Homeಮುಖಪುಟಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

- Advertisement -
- Advertisement -

‘ಜನ ಸಾಮಾನ್ಯರ ಒಳಿತಿಗಾಗಿ’ ವಿತರಿಸಲು ಎಲ್ಲಾ ಖಾಸಗಿ ಒಡೆತನದ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಂವಿಧಾನದ ಅಡಿಯಲ್ಲಿ ಪ್ರಭುತ್ವಕ್ಕೆ ಅಧಿಕಾರವಿಲ್ಲ ಎಂದು 7:2 ಬಹುಮತದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನಿನ್ನೆ (ನ.5) ಹೇಳಿದೆ.

ಸಂವಿಧಾನದ ಪರಿಚ್ಛೇದ 39 (ಬಿ) ಅಡಿಯಲ್ಲಿ ಎಲ್ಲಾ ಖಾಸಗಿ ಒಡೆತನದ ಸಂಪನ್ಮೂಲಗಳನ್ನು ಪ್ರಭುತ್ವ ಸ್ವಾಧೀನಪಡಿಸಿಕೊಳ್ಳಬಹುದು ಎಂಬ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ ಹಿಂದಿನ ತೀರ್ಪನ್ನು ಸಿಜೆಐ ನೇತೃತ್ವದ ಬಹುಮತದ ತೀರ್ಪು ರದ್ದುಪಡಿಸಿದೆ.

‘ಜನ ಸಾಮಾನ್ಯರ ಒಳಿತಿಗಾಗಿ’ ಸಂವಿಧಾನದ ಪರಿಚ್ಛೇದ 39 (ಬಿ) ಅಡಿಯಲ್ಲಿ ಖಾಸಗಿ ಆಸ್ತಿಗಳನ್ನು ‘ಸಮುದಾಯದ ಸಂಪನ್ಮೂಲಗಳು ಎಂದು ಪರಿಗಣಿಸಬಹುದೇ? ಮತ್ತು ಪ್ರಭುತ್ವ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಬಹುದೇ?’ ಎಂಬ ಕಾನೂನಾತ್ಮಕ ಪ್ರಶ್ನೆಯ ಕುರಿತು ತನ್ನ ಮತ್ತು ಪೀಠದಲ್ಲಿದ್ದ ಇತರ ಆರು ನ್ಯಾಯಾಧೀಶರಾದ ಹೃಷಿಕೇಶ್ ರಾಯ್, ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ, ರಾಜೇಶ್ ಬಿಂದಾಲ್, ಸತೀಶ್ ಚಂದ್ರ ಶರ್ಮಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ತೀರ್ಪನ್ನು ಸಿಜೆಐ ಚಂದ್ರಚೂಡ್ ಬರೆದಿದ್ದಾರೆ.

ಒಟ್ಟು ಒಂಭತ್ತು ನ್ಯಾಯಾಧೀಶರ ಪೈಕಿ, ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು ಸಿಜೆಐ ಬರೆದ ಬಹುಮತದ ತೀರ್ಪನ್ನು ಭಾಗಶಃ ಒಪ್ಪಿಕೊಂಡಿಲ್ಲ. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಎಲ್ಲಾ ಅಂಶಗಳಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಏಳು ನ್ಯಾಯಾಧೀಶರ ಬಹುಮತದ ತೀರ್ಪು ಪ್ರಕಟಿಸುವ ವೇಳೆ ಸಿಜೆಐ ಚಂದ್ರಚೂಡ್ ಅವರು, 1978ರ ಕರ್ನಾಟಕ VS ರಂಗನಾಥ ರೆಡ್ಡಿ ಪ್ರಕರಣದಲ್ಲಿ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರು ಮಾಡಿರುವ ವಿಧಿ 39 (ಬಿ) ರ ಅಲ್ಪಸಂಖ್ಯಾತರ ವ್ಯಾಖ್ಯಾನವನ್ನು ಟೀಕಿಸಿದ್ದಾರೆ. ಅಲ್ಲದೆ, 1982ರ ಸಂಜೀವ್ ಕೋಕ್ ಮ್ಯಾನುಪ್ಯಾಕ್ಚರಿಂಗ್ ಕಂಪನಿ VS ಭಾರತ್ ಕೋಕಿಂಗ್ ಕೋಲ್ ಲಿ. ಪ್ರಕರಣದ ತೀರ್ಪಿನಲ್ಲಿ ನ್ಯಾಯಮೂರ್ತಿ ನಾಗರತ್ನ ಅವರ ತಂದೆ 1989ರಲ್ಲಿ ಸಿಜೆಐ ಆಗಿದ್ದ ನ್ಯಾಯಮೂರ್ತಿ ಇ.ಎಸ್ ವೆಂಕಟರಾಮಯ್ಯ ಸೇರಿದಂತೆ ಐವರು ನ್ಯಾಯಾಧೀಶರ ಪೀಠ ನೀಡಿದ ತೀರ್ಪಿನ ವ್ಯಾಖ್ಯಾನವನ್ನೂ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.

“ಅಯ್ಯರ್ ಅವರ ಸಿದ್ದಾಂತವು ವಿಶಾಲವಾದ ಮತ್ತು ಹೊಂದಿಕೊಳ್ಳಬಲ್ಲ ಗುಣ ಲಕ್ಷಣಗಳನ್ನು ಹೊಂದಿರುವ ಸಂವಿಧಾನಕ್ಕೆ ಅನ್ಯಾಯ ಮಾಡಿತ್ತು” ಎಂದು ಸಿಜೆಐ ಹೇಳಿದ್ದಾರೆ.

ಸಿಜೆಐ ನೀಡಿದ ಹೇಳಿಕೆಗೆ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಸುಧಾಂಶು ಧುಲಿಯಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಸಿಜೆಐ ಅವರ ಅಭಿಪ್ರಾಯಗಳು ಅನಪೇಕ್ಷಿತ ಹಾಗೂ ಸಮರ್ಥನೀಯವಲ್ಲ” ಎಂದು ನ್ಯಾಯಮೂರ್ತಿ ನಾಗರತ್ನ ಅವರು ಹೇಳಿದರೆ, “ಸಿಜೆಐ ಇಂಥ ಹೇಳಿಕೆಯನ್ನು ತಪ್ಪಿಸಬಹುದಿತ್ತು” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ತಿಳಿಸಿದ್ದಾರೆ.

ನ್ಯಾಯಮೂರ್ತಿ ನಾಗರತ್ನ ಅವರು 130 ಪುಟಗಳ ಪ್ರತ್ಯೇಕ ತೀರ್ಪು ನೀಡಿದ್ದು, “ಆರ್ಥಿಕ ನೀತಿ ನಿರೂಪಣೆ ಮಾಡುವುದು ನ್ಯಾಯಾಲಯದ ಕೆಲಸವಲ್ಲ. ಆದರೆ, ಆರ್ಥಿಕ ಪ್ರಜಾಪ್ರಭುತ್ವವೊಂದರ ಬುನಾದಿಗೆ ಬೇಕಾದಂತಹ ಚೌಕಟ್ಟು ರಚನೆಗೆ ನೆರವು ನೀಡಬಹುದಾಗಿದೆ. ಹೀಗಾಗಿ, ನ್ಯಾಯಮೂರ್ತಿ ಅಯ್ಯರ್ ಅವರ ಸಿದ್ದಾಂತವು ಸಂವಿಧಾನಕ್ಕೆ ಅಪಚಾರವೆಸಗಿಲ್ಲ” ಎಂದಿದ್ದಾರೆ.

“ಸರ್ಕಾರದ ಆರ್ಥಿಕ ನೀತಿಗಳಲ್ಲಿ ಭಾರೀ ಬದಲಾವಣೆಗಳಾಗಿವೆ ಎಂದ ಮಾತ್ರಕ್ಕೆ ಈ ಹಿಂದಿನ ನ್ಯಾಯಮೂರ್ತಿಗಳಿಂದ ಸಂವಿಧಾನಕ್ಕೆ ಅನ್ಯಾಯವಾಗಿದೆ ಎಂದು ಹೇಳುವುದು ಸರಿಯಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ನ್ಯಾಯಮೂರ್ತಿ ಅಯ್ಯರ್ ಸಿದ್ದಾಂತ ಕುರಿತಂತೆ ವ್ಯಕ್ತವಾದ ಹೇಳಿಕೆಗೆ ನನ್ನ ಬಲವಾದ ಅಸಮ್ಮತಿಯನ್ನು ದಾಖಲಿಸುತ್ತೇನೆ” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕೂಡ ಹೇಳಿದ್ದಾರೆ.

ಇದನ್ನೂ ಓದಿ : ಎಲ್ಲಾ ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಭುತ್ವಕ್ಕೆ ಅವಕಾಶವಿಲ್ಲ : ಸುಪ್ರೀಂಕೋರ್ಟ್​

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...