Homeಮುಖಪುಟಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ನಾಗರತ್ನ ಭಿನ್ನಾಭಿಪ್ರಾಯ

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ನಾಗರತ್ನ ಭಿನ್ನಾಭಿಪ್ರಾಯ

- Advertisement -
- Advertisement -

ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಾಂಚೋಲಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ (ಆ.25) ಶಿಫಾರಸು ಮಾಡಿರುವುದು ‘ಸರ್ವಾನುಮತ ತೀರ್ಮಾನವಲ್ಲ’ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೊಲಿಜಿಯಂನ ಐವರು ನ್ಯಾಯಾಧೀಶರಲ್ಲಿ ಒಬ್ಬರಾದ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು ನ್ಯಾಯಮೂರ್ತಿ ಪಾಂಚೋಲಿ ಅವರನ್ನು ಶಿಫಾರಸು ಮಾಡುವುದಕ್ಕೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ನಾಗರತ್ನ ಅವರು ಹಿರಿತನ ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಕಾರಣ ಉಲ್ಲೇಖಿಸಿದ್ದಾರೆ. ಏಕೆಂದರೆ, ಹೈಕೋರ್ಟ್ ನ್ಯಾಯಾಧೀಶರ ಹಿರಿತನದ ಅಖಿಲ ಭಾರತ ಪಟ್ಟಿಯಲ್ಲಿ ನ್ಯಾಯಮೂರ್ತಿ ಪಾಂಚೋಲಿ ಪ್ರಸ್ತುತ 57ನೇ ಸ್ಥಾನದಲ್ಲಿದ್ದಾರೆ ಎಂದು ವರದಿ ವಿವರಿಸಿದೆ.

ಸಿಜೆಐ ಬಿಆರ್ ಗವಾಯಿ ಅವರ ಜೊತೆಗೆ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಜೆ.ಕೆ ಮಹೇಶ್ವರಿ ಮತ್ತು ಬಿ.ವಿ ನಾಗರತ್ನ ಅವರು ಸುಪ್ರೀಂ ಕೋರ್ಟ್ ಕೊಲಿಜಿಯಂನ ಸದಸ್ಯರಾಗಿದ್ದಾರೆ.

ಅಖಿಲ ಭಾರತ ಮಟ್ಟದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರ ಸಂಯೋಜಿತ ಹಿರಿತನ, ಪ್ರಾತಿನಿಧ್ಯದ ತತ್ವ, ಅರ್ಹತೆ ಮತ್ತು ಸಮಗ್ರತೆ’ ಎಂಬ ಮೂರು ಅಂಶಗಳನ್ನು ಸುಪ್ರೀಂ ಕೋರ್ಟ್ ತನ್ನ ಆಯ್ಕೆಯ ಮಾನದಂಡವಾಗಿ ಅನುಸರಿಸುತ್ತದೆ.

ಈ ಹಿಂದೆ, ಈ ಅಂಶಗಳನ್ನು ‘ಸಮತೋಲನ’ಪಡಿಸಿ ಹೈಕೋರ್ಟ್ ನ್ಯಾಯಮೂರ್ತಿಯ ನೇಮಕಕ್ಕೆ ಶಿಫಾರಸು ಮಾಡಲಾಗುತ್ತಿತ್ತು. ವಿಶೇಷವಾಗಿ, ಮುಖ್ಯ ನ್ಯಾಯಮೂರ್ತಿಯಾಗುವ ಸಾಧ್ಯತೆ ಇರುವ ಅಭ್ಯರ್ಥಿಗಳ ನೇಮಕದಲ್ಲಿ, ಉತ್ತರಾಧಿಕಾರವನ್ನು (line of succession) ಖಚಿತಪಡಿಸಲು ಹಿರಿತನವನ್ನು (seniority) ಕಡೆಗಣಿಸಲಾಗುತ್ತಿತ್ತು.

ಪ್ರಾದೇಶಿಕ ಸಮತೋಲನ

ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡಿದ ಮೂರು ತಿಂಗಳೊಳಗೆ, ಅದೇ ಹೈಕೋರ್ಟ್‌ನಿಂದ ಮತ್ತೊಬ್ಬರು ನ್ಯಾಯಾಧೀಶರನ್ನು ಶಿಫಾರಸು ಮಾಡುವುದಕ್ಕೆ ನ್ಯಾಯಮೂರ್ತಿ ನಾಗರತ್ನ ಅವರು ಭಿನ್ನಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.

ಮೇ ತಿಂಗಳಲ್ಲಿ, ನ್ಯಾಯಮೂರ್ತಿ ಪಾಂಚೋಲಿ ಅವರಿಗೆ ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡುವ ಬಗ್ಗೆ ಚರ್ಚೆ ಶುರುವಾಗಿತ್ತು. ಆಗ ಸುಪ್ರೀಂ ಕೋರ್ಟ್ ಕೊಲಿಜಿಯಂನ ಕನಿಷ್ಠ ಇಬ್ಬರು ನ್ಯಾಯಾಧೀಶರು ಪಾಂಚೋಲಿಯವರ ಹಿರಿತನದ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಅಂಜಾರಿಯಾ ಸೇರಿದಂತೆ ಹಿರಿಯರನ್ನು ಈ ನೇಮಕ ಬೈಪಾಸ್ ಮಾಡಲಿದೆ ಎಂದಿದ್ದರು.

ಹಿರಿತನದ ಬಗ್ಗೆ ಇರುವ ಕಳವಳಗಳನ್ನು ಪರಿಹರಿಸಲು, ಕೊಲಿಜಿಯಂ ಪಾಂಚೋಲಿ ಬದಲಿಗೆ ಹಿರಿಯರಾದ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿತ್ತು. ಪಾಂಚೋಲಿ ಅವರನ್ನು ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಿತ್ತು.

ಆ ಬಳಿಕ ಇದೀಗ ಪಾಂಚೋಲಿಯವರ ಹೆಸರು ಮತ್ತೆ ಪ್ರಸ್ತಾಪವಾಗಿರುವುದರಿಂದ ನ್ಯಾಯಮೂರ್ತಿ ನಾಗರತ್ನ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆಂದು ತಿಳಿದುಬಂದಿದೆ. ಈ ಬಾರಿ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್‌ನ ಅತಿಯಾದ ಪ್ರಾತಿನಿಧ್ಯವನ್ನು ನಾಗರತ್ನ ಅವರು ಕೇಂದ್ರೀಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ನ್ಯಾಯಮೂರ್ತಿ ಪಾಂಚೋಲಿ ಅವರನ್ನು ನೇಮಿಸಿದರೆ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ, ಅಂಜಾರಿಯಾ ಮತ್ತು ಪಾಂಚೋಲಿ ಸೇರಿ ಗುಜರಾತ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರನ್ನು ಹೊಂದಲಿದೆ. ನ್ಯಾಯಮೂರ್ತಿಗಳಾದ ಪಾರ್ದಿವಾಲಾ ಮತ್ತು ಪಾಂಚೋಲಿ ಇಬ್ಬರೂ 2028ರಲ್ಲಿ ಕ್ರಮವಾಗಿ ಎರಡು ವರ್ಷಗಳ ಅವಧಿಗೆ ಮತ್ತು 2031ರಲ್ಲಿ ಏಳು ತಿಂಗಳ ಅವಧಿಗೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಳ್ಳಲಿದ್ದಾರೆ.

ಮೇ ತಿಂಗಳವರೆಗೆ, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ, ಎಂ.ಆರ್. ಶಾ ಮತ್ತು ಬೇಲಾ ಎಂ ತ್ರಿವೇದಿ ಸೇರಿ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರು ಇದ್ದರು. ನ್ಯಾಯಮೂರ್ತಿ ಶಾ ಮೇ ತಿಂಗಳಲ್ಲಿ ನಿವೃತ್ತರಾದರೆ, ನ್ಯಾಯಮೂರ್ತಿ ತ್ರಿವೇದಿ ಅವರು ಮೇ 16ರಂದು ನಿವೃತ್ತಿ ಹೊಂದಿದ್ದಾರೆ. ಬಾಂಬೆ ಹೈಕೋರ್ಟ್, ಅಲಹಾಬಾದ್ ಹೈಕೋರ್ಟ್, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದ ತಲಾ ಮೂವರು ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ನಲ್ಲಿದ್ದಾರೆ.

ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದ್ದು, ಸಾಕಷ್ಟು ಪ್ರಾದೇಶಿಕ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪ್ರತಿ ಹೈಕೋರ್ಟ್‌ನ ಅನುಮೋದಿತ ಬಲವನ್ನು ಪರಿಗಣಿಸಲಾಗುತ್ತದೆ. ನ್ಯಾಯಮೂರ್ತಿ ನಾಗರತ್ನ ಅವರ ಕಳವಳಗಳು ಸುಪ್ರೀಂ ಕೋರ್ಟ್‌ನಲ್ಲಿ ಇತರ ಹೈಕೋರ್ಟ್‌ಗಳ ಕಡಿಮೆ ಪ್ರಾತಿನಿಧ್ಯವನ್ನು ಪ್ರತಿಬಿಂಬಿಸುತ್ತವೆ.

ಉದಾಹರಣೆಗೆ : 52 ನ್ಯಾಯಾಧೀಶರ ಅನುಮೋದಿತ ಬಲವಿರುವ ಗುಜರಾತ್ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ನಲ್ಲಿ ಮೂವರು ನ್ಯಾಯಾಧೀಶರಿದ್ದಾರೆ. ಆದರೆ, 160 ಅನುಮೋದಿತ ನ್ಯಾಯಾಧೀಶರ ಬಲ ಇರುವ ಅಲಹಾಬಾದ್‌ ಹೈಕೋರ್ಟ್‌, 94 ಬಲ ಇರುವ ಬಾಂಬೆ ಹೈಕೋರ್ಟ್‌ ಹಾಗೂ 85 ಬಲ ಇರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದಲೂ ಮೂವರೇ ಇದ್ದಾರೆ. ಇನ್ನು 75 ಬಲ ಇರುವ ಮದ್ರಾಸ್ ಹೈಕೋರ್ಟ್ ಮತ್ತು 72 ಬಲ ಇರುವ ಕಲ್ಕತ್ತಾ ಹೈಕೋರ್ಟ್‌ನಿಂದ ತಲಾ ಇಬ್ಬರು ನ್ಯಾಯಾಧೀಶರು ಇದ್ದಾರೆ.

ನುಸುಳುಕೋರರೆಂಬ ಆರೋಪ: 36 ಜನರನ್ನು ಬಾಂಗ್ಲಾದೇಶದ ಗಡಿಗೆ ತಳ್ಳಿದ ಅಸ್ಸಾಂ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...