Homeಮುಖಪುಟಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

ಖಾಸಗಿ ಸ್ವತ್ತು ತೀರ್ಪು : ಅಯ್ಯರ್ ಕುರಿತ ಸಿಜೆಐ ಹೇಳಿಕೆಗೆ ನ್ಯಾ. ನಾಗರತ್ನ, ಧುಲಿಯಾ ಆಕ್ಷೇಪ

- Advertisement -
- Advertisement -

‘ಜನ ಸಾಮಾನ್ಯರ ಒಳಿತಿಗಾಗಿ’ ವಿತರಿಸಲು ಎಲ್ಲಾ ಖಾಸಗಿ ಒಡೆತನದ ಸಂಪನ್ಮೂಲಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಂವಿಧಾನದ ಅಡಿಯಲ್ಲಿ ಪ್ರಭುತ್ವಕ್ಕೆ ಅಧಿಕಾರವಿಲ್ಲ ಎಂದು 7:2 ಬಹುಮತದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನಿನ್ನೆ (ನ.5) ಹೇಳಿದೆ.

ಸಂವಿಧಾನದ ಪರಿಚ್ಛೇದ 39 (ಬಿ) ಅಡಿಯಲ್ಲಿ ಎಲ್ಲಾ ಖಾಸಗಿ ಒಡೆತನದ ಸಂಪನ್ಮೂಲಗಳನ್ನು ಪ್ರಭುತ್ವ ಸ್ವಾಧೀನಪಡಿಸಿಕೊಳ್ಳಬಹುದು ಎಂಬ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ ಹಿಂದಿನ ತೀರ್ಪನ್ನು ಸಿಜೆಐ ನೇತೃತ್ವದ ಬಹುಮತದ ತೀರ್ಪು ರದ್ದುಪಡಿಸಿದೆ.

‘ಜನ ಸಾಮಾನ್ಯರ ಒಳಿತಿಗಾಗಿ’ ಸಂವಿಧಾನದ ಪರಿಚ್ಛೇದ 39 (ಬಿ) ಅಡಿಯಲ್ಲಿ ಖಾಸಗಿ ಆಸ್ತಿಗಳನ್ನು ‘ಸಮುದಾಯದ ಸಂಪನ್ಮೂಲಗಳು ಎಂದು ಪರಿಗಣಿಸಬಹುದೇ? ಮತ್ತು ಪ್ರಭುತ್ವ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಬಹುದೇ?’ ಎಂಬ ಕಾನೂನಾತ್ಮಕ ಪ್ರಶ್ನೆಯ ಕುರಿತು ತನ್ನ ಮತ್ತು ಪೀಠದಲ್ಲಿದ್ದ ಇತರ ಆರು ನ್ಯಾಯಾಧೀಶರಾದ ಹೃಷಿಕೇಶ್ ರಾಯ್, ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ, ರಾಜೇಶ್ ಬಿಂದಾಲ್, ಸತೀಶ್ ಚಂದ್ರ ಶರ್ಮಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ತೀರ್ಪನ್ನು ಸಿಜೆಐ ಚಂದ್ರಚೂಡ್ ಬರೆದಿದ್ದಾರೆ.

ಒಟ್ಟು ಒಂಭತ್ತು ನ್ಯಾಯಾಧೀಶರ ಪೈಕಿ, ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರು ಸಿಜೆಐ ಬರೆದ ಬಹುಮತದ ತೀರ್ಪನ್ನು ಭಾಗಶಃ ಒಪ್ಪಿಕೊಂಡಿಲ್ಲ. ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಎಲ್ಲಾ ಅಂಶಗಳಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಏಳು ನ್ಯಾಯಾಧೀಶರ ಬಹುಮತದ ತೀರ್ಪು ಪ್ರಕಟಿಸುವ ವೇಳೆ ಸಿಜೆಐ ಚಂದ್ರಚೂಡ್ ಅವರು, 1978ರ ಕರ್ನಾಟಕ VS ರಂಗನಾಥ ರೆಡ್ಡಿ ಪ್ರಕರಣದಲ್ಲಿ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರು ಮಾಡಿರುವ ವಿಧಿ 39 (ಬಿ) ರ ಅಲ್ಪಸಂಖ್ಯಾತರ ವ್ಯಾಖ್ಯಾನವನ್ನು ಟೀಕಿಸಿದ್ದಾರೆ. ಅಲ್ಲದೆ, 1982ರ ಸಂಜೀವ್ ಕೋಕ್ ಮ್ಯಾನುಪ್ಯಾಕ್ಚರಿಂಗ್ ಕಂಪನಿ VS ಭಾರತ್ ಕೋಕಿಂಗ್ ಕೋಲ್ ಲಿ. ಪ್ರಕರಣದ ತೀರ್ಪಿನಲ್ಲಿ ನ್ಯಾಯಮೂರ್ತಿ ನಾಗರತ್ನ ಅವರ ತಂದೆ 1989ರಲ್ಲಿ ಸಿಜೆಐ ಆಗಿದ್ದ ನ್ಯಾಯಮೂರ್ತಿ ಇ.ಎಸ್ ವೆಂಕಟರಾಮಯ್ಯ ಸೇರಿದಂತೆ ಐವರು ನ್ಯಾಯಾಧೀಶರ ಪೀಠ ನೀಡಿದ ತೀರ್ಪಿನ ವ್ಯಾಖ್ಯಾನವನ್ನೂ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.

“ಅಯ್ಯರ್ ಅವರ ಸಿದ್ದಾಂತವು ವಿಶಾಲವಾದ ಮತ್ತು ಹೊಂದಿಕೊಳ್ಳಬಲ್ಲ ಗುಣ ಲಕ್ಷಣಗಳನ್ನು ಹೊಂದಿರುವ ಸಂವಿಧಾನಕ್ಕೆ ಅನ್ಯಾಯ ಮಾಡಿತ್ತು” ಎಂದು ಸಿಜೆಐ ಹೇಳಿದ್ದಾರೆ.

ಸಿಜೆಐ ನೀಡಿದ ಹೇಳಿಕೆಗೆ ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಮತ್ತು ಸುಧಾಂಶು ಧುಲಿಯಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಸಿಜೆಐ ಅವರ ಅಭಿಪ್ರಾಯಗಳು ಅನಪೇಕ್ಷಿತ ಹಾಗೂ ಸಮರ್ಥನೀಯವಲ್ಲ” ಎಂದು ನ್ಯಾಯಮೂರ್ತಿ ನಾಗರತ್ನ ಅವರು ಹೇಳಿದರೆ, “ಸಿಜೆಐ ಇಂಥ ಹೇಳಿಕೆಯನ್ನು ತಪ್ಪಿಸಬಹುದಿತ್ತು” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ತಿಳಿಸಿದ್ದಾರೆ.

ನ್ಯಾಯಮೂರ್ತಿ ನಾಗರತ್ನ ಅವರು 130 ಪುಟಗಳ ಪ್ರತ್ಯೇಕ ತೀರ್ಪು ನೀಡಿದ್ದು, “ಆರ್ಥಿಕ ನೀತಿ ನಿರೂಪಣೆ ಮಾಡುವುದು ನ್ಯಾಯಾಲಯದ ಕೆಲಸವಲ್ಲ. ಆದರೆ, ಆರ್ಥಿಕ ಪ್ರಜಾಪ್ರಭುತ್ವವೊಂದರ ಬುನಾದಿಗೆ ಬೇಕಾದಂತಹ ಚೌಕಟ್ಟು ರಚನೆಗೆ ನೆರವು ನೀಡಬಹುದಾಗಿದೆ. ಹೀಗಾಗಿ, ನ್ಯಾಯಮೂರ್ತಿ ಅಯ್ಯರ್ ಅವರ ಸಿದ್ದಾಂತವು ಸಂವಿಧಾನಕ್ಕೆ ಅಪಚಾರವೆಸಗಿಲ್ಲ” ಎಂದಿದ್ದಾರೆ.

“ಸರ್ಕಾರದ ಆರ್ಥಿಕ ನೀತಿಗಳಲ್ಲಿ ಭಾರೀ ಬದಲಾವಣೆಗಳಾಗಿವೆ ಎಂದ ಮಾತ್ರಕ್ಕೆ ಈ ಹಿಂದಿನ ನ್ಯಾಯಮೂರ್ತಿಗಳಿಂದ ಸಂವಿಧಾನಕ್ಕೆ ಅನ್ಯಾಯವಾಗಿದೆ ಎಂದು ಹೇಳುವುದು ಸರಿಯಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ನ್ಯಾಯಮೂರ್ತಿ ಅಯ್ಯರ್ ಸಿದ್ದಾಂತ ಕುರಿತಂತೆ ವ್ಯಕ್ತವಾದ ಹೇಳಿಕೆಗೆ ನನ್ನ ಬಲವಾದ ಅಸಮ್ಮತಿಯನ್ನು ದಾಖಲಿಸುತ್ತೇನೆ” ಎಂದು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಕೂಡ ಹೇಳಿದ್ದಾರೆ.

ಇದನ್ನೂ ಓದಿ : ಎಲ್ಲಾ ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಭುತ್ವಕ್ಕೆ ಅವಕಾಶವಿಲ್ಲ : ಸುಪ್ರೀಂಕೋರ್ಟ್​

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...