Homeಮುಖಪುಟ#Justice4Teltumbde : ಆನಂದ್ ತೇಲ್ತುಂಬ್ಡೆ ಪರ ನ್ಯಾಯದ ದಿನ ಟ್ವಿಟ್ಟರ್ ಅಭಿಯಾನ

#Justice4Teltumbde : ಆನಂದ್ ತೇಲ್ತುಂಬ್ಡೆ ಪರ ನ್ಯಾಯದ ದಿನ ಟ್ವಿಟ್ಟರ್ ಅಭಿಯಾನ

- Advertisement -
- Advertisement -

ಹೋರಾಟಗಾರ ಪ್ರಾಧ್ಯಾಪಕ ಡಾ. ಆನಂದ್ ತೇಲ್ತುಂಬ್ಡೆಯವರನ್ನು ಬಂಧಿಸಿ ತಿಂಗಳ ನೆನಪಿನಲ್ಲಿ ಹಾಗೂ ಹತ್ತಾರು ಸಾಮಾಜಿಕ ಹೋರಾಟಗಾರರ ಬಂಧನವನ್ನು ವಿರೋಧಿಸಿ ಇಂದು ನ್ಯಾಯದ ದಿನ ಅಭಿಯಾನ ನಡೆಸಲಾಗಿದೆ. ಟ್ವಿಟ್ಟರ್ ನಲ್ಲಿ #Justice4Teltumbde ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದೆ.

ಈಗಾಗಲೇ ಹಲವಾರು ಸಾಮಾಜಿಕ ಹೋರಾಟಗಾರು, ಗಣ್ಯರು #Justice4Teltumbde ಹ್ಯಾಶ್ ಟ್ಯಾಗ್ ಹಾಕಿ ಭಿನ್ನಮತವಿರುವ ಸಾಮಾಜಿಕ ಹೋರಾಟಗಾರರ ಬಂಧನವನ್ನು ವಿರೋಧಿಸಿದ್ದಾರೆ.

ಊನಾ ಚಳುವಳಿಯ ನಾಯಕ ಹಾಗೂ ಶಾಸಕರಾಗಿರುವ ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿ “ನಮ್ಮ ಪ್ರೀತಿಯ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಜೈಲುಗಳಲ್ಲಿ ಇರುವ ಡಾ.ಆನಂದ್ ಮತ್ತು ಇತರ ಸಾಮಾಜಿಕ ಕಾರ್ಯಕರ್ತರೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲಲು ಈ ಕ್ಷಣವನ್ನು ಗುರುತಿಸೋಣ.” ಎಂದು ಹೇಳಿದ್ದಾರೆ.


ಓದಿ: ಪ್ರೊ. ಆನಂದ್ ತೇಲ್ತುಂಬ್ಡೆ ನರೇಂದ್ರ ಮೋದಿ ಸರ್ಕಾರಕ್ಕೆ ಏಕೆ ಅಪಾಯಕಾರಿಯಾದರು?


JNU ಮಾಜೀ ನಾಯಕ ಟ್ವೀಟ್ ಮಾಡಿ “ಆನಂದ್ ತೇಲ್ತುಂಬ್ಡೆ ಹಾಗೂ ಇತರ ಎಲ್ಲ ಆತ್ಮಸಾಕ್ಷಿ ಇರುವ ಕೈದಿಗಳೊಂದಿಗೆ ಇವತ್ತು ನಾವು ನ್ಯಾಯದ ದಿನವೆಂದು ಗುರುತಿಸುತ್ತೇವೆ. ಈ ಮಾನ್ಯ ಆತ್ಮಗಳು ಅನ್ಯಾಯದ ವಿರುದ್ಧ ಮಾತನಾಡಿದ್ದಕ್ಕೆ, ಬರೆದದ್ದಕ್ಕೆ, ಅನ್ಯಾಯದ ವಿರುದ್ದ ಸೆಟೆದು ನಿಂತಿದ್ದಕ್ಕೆ ಜೈಲಿನಲ್ಲಿದ್ದಾರೆ” ಎಂದು ಬರೆದಿದ್ದಾರೆ.

ಜೊತೆಗೆ “ಆನಂದ್ ತೇಲ್ತುಂಬ್ಡೆ ಜೈಲಿನಲ್ಲಿರಬಾರದು. ಅವರು ಭಾರತದ ಅತ್ಯುತ್ತಮ ಸಾರ್ವಜನಿಕ ಪ್ರಭುದ್ದರಲ್ಲಿ ಒಬ್ಬರಾಗಿದ್ದಾರೆ, ಅವರಿಗೆ ರಾಷ್ಟ್ರೀಯ ಪ್ರಶಸ್ತಿ ನೀಡಬೇಕು.” ಎಂದು ಕೂಡಾ ಹೇಳಿದ್ದಾರೆ.

ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷರಾದ ಯೋಗೇಂದ್ರ ಅವರು “ಪ್ರಜಾಪ್ರಭುತ್ವ ಎಂದರೆ ಭಿನ್ನಾಭಿಪ್ರಾಯವಿಲ್ಲದೆ ಏನೂ ಇಲ್ಲ.
ಡಾ. ಆನಂದ್ ತೇಲ್ತುಂಬ್ಡೆ ಅವರು ಇಂದು ನಮ್ಮ ದೇಶದಲ್ಲಿ ಇರುವ ಪ್ರಜಾಪ್ರಭುತ್ವದ ಪ್ರಬಲ ಧ್ವನಿಗಳಲ್ಲಿ ಒಬ್ಬರಾಗಿದ್ದಾರೆ ಮತ್ತು ಅದೇ ವ್ಯಕ್ತಿಯನ್ನು ಜೈಲಿನಲ್ಲಿ ಇರಿಸಲಾಗಿದೆ, ತೇಲ್ತುಂಬ್ಡೆ ಅವರಿಗೆ ನ್ಯಾಯ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ.


ಓದಿ:  ಆನಂದ್‌ ತೇಲ್‌ತುಂಬ್ಡೆ ಎಂಬ ಅಂಬೇಡ್ಕರ್ ಆತ್ಮಬಂಧು


ಯುವ ಹಲ್ಲಾಬೋಲ್ ಚಳವಳಿಯ ಅನುಪಮ್ ಅವರು “ಇದು ಕೇವಲ ಡಾ. ಆನಂದ್ ತೇಲ್ತುಂಬ್ಡೆ ಅವರ ಹೇಳಿಕೆಯಲ್ಲ, ನಮ್ಮೆಲ್ಲರ ಮುಂದಿರುವ ಪ್ರಶ್ನೆಯಾಗಿದೆ. ಪ್ರಜಾಪ್ರಭುತ್ವವು ಭಿನ್ನಾಭಿಪ್ರಾಯವಿಲ್ಲದೆ ಇರುತ್ತದೆಯೇ” ಎಂದು ಹೇಳಲಿದ್ದಾರೆ.

ಕಾದಂಬರಿಗಾರ್ತಿ ಹಾಗೂ ಕವಯಿತ್ರಿ ಮೀನಾಕಂದಸ್ವಾಮಿ, ಗೌರಿ ಲಂಕೇಶ್ ನ್ಯೂಸ್ ನಲ್ಲಿ ಪ್ರಕಟವಾದ ದೇವನೂರು ಮಹದೇವ ಅವರ ಹೇಳಿಕೆಯನ್ನು ತಮ್ಮ ಟ್ವಿಟ್ಟರಿನಲ್ಲಿ ಪೋಸ್ಟ್ ಮಾಡಿ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ.

ಮಾನ್ಸಿ ಸಿಂಗ್ ಟ್ವೀಟ್ “ಆನಂದ್ ತೇಲ್ತುಂಬ್ಡೆ ಸದನದಲ್ಲಿ ಇರಬೇಕಾದವರು, ಜೈಲಿನಲ್ಲಿ ಅಲ್ಲ. ಅವರನ್ನು  ಬಿಡುಗಡೆಗೊಳಿಸಿ” ಎಂದು ಟ್ವೀಟ್ ಮಾಡಿದ್ದಾರೆ.

ಆನಂದ್ ತೇಲ್ತುಂಬ್ಡೆ ಭಾರತದ ಒಬ್ಬ ಪ್ರಮುಖ ವಿದ್ವಾಂಸ, ಲೋಕಚಿಂತಕ ಹಾಗೂ ಮಾನವ ಹಕ್ಕುಗಳ ಸಕ್ರಿಯ ಪ್ರತಿಪಾದಕರಾಗಿದ್ದಾರೆ. ನಿಷೇದಿತ ಮಾವೋವಾದಿ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ’ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯಿದೆ” (ಯುಎಪಿಎ) ಯಂತಹ ಕರಾಳ ಶಾಸನವನ್ನು ಬಳಸಿಕೊಂಡು ಅವರ ವಿರುದ್ದ ಪ್ರಕರಣವನ್ನು ದಾಖಲಿಸಲಾಗಿತ್ತು.

2018 ರಲ್ಲಿ ಭೀಮಾಕೊರೆಗಾವ್‌ನಲ್ಲಿ ದಲಿತ ಸಂಘಟನೆಗಳು ಹಮ್ಮಿಕೊಂಡಿದ್ದ ಆಚರಣೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರ ನಡೆದಿತ್ತು. ಈ ಸಂಬಂಧ ಆನಂದ್‌ ತೆಲ್ತುಂಬ್ಡೆಯವರ ಮೇಲೆಯೂ ಸಹ ಪ್ರಕರಣ ದಾಖಲಾಗಿದ್ದು, ಇದು ಪ್ರಭುತ್ವ ಪ್ರಾಯೋಜಿತ ಪಿತೂರಿ ಎಂದು ಆನಂದ್‌ ತೆಲ್ತುಂಬ್ಡೆಯವರು ಆರೋಪಿಸಿದ್ದಾರೆ.


ಓದಿ:  IIM ಅಹಮದಾಬಾದ್‍ನ ಮೊದಲ ಹಳೆಯ ವಿದ್ಯಾರ್ಥಿ, ಮೊದಲ IIT ಪ್ರೊಫೆಸರ್ ಹಾಗೂ ಮೊದಲ ಕಾ‍ರ್ಪೊರೇಟ್ CEO ಆನಂದ್‌ ತೇಲ್ತುಂಬ್ಡೆ ಬಂಧನ ಸರಿಯೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...