Homeಮುಖಪುಟ#Justice4Teltumbde : ಆನಂದ್ ತೇಲ್ತುಂಬ್ಡೆ ಪರ ನ್ಯಾಯದ ದಿನ ಟ್ವಿಟ್ಟರ್ ಅಭಿಯಾನ

#Justice4Teltumbde : ಆನಂದ್ ತೇಲ್ತುಂಬ್ಡೆ ಪರ ನ್ಯಾಯದ ದಿನ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಹೋರಾಟಗಾರ ಪ್ರಾಧ್ಯಾಪಕ ಡಾ. ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿ ತಿಂಗಳ ನೆನಪಿನಲ್ಲಿ ಹಾಗೂ ಹತ್ತಾರು ಸಾಮಾಜಿಕ ಹೋರಾಟಗಾರರ ಬಂಧನವನ್ನು ವಿರೋಧಿಸಿ ಇಂದು ನ್ಯಾಯದ ದಿನ ಅಭಿಯಾನ ನಡೆಸಲಾಗಿದೆ. ಟ್ವಿಟ್ಟರ್ ನಲ್ಲಿ #Justice4Teltumbde ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ.

ಈಗಾಗಲೇ ಹಲವಾರು ಸಾಮಾಜಿಕ ಹೋರಾಟಗಾರು, ಗಣ್ಯರು #Justice4Teltumbde ಹ್ಯಾಶ್ ಟ್ಯಾಗ್ ಹಾಕಿ ಭಿನ್ನಮತವಿರುವ ಸಾಮಾಜಿಕ ಹೋರಾಟಗಾರರ ಬಂಧನವನ್ನು ವಿರೋಧಿಸಿದ್ದಾರೆ.

ಊನಾ ಚಳುವಳಿಯ ನಾಯಕ ಹಾಗೂ ಶಾಸಕರಾಗಿರುವ ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿ “ನಮ್ಮ ಪ್ರೀತಿಯ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಜೈಲುಗಳಲ್ಲಿ ಇರುವ ಡಾ.ಆನಂದ್ ಮತ್ತು ಇತರ ಸಾಮಾಜಿಕ ಕಾರ್ಯಕರ್ತರೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲಲು ಈ ಕ್ಷಣವನ್ನು ಗುರುತಿಸೋಣ.” ಎಂದು ಹೇಳಿದ್ದಾರೆ.


ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?


JNU ಮಾಜೀ ನಾಯಕ ಟ್ವೀಟ್ ಮಾಡಿ “ಆನಂದ್ ತೇಲ್ತುಂಬ್ಡೆ ಹಾಗೂ ಇತರ ಎಲ್ಲ ಆತ್ಮಸಾಕ್ಷಿ ಇರುವ ಕೈದಿಗಳೊಂದಿಗೆ ಇವತ್ತು ನಾವು ನ್ಯಾಯದ ದಿನವೆಂದು ಗುರುತಿಸುತ್ತೇವೆ. ಈ ಮಾನ್ಯ ಆತ್ಮಗಳು ಅನ್ಯಾಯದ ವಿರುದ್ಧ ಮಾತನಾಡಿದ್ದಕ್ಕೆ, ಬರೆದದ್ದಕ್ಕೆ, ಅನ್ಯಾಯದ ವಿರುದ್ದ ಸೆಟೆದು ನಿಂತಿದ್ದಕ್ಕೆ ಜೈಲಿನಲ್ಲಿದ್ದಾರೆ” ಎಂದು ಬರೆದಿದ್ದಾರೆ.

ಜೊತೆಗೆ “ಆನಂದ್ ತೇಲ್ತುಂಬ್ಡೆ ಜೈಲಿನಲ್ಲಿರಬಾರದು. ಅವರು ಭಾರತದ ಅತ್ಯುತ್ತಮ ಸಾರ್ವಜನಿಕ ಪ್ರಭುದ್ದರಲ್ಲಿ ಒಬ್ಬರಾಗಿದ್ದಾರೆ, ಅವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಬೇಕು.” ಎಂದು ಕೂಡಾ ಹೇಳಿದ್ದಾರೆ.

ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಅವರು “ಪ್ರಜಾಪ್ರಭುತ್ವ ಎಂದರೆ ಭಿನ್ನಾಭಿಪ್ರಾಯವಿಲ್ಲದೆ ಏನೂ ಇಲ್ಲ.
ಡಾ. ಆನಂದ್ ತೇಲ್ತುಂಬ್ಡೆ ಅವರು ಇಂದು ನಮ್ಮ ದೇಶದಲ್ಲಿ ಇರುವ ಪ್ರಜಾಪ್ರಭುತ್ವದ ಪ್ರಬಲ ಧ್ವನಿಗಳಲ್ಲಿ ಒಬ್ಬರಾಗಿದ್ದಾರೆ ಮತ್ತು ಅದೇ ವ್ಯಕ್ತಿಯನ್ನು ಜೈಲಿನಲ್ಲಿ ಇರಿಸಲಾಗಿದೆ, ತೇಲ್ತುಂಬ್ಡೆ ಅವರಿಗೆ ನ್ಯಾಯ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ:  ಆನಂದ್‌ ತೇಲ್‌ತುಂಬ್ಡೆ ಎಂಬ ಅಂಬೇಡ್ಕರ್ ಆತ್ಮಬಂಧು


ಯುವ ಹಲ್ಲಾಬೋಲ್ ಚಳವಳಿಯ ಅನುಪಮ್ ಅವರು “ಇದು ಕೇವಲ ಡಾ. ಆನಂದ್ ತೇಲ್ತುಂಬ್ಡೆ ಅವರ ಹೇಳಿಕೆಯಲ್ಲ, ನಮ್ಮೆಲ್ಲರ ಮುಂದಿರುವ ಪ್ರಶ್ನೆಯಾಗಿದೆ. ಪ್ರಜಾಪ್ರಭುತ್ವವು ಭಿನ್ನಾಭಿಪ್ರಾಯವಿಲ್ಲದೆ ಇರುತ್ತದೆಯೇ” ಎಂದು ಹೇಳಲಿದ್ದಾರೆ.

ಕಾದಂಬರಿಗಾರ್ತಿ ಹಾಗೂ ಕವಯಿತ್ರಿ ಮೀನಾಕಂದಸ್ವಾಮಿ, ಗೌರಿ ಲಂಕೇಶ್ ನ್ಯೂಸ್ ನಲ್ಲಿ ಪ್ರಕಟವಾದ ದೇವನೂರು ಮಹದೇವ ಅವರ ಹೇಳಿಕೆಯನ್ನು ತಮ್ಮ ಟ್ವಿಟ್ಟರಿನಲ್ಲಿ ಪೋಸ್ಟ್ ಮಾಡಿ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ.

ಮಾನ್ಸಿ ಸಿಂಗ್ ಟ್ವೀಟ್ “ಆನಂದ್ ತೇಲ್ತುಂಬ್ಡೆ ಸದನದಲ್ಲಿ ಇರಬೇಕಾದವರು, ಜೈಲಿನಲ್ಲಿ ಅಲ್ಲ. ಅವರನ್ನು  ಬಿಡುಗಡೆಗೊಳಿಸಿ” ಎಂದು ಟ್ವೀಟ್ ಮಾಡಿದ್ದಾರೆ.

ಆನಂದ್ ತೇಲ್ತುಂಬ್ಡೆ ಭಾರತದ ಒಬ್ಬ ಪ್ರಮುಖ ವಿದ್ವಾಂಸ, ಲೋಕಚಿಂತಕ ಹಾಗೂ ಮಾನವ ಹಕ್ಕುಗಳ ಸಕ್ರಿಯ ಪ್ರತಿಪಾದಕರಾಗಿದ್ದಾರೆ. ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು.

2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.


ಓದಿ:  IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...