Homeಮುಖಪುಟಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ನಾಗರತ್ನ ಭಿನ್ನಾಭಿಪ್ರಾಯ

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ನಾಗರತ್ನ ಭಿನ್ನಾಭಿಪ್ರಾಯ

- Advertisement -
- Advertisement -

ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಾಂಚೋಲಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ (ಆ.25) ಶಿಫಾರಸು ಮಾಡಿರುವುದು ‘ಸರ್ವಾನುಮತ ತೀರ್ಮಾನವಲ್ಲ’ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೊಲಿಜಿಯಂನ ಐವರು ನ್ಯಾಯಾಧೀಶರಲ್ಲಿ ಒಬ್ಬರಾದ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು ನ್ಯಾಯಮೂರ್ತಿ ಪಾಂಚೋಲಿ ಅವರನ್ನು ಶಿಫಾರಸು ಮಾಡುವುದಕ್ಕೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ನಾಗರತ್ನ ಅವರು ಹಿರಿತನ ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಕಾರಣ ಉಲ್ಲೇಖಿಸಿದ್ದಾರೆ. ಏಕೆಂದರೆ, ಹೈಕೋರ್ಟ್ ನ್ಯಾಯಾಧೀಶರ ಹಿರಿತನದ ಅಖಿಲ ಭಾರತ ಪಟ್ಟಿಯಲ್ಲಿ ನ್ಯಾಯಮೂರ್ತಿ ಪಾಂಚೋಲಿ ಪ್ರಸ್ತುತ 57ನೇ ಸ್ಥಾನದಲ್ಲಿದ್ದಾರೆ ಎಂದು ವರದಿ ವಿವರಿಸಿದೆ.

ಸಿಜೆಐ ಬಿಆರ್ ಗವಾಯಿ ಅವರ ಜೊತೆಗೆ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಜೆ.ಕೆ ಮಹೇಶ್ವರಿ ಮತ್ತು ಬಿ.ವಿ ನಾಗರತ್ನ ಅವರು ಸುಪ್ರೀಂ ಕೋರ್ಟ್ ಕೊಲಿಜಿಯಂನ ಸದಸ್ಯರಾಗಿದ್ದಾರೆ.

ಅಖಿಲ ಭಾರತ ಮಟ್ಟದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರ ಸಂಯೋಜಿತ ಹಿರಿತನ, ಪ್ರಾತಿನಿಧ್ಯದ ತತ್ವ, ಅರ್ಹತೆ ಮತ್ತು ಸಮಗ್ರತೆ’ ಎಂಬ ಮೂರು ಅಂಶಗಳನ್ನು ಸುಪ್ರೀಂ ಕೋರ್ಟ್ ತನ್ನ ಆಯ್ಕೆಯ ಮಾನದಂಡವಾಗಿ ಅನುಸರಿಸುತ್ತದೆ.

ಈ ಹಿಂದೆ, ಈ ಅಂಶಗಳನ್ನು ‘ಸಮತೋಲನ’ಪಡಿಸಿ ಹೈಕೋರ್ಟ್ ನ್ಯಾಯಮೂರ್ತಿಯ ನೇಮಕಕ್ಕೆ ಶಿಫಾರಸು ಮಾಡಲಾಗುತ್ತಿತ್ತು. ವಿಶೇಷವಾಗಿ, ಮುಖ್ಯ ನ್ಯಾಯಮೂರ್ತಿಯಾಗುವ ಸಾಧ್ಯತೆ ಇರುವ ಅಭ್ಯರ್ಥಿಗಳ ನೇಮಕದಲ್ಲಿ, ಉತ್ತರಾಧಿಕಾರವನ್ನು (line of succession) ಖಚಿತಪಡಿಸಲು ಹಿರಿತನವನ್ನು (seniority) ಕಡೆಗಣಿಸಲಾಗುತ್ತಿತ್ತು.

ಪ್ರಾದೇಶಿಕ ಸಮತೋಲನ

ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡಿದ ಮೂರು ತಿಂಗಳೊಳಗೆ, ಅದೇ ಹೈಕೋರ್ಟ್‌ನಿಂದ ಮತ್ತೊಬ್ಬರು ನ್ಯಾಯಾಧೀಶರನ್ನು ಶಿಫಾರಸು ಮಾಡುವುದಕ್ಕೆ ನ್ಯಾಯಮೂರ್ತಿ ನಾಗರತ್ನ ಅವರು ಭಿನ್ನಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.

ಮೇ ತಿಂಗಳಲ್ಲಿ, ನ್ಯಾಯಮೂರ್ತಿ ಪಾಂಚೋಲಿ ಅವರಿಗೆ ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡುವ ಬಗ್ಗೆ ಚರ್ಚೆ ಶುರುವಾಗಿತ್ತು. ಆಗ ಸುಪ್ರೀಂ ಕೋರ್ಟ್ ಕೊಲಿಜಿಯಂನ ಕನಿಷ್ಠ ಇಬ್ಬರು ನ್ಯಾಯಾಧೀಶರು ಪಾಂಚೋಲಿಯವರ ಹಿರಿತನದ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಅಂಜಾರಿಯಾ ಸೇರಿದಂತೆ ಹಿರಿಯರನ್ನು ಈ ನೇಮಕ ಬೈಪಾಸ್ ಮಾಡಲಿದೆ ಎಂದಿದ್ದರು.

ಹಿರಿತನದ ಬಗ್ಗೆ ಇರುವ ಕಳವಳಗಳನ್ನು ಪರಿಹರಿಸಲು, ಕೊಲಿಜಿಯಂ ಪಾಂಚೋಲಿ ಬದಲಿಗೆ ಹಿರಿಯರಾದ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿತ್ತು. ಪಾಂಚೋಲಿ ಅವರನ್ನು ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಿತ್ತು.

ಆ ಬಳಿಕ ಇದೀಗ ಪಾಂಚೋಲಿಯವರ ಹೆಸರು ಮತ್ತೆ ಪ್ರಸ್ತಾಪವಾಗಿರುವುದರಿಂದ ನ್ಯಾಯಮೂರ್ತಿ ನಾಗರತ್ನ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆಂದು ತಿಳಿದುಬಂದಿದೆ. ಈ ಬಾರಿ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್‌ನ ಅತಿಯಾದ ಪ್ರಾತಿನಿಧ್ಯವನ್ನು ನಾಗರತ್ನ ಅವರು ಕೇಂದ್ರೀಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ನ್ಯಾಯಮೂರ್ತಿ ಪಾಂಚೋಲಿ ಅವರನ್ನು ನೇಮಿಸಿದರೆ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ, ಅಂಜಾರಿಯಾ ಮತ್ತು ಪಾಂಚೋಲಿ ಸೇರಿ ಗುಜರಾತ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರನ್ನು ಹೊಂದಲಿದೆ. ನ್ಯಾಯಮೂರ್ತಿಗಳಾದ ಪಾರ್ದಿವಾಲಾ ಮತ್ತು ಪಾಂಚೋಲಿ ಇಬ್ಬರೂ 2028ರಲ್ಲಿ ಕ್ರಮವಾಗಿ ಎರಡು ವರ್ಷಗಳ ಅವಧಿಗೆ ಮತ್ತು 2031ರಲ್ಲಿ ಏಳು ತಿಂಗಳ ಅವಧಿಗೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಳ್ಳಲಿದ್ದಾರೆ.

ಮೇ ತಿಂಗಳವರೆಗೆ, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ, ಎಂ.ಆರ್. ಶಾ ಮತ್ತು ಬೇಲಾ ಎಂ ತ್ರಿವೇದಿ ಸೇರಿ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರು ಇದ್ದರು. ನ್ಯಾಯಮೂರ್ತಿ ಶಾ ಮೇ ತಿಂಗಳಲ್ಲಿ ನಿವೃತ್ತರಾದರೆ, ನ್ಯಾಯಮೂರ್ತಿ ತ್ರಿವೇದಿ ಅವರು ಮೇ 16ರಂದು ನಿವೃತ್ತಿ ಹೊಂದಿದ್ದಾರೆ. ಬಾಂಬೆ ಹೈಕೋರ್ಟ್, ಅಲಹಾಬಾದ್ ಹೈಕೋರ್ಟ್, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದ ತಲಾ ಮೂವರು ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ನಲ್ಲಿದ್ದಾರೆ.

ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದ್ದು, ಸಾಕಷ್ಟು ಪ್ರಾದೇಶಿಕ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪ್ರತಿ ಹೈಕೋರ್ಟ್‌ನ ಅನುಮೋದಿತ ಬಲವನ್ನು ಪರಿಗಣಿಸಲಾಗುತ್ತದೆ. ನ್ಯಾಯಮೂರ್ತಿ ನಾಗರತ್ನ ಅವರ ಕಳವಳಗಳು ಸುಪ್ರೀಂ ಕೋರ್ಟ್‌ನಲ್ಲಿ ಇತರ ಹೈಕೋರ್ಟ್‌ಗಳ ಕಡಿಮೆ ಪ್ರಾತಿನಿಧ್ಯವನ್ನು ಪ್ರತಿಬಿಂಬಿಸುತ್ತವೆ.

ಉದಾಹರಣೆಗೆ : 52 ನ್ಯಾಯಾಧೀಶರ ಅನುಮೋದಿತ ಬಲವಿರುವ ಗುಜರಾತ್ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ನಲ್ಲಿ ಮೂವರು ನ್ಯಾಯಾಧೀಶರಿದ್ದಾರೆ. ಆದರೆ, 160 ಅನುಮೋದಿತ ನ್ಯಾಯಾಧೀಶರ ಬಲ ಇರುವ ಅಲಹಾಬಾದ್‌ ಹೈಕೋರ್ಟ್‌, 94 ಬಲ ಇರುವ ಬಾಂಬೆ ಹೈಕೋರ್ಟ್‌ ಹಾಗೂ 85 ಬಲ ಇರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದಲೂ ಮೂವರೇ ಇದ್ದಾರೆ. ಇನ್ನು 75 ಬಲ ಇರುವ ಮದ್ರಾಸ್ ಹೈಕೋರ್ಟ್ ಮತ್ತು 72 ಬಲ ಇರುವ ಕಲ್ಕತ್ತಾ ಹೈಕೋರ್ಟ್‌ನಿಂದ ತಲಾ ಇಬ್ಬರು ನ್ಯಾಯಾಧೀಶರು ಇದ್ದಾರೆ.

ನುಸುಳುಕೋರರೆಂಬ ಆರೋಪ: 36 ಜನರನ್ನು ಬಾಂಗ್ಲಾದೇಶದ ಗಡಿಗೆ ತಳ್ಳಿದ ಅಸ್ಸಾಂ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...