Homeಮುಖಪುಟಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

ಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

- Advertisement -
- Advertisement -

ನ್ಯಾಯಾಧೀಶ ಲೋಯಾ ಅವರ ಸಾವಿನ ಕುರಿತು ತನಿಖೆಯ ಬೇಡಿಕೆ ಮತ್ತು ಅಗತ್ಯವಿದ್ದರೆ ಪ್ರಕರಣವನ್ನು ಮರುಪರಿಶೀಲಿಸಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಸ್ಥಳೀಯ ಮರಾಠಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಡಿಸೆಂಬರ್ 1, 2014 ರಂದು ನ್ಯಾಯಾಧೀಶ ಲೋಯಾ ಅವರು ಮರಣಹೊಂದಿದ್ದರು. ಅವರು ಆ ಸಮಯದಲ್ಲಿ ಸೊಹ್ರಾಬುದ್ದೀನ್ ಶೇಖ್ ಎನ್ಕೌಂಟರ್ ಪ್ರಕರಣವನ್ನು ನಿರ್ವಹಿಸುತ್ತಿದ್ದು, ಅದರಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ಆರೋಪಿಯಾಗಿದ್ದರು.

ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಬಿದ್ದು ಆ ಜಾಗಕ್ಕೆ ಶಿವಸೇನೆ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಆಡಳಿತಕ್ಕೆ ಬಂದಿದೆ. ಇದರಲ್ಲಿ ಶರದ್‌ ಪವಾರ್‌ರವರ ಪಾತ್ರ ಬಹುಮುಖ್ಯವಾಗಿದ್ದು ಅವರು ಮನಸ್ಸು ಮಾಡಿದರೆ ಜಸ್ಟೀಸ್‌ ಲೋಯ ಕೇಸು ರೀಓಪನ್‌ ಆಗುವುದರಲ್ಲಿ ಸಂದೇಹವೇ ಇಲ್ಲ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಶರದ್‌ ಪವಾರ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಲು ಸಜ್ಜಾಗಿದ್ದರು. ಆದರೆ ಪವಾರ್‌ ಇದು ಚುನಾವಣಾ ಸಮಯ ಎಂದು ತಿರುಗೇಟು ನೀಡಿದ್ದರು. ಚುನಾವಣಾ ಫಲಿತಾಂಶದ ನಂತರ ಪವಾರ್‌ ಕೈ ಮೇಲಾಗಿದ್ದು ಈಗ ಅಮಿತ್‌ ಶಾ ಆರೋಪಿಯಾಗಿರುವ ಮತ್ತು ಮಹಾರಾಷ್ಟ್ರದಲ್ಲಿಯೇ ಸಂಭವಿಸಿರುವ ಜಸ್ಟೀಸ್‌ ಲೋಯಾ ಕೇಸ್‌ ರೀಓಪನ್‌ ಮಾಡುತ್ತೇವೆ ಎನ್ನುವುದು ಸಣ್ಣ ವಿಷಯವಲ್ಲ. ಇದೊಂದು ರೀತಿ ಅಮಿತ್‌ ಶಾಗೆ ಪವಾರ್‌ ಕೊಡುವ ಎಚ್ಚರಿಕೆಯೂ ಆಗಿದೆ ಎಂದು ಹಲವರು ಮಾತಡುತ್ತಿದ್ದಾರೆ.

ಇದನ್ನೂ ಓದಿ: ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ನವೆಂಬರ್ 2017 ರಲ್ಲಿ ’ದಿ ಕಾರವಾನ್’ ಪತ್ರಿಕೆಯು ಈ ಕುರಿತು ವರದಿಯನ್ನು ಪ್ರಕಟಿಸಿದ ನಂತರ ಲೋಯಾ ಅವರ ಸಾವು ಸ್ವಾಭಾವಿಕವಾಗಿದೆಯೇ ಎಂಬ ಪ್ರಶ್ನೆಗಳು ಕೇಳಿಬಂದವು. ಇದರಲ್ಲಿ ಲೋಯಾ ಅವರ ಕುಟುಂಬವು ಅವರ ಸಾವಿನ ಸಂದರ್ಭಗಳು ಅನುಮಾನಾಸ್ಪದವಾಗಿವೆ ಮತ್ತು ಅವರು ಕೆಲವರ ಪರವಾಗಿ ಅನುಕೂಲಕರ ತೀರ್ಪು ನೀಡುವ ಒತ್ತಡದಲ್ಲಿದ್ದರು ಎಂದು ಹೇಳಿದ್ದರು. ಈ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ತಕ್ಷಣದ ಒತ್ತಾಯಗಳು ಕೇಳಿಬಂದಿದ್ದವು.

“ಈ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ಕೆಲವು ಪತ್ರಿಕೆಗಳ ಲೇಖನಗಳಲ್ಲಿ ಈ ಬಗ್ಗೆ ಓದಿದ್ದೇನೆ. ಮಹಾರಾಷ್ಟ್ರದ ಜನರಲ್ಲಿ ನ್ಯಾಯಮೂರ್ತಿ ಲೋಯಾ ಅವರ ಸಾವಿನ ಬಗ್ಗೆ ಆಳವಾಗಿ ತನಿಖೆ ನಡೆಸಲು ಚರ್ಚೆಯಿದೆ ಎಂದು ಪವಾರ್ ಹೇಳಿದ್ದಾರೆ.

“ಯಾರಾದರು ಒಬ್ಬರು ಮರು ತನಿಖೆಗೆ ತೀವ್ರ ಬೇಡಿಕೆಯಿದ್ದರೆ, ಅವರು ಈ ಬೇಡಿಕೆಯನ್ನು ಯಾವ ಆಧಾರದ ಮೇಲೆ ಮಾಡುತ್ತಿದ್ದಾರೆ, ಅದರಲ್ಲಿನ ಸತ್ಯವೇನು, ಇದರ ಬಗ್ಗೆ ತನಿಖೆ ಮಾಡಬೇಕು. ಅದರಲ್ಲಿ ಏನಾದರೂ ಮಹತ್ವದ್ದು ಸಿಕ್ಕರೆ ಖಂಡಿತ ಪ್ರಕರಣದ ಮರು ತನಿಖೆ ನಡೆಸಬೇಕು. ಇಲ್ಲದಿದ್ದರೆ, ಯಾರ ಮೇಲೂ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಲೋಯಾ ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂಬ ಮನವಿಯನ್ನು ವಜಾಗೊಳಿಸಿ ಉನ್ನತ ನ್ಯಾಯಾಲಯವು 2018 ಏಪ್ರಿಲ್ 19ರಂದು ತೀರ್ಪು ನೀಡಿತ್ತು. ಈ ಕುರಿತು ಬಾಂಬೆ ವಕೀಲರ ಸಂಘ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸಹ ಸುಪ್ರೀಂ ಕೋರ್ಟ್ ಜುಲೈ 2018 ರಲ್ಲಿ ವಜಾಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...