Homeಮುಖಪುಟತೋಂಟದ ಸಿದ್ಧಲಿಂಗಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಜಸ್ಟೀಸ್‌ ನಾಗಮೋಹನ ದಾಸ್‌‌ ಆಯ್ಕೆ

ತೋಂಟದ ಸಿದ್ಧಲಿಂಗಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಜಸ್ಟೀಸ್‌ ನಾಗಮೋಹನ ದಾಸ್‌‌ ಆಯ್ಕೆ

- Advertisement -
- Advertisement -

ಸಮ ಸಮಾಜದ ನಿರ್ಮಾಣಕ್ಕಾಗಿ ಜೀವನವಿಡೀ ಸೇವೆ ಸಲ್ಲಿಸಿದ ಗದುಗಿನ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಮೂರನೇ ವರ್ಷದ ಸ್ಮರಣೆ ಅಂಗವಾಗಿ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಪ್ರಶಸ್ತಿ ಪ್ರದಾನ, ಸಂಮಾನ ಗ್ರಂಥಗಳ ಬಿಡುಗಡೆ ಸಮಾರಂಭವನ್ನು ಅಕ್ಟೋಬರ್‌ 16ರಂದು ಹಮ್ಮಿಕೊಳ್ಳಲಾಗಿದ್ದು, ಜಸ್ಟೀಸ್‌ ಎಚ್‌.ಎನ್‌.ನಾಗಮೋಹನ ದಾಸ್ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅಕ್ಟೋಬರ್‌ 16ರಂದು ಗದಗದ ತೋಂಟದ ಸಿದ್ಧಲಿಂಗ ಸ್ವಾಮೀಜಿ ಶಿವಾನುಭವ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿ ಫಲಕದೊಂದಿಗೆ 5 ಲಕ್ಷ ರೂ. ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.

ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅವರು ಹುಟ್ಟಿದ್ದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಹೆಬ್ಬಣ್ಣಿ ಗ್ರಾಮದಲ್ಲಿ 1952ರ ಫೆಬ್ರವರಿ 12ರಂದು. ತಂದೆ ಸ್ವಾತಂತ್ರ್ಯ ಹೋರಾಟಗಾರ ಎಚ್.ಎನ್. ನಾಗಪ್ಪ. ತಾಯಿ ಪಾರ್ವತಮ್ಮ. ಬೆಂಗಳೂರು ವಿಶ್ವವಿದ್ಯಾನಿಯದಿಂದ ಕಾನೂನು ಪದವಿಯನ್ನು ನಾಗಮೋಹನ ದಾಸ್ ಅವರು ಪಡೆದು 1977ರಲ್ಲಿ ವಕೀಲಿ ವೃತ್ತಿ ಆರಂಭಿಸಿದರು. 2004ರ ಅಕ್ಟೋಬರ್‌ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕವಾಗಿ ಸೇವೆ ಸಲ್ಲಿಸಿದರು. 2014ರವರೆಗೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ, ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿಯಾಗಿರುವ ಜಸ್ಟೀಸ್ ದಾಸ್ ಅವರು, ನ್ಯಾಯದಾನ ಪರಿಕಲ್ಪನೆಗೆ ಹೊಸ ವಿಶ್ಲೇಷಣೆಗಳನ್ನು ಬರೆದವರು. ರಾಜ್ಯ ಸರಕಾರದ ಹಲವು ಆಯೋಗಗಳ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ ಖ್ಯಾತಿ ಅವರದ್ದು.

ಸಾಮಾಜಿಕ ನ್ಯಾಯದ ಬಹುದೊಡ್ಡ ದನಿಯಾಗಿರುವ ಜಸ್ಟೀಸ್ ದಾಸ್ ಹಲವು ಕೃತಿಗಳನ್ನು ಬರೆದಿದ್ದಾರೆ. ‘ಕರ್ನಾಟಕದಲ್ಲಿ ನ್ಯಾಯಾಂಗ’, ‘ಅಸ್ಪೃಶ್ಯತೆ ಮತ್ತು ಕಾನೂನು’, ‘ಅರಿವು ಬೆಳಕು’, ‘ಮಹಿಳಾ ಅಸಮಾನತೆ’, ‘ಡಾ.ಅಂಬೇಡ್ಕರ್‌ ಮತ್ತು ಕಾರ್ಮಿಕ ಕಾನೂನು’, ‘ಜಾಗತಿಕ ಧುರೀಣ ಅಂಬೇಡ್ಕರ್‌’, ‘ಮಾಧ್ಯಮದ ದಿಕ್ಕು ಎತ್ತ?’, ‘ಸಂವಿಧಾನ ಓದು’ ಕೃತಿಗಳು ಜನರಿಗೆ ಹೊಸ ದಿಕ್ಕು ತೋರಿವೆ.

‘ಸಂವಿಧಾನ ಓದು’ ಕೃತಿಯಂತೂ ಈ ದುರಿತ ಕಾಲದ ಹೊಸ ಬೆಳಕಾಗಿ, ದಾರಿ ದೀಪವಾಗಿ ತೋರಿ, ಒಂದು ಚಳವಳಿಯೇ ಆಗಿ ಮಾರ್ಪಾಡಾಯಿತು. ಸಂವಿಧಾನದ ಕುರಿತು ಜನಮಾನಸದಲ್ಲಿರುವ ತಪ್ಪು ಕಲ್ಪನೆಗಳನ್ನು ತೊಡೆದು ಹಾಕಲು ಜಸ್ಟೀಸ್ ದಾಸ್ ಅವರು ಅವಿರತವಾಗಿ ಶ್ರಮಿಸುತ್ತಿದ್ದಾರೆ.

ವಿದ್ಯಾರ್ಥಿ ದಿಸೆಯಿಂದಲೂ ಮುಂಚೂಣಿ ನಾಯಕರಾಗಿದ್ದವರು ಜಸ್ಟೀಸ್ ದಾಸ್. ಯುವಜನ ಸಂಘಟನೆಯ ರಾಜ್ಯಾಧ್ಯಕ್ಷರಾಗಿ, ವಕೀಲರ ವೇದಿಕೆಯ ಕಾರ್ಯದರ್ಶಿಯಾಗಿ, ವಕೀಲರ ಸಂಘದ ಮಹಾಕಾರ್ಯದರ್ಶಿಯಾಗಿ, ಅಖಿಲ ಭಾರತ ವಕೀಲರ ಸಂಘದ ಸಂಚಾಲಕರಾಗಿ, ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾಗಿ, ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜಾತಿ ಅಸಮಾನತೆ, ಲಿಂಗ ಅಸಮಾನತೆ, ಕೋಮುವಾದದ ವಿರುದ್ಧ ಸದಾ ಎಚ್ಚರದ ಕಣ್ಣಾಗಿರುವ ಜಸ್ಟೀಸ್ ದಾಸ್‌, ಸಾಮಾಜಿಕ ನ್ಯಾಯಕ್ಕಾಗಿ ಎಚ್ಚರದ ಕಣ್ಣಾಗಿದ್ದಾರೆ.


ಇದನ್ನೂ ಓದಿರಿ: ತಾಂಜೇನಿಯಾ ಲೇಖಕ ಅಬ್ದುಲ್ ರಜಾಕ್‌‌‌ ಅವರಿಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...