Homeಮುಖಪುಟಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

ಒತ್ತಾಯ ಮತ್ತು ಅಗತ್ಯವಿದ್ದರೆ ಜಸ್ಟೀಸ್‌ ಲೋಯಾ ಸಾವಿನ ಕೇಸ್‌ ಮರು ವಿಚಾರಣೆ: ಶರದ್‌ ಪವಾರ್‌

- Advertisement -
- Advertisement -

ನ್ಯಾಯಾಧೀಶ ಲೋಯಾ ಅವರ ಸಾವಿನ ಕುರಿತು ತನಿಖೆಯ ಬೇಡಿಕೆ ಮತ್ತು ಅಗತ್ಯವಿದ್ದರೆ ಪ್ರಕರಣವನ್ನು ಮರುಪರಿಶೀಲಿಸಬೇಕು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಸ್ಥಳೀಯ ಮರಾಠಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಡಿಸೆಂಬರ್ 1, 2014 ರಂದು ನ್ಯಾಯಾಧೀಶ ಲೋಯಾ ಅವರು ಮರಣಹೊಂದಿದ್ದರು. ಅವರು ಆ ಸಮಯದಲ್ಲಿ ಸೊಹ್ರಾಬುದ್ದೀನ್ ಶೇಖ್ ಎನ್ಕೌಂಟರ್ ಪ್ರಕರಣವನ್ನು ನಿರ್ವಹಿಸುತ್ತಿದ್ದು, ಅದರಲ್ಲಿ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ಆರೋಪಿಯಾಗಿದ್ದರು.

ಈಗ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಬಿದ್ದು ಆ ಜಾಗಕ್ಕೆ ಶಿವಸೇನೆ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಆಡಳಿತಕ್ಕೆ ಬಂದಿದೆ. ಇದರಲ್ಲಿ ಶರದ್‌ ಪವಾರ್‌ರವರ ಪಾತ್ರ ಬಹುಮುಖ್ಯವಾಗಿದ್ದು ಅವರು ಮನಸ್ಸು ಮಾಡಿದರೆ ಜಸ್ಟೀಸ್‌ ಲೋಯ ಕೇಸು ರೀಓಪನ್‌ ಆಗುವುದರಲ್ಲಿ ಸಂದೇಹವೇ ಇಲ್ಲ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಶರದ್‌ ಪವಾರ್‌ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಲು ಸಜ್ಜಾಗಿದ್ದರು. ಆದರೆ ಪವಾರ್‌ ಇದು ಚುನಾವಣಾ ಸಮಯ ಎಂದು ತಿರುಗೇಟು ನೀಡಿದ್ದರು. ಚುನಾವಣಾ ಫಲಿತಾಂಶದ ನಂತರ ಪವಾರ್‌ ಕೈ ಮೇಲಾಗಿದ್ದು ಈಗ ಅಮಿತ್‌ ಶಾ ಆರೋಪಿಯಾಗಿರುವ ಮತ್ತು ಮಹಾರಾಷ್ಟ್ರದಲ್ಲಿಯೇ ಸಂಭವಿಸಿರುವ ಜಸ್ಟೀಸ್‌ ಲೋಯಾ ಕೇಸ್‌ ರೀಓಪನ್‌ ಮಾಡುತ್ತೇವೆ ಎನ್ನುವುದು ಸಣ್ಣ ವಿಷಯವಲ್ಲ. ಇದೊಂದು ರೀತಿ ಅಮಿತ್‌ ಶಾಗೆ ಪವಾರ್‌ ಕೊಡುವ ಎಚ್ಚರಿಕೆಯೂ ಆಗಿದೆ ಎಂದು ಹಲವರು ಮಾತಡುತ್ತಿದ್ದಾರೆ.

ಇದನ್ನೂ ಓದಿ: ಜಸ್ಟೀಸ್ ಲೋಯಾ ಕೇಸಿಗೂ ಹಾಲಿ ಗೃಹಸಚಿವ ಅಮಿತ್ ಷಾಗೂ ಸಂಬಂಧವೇನು?

ನವೆಂಬರ್ 2017 ರಲ್ಲಿ ’ದಿ ಕಾರವಾನ್’ ಪತ್ರಿಕೆಯು ಈ ಕುರಿತು ವರದಿಯನ್ನು ಪ್ರಕಟಿಸಿದ ನಂತರ ಲೋಯಾ ಅವರ ಸಾವು ಸ್ವಾಭಾವಿಕವಾಗಿದೆಯೇ ಎಂಬ ಪ್ರಶ್ನೆಗಳು ಕೇಳಿಬಂದವು. ಇದರಲ್ಲಿ ಲೋಯಾ ಅವರ ಕುಟುಂಬವು ಅವರ ಸಾವಿನ ಸಂದರ್ಭಗಳು ಅನುಮಾನಾಸ್ಪದವಾಗಿವೆ ಮತ್ತು ಅವರು ಕೆಲವರ ಪರವಾಗಿ ಅನುಕೂಲಕರ ತೀರ್ಪು ನೀಡುವ ಒತ್ತಡದಲ್ಲಿದ್ದರು ಎಂದು ಹೇಳಿದ್ದರು. ಈ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ತಕ್ಷಣದ ಒತ್ತಾಯಗಳು ಕೇಳಿಬಂದಿದ್ದವು.

“ಈ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ಕೆಲವು ಪತ್ರಿಕೆಗಳ ಲೇಖನಗಳಲ್ಲಿ ಈ ಬಗ್ಗೆ ಓದಿದ್ದೇನೆ. ಮಹಾರಾಷ್ಟ್ರದ ಜನರಲ್ಲಿ ನ್ಯಾಯಮೂರ್ತಿ ಲೋಯಾ ಅವರ ಸಾವಿನ ಬಗ್ಗೆ ಆಳವಾಗಿ ತನಿಖೆ ನಡೆಸಲು ಚರ್ಚೆಯಿದೆ ಎಂದು ಪವಾರ್ ಹೇಳಿದ್ದಾರೆ.

“ಯಾರಾದರು ಒಬ್ಬರು ಮರು ತನಿಖೆಗೆ ತೀವ್ರ ಬೇಡಿಕೆಯಿದ್ದರೆ, ಅವರು ಈ ಬೇಡಿಕೆಯನ್ನು ಯಾವ ಆಧಾರದ ಮೇಲೆ ಮಾಡುತ್ತಿದ್ದಾರೆ, ಅದರಲ್ಲಿನ ಸತ್ಯವೇನು, ಇದರ ಬಗ್ಗೆ ತನಿಖೆ ಮಾಡಬೇಕು. ಅದರಲ್ಲಿ ಏನಾದರೂ ಮಹತ್ವದ್ದು ಸಿಕ್ಕರೆ ಖಂಡಿತ ಪ್ರಕರಣದ ಮರು ತನಿಖೆ ನಡೆಸಬೇಕು. ಇಲ್ಲದಿದ್ದರೆ, ಯಾರ ಮೇಲೂ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.

ಲೋಯಾ ಸಾವಿನ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂಬ ಮನವಿಯನ್ನು ವಜಾಗೊಳಿಸಿ ಉನ್ನತ ನ್ಯಾಯಾಲಯವು 2018 ಏಪ್ರಿಲ್ 19ರಂದು ತೀರ್ಪು ನೀಡಿತ್ತು. ಈ ಕುರಿತು ಬಾಂಬೆ ವಕೀಲರ ಸಂಘ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ಸಹ ಸುಪ್ರೀಂ ಕೋರ್ಟ್ ಜುಲೈ 2018 ರಲ್ಲಿ ವಜಾಗೊಳಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...