Homeಮುಖಪುಟಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

- Advertisement -
- Advertisement -

‘ಜನ ಸಾಮಾನ್ಯರ ಒಳಿತಿಗಾಗಿ’ ವಿತರಿಸಲು ಎಲ್ಲಾ ಖಾಸಗಿ ಒಡೆತನದ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಂವಿಧಾನದ ಅಡಿಯಲ್ಲಿ ಪ್ರಭುತ್ವಕ್ಕೆ ಅಧಿಕಾರವಿಲ್ಲ ಎಂದು 7:2 ಬಹುಮತದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನಿನ್ನೆ (ನ.5) ಹೇಳಿದೆ.

ಸಂವಿಧಾನದ ಪರಿಚ್ಛೇದ 39 (ಬಿ) ಅಡಿಯಲ್ಲಿ ಎಲ್ಲಾ ಖಾಸಗಿ ಒಡೆತನದ ಸಂಪನ್ಮೂಲಗಳನ್ನು ಪ್ರಭುತ್ವ ಸ್ವಾಧೀನಪಡಿಸಿಕೊಳ್ಳಬಹುದು ಎಂಬ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ ಹಿಂದಿನ ತೀರ್ಪನ್ನು ಸಿಜೆಐ ನೇತೃತ್ವದ ಬಹುಮತದ ತೀರ್ಪು ರದ್ದುಪಡಿಸಿದೆ.

‘ಜನ ಸಾಮಾನ್ಯರ ಒಳಿತಿಗಾಗಿ’ ಸಂವಿಧಾನದ ಪರಿಚ್ಛೇದ 39 (ಬಿ) ಅಡಿಯಲ್ಲಿ ಖಾಸಗಿ ಆಸ್ತಿಗಳನ್ನು ‘ಸಮುದಾಯದ ಸಂಪನ್ಮೂಲಗಳು ಎಂದು ಪರಿಗಣಿಸಬಹುದೇ? ಮತ್ತು ಪ್ರಭುತ್ವ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಬಹುದೇ?’ ಎಂಬ ಕಾನೂನಾತ್ಮಕ ಪ್ರಶ್ನೆಯ ಕುರಿತು ತನ್ನ ಮತ್ತು ಪೀಠದಲ್ಲಿದ್ದ ಇತರ ಆರು ನ್ಯಾಯಾಧೀಶರಾದ ಹೃಷಿಕೇಶ್ ರಾಯ್, ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ, ರಾಜೇಶ್ ಬಿಂದಾಲ್, ಸತೀಶ್ ಚಂದ್ರ ಶರ್ಮಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ತೀರ್ಪನ್ನು ಸಿಜೆಐ ಚಂದ್ರಚೂಡ್ ಬರೆದಿದ್ದಾರೆ.

ಒಟ್ಟು ಒಂಭತ್ತು ನ್ಯಾಯಾಧೀಶರ ಪೈಕಿ, ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು ಸಿಜೆಐ ಬರೆದ ಬಹುಮತದ ತೀರ್ಪನ್ನು ಭಾಗಶಃ ಒಪ್ಪಿಕೊಂಡಿಲ್ಲ. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಎಲ್ಲಾ ಅಂಶಗಳಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಏಳು ನ್ಯಾಯಾಧೀಶರ ಬಹುಮತದ ತೀರ್ಪು ಪ್ರಕಟಿಸುವ ವೇಳೆ ಸಿಜೆಐ ಚಂದ್ರಚೂಡ್ ಅವರು, 1978ರ ಕರ್ನಾಟಕ VS ರಂಗನಾಥ ರೆಡ್ಡಿ ಪ್ರಕರಣದಲ್ಲಿ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರು ಮಾಡಿರುವ ವಿಧಿ 39 (ಬಿ) ರ ಅಲ್ಪಸಂಖ್ಯಾತರ ವ್ಯಾಖ್ಯಾನವನ್ನು ಟೀಕಿಸಿದ್ದಾರೆ. ಅಲ್ಲದೆ, 1982ರ ಸಂಜೀವ್ ಕೋಕ್ ಮ್ಯಾನುಪ್ಯಾಕ್ಚರಿಂಗ್ ಕಂಪನಿ VS ಭಾರತ್ ಕೋಕಿಂಗ್ ಕೋಲ್ ಲಿ. ಪ್ರಕರಣದ ತೀರ್ಪಿನಲ್ಲಿ ನ್ಯಾಯಮೂರ್ತಿ ನಾಗರತ್ನ ಅವರ ತಂದೆ 1989ರಲ್ಲಿ ಸಿಜೆಐ ಆಗಿದ್ದ ನ್ಯಾಯಮೂರ್ತಿ ಇ.ಎಸ್ ವೆಂಕಟರಾಮಯ್ಯ ಸೇರಿದಂತೆ ಐವರು ನ್ಯಾಯಾಧೀಶರ ಪೀಠ ನೀಡಿದ ತೀರ್ಪಿನ ವ್ಯಾಖ್ಯಾನವನ್ನೂ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.

“ಅಯ್ಯರ್ ಅವರ ಸಿದ್ದಾಂತವು ವಿಶಾಲವಾದ ಮತ್ತು ಹೊಂದಿಕೊಳ್ಳಬಲ್ಲ ಗುಣ ಲಕ್ಷಣಗಳನ್ನು ಹೊಂದಿರುವ ಸಂವಿಧಾನಕ್ಕೆ ಅನ್ಯಾಯ ಮಾಡಿತ್ತು” ಎಂದು ಸಿಜೆಐ ಹೇಳಿದ್ದಾರೆ.

ಸಿಜೆಐ ನೀಡಿದ ಹೇಳಿಕೆಗೆ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಸುಧಾಂಶು ಧುಲಿಯಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಸಿಜೆಐ ಅವರ ಅಭಿಪ್ರಾಯಗಳು ಅನಪೇಕ್ಷಿತ ಹಾಗೂ ಸಮರ್ಥನೀಯವಲ್ಲ” ಎಂದು ನ್ಯಾಯಮೂರ್ತಿ ನಾಗರತ್ನ ಅವರು ಹೇಳಿದರೆ, “ಸಿಜೆಐ ಇಂಥ ಹೇಳಿಕೆಯನ್ನು ತಪ್ಪಿಸಬಹುದಿತ್ತು” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ತಿಳಿಸಿದ್ದಾರೆ.

ನ್ಯಾಯಮೂರ್ತಿ ನಾಗರತ್ನ ಅವರು 130 ಪುಟಗಳ ಪ್ರತ್ಯೇಕ ತೀರ್ಪು ನೀಡಿದ್ದು, “ಆರ್ಥಿಕ ನೀತಿ ನಿರೂಪಣೆ ಮಾಡುವುದು ನ್ಯಾಯಾಲಯದ ಕೆಲಸವಲ್ಲ. ಆದರೆ, ಆರ್ಥಿಕ ಪ್ರಜಾಪ್ರಭುತ್ವವೊಂದರ ಬುನಾದಿಗೆ ಬೇಕಾದಂತಹ ಚೌಕಟ್ಟು ರಚನೆಗೆ ನೆರವು ನೀಡಬಹುದಾಗಿದೆ. ಹೀಗಾಗಿ, ನ್ಯಾಯಮೂರ್ತಿ ಅಯ್ಯರ್ ಅವರ ಸಿದ್ದಾಂತವು ಸಂವಿಧಾನಕ್ಕೆ ಅಪಚಾರವೆಸಗಿಲ್ಲ” ಎಂದಿದ್ದಾರೆ.

“ಸರ್ಕಾರದ ಆರ್ಥಿಕ ನೀತಿಗಳಲ್ಲಿ ಭಾರೀ ಬದಲಾವಣೆಗಳಾಗಿವೆ ಎಂದ ಮಾತ್ರಕ್ಕೆ ಈ ಹಿಂದಿನ ನ್ಯಾಯಮೂರ್ತಿಗಳಿಂದ ಸಂವಿಧಾನಕ್ಕೆ ಅನ್ಯಾಯವಾಗಿದೆ ಎಂದು ಹೇಳುವುದು ಸರಿಯಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ನ್ಯಾಯಮೂರ್ತಿ ಅಯ್ಯರ್ ಸಿದ್ದಾಂತ ಕುರಿತಂತೆ ವ್ಯಕ್ತವಾದ ಹೇಳಿಕೆಗೆ ನನ್ನ ಬಲವಾದ ಅಸಮ್ಮತಿಯನ್ನು ದಾಖಲಿಸುತ್ತೇನೆ” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕೂಡ ಹೇಳಿದ್ದಾರೆ.

ಇದನ್ನೂ ಓದಿ : ಎಲ್ಲಾ ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಭುತ್ವಕ್ಕೆ ಅವಕಾಶವಿಲ್ಲ : ಸುಪ್ರೀಂಕೋರ್ಟ್​

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...