Homeಮುಖಪುಟಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

- Advertisement -
- Advertisement -

‘ಜನ ಸಾಮಾನ್ಯರ ಒಳಿತಿಗಾಗಿ’ ವಿತರಿಸಲು ಎಲ್ಲಾ ಖಾಸಗಿ ಒಡೆತನದ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಂವಿಧಾನದ ಅಡಿಯಲ್ಲಿ ಪ್ರಭುತ್ವಕ್ಕೆ ಅಧಿಕಾರವಿಲ್ಲ ಎಂದು 7:2 ಬಹುಮತದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನಿನ್ನೆ (ನ.5) ಹೇಳಿದೆ.

ಸಂವಿಧಾನದ ಪರಿಚ್ಛೇದ 39 (ಬಿ) ಅಡಿಯಲ್ಲಿ ಎಲ್ಲಾ ಖಾಸಗಿ ಒಡೆತನದ ಸಂಪನ್ಮೂಲಗಳನ್ನು ಪ್ರಭುತ್ವ ಸ್ವಾಧೀನಪಡಿಸಿಕೊಳ್ಳಬಹುದು ಎಂಬ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ ಹಿಂದಿನ ತೀರ್ಪನ್ನು ಸಿಜೆಐ ನೇತೃತ್ವದ ಬಹುಮತದ ತೀರ್ಪು ರದ್ದುಪಡಿಸಿದೆ.

‘ಜನ ಸಾಮಾನ್ಯರ ಒಳಿತಿಗಾಗಿ’ ಸಂವಿಧಾನದ ಪರಿಚ್ಛೇದ 39 (ಬಿ) ಅಡಿಯಲ್ಲಿ ಖಾಸಗಿ ಆಸ್ತಿಗಳನ್ನು ‘ಸಮುದಾಯದ ಸಂಪನ್ಮೂಲಗಳು ಎಂದು ಪರಿಗಣಿಸಬಹುದೇ? ಮತ್ತು ಪ್ರಭುತ್ವ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಬಹುದೇ?’ ಎಂಬ ಕಾನೂನಾತ್ಮಕ ಪ್ರಶ್ನೆಯ ಕುರಿತು ತನ್ನ ಮತ್ತು ಪೀಠದಲ್ಲಿದ್ದ ಇತರ ಆರು ನ್ಯಾಯಾಧೀಶರಾದ ಹೃಷಿಕೇಶ್ ರಾಯ್, ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ, ರಾಜೇಶ್ ಬಿಂದಾಲ್, ಸತೀಶ್ ಚಂದ್ರ ಶರ್ಮಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ತೀರ್ಪನ್ನು ಸಿಜೆಐ ಚಂದ್ರಚೂಡ್ ಬರೆದಿದ್ದಾರೆ.

ಒಟ್ಟು ಒಂಭತ್ತು ನ್ಯಾಯಾಧೀಶರ ಪೈಕಿ, ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು ಸಿಜೆಐ ಬರೆದ ಬಹುಮತದ ತೀರ್ಪನ್ನು ಭಾಗಶಃ ಒಪ್ಪಿಕೊಂಡಿಲ್ಲ. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಎಲ್ಲಾ ಅಂಶಗಳಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಏಳು ನ್ಯಾಯಾಧೀಶರ ಬಹುಮತದ ತೀರ್ಪು ಪ್ರಕಟಿಸುವ ವೇಳೆ ಸಿಜೆಐ ಚಂದ್ರಚೂಡ್ ಅವರು, 1978ರ ಕರ್ನಾಟಕ VS ರಂಗನಾಥ ರೆಡ್ಡಿ ಪ್ರಕರಣದಲ್ಲಿ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರು ಮಾಡಿರುವ ವಿಧಿ 39 (ಬಿ) ರ ಅಲ್ಪಸಂಖ್ಯಾತರ ವ್ಯಾಖ್ಯಾನವನ್ನು ಟೀಕಿಸಿದ್ದಾರೆ. ಅಲ್ಲದೆ, 1982ರ ಸಂಜೀವ್ ಕೋಕ್ ಮ್ಯಾನುಪ್ಯಾಕ್ಚರಿಂಗ್ ಕಂಪನಿ VS ಭಾರತ್ ಕೋಕಿಂಗ್ ಕೋಲ್ ಲಿ. ಪ್ರಕರಣದ ತೀರ್ಪಿನಲ್ಲಿ ನ್ಯಾಯಮೂರ್ತಿ ನಾಗರತ್ನ ಅವರ ತಂದೆ 1989ರಲ್ಲಿ ಸಿಜೆಐ ಆಗಿದ್ದ ನ್ಯಾಯಮೂರ್ತಿ ಇ.ಎಸ್ ವೆಂಕಟರಾಮಯ್ಯ ಸೇರಿದಂತೆ ಐವರು ನ್ಯಾಯಾಧೀಶರ ಪೀಠ ನೀಡಿದ ತೀರ್ಪಿನ ವ್ಯಾಖ್ಯಾನವನ್ನೂ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.

“ಅಯ್ಯರ್ ಅವರ ಸಿದ್ದಾಂತವು ವಿಶಾಲವಾದ ಮತ್ತು ಹೊಂದಿಕೊಳ್ಳಬಲ್ಲ ಗುಣ ಲಕ್ಷಣಗಳನ್ನು ಹೊಂದಿರುವ ಸಂವಿಧಾನಕ್ಕೆ ಅನ್ಯಾಯ ಮಾಡಿತ್ತು” ಎಂದು ಸಿಜೆಐ ಹೇಳಿದ್ದಾರೆ.

ಸಿಜೆಐ ನೀಡಿದ ಹೇಳಿಕೆಗೆ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಸುಧಾಂಶು ಧುಲಿಯಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಸಿಜೆಐ ಅವರ ಅಭಿಪ್ರಾಯಗಳು ಅನಪೇಕ್ಷಿತ ಹಾಗೂ ಸಮರ್ಥನೀಯವಲ್ಲ” ಎಂದು ನ್ಯಾಯಮೂರ್ತಿ ನಾಗರತ್ನ ಅವರು ಹೇಳಿದರೆ, “ಸಿಜೆಐ ಇಂಥ ಹೇಳಿಕೆಯನ್ನು ತಪ್ಪಿಸಬಹುದಿತ್ತು” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ತಿಳಿಸಿದ್ದಾರೆ.

ನ್ಯಾಯಮೂರ್ತಿ ನಾಗರತ್ನ ಅವರು 130 ಪುಟಗಳ ಪ್ರತ್ಯೇಕ ತೀರ್ಪು ನೀಡಿದ್ದು, “ಆರ್ಥಿಕ ನೀತಿ ನಿರೂಪಣೆ ಮಾಡುವುದು ನ್ಯಾಯಾಲಯದ ಕೆಲಸವಲ್ಲ. ಆದರೆ, ಆರ್ಥಿಕ ಪ್ರಜಾಪ್ರಭುತ್ವವೊಂದರ ಬುನಾದಿಗೆ ಬೇಕಾದಂತಹ ಚೌಕಟ್ಟು ರಚನೆಗೆ ನೆರವು ನೀಡಬಹುದಾಗಿದೆ. ಹೀಗಾಗಿ, ನ್ಯಾಯಮೂರ್ತಿ ಅಯ್ಯರ್ ಅವರ ಸಿದ್ದಾಂತವು ಸಂವಿಧಾನಕ್ಕೆ ಅಪಚಾರವೆಸಗಿಲ್ಲ” ಎಂದಿದ್ದಾರೆ.

“ಸರ್ಕಾರದ ಆರ್ಥಿಕ ನೀತಿಗಳಲ್ಲಿ ಭಾರೀ ಬದಲಾವಣೆಗಳಾಗಿವೆ ಎಂದ ಮಾತ್ರಕ್ಕೆ ಈ ಹಿಂದಿನ ನ್ಯಾಯಮೂರ್ತಿಗಳಿಂದ ಸಂವಿಧಾನಕ್ಕೆ ಅನ್ಯಾಯವಾಗಿದೆ ಎಂದು ಹೇಳುವುದು ಸರಿಯಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ನ್ಯಾಯಮೂರ್ತಿ ಅಯ್ಯರ್ ಸಿದ್ದಾಂತ ಕುರಿತಂತೆ ವ್ಯಕ್ತವಾದ ಹೇಳಿಕೆಗೆ ನನ್ನ ಬಲವಾದ ಅಸಮ್ಮತಿಯನ್ನು ದಾಖಲಿಸುತ್ತೇನೆ” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕೂಡ ಹೇಳಿದ್ದಾರೆ.

ಇದನ್ನೂ ಓದಿ : ಎಲ್ಲಾ ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಭುತ್ವಕ್ಕೆ ಅವಕಾಶವಿಲ್ಲ : ಸುಪ್ರೀಂಕೋರ್ಟ್​

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...