Homeಮುಖಪುಟತೋಂಟದ ಸಿದ್ಧಲಿಂಗಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಜಸ್ಟೀಸ್‌ ನಾಗಮೋಹನ ದಾಸ್‌‌ ಆಯ್ಕೆ

ತೋಂಟದ ಸಿದ್ಧಲಿಂಗಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಜಸ್ಟೀಸ್‌ ನಾಗಮೋಹನ ದಾಸ್‌‌ ಆಯ್ಕೆ

- Advertisement -
- Advertisement -

ಸಮ ಸಮಾಜದ ನಿರ್ಮಾಣಕ್ಕಾಗಿ ಜೀವನವಿಡೀ ಸೇವೆ ಸಲ್ಲಿಸಿದ ಗದುಗಿನ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಮೂರನೇ ವರ್ಷದ ಸ್ಮರಣೆ ಅಂಗವಾಗಿ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಪ್ರಶಸ್ತಿ ಪ್ರದಾನ, ಸಂಮಾನ ಗ್ರಂಥಗಳ ಬಿಡುಗಡೆ ಸಮಾರಂಭವನ್ನು ಅಕ್ಟೋಬರ್‌ 16ರಂದು ಹಮ್ಮಿಕೊಳ್ಳಲಾಗಿದ್ದು, ಜಸ್ಟೀಸ್‌ ಎಚ್‌.ಎನ್‌.ನಾಗಮೋಹನ ದಾಸ್ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅಕ್ಟೋಬರ್‌ 16ರಂದು ಗದಗದ ತೋಂಟದ ಸಿದ್ಧಲಿಂಗ ಸ್ವಾಮೀಜಿ ಶಿವಾನುಭವ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿ ಫಲಕದೊಂದಿಗೆ 5 ಲಕ್ಷ ರೂ. ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.

ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅವರು ಹುಟ್ಟಿದ್ದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಹೆಬ್ಬಣ್ಣಿ ಗ್ರಾಮದಲ್ಲಿ 1952ರ ಫೆಬ್ರವರಿ 12ರಂದು. ತಂದೆ ಸ್ವಾತಂತ್ರ್ಯ ಹೋರಾಟಗಾರ ಎಚ್.ಎನ್. ನಾಗಪ್ಪ. ತಾಯಿ ಪಾರ್ವತಮ್ಮ. ಬೆಂಗಳೂರು ವಿಶ್ವವಿದ್ಯಾನಿಯದಿಂದ ಕಾನೂನು ಪದವಿಯನ್ನು ನಾಗಮೋಹನ ದಾಸ್ ಅವರು ಪಡೆದು 1977ರಲ್ಲಿ ವಕೀಲಿ ವೃತ್ತಿ ಆರಂಭಿಸಿದರು. 2004ರ ಅಕ್ಟೋಬರ್‌ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕವಾಗಿ ಸೇವೆ ಸಲ್ಲಿಸಿದರು. 2014ರವರೆಗೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ, ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿಯಾಗಿರುವ ಜಸ್ಟೀಸ್ ದಾಸ್ ಅವರು, ನ್ಯಾಯದಾನ ಪರಿಕಲ್ಪನೆಗೆ ಹೊಸ ವಿಶ್ಲೇಷಣೆಗಳನ್ನು ಬರೆದವರು. ರಾಜ್ಯ ಸರಕಾರದ ಹಲವು ಆಯೋಗಗಳ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ ಖ್ಯಾತಿ ಅವರದ್ದು.

ಸಾಮಾಜಿಕ ನ್ಯಾಯದ ಬಹುದೊಡ್ಡ ದನಿಯಾಗಿರುವ ಜಸ್ಟೀಸ್ ದಾಸ್ ಹಲವು ಕೃತಿಗಳನ್ನು ಬರೆದಿದ್ದಾರೆ. ‘ಕರ್ನಾಟಕದಲ್ಲಿ ನ್ಯಾಯಾಂಗ’, ‘ಅಸ್ಪೃಶ್ಯತೆ ಮತ್ತು ಕಾನೂನು’, ‘ಅರಿವು ಬೆಳಕು’, ‘ಮಹಿಳಾ ಅಸಮಾನತೆ’, ‘ಡಾ.ಅಂಬೇಡ್ಕರ್‌ ಮತ್ತು ಕಾರ್ಮಿಕ ಕಾನೂನು’, ‘ಜಾಗತಿಕ ಧುರೀಣ ಅಂಬೇಡ್ಕರ್‌’, ‘ಮಾಧ್ಯಮದ ದಿಕ್ಕು ಎತ್ತ?’, ‘ಸಂವಿಧಾನ ಓದು’ ಕೃತಿಗಳು ಜನರಿಗೆ ಹೊಸ ದಿಕ್ಕು ತೋರಿವೆ.

‘ಸಂವಿಧಾನ ಓದು’ ಕೃತಿಯಂತೂ ಈ ದುರಿತ ಕಾಲದ ಹೊಸ ಬೆಳಕಾಗಿ, ದಾರಿ ದೀಪವಾಗಿ ತೋರಿ, ಒಂದು ಚಳವಳಿಯೇ ಆಗಿ ಮಾರ್ಪಾಡಾಯಿತು. ಸಂವಿಧಾನದ ಕುರಿತು ಜನಮಾನಸದಲ್ಲಿರುವ ತಪ್ಪು ಕಲ್ಪನೆಗಳನ್ನು ತೊಡೆದು ಹಾಕಲು ಜಸ್ಟೀಸ್ ದಾಸ್ ಅವರು ಅವಿರತವಾಗಿ ಶ್ರಮಿಸುತ್ತಿದ್ದಾರೆ.

ವಿದ್ಯಾರ್ಥಿ ದಿಸೆಯಿಂದಲೂ ಮುಂಚೂಣಿ ನಾಯಕರಾಗಿದ್ದವರು ಜಸ್ಟೀಸ್ ದಾಸ್. ಯುವಜನ ಸಂಘಟನೆಯ ರಾಜ್ಯಾಧ್ಯಕ್ಷರಾಗಿ, ವಕೀಲರ ವೇದಿಕೆಯ ಕಾರ್ಯದರ್ಶಿಯಾಗಿ, ವಕೀಲರ ಸಂಘದ ಮಹಾಕಾರ್ಯದರ್ಶಿಯಾಗಿ, ಅಖಿಲ ಭಾರತ ವಕೀಲರ ಸಂಘದ ಸಂಚಾಲಕರಾಗಿ, ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾಗಿ, ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜಾತಿ ಅಸಮಾನತೆ, ಲಿಂಗ ಅಸಮಾನತೆ, ಕೋಮುವಾದದ ವಿರುದ್ಧ ಸದಾ ಎಚ್ಚರದ ಕಣ್ಣಾಗಿರುವ ಜಸ್ಟೀಸ್ ದಾಸ್‌, ಸಾಮಾಜಿಕ ನ್ಯಾಯಕ್ಕಾಗಿ ಎಚ್ಚರದ ಕಣ್ಣಾಗಿದ್ದಾರೆ.


ಇದನ್ನೂ ಓದಿರಿ: ತಾಂಜೇನಿಯಾ ಲೇಖಕ ಅಬ್ದುಲ್ ರಜಾಕ್‌‌‌ ಅವರಿಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...