೇಳಿದ್ದರು. ಈ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ತಕ್ಷಣದ ಒತ್ತಾಯಗಳು ಕೇಳಿಬಂದಿದ್ದವು.

“ಈ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ಕೆಲವು ಪತ್ರಿಕೆಗಳ ಲೇಖನಗಳಲ್ಲಿ ಈ ಬಗ್ಗೆ ಓದಿದ್ದೇನೆ. ಮಹಾರಾಷ್ಟ್ರದ ಜನರಲ್ಲಿ ನ್ಯಾಯಮೂರ್ತಿ ಲೋಯಾ ಅವರ ಸಾವಿನ ಬಗ್ಗೆ ಆಳವಾಗಿ ತನಿಖೆ ನಡೆಸಲು ಚರ್ಚೆಯಿದೆ ಎಂದು ಪವಾರ್ ಹೇಳಿದ್ದಾರೆ.

“ಯಾರಾದರು ಒಬ್ಬರು ಮರು ತನಿಖೆಗೆ ತೀವ್ರ ಬೇಡಿಕೆಯಿದ್ದರೆ, ಅವರು ಈ ಬೇಡಿಕೆಯನ್ನು ಯಾವ ಆಧಾರದ ಮೇಲೆ ಮಾಡುತ್ತಿದ್ದಾರೆ, ಅದರಲ್ಲಿನ ಸತ್ಯವೇನು, ಇದರ ಬಗ್ಗೆ ತನಿಖೆ ಮಾಡಬೇಕು. ಅದರಲ್ಲಿ ಏನಾದರೂ ಮಹತ್ವದ್ದು ಸಿಕ್ಕರೆ ಖಂಡಿತ ಪ್ರಕರಣದ ಮರು ತನಿಖೆ ನಡೆಸಬೇಕು. ಇಲ್ಲದಿದ್ದರೆ, ಯಾರ ಮೇಲೂ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಲೋಯಾ ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂಬ ಮನವಿಯನ್ನು ವಜಾಗೊಳಿಸಿ ಉನ್ನತ ನ್ಯಾಯಾಲಯವು 2018 ಏಪ್ರಿಲ್ 19ರಂದು ತೀರ್ಪು ನೀಡಿತ್ತು. ಈ ಕುರಿತು ಬಾಂಬೆ ವಕೀಲರ ಸಂಘ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸಹ ಸುಪ್ರೀಂ ಕೋರ್ಟ್ ಜುಲೈ 2018 ರಲ್ಲಿ ವಜಾಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...