Homeಮುಖಪುಟ#Justice4Teltumbde : ಆನಂದ್ ತೇಲ್ತುಂಬ್ಡೆ ಪರ ನ್ಯಾಯದ ದಿನ ಟ್ವಿಟ್ಟರ್ ಅಭಿಯಾನ

#Justice4Teltumbde : ಆನಂದ್ ತೇಲ್ತುಂಬ್ಡೆ ಪರ ನ್ಯಾಯದ ದಿನ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಹೋರಾಟಗಾರ ಪ್ರಾಧ್ಯಾಪಕ ಡಾ. ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿ ತಿಂಗಳ ನೆನಪಿನಲ್ಲಿ ಹಾಗೂ ಹತ್ತಾರು ಸಾಮಾಜಿಕ ಹೋರಾಟಗಾರರ ಬಂಧನವನ್ನು ವಿರೋಧಿಸಿ ಇಂದು ನ್ಯಾಯದ ದಿನ ಅಭಿಯಾನ ನಡೆಸಲಾಗಿದೆ. ಟ್ವಿಟ್ಟರ್ ನಲ್ಲಿ #Justice4Teltumbde ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ.

ಈಗಾಗಲೇ ಹಲವಾರು ಸಾಮಾಜಿಕ ಹೋರಾಟಗಾರು, ಗಣ್ಯರು #Justice4Teltumbde ಹ್ಯಾಶ್ ಟ್ಯಾಗ್ ಹಾಕಿ ಭಿನ್ನಮತವಿರುವ ಸಾಮಾಜಿಕ ಹೋರಾಟಗಾರರ ಬಂಧನವನ್ನು ವಿರೋಧಿಸಿದ್ದಾರೆ.

ಊನಾ ಚಳುವಳಿಯ ನಾಯಕ ಹಾಗೂ ಶಾಸಕರಾಗಿರುವ ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿ “ನಮ್ಮ ಪ್ರೀತಿಯ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಜೈಲುಗಳಲ್ಲಿ ಇರುವ ಡಾ.ಆನಂದ್ ಮತ್ತು ಇತರ ಸಾಮಾಜಿಕ ಕಾರ್ಯಕರ್ತರೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲಲು ಈ ಕ್ಷಣವನ್ನು ಗುರುತಿಸೋಣ.” ಎಂದು ಹೇಳಿದ್ದಾರೆ.


ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?


JNU ಮಾಜೀ ನಾಯಕ ಟ್ವೀಟ್ ಮಾಡಿ “ಆನಂದ್ ತೇಲ್ತುಂಬ್ಡೆ ಹಾಗೂ ಇತರ ಎಲ್ಲ ಆತ್ಮಸಾಕ್ಷಿ ಇರುವ ಕೈದಿಗಳೊಂದಿಗೆ ಇವತ್ತು ನಾವು ನ್ಯಾಯದ ದಿನವೆಂದು ಗುರುತಿಸುತ್ತೇವೆ. ಈ ಮಾನ್ಯ ಆತ್ಮಗಳು ಅನ್ಯಾಯದ ವಿರುದ್ಧ ಮಾತನಾಡಿದ್ದಕ್ಕೆ, ಬರೆದದ್ದಕ್ಕೆ, ಅನ್ಯಾಯದ ವಿರುದ್ದ ಸೆಟೆದು ನಿಂತಿದ್ದಕ್ಕೆ ಜೈಲಿನಲ್ಲಿದ್ದಾರೆ” ಎಂದು ಬರೆದಿದ್ದಾರೆ.

ಜೊತೆಗೆ “ಆನಂದ್ ತೇಲ್ತುಂಬ್ಡೆ ಜೈಲಿನಲ್ಲಿರಬಾರದು. ಅವರು ಭಾರತದ ಅತ್ಯುತ್ತಮ ಸಾರ್ವಜನಿಕ ಪ್ರಭುದ್ದರಲ್ಲಿ ಒಬ್ಬರಾಗಿದ್ದಾರೆ, ಅವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಬೇಕು.” ಎಂದು ಕೂಡಾ ಹೇಳಿದ್ದಾರೆ.

ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಅವರು “ಪ್ರಜಾಪ್ರಭುತ್ವ ಎಂದರೆ ಭಿನ್ನಾಭಿಪ್ರಾಯವಿಲ್ಲದೆ ಏನೂ ಇಲ್ಲ.
ಡಾ. ಆನಂದ್ ತೇಲ್ತುಂಬ್ಡೆ ಅವರು ಇಂದು ನಮ್ಮ ದೇಶದಲ್ಲಿ ಇರುವ ಪ್ರಜಾಪ್ರಭುತ್ವದ ಪ್ರಬಲ ಧ್ವನಿಗಳಲ್ಲಿ ಒಬ್ಬರಾಗಿದ್ದಾರೆ ಮತ್ತು ಅದೇ ವ್ಯಕ್ತಿಯನ್ನು ಜೈಲಿನಲ್ಲಿ ಇರಿಸಲಾಗಿದೆ, ತೇಲ್ತುಂಬ್ಡೆ ಅವರಿಗೆ ನ್ಯಾಯ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ:  ಆನಂದ್‌ ತೇಲ್‌ತುಂಬ್ಡೆ ಎಂಬ ಅಂಬೇಡ್ಕರ್ ಆತ್ಮಬಂಧು


ಯುವ ಹಲ್ಲಾಬೋಲ್ ಚಳವಳಿಯ ಅನುಪಮ್ ಅವರು “ಇದು ಕೇವಲ ಡಾ. ಆನಂದ್ ತೇಲ್ತುಂಬ್ಡೆ ಅವರ ಹೇಳಿಕೆಯಲ್ಲ, ನಮ್ಮೆಲ್ಲರ ಮುಂದಿರುವ ಪ್ರಶ್ನೆಯಾಗಿದೆ. ಪ್ರಜಾಪ್ರಭುತ್ವವು ಭಿನ್ನಾಭಿಪ್ರಾಯವಿಲ್ಲದೆ ಇರುತ್ತದೆಯೇ” ಎಂದು ಹೇಳಲಿದ್ದಾರೆ.

ಕಾದಂಬರಿಗಾರ್ತಿ ಹಾಗೂ ಕವಯಿತ್ರಿ ಮೀನಾಕಂದಸ್ವಾಮಿ, ಗೌರಿ ಲಂಕೇಶ್ ನ್ಯೂಸ್ ನಲ್ಲಿ ಪ್ರಕಟವಾದ ದೇವನೂರು ಮಹದೇವ ಅವರ ಹೇಳಿಕೆಯನ್ನು ತಮ್ಮ ಟ್ವಿಟ್ಟರಿನಲ್ಲಿ ಪೋಸ್ಟ್ ಮಾಡಿ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ.

ಮಾನ್ಸಿ ಸಿಂಗ್ ಟ್ವೀಟ್ “ಆನಂದ್ ತೇಲ್ತುಂಬ್ಡೆ ಸದನದಲ್ಲಿ ಇರಬೇಕಾದವರು, ಜೈಲಿನಲ್ಲಿ ಅಲ್ಲ. ಅವರನ್ನು  ಬಿಡುಗಡೆಗೊಳಿಸಿ” ಎಂದು ಟ್ವೀಟ್ ಮಾಡಿದ್ದಾರೆ.

ಆನಂದ್ ತೇಲ್ತುಂಬ್ಡೆ ಭಾರತದ ಒಬ್ಬ ಪ್ರಮುಖ ವಿದ್ವಾಂಸ, ಲೋಕಚಿಂತಕ ಹಾಗೂ ಮಾನವ ಹಕ್ಕುಗಳ ಸಕ್ರಿಯ ಪ್ರತಿಪಾದಕರಾಗಿದ್ದಾರೆ. ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು.

2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.


ಓದಿ:  IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...