Homeಮುಖಪುಟಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

ಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

- Advertisement -
- Advertisement -

2012, ಅಕ್ಟೋಬರ್‌ 1ರಂದು ರಾಜ್ಯಸಭೆಯಲ್ಲಿ ನಡೆದ ಘಟನೆ. ಬಿಜೆಪಿಯ ಬಹುದೊಡ್ಡ ನಾಯಕರಾಗಿದ್ದ ಅರುಣ್ ಜೇಟ್ಲಿಯವರು ಮಾತನಾಡುತ್ತಾ, “ಹಾಲಿ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಲ್ಲಿ ಕೆಲವರಿಗೆ ಕಾನೂನು ಗೊತ್ತು, ಕೆಲವರಿಗೆ ಕಾನೂನು ಮಂತ್ರಿಗಳು ಗೊತ್ತು” ಎನ್ನುತ್ತಾರೆ. ಸರ್ವೊಚ್ಚ ನ್ಯಾಯಾಲಯದ ಕೆಲವು ನ್ಯಾಯಮೂರ್ತಿಗಳು ವಸೂಲಿ ಬಾಜಿ ಮಾಡುತ್ತಿದ್ದಾರೆಂಬುದು ಜೇಟ್ಲಿಯವರ ಆರೋಪವಾಗಿತ್ತು.

ಮುಂದುವರಿದು ಅದೇ ಜೇಟ್ಲಿಯವರು, “ನಿವೃತ್ತಿ ಪೂರ್ವದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನೀಡುವ ತೀರ್ಮಾನಗಳು, ನಿವೃತ್ತಿಯ ನಂತರ ಸಿಗುವ ಲಾಭದ ಆಸೆಗಳನ್ನು ಹೊಂದಿರುತ್ತವೆ” ಎಂದು ದೂರಿದ್ದರು. ನ್ಯಾಯಮೂರ್ತಿಗಳು ನೀಡುವ ಜಡ್ಜ್‌ಮೆಂಟ್‌ಗಳು ಸರ್ಕಾರದ ಪರ ಪಕ್ಷಪಾತಿಯಾಗಿರುತ್ತವೆ ಎಂಬುದು ಜೇಟ್ಲಿಯವರ ನೇರ ಆರೋಪವಾಗಿತ್ತು.

ಪ್ರಮುಖ ಪ್ರಕರಣಗಳಲ್ಲಿ ಸರ್ಕಾರದ ಪರ ತೀರ್ಪು ನೀಡಿದ್ದರೆ ನಿವೃತ್ತಿಯ ನಂತರದಲ್ಲಿ ಅಂತಹ ನ್ಯಾಯಮೂರ್ತಿಗಳಿಗೆ ಪ್ರಭುತ್ವ ಆಯಕಟ್ಟಿನ ಜಾಗಗಳನ್ನು ನೀಡುತ್ತದೆ ಎಂಬ ಟೀಕೆಗಳು ಆಗಾಗ್ಗೆ ಕೇಳಿಬರುತ್ತವೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಸಂವಿಧಾನ ಪೀಠದ ಭಾಗವಾಗಿದ್ದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ಈ ಹಳೆಯ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ (ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಸರ್ಕಾರವೇ ಪಾರ್ಟಿ ಅಲ್ಲದಿದ್ದರೂ ಹಿಂದುತ್ವ ಪ್ರಣೀತ ರಾಜಕೀಯ ಮಾಡುವ ಬಿಜೆಪಿಗೆ ಸೈದ್ಧಾಂತಿಕವಾಗಿ ಗೆಲುವು ಸಿಕ್ಕಿದ್ದು ಗಮನಾರ್ಹ).

ಬಾಬ್ರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮಂದಿರದ ಪರವಾಗಿ ತೀರ್ಪು ನೀಡಿದ ಐವರು ನ್ಯಾಯಮೂರ್ತಿಗಳ ಸದ್ಯದ ಸ್ಥಿತಿಗಳ ಕುರಿತು ಪಟ್ಟಿ ಮಾಡಿರುವ ಚಿಂತಕ ಶಿವಸುಂದರ್‌, “ಮೋದಿ ಸರ್ಕಾರ ನ್ಯಾ. ರಂಜನ್ ಗೊಗೋಯ್ ಅವರನ್ನು ನಿವೃತ್ತಿಯಾದ ನಾಲ್ಕೇ ತಿಂಗಳಲ್ಲಿ- 2020ರ ಮಾರ್ಚ್‌ನಲ್ಲಿ ರಾಜ್ಯಸಭಾ ಸದಸ್ಯರನ್ನಾಗಿ ನೇಮಿಸಿತು. ನ್ಯಾ. ಅಶೋಕ್ ಭೂಷಣ್ ಅವರನ್ನು ನಿವೃತ್ತಿಯಾದ ನಾಲ್ಕೇ ತಿಂಗಳಲ್ಲಿ ಮೋದಿ ಸರ್ಕಾರ ದೇಶದ ಅತ್ಯಂತ ದೊಡ್ಡ ಕಾರ್ಪೊರೇಟ್ ಗಳ ಕೋಟ್ಯಂತರ ಮೌಲ್ಯದ ವ್ಯಾಜ್ಯಗಳನ್ನು ಬಗೆಹರಿಸುವ National Company Law Appellate Tribunalನ ಅಧ್ಯಕ್ಷರನ್ನಾಗಿ 2021ರ ನವಂಬರ್‌ನಲ್ಲಿ ನೇಮಿಸಿತು. ಅಯೋಧ್ಯಾ ಪೀಠದಲ್ಲಿ ಏಕೈಕ ಮುಸ್ಲಿಂ ಸದಸ್ಯರಾಗಿದ್ದ ನ್ಯಾ. ಅಬ್ದುಲ್ ನಜಿರ್ ಅವರನ್ನು ನಿವೃತ್ತಿಯಾಗಿ ತಿಂಗಳು ಕಳೆಯುವ ಮುನ್ನವೇ ಇಂದು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ” ಎಂದು ವಿವರಿಸಿದ್ದಾರೆ.

“ಇನ್ನುಳಿದವರಲ್ಲಿ ಜಸ್ಟೀಸ್ ಬೋಬ್ಡೆ ಅವರು ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾದ ಮೇಲೆ ನಾಗಪುರದ ಪರವಾಗಿ ಸಿಕ್ಕಾಪಟ್ಟೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಪ್ರಾಯಶಃ ದೇಶಕ್ಕೆ ಇನ್ನೂ ದೊಡ್ಡದಾದ ಆಶ್ಚರ್ಯ ಕಾದಿರಬಹುದು. ಆ ಪೀಠದ ಸದಸ್ಯರಾಗಿದ್ದ ನ್ಯಾ. ಚಂದ್ರಚೂಡ್ (ಇವರೇ ಇಡೀ ಅಯೋಧ್ಯಾ ಆದೇಶವನ್ನು ಬರೆದವರು ಎಂಬ ಪರೋಕ್ಷ ಸೂಚನೆಯನ್ನು ಗೊಗೋಯ್ ಅವರು ತಮ್ಮ ಪುಸ್ತಕದಲ್ಲಿ ನೀಡಿದ್ದಾರೆ) ಅವರೀಗ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಇಷ್ಟೆಲ್ಲಾ ಆದರೂ ದೇಶ ಇವರ ಬಗ್ಗೆ ಅಪಾರ ನಿರೀಕ್ಷೆಗಳನ್ನು ಇನ್ನೂ ಇಟ್ಟುಕೊಂಡಿದೆ” ಎಂದಿದ್ದಾರೆ ಶಿವಸುಂದರ್‌.

ಮುಂದುವರಿದು, “ವಿಪರ್ಯಾಸವೆಂದರೆ ದೇಶ ಹಾಗೂ ಸಂಘಪರಿವಾರ ಇಬ್ಬರೂ ತದ್ವಿರುದ್ಧ ಕಾರಣಗಳಿಗಾಗಿ ನ್ಯಾ. ಚಂದ್ರಚೂಡ್‌ ಅವರ ಬಗ್ಗೆ ಏಕಕಾಲದಲ್ಲಿ ಆತಂಕ ಹಾಗೂ ಆಶಯಗಳನ್ನಿಟ್ಟುಕೊಂಡು ಗಮನಿಸುತ್ತಿದೆ. ಆದರೆ ಈವರೆಗೆ ನ್ಯಾ. ಚಂದ್ರಚೂಡ್‌ ಅವರು, ಅಗತ್ಯವಿದ್ದರೂ, ಅವಕಾಶವಿದ್ದರೂ ದೇಶಕ್ಕೆ ನಿರಾಳ ಒದಗಿಸಬಹುದಾದ ಹಾಗೂ ಮೋದಿ ಸರ್ಕಾರದ ಸಂವಿಧಾನ ವಿರೋಧಿ ಕೃತ್ಯಗಳಿಗೆ ಲಗಾಮು ಹಾಕುವಂತಹ ಯಾವುದೇ ದೊಡ್ಡ ನ್ಯಾಯ ತೀರ್ಮಾನ ಕೈಗೊಂಡಿಲ್ಲ” ಎಂದು ಅಭಿಪ್ರಾಯ ತಾಳಿದ್ದಾರೆ.

ನಿವೃತ್ತಿಯೋತ್ತರ ನ್ಯಾಯಮೂರ್ತಿಗಳ ಬದುಕಿನ ಕುರಿತು ಅಧ್ಯಯನವೂ ಆಗಿದೆ. “2004ರಿಂದ 2014ರ ನಡುವಿನ ಅವಧಿಯನ್ನು ಮುಖ್ಯವಾಗಿಟ್ಟುಕೊಂಡು ಸಿಂಗಾಪುರ ವಿಶ್ವವಿದ್ಯಾನಿಲಯ ಸಂಶೋಧನೆಯೊಂದನ್ನು ಮಾಡಿತು. ಕೇಂದ್ರ ಸರ್ಕಾರ ಪಾರ್ಟಿಯಾಗಿದ್ದ ಪ್ರಕರಣಗಳ ಪೈಕಿ ಸರ್ಕಾರದ ಪರ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಯಾವುದಾದರೂ ಲಾಭವಾಗಿದೆಯೇ ಎಂಬುದನ್ನು ಈ ಸಂಶೋಧನೆ ಶೋಧಿಸಿತು. ಸುಮಾರು 2,500 ತೀರ್ಪುಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಕೇಂದ್ರದ ಪರ ತೀರ್ಪು ಕೊಟ್ಟ ಶೇ. 92 ನ್ಯಾಯಮೂರ್ತಿಗಳು ನಿವೃತ್ತಿಯ ನಂತರ ಫಲಾನುಭವಿಗಳಾಗಿದ್ದಾರೆ” ಎಂದಿದೆ ವರದಿ.

ಚಿಂತಕರಾದ ಶಿವಸುಂದರ್‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ನಿವೃತ್ತಿಯ ನಂತರ ಫಲಾನುಭವಿಗಳಾಗಲು 2000ನೇ ಇಸವಿಯ ಬಳಿಕ ಸಾಕಷ್ಟು ಅವಕಾಶಗಳು ನ್ಯಾಯಮೂರ್ತಿಗಳಿಗೆ ಒದಗಿ ಬಂದಿವೆ. ಯಾಕೆಂದರೆ ಸಾಕಷ್ಟು ಟ್ರಿಬ್ಯೂನಲ್‌ಗಳು ಶುರುವಾಗಿದ್ದು ಇದಕ್ಕೆ ಕಾರಣ. ಕರ್ನಾಟಕ ಹೈಕೋರ್ಟ್‌ನಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದಾಗ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಿತು ರಾಜ್ ಅವಸ್ಥಿಯವರೀಗ ಕಾನೂನು ಆಯೋಗದ ಅಧ್ಯಕ್ಷರಾಗಿದ್ದಾರೆ” ಎಂದು ಮಾಹಿತಿ ನೀಡಿದರು.

ದೇಶಕ್ಕೆ ಸೇವೆ ಸಲ್ಲಿಸಿದ ನ್ಯಾಯಾಧೀಶರ ಅನುಭವವನ್ನು ಅವರ ನಿವೃತ್ತಿಯ ನಂತರವೂ ದೇಶಕ್ಕಾಗಿ ಬಳಸಿಕೊಳ್ಳಬಹುದಲ್ಲ? ಎಂಬ ಪ್ರಶ್ನೆಯೂ ಮಹತ್ವದ್ದಾಗಿದೆ. ಹೈಕೋರ್ಟ್ ವಕೀಲರಾದ ರಾಜಲಕ್ಷ್ಮಿ ಅಂಕಲಗಿಯವರು ಈ ಕುರಿತು ಪ್ರತಿಕ್ರಿಯಿಸಿ, “ನ್ಯಾಯಮೂರ್ತಿಗಳು ನಿವೃತ್ತಿಯ ನಂತರ ಆಯೋಗಗಳಲ್ಲಿ, ತನಿಖಾ ಸಮಿತಿಗಳಲ್ಲಿ ತಮ್ಮ ಅನುಭವವನ್ನು ಧಾರೆ ಎರೆಯಬಹುದು. ರಾಜಕಾರಣಿಯಾಗುವ ಅವಶ್ಯವಿರುವುದಿಲ್ಲ. ತಮ್ಮ ಅನುಭವದ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ದೇಶಕ್ಕೂ ಒಳಿತಾಗುತ್ತದೆ. ನಿವೃತ್ತ ನಂತರವೂ ಕಾನೂನಾತ್ಮಕವಾಗಿ ಮಾಡಬಹುದಾದ ಕೆಲಸಗಳು ಸಾಕಷ್ಟಿರುತ್ತವೆ. ಆದರೆ ರಂಜನ್ ಗೊಗಾಯ್‌ ಅವರು ಸಂಸದರಾಗಿ ಆಯ್ಕೆಯಾಗಿದ್ದು ಸರಿಯಲ್ಲ. ದೇಶದ ಮುಖ್ಯ ನ್ಯಾಯಮೂರ್ತಿಯಾಗಿದ್ದವರು ಸ್ಪೀಕರ್‌ಗಳಿಗೆ ಪ್ರಮಾಣ ವಚನ ಬೋಧಿಸಿರುತ್ತಾರೆ. ಅಂಥವರು ಹೋಗಿ ಸದನದಲ್ಲಿ ಕೂತಾಗ ಎದುರಾಳಿಯ ಕಟು ಟೀಕೆಗಳಿಗೆ ಗುರಿಯಾಗಬೇಕಾಗಿರುತ್ತದೆ. ವೈಯಕ್ತಿಕ ನೆಲೆಯಲ್ಲಿ ವಾಗ್ಯುದ್ಧಗಳನ್ನು ನಡೆಸಬೇಕಾಗುತ್ತದೆ. ಹೀಗಾಗಿ ನ್ಯಾಯಮೂರ್ತಿಗಳು ತಮ್ಮ ಅನುಭವವನ್ನು ಸರಿಯಾದ ಕ್ರಮದಲ್ಲಿ ವಿನಿಯೋಗಿಸಬೇಕು. ತಮ್ಮ ಅಧಿಕಾರವಧಿಯಲ್ಲಿ ಸರ್ಕಾರದ ಪರ ಕೆಲಸ ಮಾಡಿದರೆಂಬ ಕಾರಣಕ್ಕೆ ಈ ಹುದ್ದೆ ಸಿಕ್ಕಿದೆ ಎಂಬ ಟೀಕೆಗಳಿಗೆ ಗುರಿಯಾಗಬಾರದು. ಆ ರೀತಿಯ ಅಭಿಪ್ರಾಯಗಳು ಉಂಟಾಗುವುದರಿಂದ ಇಡೀ ನ್ಯಾಯಾಂಗದ ಹೆಸರು ಹಾಳಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...