Homeಮುಖಪುಟಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

ಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

- Advertisement -
- Advertisement -

ನ್ಯಾಯಾಧೀಶ ಲೋಯಾ ಅವರ ಸಾವಿನ ಕುರಿತು ತನಿಖೆಯ ಬೇಡಿಕೆ ಮತ್ತು ಅಗತ್ಯವಿದ್ದರೆ ಪ್ರಕರಣವನ್ನು ಮರುಪರಿಶೀಲಿಸಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಸ್ಥಳೀಯ ಮರಾಠಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಡಿಸೆಂಬರ್ 1, 2014 ರಂದು ನ್ಯಾಯಾಧೀಶ ಲೋಯಾ ಅವರು ಮರಣಹೊಂದಿದ್ದರು. ಅವರು ಆ ಸಮಯದಲ್ಲಿ ಸೊಹ್ರಾಬುದ್ದೀನ್ ಶೇಖ್ ಎನ್ಕೌಂಟರ್ ಪ್ರಕರಣವನ್ನು ನಿರ್ವಹಿಸುತ್ತಿದ್ದು, ಅದರಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ಆರೋಪಿಯಾಗಿದ್ದರು.

ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಬಿದ್ದು ಆ ಜಾಗಕ್ಕೆ ಶಿವಸೇನೆ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಆಡಳಿತಕ್ಕೆ ಬಂದಿದೆ. ಇದರಲ್ಲಿ ಶರದ್‌ ಪವಾರ್‌ರವರ ಪಾತ್ರ ಬಹುಮುಖ್ಯವಾಗಿದ್ದು ಅವರು ಮನಸ್ಸು ಮಾಡಿದರೆ ಜಸ್ಟೀಸ್‌ ಲೋಯ ಕೇಸು ರೀಓಪನ್‌ ಆಗುವುದರಲ್ಲಿ ಸಂದೇಹವೇ ಇಲ್ಲ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಶರದ್‌ ಪವಾರ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಲು ಸಜ್ಜಾಗಿದ್ದರು. ಆದರೆ ಪವಾರ್‌ ಇದು ಚುನಾವಣಾ ಸಮಯ ಎಂದು ತಿರುಗೇಟು ನೀಡಿದ್ದರು. ಚುನಾವಣಾ ಫಲಿತಾಂಶದ ನಂತರ ಪವಾರ್‌ ಕೈ ಮೇಲಾಗಿದ್ದು ಈಗ ಅಮಿತ್‌ ಶಾ ಆರೋಪಿಯಾಗಿರುವ ಮತ್ತು ಮಹಾರಾಷ್ಟ್ರದಲ್ಲಿಯೇ ಸಂಭವಿಸಿರುವ ಜಸ್ಟೀಸ್‌ ಲೋಯಾ ಕೇಸ್‌ ರೀಓಪನ್‌ ಮಾಡುತ್ತೇವೆ ಎನ್ನುವುದು ಸಣ್ಣ ವಿಷಯವಲ್ಲ. ಇದೊಂದು ರೀತಿ ಅಮಿತ್‌ ಶಾಗೆ ಪವಾರ್‌ ಕೊಡುವ ಎಚ್ಚರಿಕೆಯೂ ಆಗಿದೆ ಎಂದು ಹಲವರು ಮಾತಡುತ್ತಿದ್ದಾರೆ.

ಇದನ್ನೂ ಓದಿ: ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ನವೆಂಬರ್ 2017 ರಲ್ಲಿ ’ದಿ ಕಾರವಾನ್’ ಪತ್ರಿಕೆಯು ಈ ಕುರಿತು ವರದಿಯನ್ನು ಪ್ರಕಟಿಸಿದ ನಂತರ ಲೋಯಾ ಅವರ ಸಾವು ಸ್ವಾಭಾವಿಕವಾಗಿದೆಯೇ ಎಂಬ ಪ್ರಶ್ನೆಗಳು ಕೇಳಿಬಂದವು. ಇದರಲ್ಲಿ ಲೋಯಾ ಅವರ ಕುಟುಂಬವು ಅವರ ಸಾವಿನ ಸಂದರ್ಭಗಳು ಅನುಮಾನಾಸ್ಪದವಾಗಿವೆ ಮತ್ತು ಅವರು ಕೆಲವರ ಪರವಾಗಿ ಅನುಕೂಲಕರ ತೀರ್ಪು ನೀಡುವ ಒತ್ತಡದಲ್ಲಿದ್ದರು ಎಂದು ಹೇಳಿದ್ದರು. ಈ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ತಕ್ಷಣದ ಒತ್ತಾಯಗಳು ಕೇಳಿಬಂದಿದ್ದವು.

“ಈ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ಕೆಲವು ಪತ್ರಿಕೆಗಳ ಲೇಖನಗಳಲ್ಲಿ ಈ ಬಗ್ಗೆ ಓದಿದ್ದೇನೆ. ಮಹಾರಾಷ್ಟ್ರದ ಜನರಲ್ಲಿ ನ್ಯಾಯಮೂರ್ತಿ ಲೋಯಾ ಅವರ ಸಾವಿನ ಬಗ್ಗೆ ಆಳವಾಗಿ ತನಿಖೆ ನಡೆಸಲು ಚರ್ಚೆಯಿದೆ ಎಂದು ಪವಾರ್ ಹೇಳಿದ್ದಾರೆ.

“ಯಾರಾದರು ಒಬ್ಬರು ಮರು ತನಿಖೆಗೆ ತೀವ್ರ ಬೇಡಿಕೆಯಿದ್ದರೆ, ಅವರು ಈ ಬೇಡಿಕೆಯನ್ನು ಯಾವ ಆಧಾರದ ಮೇಲೆ ಮಾಡುತ್ತಿದ್ದಾರೆ, ಅದರಲ್ಲಿನ ಸತ್ಯವೇನು, ಇದರ ಬಗ್ಗೆ ತನಿಖೆ ಮಾಡಬೇಕು. ಅದರಲ್ಲಿ ಏನಾದರೂ ಮಹತ್ವದ್ದು ಸಿಕ್ಕರೆ ಖಂಡಿತ ಪ್ರಕರಣದ ಮರು ತನಿಖೆ ನಡೆಸಬೇಕು. ಇಲ್ಲದಿದ್ದರೆ, ಯಾರ ಮೇಲೂ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಲೋಯಾ ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂಬ ಮನವಿಯನ್ನು ವಜಾಗೊಳಿಸಿ ಉನ್ನತ ನ್ಯಾಯಾಲಯವು 2018 ಏಪ್ರಿಲ್ 19ರಂದು ತೀರ್ಪು ನೀಡಿತ್ತು. ಈ ಕುರಿತು ಬಾಂಬೆ ವಕೀಲರ ಸಂಘ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸಹ ಸುಪ್ರೀಂ ಕೋರ್ಟ್ ಜುಲೈ 2018 ರಲ್ಲಿ ವಜಾಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....