Homeಮುಖಪುಟವಕೀಲರ ಮುಷ್ಕರದ ನಡುವೆಯೆ ನ್ಯಾಯಮೂರ್ತಿ ಯಶವಂತ್ ವರ್ಮಾರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ!

ವಕೀಲರ ಮುಷ್ಕರದ ನಡುವೆಯೆ ನ್ಯಾಯಮೂರ್ತಿ ಯಶವಂತ್ ವರ್ಮಾರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ!

- Advertisement -
- Advertisement -

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಲೆಕ್ಕವಿಲ್ಲದ ನಗದು ಪತ್ತೆಯಾಗಿದೆ ಎಂಬ ಆರೋಪದ ನಡುವೆ ಕೇಂದ್ರ ಕಾನೂನು ಸಚಿವಾಲಯ ಶುಕ್ರವಾರ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾಯಿಸುವುದಾಗಿ ಘೋಷಿಸಿದೆ. ಈ ನಡುವೆ ಅಲಹಾಬಾದ್ ಹೈಕೋರ್ಟ್‌ನ ವಕೀಲರು ಅವತನ್ನು ತಮ್ಮ ಕೋರ್ಟ್‌ಗೆ ವರ್ಗಾವಣೆ ಮಾಡಬಾರದು ಎಂದು ಮುಷ್ಕರ ಹೂಡಿದ್ದಾರೆ.

ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ವರ್ಮಾ ಅವರನ್ನು ಅವರ ಮಾತೃ ಹೈಕೋರ್ಟ್ ಆಗಿರುವ ಅಲಹಾಬಾದ್ ಹೈಕೋರ್ಟ್‌ಗೆ ವಾಪಸ್ ಕಳುಹಿಸುವಂತೆ ಶಿಫಾರಸು ಮಾಡಿತ್ತು. ಆದಾಗ್ಯೂ, ಈ ಕ್ರಮವು ವರ್ಮಾ ಅವರ ಮನೆಯಲ್ಲಿ ನಗದು ಪತ್ತೆಯಾದ ಬಗ್ಗೆ ಆಂತರಿಕ ತನಿಖೆಗೆ ಸಂಬಂಧಿಸಿಲ್ಲ ಎಂದು ಒತ್ತಿ ಹೇಳಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಶುಕ್ರವಾರದಂದು, ವರ್ಮಾ ವಿರುದ್ಧ ಎಫ್‌ಐಆರ್‌ ನೋಂದಾಯಿಸಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಅರ್ಜಿಯನ್ನು “ಅಕಾಲಿಕ” ಎಂದು ಕರೆದ ನ್ಯಾಯಮೂರ್ತಿಗಳಾದ ಅಭಯ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು, ನಡೆಯುತ್ತಿರುವ ಆಂತರಿಕ ವಿಚಾರಣೆಯು ಅದು ಮುಗಿದ ನಂತರ ಹಲವಾರು ಆಯ್ಕೆಗಳನ್ನು ನೀಡಲಾಗಿದೆ ಎಂದು ಹೇಳಿದೆ.

ಮಾರ್ಚ್ 14 ರಂದು ವರ್ಮಾ ಅವರ ಅಧೀಕೃತ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಾಗ ಅಲ್ಲಿ ಲೆಕ್ಕವಿಲ್ಲದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಆ ಸಮಯದಲ್ಲಿ ಅವರು ಭೋಪಾಲ್‌ನಲ್ಲಿದ್ದರು ಮತ್ತು ನಗದು ಅವರಿಗೆ ಅಥವಾ ಅವರ ಕುಟುಂಬಕ್ಕೆ ಸೇರಿಲ್ಲ ಎಂದು ನ್ಯಾಯಮೂರ್ತಿ ವರ್ಮಾ ಪ್ರತಿಪಾದಿಸಿದ್ದಾರೆ.

ಮಾರ್ಚ್ 22 ರಂದು ಸುಪ್ರೀಂ ಕೋರ್ಟ್ ವರ್ಮಾ ಮನೆಯಿಂದ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ನೋಟುಗಳ ಬಂಡಲ್‌ಗಳ ವೀಡಿಯೊ ಮತ್ತು ಮೂರು ಚಿತ್ರಗಳನ್ನು ಒಳಗೊಂಡ ವರದಿಯನ್ನು ಬಿಡುಗಡೆ ಮಾಡಿತ್ತು. ಈ ವೇಳೆ ವರ್ಮಾ ವಿರುದ್ಧದ ಆರೋಪಗಳನ್ನು ಪರಿಶೀಲಿಸಲು ನ್ಯಾಯಾಲಯವು ಮೂವರು ಸದಸ್ಯರ ಸಮಿತಿಯನ್ನು ಸಹ ರಚಿಸಿತ್ತು.

ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಅವರು ಮಾರ್ಚ್ 21 ರಂದು ವರ್ಮಾ ಅವರಿಗೆ ಪತ್ರ ಬರೆದು, ಅವರ ಬಂಗಲೆಯಲ್ಲಿರುವ ಕೋಣೆಯಲ್ಲಿ “ಹಣ/ನಗದು ಇರುವಿಕೆಯನ್ನು ಲೆಕ್ಕ ಹಾಕುವಂತೆ” ಕೇಳಿದ್ದಾರೆ ಎಂದು ಈ ವರದಿ ಹೇಳಿತ್ತು.

ಈ ನಡುವೆ, ಹೈಕೋರ್ಟ್‌ನ ಆರು ಬಾರ್ ಅಸೋಸಿಯೇಷನ್‌ಗಳು ಗುರುವಾರ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭೇಟಿ ಮಾಡಿ, ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ವರ್ಗಾವಣೆ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂನ ಶಿಫಾರಸನ್ನು ರದ್ದುಗೊಳಿಸುವಂತೆ ಒತ್ತಾಯಿಸಿವೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿತ್ತು.

ಇದೇ ವೇಳೆ ಬಾರ್ ಅಸೋಸಿಯೇಷನ್‌ಗಳ ಪ್ರತಿನಿಧಿಗಳು ವರ್ಮಾ ವಿರುದ್ಧ ಕ್ರಿಮಿನಲ್ ತನಿಖೆಯನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಿದ್ದಾರೆ. ಅಲಹಾಬಾದ್, ಲಕ್ನೋ, ಮಧ್ಯಪ್ರದೇಶ (ಜಬಲ್‌ಪುರ), ಗುಜರಾತ್, ಕರ್ನಾಟಕ ಮತ್ತು ಕೇರಳದ ಬಾರ್ ಅಸೋಸಿಯೇಷನ್‌ಗಳ ಮುಖ್ಯಸ್ಥರು ಗುರುವಾರ ಖನ್ನಾ ಅವರನ್ನು ಭೇಟಿ ಮಾಡಿದ್ದಾರೆ.

ಮಂಗಳವಾರ, ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​ಈ ಪ್ರಸ್ತಾವನೆಯ ವಿರುದ್ಧ ಅನಿರ್ದಿಷ್ಟಾವಧಿ ಮುಷ್ಕರವನ್ನು ಪ್ರಾರಂಭಿಸಿದ್ದು, ಅಲಹಾಬಾದ್ ಹೈಕೋರ್ಟ್ ಅನ್ನು “ಕಸದ ಬುಟ್ಟಿಯ ಸ್ಥಳವೆಂದು ಪರಿಗಣಿಸಲಾಗುತ್ತಿದೆ” ಎಂದು ತಿವಾರಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸೂರತ್-ಕೋಲ್ಕತ್ತಾ ವಿಮಾನದಲ್ಲಿ ಬೀಡಿ ಸೇದಿದ ವ್ಯಕ್ತಿ; ಟೇಕ್ ಆಫ್ ಆಗುವ ಮುನ್ನವೇ ಬಂಧನ

ಸೂರತ್-ಕೋಲ್ಕತ್ತಾ ವಿಮಾನದಲ್ಲಿ ಬೀಡಿ ಸೇದಿದ ವ್ಯಕ್ತಿ; ಟೇಕ್ ಆಫ್ ಆಗುವ ಮುನ್ನವೇ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...