Homeಮುಖಪುಟಹಣ ಪತ್ತೆ ಪ್ರಕರಣ: ನ್ಯಾ.ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಲೋಕಸಭೆ ಸ್ಪೀಕರ್

ಹಣ ಪತ್ತೆ ಪ್ರಕರಣ: ನ್ಯಾ.ವರ್ಮಾ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಲೋಕಸಭೆ ಸ್ಪೀಕರ್

- Advertisement -
- Advertisement -

ದೆಹಲಿಯ ಮನೆಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾದ ಪ್ರಕರಣ ಸಂಬಂಧ, ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ದ ಕೇಳಿ ಬಂದಿರುವ ಆರೋಪಗಳ ತನಿಖೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಆ.12) ಮೂವರು ಸದಸ್ಯರ ಸಮಿತಿ ರಚಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ ಮತ್ತು ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲ ಬಿ.ವಿ. ಆಚಾರ್ಯ ತ್ರಿಸದಸ್ಯ ಸಮಿತಿಯಲ್ಲಿ ಇದ್ದಾರೆ.

ಬಿಜೆಪಿಯ ರವಿಶಂಕರ್ ಪ್ರಸಾದ್, ಕಾಂಗ್ರೆಸ್‌ನ ರಾಹುಲ್ ಗಾಂಧಿ, ಎನ್‌ಸಿಪಿ-ಎಸ್‌ಪಿಯ ಸುಪ್ರಿಯಾ ಸುಳೆ ಸೇರಿದಂತೆ ಹಲವು ಪಕ್ಷಗಳ ಸಂಸದರ ನಿಯೋಗದಿಂದ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಪದಚ್ಯುತಿಗೆ ಮನವಿ ಪತ್ರ ಸ್ವೀಕರಿಸಿರುವುದಾಗಿ ಸ್ಪೀಕರ್ ಲೋಕಸಭೆಗೆ ತಿಳಿಸಿದ್ದಾರೆ. ಆಡಳಿತ ಮತ್ತು ವಿರೋಧ ಪಕ್ಷಗಳ 146 ಸಂಸದರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ಹೇಳಿದ್ದಾರೆ.

ನ್ಯಾಯಾಧೀಶರ ಪದಚ್ಯುತಿಗೆ ಲೋಕಸಭೆಯ ಕನಿಷ್ಠ 100 ಸದಸ್ಯರು ಮತ್ತು ರಾಜ್ಯಸಭೆಯ ಕನಿಷ್ಠ 50 ಸದಸ್ಯರು ಸಹಿ ಹಾಕಬೇಕು. ಈ ನಿರ್ಣಯವನ್ನು ಸ್ಪೀಕರ್ ಅಥವಾ ಅಧ್ಯಕ್ಷರು ಅಂಗೀಕರಿಸಬಹುದು ಅಥವಾ ತಿರಸ್ಕರಿಸಬಹುದು.

ಸಂವಿಧಾನದ 124, 217 ಮತ್ತು 218ನೇ ವಿಧಿಗಳ ಅಡಿಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಂಸದರು ಮನವಿ ಅಥವಾ ನೋಟಿಸ್ ಸಲ್ಲಿಸಿದ್ದಾರೆ.

ಕೇಂದ್ರ ಸರ್ಕಾರ ಈ ಹಿಂದೆಯೇ ಯಶವಂತ್ ವರ್ಮಾ ಅವರ ಪದಚ್ಯುತಿಗೆ ನಿರ್ಣಯ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ವರ್ಮಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ 200ಕ್ಕೂ ಹೆಚ್ಚು ಸಂಸದರು ಪಕ್ಷಾತೀತವಾಗಿ ಅರ್ಜಿ ಸಲ್ಲಿಸಿದ್ದರು.

ಮನೆಯಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನನ್ನು ತಪ್ಪಿತಸ್ಥ ಎಂದು ಘೋಷಿಸಿ ಆಂತರಿಕ ಸಮಿತಿ ಸಲ್ಲಿಸಿದ್ದ ವರದಿಯನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 7ರಂದು ವಜಾಗೊಳಿಸಿದೆ.

ನ್ಯಾಯಮೂರ್ತಿ ವರ್ಮಾ ಅವರ ನಡವಳಿಕೆಯು ವಿಶ್ವಾಸವನ್ನು ತುಂಬುವಲ್ಲಿ ವಿಫಲವಾಗಿದೆ ಎಂದು ಹೇಳಿದ ನ್ಯಾಯಪೀಠ, ಅವರ ಅರ್ಜಿಯು ಪರಿಗಣನೆಗೆ ಅರ್ಹವಲ್ಲ ಎಂದು ನಿರ್ಧರಿಸಿದೆ.

ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಚಿಸಿದ್ದ ನ್ಯಾಯಾಧೀಶರ ಆಂತರಿಕ ತನಿಖಾ ಸಮಿತಿಯು ಸೂಕ್ತ ಪ್ರಕ್ರಿಯೆಯನ್ನು ಅನುಸರಿಸಿದೆ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಗೊಳಿಸಲು ಶಿಫಾರಸು ಮಾಡಿದ ಸಮಿತಿಯ ವರದಿಯನ್ನು ಪ್ರಧಾನ ಮಂತ್ರಿ ಮತ್ತು ರಾಷ್ಟ್ರಪತಿಗಳಿಗೆ ರವಾನಿಸುವುದು ಸಾಂವಿಧಾನಿಕವಾಗಿ ಮಾನ್ಯವಾಗಿದೆ ಎಂದು ತಿಳಿಸಿದೆ.

ಪ್ರಕರಣದ ಹಿನ್ನೆಲೆ: ನ್ಯಾ.ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರು ಉಳಿದುಕೊಂಡಿದ್ದ ದೆಹಲಿಯ ಮನೆಯಲ್ಲಿ 2025ರ ಮಾರ್ಚ್ 14ರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಾಗ ಮನೆಯಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು ಎನ್ನಲಾಗಿದೆ. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ, ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪವನ್ನು ನಿರಾಕರಿಸಿದ್ದ ನ್ಯಾ. ವರ್ಮಾ, “ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ” ಎಂದಿದ್ದರು.

ಘಟನೆಯ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾ. ವರ್ಮಾ ಅವರನ್ನು ಅಲಾಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. ಆದರೆ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸಿಜೆಐ ಆಂತರಿಕ ಸಮಿತಿ ರಚಿಸಿದ್ದರು.

ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಂಗದ ಪಾರದರ್ಶಕತೆಯ ಬಗ್ಗೆ ದೇಶದಲ್ಲಿ ಚರ್ಚೆಯಾಗಿತ್ತು. ಇದನ್ನು ಸುಪ್ರೀಂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿತ್ತು. ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದರು. ಅದರಂತೆ, ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನ 21 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದರು.

ಸುಪ್ರೀಂ ಕೋರ್ಟ್ ನಿಯೋಜಿಸಿದ್ದ ಆಂತರಿಕ ಸಮಿತಿಯು ಮಾರ್ಚ್ 25ರಂದು ತನಿಖೆ ಆರಂಭಿಸಿ, ಮೇ 3ರಂದು ತನ್ನ ವರದಿಯನ್ನು ಅಂತಿಮಗೊಳಿಸಿತ್ತು. ಅದನ್ನು ಮೇ4 ರಂದು ಸಿಜೆಐಗೆ ಸಲ್ಲಿಸಿತ್ತು. ವರದಿಯಲ್ಲಿ ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪ ನಿಜ ಎಂದು ಸಮಿತಿ ದೃಢಪಡಿಸಿತ್ತು.

ಆಂತರಿಕ ಸಮಿತಿಯ ವರದಿಯನ್ನು ಪ್ರಶ್ನಿಸಿ ನ್ಯಾ. ವರ್ಮಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಇತ್ತ, ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನ ಎರಡನೇ ದಿನವೇ ನ್ಯಾ.ವರ್ಮಾ ಪದಚ್ಯುತಿಗೆ ಸಂಸದರು ನೋಟಿಸ್ ನೀಡಿದ್ದಾರೆ ಎನ್ನಲಾಗಿತ್ತು. ಈ ನಡುವೆ ರಾಜ್ಯಸಭೆ ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಠಾತ್ ರಾಜೀನಾಮೆ ನೀಡಿದರು. ಹಾಗಾಗಿ, ಆ ಬಳಿಕ ರಾಜ್ಯಸಭೆಯಲ್ಲಿ ಈ ವಿಚಾರವಾಗಿ ಯಾವುದೇ ಬೆಳವಣಿಗೆ ನಡೆದಿಲ್ಲ.

ಸಂಸತ್ತಿನ ಅಧಿವೇಶನಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಕೇಂದ್ರ ಸಚಿವ ಕಿರಣ್ ರಿಜಿಜು, ನ್ಯಾ,ವರ್ಮಾ ಪದಚ್ಯುತಿ ಸಂಬಂಧ ಸಂಸತ್‌ನಲ್ಲಿ ನಿರ್ಣಯ ಮಂಡಿಸುದು ಖಚಿತ ಎಂದಿದ್ದರು. ಅದರಂತೆ, ಈಗ ಲೋಕಸಭೆ ಸ್ಪೀಕರ್ ತನಿಖಾ ಸಮಿತಿ ರಚಿಸಿದ್ದಾರೆ.

ಬಿಹಾರ ಎಸ್‌ಐಆರ್, ಮತಗಳ್ಳತನದ ವಿರುದ್ಧ ಸಂಸತ್ ಮುಂದೆ ಪ್ರತಿಭಟನೆ: ವಿಶೇಷ ಟೀ-ಶರ್ಟ್ ಧರಿಸಿ ಗಮನಸೆಳೆದ ಪ್ರತಿಪಕ್ಷ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...