Homeಮುಖಪುಟ#Justice4Teltumbde : ಆನಂದ್ ತೇಲ್ತುಂಬ್ಡೆ ಪರ ನ್ಯಾಯದ ದಿನ ಟ್ವಿಟ್ಟರ್ ಅಭಿಯಾನ

#Justice4Teltumbde : ಆನಂದ್ ತೇಲ್ತುಂಬ್ಡೆ ಪರ ನ್ಯಾಯದ ದಿನ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಹೋರಾಟಗಾರ ಪ್ರಾಧ್ಯಾಪಕ ಡಾ. ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿ ತಿಂಗಳ ನೆನಪಿನಲ್ಲಿ ಹಾಗೂ ಹತ್ತಾರು ಸಾಮಾಜಿಕ ಹೋರಾಟಗಾರರ ಬಂಧನವನ್ನು ವಿರೋಧಿಸಿ ಇಂದು ನ್ಯಾಯದ ದಿನ ಅಭಿಯಾನ ನಡೆಸಲಾಗಿದೆ. ಟ್ವಿಟ್ಟರ್ ನಲ್ಲಿ #Justice4Teltumbde ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ.

ಈಗಾಗಲೇ ಹಲವಾರು ಸಾಮಾಜಿಕ ಹೋರಾಟಗಾರು, ಗಣ್ಯರು #Justice4Teltumbde ಹ್ಯಾಶ್ ಟ್ಯಾಗ್ ಹಾಕಿ ಭಿನ್ನಮತವಿರುವ ಸಾಮಾಜಿಕ ಹೋರಾಟಗಾರರ ಬಂಧನವನ್ನು ವಿರೋಧಿಸಿದ್ದಾರೆ.

ಊನಾ ಚಳುವಳಿಯ ನಾಯಕ ಹಾಗೂ ಶಾಸಕರಾಗಿರುವ ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿ “ನಮ್ಮ ಪ್ರೀತಿಯ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಜೈಲುಗಳಲ್ಲಿ ಇರುವ ಡಾ.ಆನಂದ್ ಮತ್ತು ಇತರ ಸಾಮಾಜಿಕ ಕಾರ್ಯಕರ್ತರೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲಲು ಈ ಕ್ಷಣವನ್ನು ಗುರುತಿಸೋಣ.” ಎಂದು ಹೇಳಿದ್ದಾರೆ.


ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?


JNU ಮಾಜೀ ನಾಯಕ ಟ್ವೀಟ್ ಮಾಡಿ “ಆನಂದ್ ತೇಲ್ತುಂಬ್ಡೆ ಹಾಗೂ ಇತರ ಎಲ್ಲ ಆತ್ಮಸಾಕ್ಷಿ ಇರುವ ಕೈದಿಗಳೊಂದಿಗೆ ಇವತ್ತು ನಾವು ನ್ಯಾಯದ ದಿನವೆಂದು ಗುರುತಿಸುತ್ತೇವೆ. ಈ ಮಾನ್ಯ ಆತ್ಮಗಳು ಅನ್ಯಾಯದ ವಿರುದ್ಧ ಮಾತನಾಡಿದ್ದಕ್ಕೆ, ಬರೆದದ್ದಕ್ಕೆ, ಅನ್ಯಾಯದ ವಿರುದ್ದ ಸೆಟೆದು ನಿಂತಿದ್ದಕ್ಕೆ ಜೈಲಿನಲ್ಲಿದ್ದಾರೆ” ಎಂದು ಬರೆದಿದ್ದಾರೆ.

ಜೊತೆಗೆ “ಆನಂದ್ ತೇಲ್ತುಂಬ್ಡೆ ಜೈಲಿನಲ್ಲಿರಬಾರದು. ಅವರು ಭಾರತದ ಅತ್ಯುತ್ತಮ ಸಾರ್ವಜನಿಕ ಪ್ರಭುದ್ದರಲ್ಲಿ ಒಬ್ಬರಾಗಿದ್ದಾರೆ, ಅವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಬೇಕು.” ಎಂದು ಕೂಡಾ ಹೇಳಿದ್ದಾರೆ.

ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಅವರು “ಪ್ರಜಾಪ್ರಭುತ್ವ ಎಂದರೆ ಭಿನ್ನಾಭಿಪ್ರಾಯವಿಲ್ಲದೆ ಏನೂ ಇಲ್ಲ.
ಡಾ. ಆನಂದ್ ತೇಲ್ತುಂಬ್ಡೆ ಅವರು ಇಂದು ನಮ್ಮ ದೇಶದಲ್ಲಿ ಇರುವ ಪ್ರಜಾಪ್ರಭುತ್ವದ ಪ್ರಬಲ ಧ್ವನಿಗಳಲ್ಲಿ ಒಬ್ಬರಾಗಿದ್ದಾರೆ ಮತ್ತು ಅದೇ ವ್ಯಕ್ತಿಯನ್ನು ಜೈಲಿನಲ್ಲಿ ಇರಿಸಲಾಗಿದೆ, ತೇಲ್ತುಂಬ್ಡೆ ಅವರಿಗೆ ನ್ಯಾಯ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ:  ಆನಂದ್‌ ತೇಲ್‌ತುಂಬ್ಡೆ ಎಂಬ ಅಂಬೇಡ್ಕರ್ ಆತ್ಮಬಂಧು


ಯುವ ಹಲ್ಲಾಬೋಲ್ ಚಳವಳಿಯ ಅನುಪಮ್ ಅವರು “ಇದು ಕೇವಲ ಡಾ. ಆನಂದ್ ತೇಲ್ತುಂಬ್ಡೆ ಅವರ ಹೇಳಿಕೆಯಲ್ಲ, ನಮ್ಮೆಲ್ಲರ ಮುಂದಿರುವ ಪ್ರಶ್ನೆಯಾಗಿದೆ. ಪ್ರಜಾಪ್ರಭುತ್ವವು ಭಿನ್ನಾಭಿಪ್ರಾಯವಿಲ್ಲದೆ ಇರುತ್ತದೆಯೇ” ಎಂದು ಹೇಳಲಿದ್ದಾರೆ.

ಕಾದಂಬರಿಗಾರ್ತಿ ಹಾಗೂ ಕವಯಿತ್ರಿ ಮೀನಾಕಂದಸ್ವಾಮಿ, ಗೌರಿ ಲಂಕೇಶ್ ನ್ಯೂಸ್ ನಲ್ಲಿ ಪ್ರಕಟವಾದ ದೇವನೂರು ಮಹದೇವ ಅವರ ಹೇಳಿಕೆಯನ್ನು ತಮ್ಮ ಟ್ವಿಟ್ಟರಿನಲ್ಲಿ ಪೋಸ್ಟ್ ಮಾಡಿ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ.

ಮಾನ್ಸಿ ಸಿಂಗ್ ಟ್ವೀಟ್ “ಆನಂದ್ ತೇಲ್ತುಂಬ್ಡೆ ಸದನದಲ್ಲಿ ಇರಬೇಕಾದವರು, ಜೈಲಿನಲ್ಲಿ ಅಲ್ಲ. ಅವರನ್ನು  ಬಿಡುಗಡೆಗೊಳಿಸಿ” ಎಂದು ಟ್ವೀಟ್ ಮಾಡಿದ್ದಾರೆ.

ಆನಂದ್ ತೇಲ್ತುಂಬ್ಡೆ ಭಾರತದ ಒಬ್ಬ ಪ್ರಮುಖ ವಿದ್ವಾಂಸ, ಲೋಕಚಿಂತಕ ಹಾಗೂ ಮಾನವ ಹಕ್ಕುಗಳ ಸಕ್ರಿಯ ಪ್ರತಿಪಾದಕರಾಗಿದ್ದಾರೆ. ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು.

2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.


ಓದಿ:  IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...