Homeಮುಖಪುಟತೋಂಟದ ಸಿದ್ಧಲಿಂಗಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಜಸ್ಟೀಸ್‌ ನಾಗಮೋಹನ ದಾಸ್‌‌ ಆಯ್ಕೆ

ತೋಂಟದ ಸಿದ್ಧಲಿಂಗಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಜಸ್ಟೀಸ್‌ ನಾಗಮೋಹನ ದಾಸ್‌‌ ಆಯ್ಕೆ

- Advertisement -
- Advertisement -

ಸಮ ಸಮಾಜದ ನಿರ್ಮಾಣಕ್ಕಾಗಿ ಜೀವನವಿಡೀ ಸೇವೆ ಸಲ್ಲಿಸಿದ ಗದುಗಿನ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಮೂರನೇ ವರ್ಷದ ಸ್ಮರಣೆ ಅಂಗವಾಗಿ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಪ್ರಶಸ್ತಿ ಪ್ರದಾನ, ಸಂಮಾನ ಗ್ರಂಥಗಳ ಬಿಡುಗಡೆ ಸಮಾರಂಭವನ್ನು ಅಕ್ಟೋಬರ್‌ 16ರಂದು ಹಮ್ಮಿಕೊಳ್ಳಲಾಗಿದ್ದು, ಜಸ್ಟೀಸ್‌ ಎಚ್‌.ಎನ್‌.ನಾಗಮೋಹನ ದಾಸ್ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅಕ್ಟೋಬರ್‌ 16ರಂದು ಗದಗದ ತೋಂಟದ ಸಿದ್ಧಲಿಂಗ ಸ್ವಾಮೀಜಿ ಶಿವಾನುಭವ ಮಂಟಪದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಶಸ್ತಿ ಫಲಕದೊಂದಿಗೆ 5 ಲಕ್ಷ ರೂ. ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.

ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಅವರು ಹುಟ್ಟಿದ್ದು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಹೆಬ್ಬಣ್ಣಿ ಗ್ರಾಮದಲ್ಲಿ 1952ರ ಫೆಬ್ರವರಿ 12ರಂದು. ತಂದೆ ಸ್ವಾತಂತ್ರ್ಯ ಹೋರಾಟಗಾರ ಎಚ್.ಎನ್. ನಾಗಪ್ಪ. ತಾಯಿ ಪಾರ್ವತಮ್ಮ. ಬೆಂಗಳೂರು ವಿಶ್ವವಿದ್ಯಾನಿಯದಿಂದ ಕಾನೂನು ಪದವಿಯನ್ನು ನಾಗಮೋಹನ ದಾಸ್ ಅವರು ಪಡೆದು 1977ರಲ್ಲಿ ವಕೀಲಿ ವೃತ್ತಿ ಆರಂಭಿಸಿದರು. 2004ರ ಅಕ್ಟೋಬರ್‌ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕವಾಗಿ ಸೇವೆ ಸಲ್ಲಿಸಿದರು. 2014ರವರೆಗೆ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ, ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯವಾದಿಯಾಗಿರುವ ಜಸ್ಟೀಸ್ ದಾಸ್ ಅವರು, ನ್ಯಾಯದಾನ ಪರಿಕಲ್ಪನೆಗೆ ಹೊಸ ವಿಶ್ಲೇಷಣೆಗಳನ್ನು ಬರೆದವರು. ರಾಜ್ಯ ಸರಕಾರದ ಹಲವು ಆಯೋಗಗಳ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ ಖ್ಯಾತಿ ಅವರದ್ದು.

ಸಾಮಾಜಿಕ ನ್ಯಾಯದ ಬಹುದೊಡ್ಡ ದನಿಯಾಗಿರುವ ಜಸ್ಟೀಸ್ ದಾಸ್ ಹಲವು ಕೃತಿಗಳನ್ನು ಬರೆದಿದ್ದಾರೆ. ‘ಕರ್ನಾಟಕದಲ್ಲಿ ನ್ಯಾಯಾಂಗ’, ‘ಅಸ್ಪೃಶ್ಯತೆ ಮತ್ತು ಕಾನೂನು’, ‘ಅರಿವು ಬೆಳಕು’, ‘ಮಹಿಳಾ ಅಸಮಾನತೆ’, ‘ಡಾ.ಅಂಬೇಡ್ಕರ್‌ ಮತ್ತು ಕಾರ್ಮಿಕ ಕಾನೂನು’, ‘ಜಾಗತಿಕ ಧುರೀಣ ಅಂಬೇಡ್ಕರ್‌’, ‘ಮಾಧ್ಯಮದ ದಿಕ್ಕು ಎತ್ತ?’, ‘ಸಂವಿಧಾನ ಓದು’ ಕೃತಿಗಳು ಜನರಿಗೆ ಹೊಸ ದಿಕ್ಕು ತೋರಿವೆ.

‘ಸಂವಿಧಾನ ಓದು’ ಕೃತಿಯಂತೂ ಈ ದುರಿತ ಕಾಲದ ಹೊಸ ಬೆಳಕಾಗಿ, ದಾರಿ ದೀಪವಾಗಿ ತೋರಿ, ಒಂದು ಚಳವಳಿಯೇ ಆಗಿ ಮಾರ್ಪಾಡಾಯಿತು. ಸಂವಿಧಾನದ ಕುರಿತು ಜನಮಾನಸದಲ್ಲಿರುವ ತಪ್ಪು ಕಲ್ಪನೆಗಳನ್ನು ತೊಡೆದು ಹಾಕಲು ಜಸ್ಟೀಸ್ ದಾಸ್ ಅವರು ಅವಿರತವಾಗಿ ಶ್ರಮಿಸುತ್ತಿದ್ದಾರೆ.

ವಿದ್ಯಾರ್ಥಿ ದಿಸೆಯಿಂದಲೂ ಮುಂಚೂಣಿ ನಾಯಕರಾಗಿದ್ದವರು ಜಸ್ಟೀಸ್ ದಾಸ್. ಯುವಜನ ಸಂಘಟನೆಯ ರಾಜ್ಯಾಧ್ಯಕ್ಷರಾಗಿ, ವಕೀಲರ ವೇದಿಕೆಯ ಕಾರ್ಯದರ್ಶಿಯಾಗಿ, ವಕೀಲರ ಸಂಘದ ಮಹಾಕಾರ್ಯದರ್ಶಿಯಾಗಿ, ಅಖಿಲ ಭಾರತ ವಕೀಲರ ಸಂಘದ ಸಂಚಾಲಕರಾಗಿ, ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾಗಿ, ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜಾತಿ ಅಸಮಾನತೆ, ಲಿಂಗ ಅಸಮಾನತೆ, ಕೋಮುವಾದದ ವಿರುದ್ಧ ಸದಾ ಎಚ್ಚರದ ಕಣ್ಣಾಗಿರುವ ಜಸ್ಟೀಸ್ ದಾಸ್‌, ಸಾಮಾಜಿಕ ನ್ಯಾಯಕ್ಕಾಗಿ ಎಚ್ಚರದ ಕಣ್ಣಾಗಿದ್ದಾರೆ.


ಇದನ್ನೂ ಓದಿರಿ: ತಾಂಜೇನಿಯಾ ಲೇಖಕ ಅಬ್ದುಲ್ ರಜಾಕ್‌‌‌ ಅವರಿಗೆ ನೊಬೆಲ್ ಸಾಹಿತ್ಯ ಪ್ರಶಸ್ತಿ-2021

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...