Homeಮುಖಪುಟ#Justice4Teltumbde : ಆನಂದ್ ತೇಲ್ತುಂಬ್ಡೆ ಪರ ನ್ಯಾಯದ ದಿನ ಟ್ವಿಟ್ಟರ್ ಅಭಿಯಾನ

#Justice4Teltumbde : ಆನಂದ್ ತೇಲ್ತುಂಬ್ಡೆ ಪರ ನ್ಯಾಯದ ದಿನ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಹೋರಾಟಗಾರ ಪ್ರಾಧ್ಯಾಪಕ ಡಾ. ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿ ತಿಂಗಳ ನೆನಪಿನಲ್ಲಿ ಹಾಗೂ ಹತ್ತಾರು ಸಾಮಾಜಿಕ ಹೋರಾಟಗಾರರ ಬಂಧನವನ್ನು ವಿರೋಧಿಸಿ ಇಂದು ನ್ಯಾಯದ ದಿನ ಅಭಿಯಾನ ನಡೆಸಲಾಗಿದೆ. ಟ್ವಿಟ್ಟರ್ ನಲ್ಲಿ #Justice4Teltumbde ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ.

ಈಗಾಗಲೇ ಹಲವಾರು ಸಾಮಾಜಿಕ ಹೋರಾಟಗಾರು, ಗಣ್ಯರು #Justice4Teltumbde ಹ್ಯಾಶ್ ಟ್ಯಾಗ್ ಹಾಕಿ ಭಿನ್ನಮತವಿರುವ ಸಾಮಾಜಿಕ ಹೋರಾಟಗಾರರ ಬಂಧನವನ್ನು ವಿರೋಧಿಸಿದ್ದಾರೆ.

ಊನಾ ಚಳುವಳಿಯ ನಾಯಕ ಹಾಗೂ ಶಾಸಕರಾಗಿರುವ ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿ “ನಮ್ಮ ಪ್ರೀತಿಯ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಜೈಲುಗಳಲ್ಲಿ ಇರುವ ಡಾ.ಆನಂದ್ ಮತ್ತು ಇತರ ಸಾಮಾಜಿಕ ಕಾರ್ಯಕರ್ತರೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲಲು ಈ ಕ್ಷಣವನ್ನು ಗುರುತಿಸೋಣ.” ಎಂದು ಹೇಳಿದ್ದಾರೆ.


ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?


JNU ಮಾಜೀ ನಾಯಕ ಟ್ವೀಟ್ ಮಾಡಿ “ಆನಂದ್ ತೇಲ್ತುಂಬ್ಡೆ ಹಾಗೂ ಇತರ ಎಲ್ಲ ಆತ್ಮಸಾಕ್ಷಿ ಇರುವ ಕೈದಿಗಳೊಂದಿಗೆ ಇವತ್ತು ನಾವು ನ್ಯಾಯದ ದಿನವೆಂದು ಗುರುತಿಸುತ್ತೇವೆ. ಈ ಮಾನ್ಯ ಆತ್ಮಗಳು ಅನ್ಯಾಯದ ವಿರುದ್ಧ ಮಾತನಾಡಿದ್ದಕ್ಕೆ, ಬರೆದದ್ದಕ್ಕೆ, ಅನ್ಯಾಯದ ವಿರುದ್ದ ಸೆಟೆದು ನಿಂತಿದ್ದಕ್ಕೆ ಜೈಲಿನಲ್ಲಿದ್ದಾರೆ” ಎಂದು ಬರೆದಿದ್ದಾರೆ.

ಜೊತೆಗೆ “ಆನಂದ್ ತೇಲ್ತುಂಬ್ಡೆ ಜೈಲಿನಲ್ಲಿರಬಾರದು. ಅವರು ಭಾರತದ ಅತ್ಯುತ್ತಮ ಸಾರ್ವಜನಿಕ ಪ್ರಭುದ್ದರಲ್ಲಿ ಒಬ್ಬರಾಗಿದ್ದಾರೆ, ಅವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಬೇಕು.” ಎಂದು ಕೂಡಾ ಹೇಳಿದ್ದಾರೆ.

ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಅವರು “ಪ್ರಜಾಪ್ರಭುತ್ವ ಎಂದರೆ ಭಿನ್ನಾಭಿಪ್ರಾಯವಿಲ್ಲದೆ ಏನೂ ಇಲ್ಲ.
ಡಾ. ಆನಂದ್ ತೇಲ್ತುಂಬ್ಡೆ ಅವರು ಇಂದು ನಮ್ಮ ದೇಶದಲ್ಲಿ ಇರುವ ಪ್ರಜಾಪ್ರಭುತ್ವದ ಪ್ರಬಲ ಧ್ವನಿಗಳಲ್ಲಿ ಒಬ್ಬರಾಗಿದ್ದಾರೆ ಮತ್ತು ಅದೇ ವ್ಯಕ್ತಿಯನ್ನು ಜೈಲಿನಲ್ಲಿ ಇರಿಸಲಾಗಿದೆ, ತೇಲ್ತುಂಬ್ಡೆ ಅವರಿಗೆ ನ್ಯಾಯ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ:  ಆನಂದ್‌ ತೇಲ್‌ತುಂಬ್ಡೆ ಎಂಬ ಅಂಬೇಡ್ಕರ್ ಆತ್ಮಬಂಧು


ಯುವ ಹಲ್ಲಾಬೋಲ್ ಚಳವಳಿಯ ಅನುಪಮ್ ಅವರು “ಇದು ಕೇವಲ ಡಾ. ಆನಂದ್ ತೇಲ್ತುಂಬ್ಡೆ ಅವರ ಹೇಳಿಕೆಯಲ್ಲ, ನಮ್ಮೆಲ್ಲರ ಮುಂದಿರುವ ಪ್ರಶ್ನೆಯಾಗಿದೆ. ಪ್ರಜಾಪ್ರಭುತ್ವವು ಭಿನ್ನಾಭಿಪ್ರಾಯವಿಲ್ಲದೆ ಇರುತ್ತದೆಯೇ” ಎಂದು ಹೇಳಲಿದ್ದಾರೆ.

ಕಾದಂಬರಿಗಾರ್ತಿ ಹಾಗೂ ಕವಯಿತ್ರಿ ಮೀನಾಕಂದಸ್ವಾಮಿ, ಗೌರಿ ಲಂಕೇಶ್ ನ್ಯೂಸ್ ನಲ್ಲಿ ಪ್ರಕಟವಾದ ದೇವನೂರು ಮಹದೇವ ಅವರ ಹೇಳಿಕೆಯನ್ನು ತಮ್ಮ ಟ್ವಿಟ್ಟರಿನಲ್ಲಿ ಪೋಸ್ಟ್ ಮಾಡಿ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ.

ಮಾನ್ಸಿ ಸಿಂಗ್ ಟ್ವೀಟ್ “ಆನಂದ್ ತೇಲ್ತುಂಬ್ಡೆ ಸದನದಲ್ಲಿ ಇರಬೇಕಾದವರು, ಜೈಲಿನಲ್ಲಿ ಅಲ್ಲ. ಅವರನ್ನು  ಬಿಡುಗಡೆಗೊಳಿಸಿ” ಎಂದು ಟ್ವೀಟ್ ಮಾಡಿದ್ದಾರೆ.

ಆನಂದ್ ತೇಲ್ತುಂಬ್ಡೆ ಭಾರತದ ಒಬ್ಬ ಪ್ರಮುಖ ವಿದ್ವಾಂಸ, ಲೋಕಚಿಂತಕ ಹಾಗೂ ಮಾನವ ಹಕ್ಕುಗಳ ಸಕ್ರಿಯ ಪ್ರತಿಪಾದಕರಾಗಿದ್ದಾರೆ. ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು.

2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.


ಓದಿ:  IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...