Homeನ್ಯಾಯ ಪಥಸರಳ, ಸಜ್ಜನಿಕೆಯ ದಿಟ್ಟ ಹೋರಾಟಗಾರ ದೊರೆಸ್ವಾಮಿಯವರು ನಮಗೆಲ್ಲಾ ಮಾದರಿ

ಸರಳ, ಸಜ್ಜನಿಕೆಯ ದಿಟ್ಟ ಹೋರಾಟಗಾರ ದೊರೆಸ್ವಾಮಿಯವರು ನಮಗೆಲ್ಲಾ ಮಾದರಿ

- Advertisement -
- Advertisement -

ದೊರೆಸ್ವಾಮಿಯವರ ಒಡನಾಡಿಗಳಾಗಿದ್ದ, ಹಿರಿಯ ವಕೀಲರಾಗಿರುವ ಶೇಷಾದ್ರಿಯವರು ಹೇಳುತ್ತಿದ್ದ ಒಂದು ಘಟನೆ ನನಗೆ ಇಂದಿಗೂ ಆಶ್ಚರ್ಯವನ್ನುಂಟುಮಾಡುತ್ತದೆ. ಸುಮಾರು 50-60 ವರ್ಷಗಳ ಹಿಂದೆ ದೊರೆಸ್ವಾಮಿಯವರು ಬೆಂಗಳೂರಿನ ಹನುಮಂತನಗರದಲ್ಲಿ ವಾಸಿಸುತ್ತಿದ್ದರು. ಅಲ್ಲಿಂದ ಅವರು ಮಾರುಕಟ್ಟೆ ಬಳಿ ಇರುವ ಗಾಳಿ ಆಂಜನೇಯ ಸ್ವಾಮಿ ದೇವಾಲಯದವರೆಗೆ ನಡೆದುಕೊಂಡು ಬಂದರು. ಅಂದು ಅಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಸಬ್ಸಿಡಿ ದರದಲ್ಲಿ ಖಾದಿ ಬಟ್ಟೆಗಳನ್ನು ಮಾರುತ್ತಿದ್ದರು. ದೊರೆಸ್ವಾಮಿಯವರು ಒಂದು ಜುಬ್ಬಾ, ಒಂದು ಪಂಚೆ ಮತ್ತು ಟವೆಲ್ ಒಂದನ್ನು ಆಯ್ಕೆ ಮಾಡಿ ಎಷ್ಟು ಹಣ ಎಂದು ಕೇಳುತ್ತಾರೆ. ಅಂಗಡಿಯಾತ ಬೆಲೆ ಹೇಳಿ, ’ಸರ್ ಹಿಂದಿನ ಸಾರಿ ನೀವು ಹಣ ಕೊಡುವುದು ಮರೆತಿದ್ದೀರಿ’ ಎಂದನಂತೆ. ಆಗ ದೊರೆಸ್ವಾಮಿಯವರು ತಮ್ಮಲ್ಲಿದ್ದ ಹಣ ನೀಡಿ, ಹಿಂದಿನ ಸಾಲ ಪೂರ್ತಿ ತೀರಿಸಿದ ನಂತರವೇ ಹೊಸದನ್ನು ಖರೀದಿಸುತ್ತೇನೆ ಎಂದು ಹೇಳಿ ಬರಿಗೈನಲ್ಲಿ ವಾಪಸ್ ಹೋದರಂತೆ. ಇದೊಂದು ಉದಾಹರಣೆ ಸಾಕು ಅವರ ಪ್ರಾಮಾಣಿಕತೆ ಮತ್ತು ಸರಳ ಜೀವನವನ್ನು ತಿಳಿಯಲು.

ದೊರೆಸ್ವಾಮಿಯವರು ಸ್ವಾತಂತ್ರ್ಯ ಹೋರಾಟಗಾರರು, ಸರಳ ಸಜ್ಜನಿಕೆಗೆ ಬಹಳ ಹೆಸರುವಾಸಿಯಾದವರು. ದೇಶಪ್ರೇಮ, ಜನರ ಬಗ್ಗೆ ಕಾಳಜಿ, ಜನಸಾಮಾನ್ಯರ ಕಷ್ಟನಷ್ಟಗಳಿಗೆ ಸ್ಪಂದಿಸುವ ಗುಣ ಅವರದ್ದು. ಜನರ ಸಮಸ್ಯೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ತರುವುದಕ್ಕಾಗಿ, ಕೃಷಿಕರು, ಕಾರ್ಮಿಕರು ಮತ್ತು ಹಿಂದುಳಿದವರ ಸಾಮಾಜಿಕ ನ್ಯಾಯಕ್ಕಾಗಿ ತಾವು ನಿಧನರಾಗುವವರೆಗೂ ದಣಿವರಿಯದೇ ಸಾಮಾಜಿಕ ಹೋರಾಟದಲ್ಲಿ ತೊಡಗಿಸಿಕೊಂಡ ಹಿರಿಯ ಜೀವ ಅದು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ 14 ತಿಂಗಳುಗಳ ಕಾಲ ಸೆರೆವಾಸ ಅನುಭವಿಸಿದ್ದರು. ನಂತರ ಇಂದಿರಾ ಗಾಂಧಿಯವರು ಹೇರಿದ್ದ ತುರ್ತುಪರಿಸ್ಥಿತಿ ವಿರೋಧಿಸಿ ಹೋರಾಟ ಮಾಡಿದ್ದಕ್ಕಾಗಿ 4 ತಿಂಗಳು ಜೈಲಿನಲ್ಲಿರಬೇಕಾಗಿತ್ತು. ಅವರು ತ್ಯಾಗಮಯಿ, ಸಮಾಜದ ಬಗ್ಗೆ ಬದ್ಧತೆ, ಕಾಳಜಿಯ ಮನೋಭಾವ ರೂಢಿಸಿಕೊಂಡಿದ್ದರು. ದೇಶದ ಬಗ್ಗೆ ಮತ್ತು ದೇಶದಲ್ಲಿನ ಜನರ ಬಗ್ಗೆ ಸದಾ ಚಿಂತಿಸುತ್ತಿದ್ದರು. ದೇಶದ ಆಗು ಹೋಗುಗಳ ಬಗ್ಗೆ ಬಹಳ ತೀಕ್ಷ್ಣವಾಗಿ ಪರಿವೀಕ್ಷಣೆ ಮಾಡುತ್ತಿದ್ದರು. ಜನರ ಸ್ವಾತಂತ್ರ್ಯ ಸಂರಕ್ಷಣೆಯ ಬಗ್ಗೆ ಚಿಂತನೆ ಮಾಡುತ್ತಿದ್ದರು. ದೇಶದ ರೈತರು, ಬಡವರು, ದಲಿತರು, ಮಹಿಳೆಯರು ಸೇರಿದಂತೆ ತುಳಿತಕ್ಕೊಳಗಾದವರ ಪರವಾಗಿ ಅವರು ನಿರಂತರವಾಗಿ ದನಿಯೆತ್ತುತ್ತಿದ್ದರು ಮತ್ತು ಅದಕ್ಕಾಗಿ ಸರ್ಕಾರದ ಗಮನ ಸೆಳೆಯುತ್ತಿದ್ದರು.

ಅವರ ವ್ಯಕ್ತಿತ್ವ, ನಿಸ್ವಾರ್ಥ ಜೀವನದ ಕುರಿತು ಯುವಜನರು, ಸಾಮಾಜಿಕ ಕಾರ್ಯಕರ್ತರು, ಬುದ್ಧಿಜೀವಿಗಳು ಮತ್ತು ರಾಜಕಾರಣಿಗಳು ಹೆಚ್ಚು ತಿಳಿದುಕೊಂಡು ಅವರಂತೆ ನಡೆದುಕೊಳ್ಳಬೇಕಿದೆ. ಆದರೆ ನಮ್ಮ ದೇಶದ ಜನ ಗಾಂಧಿಯವರನ್ನೇ ಮರೆತುಬಿಟ್ಟಿದ್ದು, ದೊರೆಸ್ವಾಮಿಯವರನ್ನು ಎಷ್ಟು ನೆನಪಿಟ್ಟುಕೊಳ್ಳುತ್ತಾರೆ ಎಂಬ ಪ್ರಶ್ನೆ ನನ್ನನ್ನು ಕಾಡುತ್ತದೆ. ಆದರೆ ದೊರೆಸ್ವಾಮಿಯವರಂತ ಪ್ರಾಮಾಣಿಕ ವ್ಯಕ್ತಿಗಳು ಇದ್ದಿದ್ದರಿಂದಲೇ ಈ ಸಮಾಜ ಇಷ್ಟಾದರೂ ಸಹ್ಯವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ.

ಅವರು ಜೆ.ಪಿ ನಗರದ ಮನೆಯಲ್ಲಿರುವಾಗ ನಾನು ಅವರ ಆರೋಗ್ಯ ವಿಚಾರಿಸಲು ಎರಡು ಬಾರಿ ಹೋಗಿದ್ದೆ. ಅವರು ತಮ್ಮ ಜೀವಮಾನವಿಡಿ ಸ್ವಂತ ಮನೆ ಮಾಡಲಿಲ್ಲ. ಬಾಡಿಗೆ ಮನೆಯಲ್ಲಿಯೇ
ಅರ್ಥಪೂರ್ಣವಾಗಿ ಬದುಕಿದರು. ಅವರನ್ನು ಸಾಮಾಜಿಕ ಕಾರ್ಯಕರ್ತರು ಬಹಳ ಮುತುವರ್ಜಿಯಿಂದ ನೋಡಿಕೊಳ್ಳುತ್ತಿದ್ದರು. ನಮ್ಮಂಥವರು ಅವರನ್ನು ನೋಡಲು ಹೋದರೆ ಬಹಳ ಗೌರವದಿಂದ ಸತ್ಕರಿಸುತ್ತಿದ್ದರು. ಮನುಷ್ಯ ಮನುಷ್ಯನಾಗಿ ಹೇಗೆ ಬದುಕಬೇಕು ಎಂಬುದನ್ನು ಅವರು ನಮಗೆ ಕಲಿಸಿದರು. ನಾನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಯಾಗಿ ಅವರನ್ನು ನೋಡಿದಾಗ, ಅವರ ರೀತಿಯೇ ಬದುಕಬೇಕು, ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು, ಅವರ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಎಷ್ಟೋ ಸಲ ನನಗೆ ಅನ್ನಿಸಿದೆ. ಅವರ ತುಂಬು ಜೀವನವನ್ನು ನೋಡಿ ಸಂತಸವಾಗಿದೆ. ಈ ವರ್ಷ ಏಪ್ರಿಲ್ 10ನೇ ತಾರೀಖು ಅವರ 104ನೇ ಜನ್ಮದಿನದ ಸಂದರ್ಭದಲ್ಲಿ ಅವರ ಹೋರಾಟದ ಕುರಿತ ವೆಬಿನಾರ್‌ನಲ್ಲಿ ನಾನು ಮಾತನಾಡಿದೆ. ಅದರಿಂದ ಧನ್ಯಭಾವ ಅನುಭವಿಸಿದೆ. ಅವರು ಇನ್ನೊಂದು ದಶಕ ಬದುಕಿರುತ್ತಾರೆ ಎಂದುಕೊಂಡಿದ್ದೆ. ಅವರ ಆಶಯಗಳಾದ ಸಾಮಾಜಿಕ ನ್ಯಾಯ, ಆರ್ಥಿಕ ನ್ಯಾಯ, ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತೆ ಉಳಿಯುತ್ತದೆ. ಪ್ರಜಾಪ್ರಭುತ್ವ ಬೆಳೆಯುತ್ತದೆ. ನಾಗರಿಕ ಸಮಾಜ ಇನ್ನೂ ಉತ್ಕೃಷ್ಟ ರೀತಿಯಲ್ಲಿ ನಡೆದುಕೊಳ್ಳುತ್ತದೆ ಎಂಬುದನ್ನು ನೋಡಿ ಅವರು ಸಂತಸ ಪಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರು ನಮ್ಮನ್ನೆಲ್ಲಾ ಅಗಲಿಹೋಗಿದ್ದಾರೆ.

ಬೆಂಗಳೂರಿನ ಜಯದೇವ ಆಸ್ಪತ್ರೆಯ ಡಾ.ಸಿಎನ್ ಮಂಜುನಾಥ್ ಅವರನ್ನು ಈ ಸಂದರ್ಭದಲ್ಲಿ ನಾವು ನೆನೆಯಬೇಕು. ಏಕೆಂದರೆ ದೊರೆಸ್ವಾಮಿಯವರಿಗೆ ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದರೂ ಸಹ ಮಂಜುನಾಥ್ ಅವರು ಬಹಳ ಮುತುವರ್ಜಿಯಿಂದ ನೋಡಿಕೊಂಡಿದ್ದಾರೆ. ಮಾರ್ಚ್ ತಿಂಗಳಲ್ಲಿ ನಾನು ದೊರೆಸ್ವಾಮಿಯವರನ್ನು ಭೇಟಿ ಮಾಡಿದಾಗ ಅವರು ಕೆಮ್ಮುತ್ತಿದ್ದರು. ಏಕೆಂದು ಕೇಳಿದಾಗಿ, ’ನನ್ನ ಶ್ವಾಸಕೋಶ ಚೆನ್ನಾಗಿದೆ. ಆದರೆ ಮೂಗಿನಲ್ಲಿ ಏನೋ ಸಮಸ್ಯೆಯಾಗಿ ಕೆಮ್ಮುತ್ತಿದ್ದೇನೆ’ ಅಂದರು. ಆಗ ನಾನು ವಿಕ್ರಮ್ ಆಸ್ಪತ್ರೆಯ ಇಎನ್‌ಟಿ ತಜ್ಞರಾದ ಡಾ.ಶ್ರೀನಿವಾಸ್ ಅವರಿಗೆ ಫೋನ್ ಮಾಡಿದೆ. ಸ್ವಾತಂತ್ರ್ಯ ಹೋರಾಟಗಾರರು, ಹಿರಿಯರು, ಮಾರ್ಗದರ್ಶಕರು, ನಮ್ಮ ಆಸ್ತಿ, ನಮ್ಮ ದೇಶದ ಸಂಪತ್ತು ಇವರು, ಇವರನ್ನು ನೀವು ಮುತುವರ್ಜಿಯಿಂದ ನೋಡಬೇಕು ಎಂದು ಕೇಳಿಕೊಂಡೆ. ಅವರು ಸಂತೋಷದಿಂದ ಒಪ್ಪಿ ಕರೆದುಕೊಂಡು ಬರಲು ಹೇಳಿದರು. ಆದರೆ ಅಂತಹ ದೊಡ್ಡ ಆಸ್ಪತ್ರೆಗೆ ನಾನು ಹೋಗಲಾರೆ ಎಂದು ದೊರೆಸ್ವಾಮಿಯವರು ಹೋಗಲೇ ಇಲ್ಲ. ತಮ್ಮ ಸರಳತೆಯನ್ನು ಬಿಟ್ಟುಕೊಡಲು ದೊರೆಸ್ವಾಮಿಯವರು ತಯಾರಿರಲಿಲ್ಲ.

ದೊರೆಸ್ವಾಮಿಯವರಿಗೆ ನಾವು ಪ್ರತಿ ಕ್ಷಣ ಶ್ರದ್ಧಾಂಜಲಿಯನ್ನು ಸಲ್ಲಿಸಬೇಕಾಗಿದೆ. ಸಂಸದೀಯ ಪ್ರಜಾಪ್ರಭುತ್ವ ಮಾತ್ರವಲ್ಲದೆ ಜನರ ಪ್ರಜಾಪ್ರಭುತ್ವವನ್ನು ಕಟ್ಟಲಿಕ್ಕೆ ಅವರ ಹಾದಿಯಲ್ಲಿ ನಾವು ಮುಂದೆ ಹೋಗಬೇಕಾಗಿದೆ. ಆಗ ಮಾತ್ರ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎನಿಸುತ್ತದೆ.

ಕಳೆದ ವರ್ಷ ಕೆಲ ಬೇಜವಾಬ್ದಾರಿ ರಾಜಕಾರಣಿಗಳು, ಜನಪ್ರತಿನಿಧಿಗಳು ದೊರೆಸ್ವಾಮಿಯವರ ಬಗ್ಗೆ ಕ್ಷುಲ್ಲಕ ಮಾತುಗಳನ್ನಾಡಿದ್ದು ನನಗೆ ತೀವ್ರ ಖೇದವೆನಿಸಿದೆ. ದೊರೆಸ್ವಾಮಿಯವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಖರಿಯ ಬಗ್ಗೆ ಟೀಕೆ ಟಿಪ್ಪಣಿ ಮಾಡಿದಾಗ ಅದನ್ನು ಸಹಿಸಲಾಗದೆ, ಸಹಿಷ್ಣುತೆ ಇಲ್ಲದವರು ಮಾತುಗಳನ್ನಾಡಿದರು. ಮೇರು ವ್ಯಕ್ತಿತ್ವಕ್ಕೆ ಈ ರೀತಿ ನಡೆದುಕೊಂಡಿದ್ದು ಇಡೀ ಕರ್ನಾಟಕ ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ನಾನು ಭಾವಿಸುತ್ತೇನೆ. ಈಗಲಾದರೂ ಅವರು ಅದನ್ನು ಯೋಚಿಸಿ, ತಮ್ಮ ಹೇಳಿಕೆ ತಪ್ಪಾಯಿತು ಎಂದು ಹೇಳುತ್ತಾರೆ ಎಂದು ನಾನು ಭಾವಿಸಿದ್ದೇನೆ.

ಜಸ್ಟಿಸ್ ವಿ. ಗೋಪಾಲಗೌಡ
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು. ಒರಿಸ್ಸಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...