Homeಮುಖಪುಟಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

ಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

- Advertisement -
- Advertisement -

ನ್ಯಾಯಾಧೀಶ ಲೋಯಾ ಅವರ ಸಾವಿನ ಕುರಿತು ತನಿಖೆಯ ಬೇಡಿಕೆ ಮತ್ತು ಅಗತ್ಯವಿದ್ದರೆ ಪ್ರಕರಣವನ್ನು ಮರುಪರಿಶೀಲಿಸಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಸ್ಥಳೀಯ ಮರಾಠಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಡಿಸೆಂಬರ್ 1, 2014 ರಂದು ನ್ಯಾಯಾಧೀಶ ಲೋಯಾ ಅವರು ಮರಣಹೊಂದಿದ್ದರು. ಅವರು ಆ ಸಮಯದಲ್ಲಿ ಸೊಹ್ರಾಬುದ್ದೀನ್ ಶೇಖ್ ಎನ್ಕೌಂಟರ್ ಪ್ರಕರಣವನ್ನು ನಿರ್ವಹಿಸುತ್ತಿದ್ದು, ಅದರಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ಆರೋಪಿಯಾಗಿದ್ದರು.

ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಬಿದ್ದು ಆ ಜಾಗಕ್ಕೆ ಶಿವಸೇನೆ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಆಡಳಿತಕ್ಕೆ ಬಂದಿದೆ. ಇದರಲ್ಲಿ ಶರದ್‌ ಪವಾರ್‌ರವರ ಪಾತ್ರ ಬಹುಮುಖ್ಯವಾಗಿದ್ದು ಅವರು ಮನಸ್ಸು ಮಾಡಿದರೆ ಜಸ್ಟೀಸ್‌ ಲೋಯ ಕೇಸು ರೀಓಪನ್‌ ಆಗುವುದರಲ್ಲಿ ಸಂದೇಹವೇ ಇಲ್ಲ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಶರದ್‌ ಪವಾರ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಲು ಸಜ್ಜಾಗಿದ್ದರು. ಆದರೆ ಪವಾರ್‌ ಇದು ಚುನಾವಣಾ ಸಮಯ ಎಂದು ತಿರುಗೇಟು ನೀಡಿದ್ದರು. ಚುನಾವಣಾ ಫಲಿತಾಂಶದ ನಂತರ ಪವಾರ್‌ ಕೈ ಮೇಲಾಗಿದ್ದು ಈಗ ಅಮಿತ್‌ ಶಾ ಆರೋಪಿಯಾಗಿರುವ ಮತ್ತು ಮಹಾರಾಷ್ಟ್ರದಲ್ಲಿಯೇ ಸಂಭವಿಸಿರುವ ಜಸ್ಟೀಸ್‌ ಲೋಯಾ ಕೇಸ್‌ ರೀಓಪನ್‌ ಮಾಡುತ್ತೇವೆ ಎನ್ನುವುದು ಸಣ್ಣ ವಿಷಯವಲ್ಲ. ಇದೊಂದು ರೀತಿ ಅಮಿತ್‌ ಶಾಗೆ ಪವಾರ್‌ ಕೊಡುವ ಎಚ್ಚರಿಕೆಯೂ ಆಗಿದೆ ಎಂದು ಹಲವರು ಮಾತಡುತ್ತಿದ್ದಾರೆ.

ಇದನ್ನೂ ಓದಿ: ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ನವೆಂಬರ್ 2017 ರಲ್ಲಿ ’ದಿ ಕಾರವಾನ್’ ಪತ್ರಿಕೆಯು ಈ ಕುರಿತು ವರದಿಯನ್ನು ಪ್ರಕಟಿಸಿದ ನಂತರ ಲೋಯಾ ಅವರ ಸಾವು ಸ್ವಾಭಾವಿಕವಾಗಿದೆಯೇ ಎಂಬ ಪ್ರಶ್ನೆಗಳು ಕೇಳಿಬಂದವು. ಇದರಲ್ಲಿ ಲೋಯಾ ಅವರ ಕುಟುಂಬವು ಅವರ ಸಾವಿನ ಸಂದರ್ಭಗಳು ಅನುಮಾನಾಸ್ಪದವಾಗಿವೆ ಮತ್ತು ಅವರು ಕೆಲವರ ಪರವಾಗಿ ಅನುಕೂಲಕರ ತೀರ್ಪು ನೀಡುವ ಒತ್ತಡದಲ್ಲಿದ್ದರು ಎಂದು ಹೇಳಿದ್ದರು. ಈ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ತಕ್ಷಣದ ಒತ್ತಾಯಗಳು ಕೇಳಿಬಂದಿದ್ದವು.

“ಈ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ಕೆಲವು ಪತ್ರಿಕೆಗಳ ಲೇಖನಗಳಲ್ಲಿ ಈ ಬಗ್ಗೆ ಓದಿದ್ದೇನೆ. ಮಹಾರಾಷ್ಟ್ರದ ಜನರಲ್ಲಿ ನ್ಯಾಯಮೂರ್ತಿ ಲೋಯಾ ಅವರ ಸಾವಿನ ಬಗ್ಗೆ ಆಳವಾಗಿ ತನಿಖೆ ನಡೆಸಲು ಚರ್ಚೆಯಿದೆ ಎಂದು ಪವಾರ್ ಹೇಳಿದ್ದಾರೆ.

“ಯಾರಾದರು ಒಬ್ಬರು ಮರು ತನಿಖೆಗೆ ತೀವ್ರ ಬೇಡಿಕೆಯಿದ್ದರೆ, ಅವರು ಈ ಬೇಡಿಕೆಯನ್ನು ಯಾವ ಆಧಾರದ ಮೇಲೆ ಮಾಡುತ್ತಿದ್ದಾರೆ, ಅದರಲ್ಲಿನ ಸತ್ಯವೇನು, ಇದರ ಬಗ್ಗೆ ತನಿಖೆ ಮಾಡಬೇಕು. ಅದರಲ್ಲಿ ಏನಾದರೂ ಮಹತ್ವದ್ದು ಸಿಕ್ಕರೆ ಖಂಡಿತ ಪ್ರಕರಣದ ಮರು ತನಿಖೆ ನಡೆಸಬೇಕು. ಇಲ್ಲದಿದ್ದರೆ, ಯಾರ ಮೇಲೂ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಲೋಯಾ ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂಬ ಮನವಿಯನ್ನು ವಜಾಗೊಳಿಸಿ ಉನ್ನತ ನ್ಯಾಯಾಲಯವು 2018 ಏಪ್ರಿಲ್ 19ರಂದು ತೀರ್ಪು ನೀಡಿತ್ತು. ಈ ಕುರಿತು ಬಾಂಬೆ ವಕೀಲರ ಸಂಘ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸಹ ಸುಪ್ರೀಂ ಕೋರ್ಟ್ ಜುಲೈ 2018 ರಲ್ಲಿ ವಜಾಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...