Homeಮುಖಪುಟಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ನಾಗರತ್ನ ಭಿನ್ನಾಭಿಪ್ರಾಯ

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ನಾಗರತ್ನ ಭಿನ್ನಾಭಿಪ್ರಾಯ

- Advertisement -
- Advertisement -

ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಪುಲ್ ಮನುಭಾಯಿ ಪಾಂಚೋಲಿ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಿಸಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ (ಆ.25) ಶಿಫಾರಸು ಮಾಡಿರುವುದು ‘ಸರ್ವಾನುಮತ ತೀರ್ಮಾನವಲ್ಲ’ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೊಲಿಜಿಯಂನ ಐವರು ನ್ಯಾಯಾಧೀಶರಲ್ಲಿ ಒಬ್ಬರಾದ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು ನ್ಯಾಯಮೂರ್ತಿ ಪಾಂಚೋಲಿ ಅವರನ್ನು ಶಿಫಾರಸು ಮಾಡುವುದಕ್ಕೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ನಾಗರತ್ನ ಅವರು ಹಿರಿತನ ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಕಾರಣ ಉಲ್ಲೇಖಿಸಿದ್ದಾರೆ. ಏಕೆಂದರೆ, ಹೈಕೋರ್ಟ್ ನ್ಯಾಯಾಧೀಶರ ಹಿರಿತನದ ಅಖಿಲ ಭಾರತ ಪಟ್ಟಿಯಲ್ಲಿ ನ್ಯಾಯಮೂರ್ತಿ ಪಾಂಚೋಲಿ ಪ್ರಸ್ತುತ 57ನೇ ಸ್ಥಾನದಲ್ಲಿದ್ದಾರೆ ಎಂದು ವರದಿ ವಿವರಿಸಿದೆ.

ಸಿಜೆಐ ಬಿಆರ್ ಗವಾಯಿ ಅವರ ಜೊತೆಗೆ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ವಿಕ್ರಮ್ ನಾಥ್, ಜೆ.ಕೆ ಮಹೇಶ್ವರಿ ಮತ್ತು ಬಿ.ವಿ ನಾಗರತ್ನ ಅವರು ಸುಪ್ರೀಂ ಕೋರ್ಟ್ ಕೊಲಿಜಿಯಂನ ಸದಸ್ಯರಾಗಿದ್ದಾರೆ.

ಅಖಿಲ ಭಾರತ ಮಟ್ಟದಲ್ಲಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಹೈಕೋರ್ಟ್‌ಗಳ ನ್ಯಾಯಾಧೀಶರ ಸಂಯೋಜಿತ ಹಿರಿತನ, ಪ್ರಾತಿನಿಧ್ಯದ ತತ್ವ, ಅರ್ಹತೆ ಮತ್ತು ಸಮಗ್ರತೆ’ ಎಂಬ ಮೂರು ಅಂಶಗಳನ್ನು ಸುಪ್ರೀಂ ಕೋರ್ಟ್ ತನ್ನ ಆಯ್ಕೆಯ ಮಾನದಂಡವಾಗಿ ಅನುಸರಿಸುತ್ತದೆ.

ಈ ಹಿಂದೆ, ಈ ಅಂಶಗಳನ್ನು ‘ಸಮತೋಲನ’ಪಡಿಸಿ ಹೈಕೋರ್ಟ್ ನ್ಯಾಯಮೂರ್ತಿಯ ನೇಮಕಕ್ಕೆ ಶಿಫಾರಸು ಮಾಡಲಾಗುತ್ತಿತ್ತು. ವಿಶೇಷವಾಗಿ, ಮುಖ್ಯ ನ್ಯಾಯಮೂರ್ತಿಯಾಗುವ ಸಾಧ್ಯತೆ ಇರುವ ಅಭ್ಯರ್ಥಿಗಳ ನೇಮಕದಲ್ಲಿ, ಉತ್ತರಾಧಿಕಾರವನ್ನು (line of succession) ಖಚಿತಪಡಿಸಲು ಹಿರಿತನವನ್ನು (seniority) ಕಡೆಗಣಿಸಲಾಗುತ್ತಿತ್ತು.

ಪ್ರಾದೇಶಿಕ ಸಮತೋಲನ

ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ನೇಮಕ ಮಾಡಿದ ಮೂರು ತಿಂಗಳೊಳಗೆ, ಅದೇ ಹೈಕೋರ್ಟ್‌ನಿಂದ ಮತ್ತೊಬ್ಬರು ನ್ಯಾಯಾಧೀಶರನ್ನು ಶಿಫಾರಸು ಮಾಡುವುದಕ್ಕೆ ನ್ಯಾಯಮೂರ್ತಿ ನಾಗರತ್ನ ಅವರು ಭಿನ್ನಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.

ಮೇ ತಿಂಗಳಲ್ಲಿ, ನ್ಯಾಯಮೂರ್ತಿ ಪಾಂಚೋಲಿ ಅವರಿಗೆ ಸುಪ್ರೀಂ ಕೋರ್ಟ್‌ಗೆ ಬಡ್ತಿ ನೀಡುವ ಬಗ್ಗೆ ಚರ್ಚೆ ಶುರುವಾಗಿತ್ತು. ಆಗ ಸುಪ್ರೀಂ ಕೋರ್ಟ್ ಕೊಲಿಜಿಯಂನ ಕನಿಷ್ಠ ಇಬ್ಬರು ನ್ಯಾಯಾಧೀಶರು ಪಾಂಚೋಲಿಯವರ ಹಿರಿತನದ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಗುಜರಾತ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಅಂಜಾರಿಯಾ ಸೇರಿದಂತೆ ಹಿರಿಯರನ್ನು ಈ ನೇಮಕ ಬೈಪಾಸ್ ಮಾಡಲಿದೆ ಎಂದಿದ್ದರು.

ಹಿರಿತನದ ಬಗ್ಗೆ ಇರುವ ಕಳವಳಗಳನ್ನು ಪರಿಹರಿಸಲು, ಕೊಲಿಜಿಯಂ ಪಾಂಚೋಲಿ ಬದಲಿಗೆ ಹಿರಿಯರಾದ ಅಂಜಾರಿಯಾ ಅವರನ್ನು ಸುಪ್ರೀಂ ಕೋರ್ಟ್‌ಗೆ ಶಿಫಾರಸು ಮಾಡಿತ್ತು. ಪಾಂಚೋಲಿ ಅವರನ್ನು ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಿತ್ತು.

ಆ ಬಳಿಕ ಇದೀಗ ಪಾಂಚೋಲಿಯವರ ಹೆಸರು ಮತ್ತೆ ಪ್ರಸ್ತಾಪವಾಗಿರುವುದರಿಂದ ನ್ಯಾಯಮೂರ್ತಿ ನಾಗರತ್ನ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆಂದು ತಿಳಿದುಬಂದಿದೆ. ಈ ಬಾರಿ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್‌ನ ಅತಿಯಾದ ಪ್ರಾತಿನಿಧ್ಯವನ್ನು ನಾಗರತ್ನ ಅವರು ಕೇಂದ್ರೀಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ನ್ಯಾಯಮೂರ್ತಿ ಪಾಂಚೋಲಿ ಅವರನ್ನು ನೇಮಿಸಿದರೆ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ, ಅಂಜಾರಿಯಾ ಮತ್ತು ಪಾಂಚೋಲಿ ಸೇರಿ ಗುಜರಾತ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರನ್ನು ಹೊಂದಲಿದೆ. ನ್ಯಾಯಮೂರ್ತಿಗಳಾದ ಪಾರ್ದಿವಾಲಾ ಮತ್ತು ಪಾಂಚೋಲಿ ಇಬ್ಬರೂ 2028ರಲ್ಲಿ ಕ್ರಮವಾಗಿ ಎರಡು ವರ್ಷಗಳ ಅವಧಿಗೆ ಮತ್ತು 2031ರಲ್ಲಿ ಏಳು ತಿಂಗಳ ಅವಧಿಗೆ ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಳ್ಳಲಿದ್ದಾರೆ.

ಮೇ ತಿಂಗಳವರೆಗೆ, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದಿವಾಲಾ, ಎಂ.ಆರ್. ಶಾ ಮತ್ತು ಬೇಲಾ ಎಂ ತ್ರಿವೇದಿ ಸೇರಿ ಸುಪ್ರೀಂ ಕೋರ್ಟ್‌ನಲ್ಲಿ ಗುಜರಾತ್ ಹೈಕೋರ್ಟ್‌ನ ಮೂವರು ನ್ಯಾಯಾಧೀಶರು ಇದ್ದರು. ನ್ಯಾಯಮೂರ್ತಿ ಶಾ ಮೇ ತಿಂಗಳಲ್ಲಿ ನಿವೃತ್ತರಾದರೆ, ನ್ಯಾಯಮೂರ್ತಿ ತ್ರಿವೇದಿ ಅವರು ಮೇ 16ರಂದು ನಿವೃತ್ತಿ ಹೊಂದಿದ್ದಾರೆ. ಬಾಂಬೆ ಹೈಕೋರ್ಟ್, ಅಲಹಾಬಾದ್ ಹೈಕೋರ್ಟ್, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದ ತಲಾ ಮೂವರು ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ನಲ್ಲಿದ್ದಾರೆ.

ಸುಪ್ರೀಂ ಕೋರ್ಟ್ 34 ನ್ಯಾಯಾಧೀಶರ ಅನುಮೋದಿತ ಬಲವನ್ನು ಹೊಂದಿದ್ದು, ಸಾಕಷ್ಟು ಪ್ರಾದೇಶಿಕ ಪ್ರಾತಿನಿಧ್ಯವನ್ನು ಖಚಿತಪಡಿಸಿಕೊಳ್ಳಲು ಪ್ರತಿ ಹೈಕೋರ್ಟ್‌ನ ಅನುಮೋದಿತ ಬಲವನ್ನು ಪರಿಗಣಿಸಲಾಗುತ್ತದೆ. ನ್ಯಾಯಮೂರ್ತಿ ನಾಗರತ್ನ ಅವರ ಕಳವಳಗಳು ಸುಪ್ರೀಂ ಕೋರ್ಟ್‌ನಲ್ಲಿ ಇತರ ಹೈಕೋರ್ಟ್‌ಗಳ ಕಡಿಮೆ ಪ್ರಾತಿನಿಧ್ಯವನ್ನು ಪ್ರತಿಬಿಂಬಿಸುತ್ತವೆ.

ಉದಾಹರಣೆಗೆ : 52 ನ್ಯಾಯಾಧೀಶರ ಅನುಮೋದಿತ ಬಲವಿರುವ ಗುಜರಾತ್ ಹೈಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ನಲ್ಲಿ ಮೂವರು ನ್ಯಾಯಾಧೀಶರಿದ್ದಾರೆ. ಆದರೆ, 160 ಅನುಮೋದಿತ ನ್ಯಾಯಾಧೀಶರ ಬಲ ಇರುವ ಅಲಹಾಬಾದ್‌ ಹೈಕೋರ್ಟ್‌, 94 ಬಲ ಇರುವ ಬಾಂಬೆ ಹೈಕೋರ್ಟ್‌ ಹಾಗೂ 85 ಬಲ ಇರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದಲೂ ಮೂವರೇ ಇದ್ದಾರೆ. ಇನ್ನು 75 ಬಲ ಇರುವ ಮದ್ರಾಸ್ ಹೈಕೋರ್ಟ್ ಮತ್ತು 72 ಬಲ ಇರುವ ಕಲ್ಕತ್ತಾ ಹೈಕೋರ್ಟ್‌ನಿಂದ ತಲಾ ಇಬ್ಬರು ನ್ಯಾಯಾಧೀಶರು ಇದ್ದಾರೆ.

ನುಸುಳುಕೋರರೆಂಬ ಆರೋಪ: 36 ಜನರನ್ನು ಬಾಂಗ್ಲಾದೇಶದ ಗಡಿಗೆ ತಳ್ಳಿದ ಅಸ್ಸಾಂ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...