Homeಮುಖಪುಟಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

ಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

- Advertisement -
- Advertisement -

2012, ಅಕ್ಟೋಬರ್‌ 1ರಂದು ರಾಜ್ಯಸಭೆಯಲ್ಲಿ ನಡೆದ ಘಟನೆ. ಬಿಜೆಪಿಯ ಬಹುದೊಡ್ಡ ನಾಯಕರಾಗಿದ್ದ ಅರುಣ್ ಜೇಟ್ಲಿಯವರು ಮಾತನಾಡುತ್ತಾ, “ಹಾಲಿ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಲ್ಲಿ ಕೆಲವರಿಗೆ ಕಾನೂನು ಗೊತ್ತು, ಕೆಲವರಿಗೆ ಕಾನೂನು ಮಂತ್ರಿಗಳು ಗೊತ್ತು” ಎನ್ನುತ್ತಾರೆ. ಸರ್ವೊಚ್ಚ ನ್ಯಾಯಾಲಯದ ಕೆಲವು ನ್ಯಾಯಮೂರ್ತಿಗಳು ವಸೂಲಿ ಬಾಜಿ ಮಾಡುತ್ತಿದ್ದಾರೆಂಬುದು ಜೇಟ್ಲಿಯವರ ಆರೋಪವಾಗಿತ್ತು.

ಮುಂದುವರಿದು ಅದೇ ಜೇಟ್ಲಿಯವರು, “ನಿವೃತ್ತಿ ಪೂರ್ವದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನೀಡುವ ತೀರ್ಮಾನಗಳು, ನಿವೃತ್ತಿಯ ನಂತರ ಸಿಗುವ ಲಾಭದ ಆಸೆಗಳನ್ನು ಹೊಂದಿರುತ್ತವೆ” ಎಂದು ದೂರಿದ್ದರು. ನ್ಯಾಯಮೂರ್ತಿಗಳು ನೀಡುವ ಜಡ್ಜ್‌ಮೆಂಟ್‌ಗಳು ಸರ್ಕಾರದ ಪರ ಪಕ್ಷಪಾತಿಯಾಗಿರುತ್ತವೆ ಎಂಬುದು ಜೇಟ್ಲಿಯವರ ನೇರ ಆರೋಪವಾಗಿತ್ತು.

ಪ್ರಮುಖ ಪ್ರಕರಣಗಳಲ್ಲಿ ಸರ್ಕಾರದ ಪರ ತೀರ್ಪು ನೀಡಿದ್ದರೆ ನಿವೃತ್ತಿಯ ನಂತರದಲ್ಲಿ ಅಂತಹ ನ್ಯಾಯಮೂರ್ತಿಗಳಿಗೆ ಪ್ರಭುತ್ವ ಆಯಕಟ್ಟಿನ ಜಾಗಗಳನ್ನು ನೀಡುತ್ತದೆ ಎಂಬ ಟೀಕೆಗಳು ಆಗಾಗ್ಗೆ ಕೇಳಿಬರುತ್ತವೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಸಂವಿಧಾನ ಪೀಠದ ಭಾಗವಾಗಿದ್ದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ಈ ಹಳೆಯ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ (ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಸರ್ಕಾರವೇ ಪಾರ್ಟಿ ಅಲ್ಲದಿದ್ದರೂ ಹಿಂದುತ್ವ ಪ್ರಣೀತ ರಾಜಕೀಯ ಮಾಡುವ ಬಿಜೆಪಿಗೆ ಸೈದ್ಧಾಂತಿಕವಾಗಿ ಗೆಲುವು ಸಿಕ್ಕಿದ್ದು ಗಮನಾರ್ಹ).

ಬಾಬ್ರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮಂದಿರದ ಪರವಾಗಿ ತೀರ್ಪು ನೀಡಿದ ಐವರು ನ್ಯಾಯಮೂರ್ತಿಗಳ ಸದ್ಯದ ಸ್ಥಿತಿಗಳ ಕುರಿತು ಪಟ್ಟಿ ಮಾಡಿರುವ ಚಿಂತಕ ಶಿವಸುಂದರ್‌, “ಮೋದಿ ಸರ್ಕಾರ ನ್ಯಾ. ರಂಜನ್ ಗೊಗೋಯ್ ಅವರನ್ನು ನಿವೃತ್ತಿಯಾದ ನಾಲ್ಕೇ ತಿಂಗಳಲ್ಲಿ- 2020ರ ಮಾರ್ಚ್‌ನಲ್ಲಿ ರಾಜ್ಯಸಭಾ ಸದಸ್ಯರನ್ನಾಗಿ ನೇಮಿಸಿತು. ನ್ಯಾ. ಅಶೋಕ್ ಭೂಷಣ್ ಅವರನ್ನು ನಿವೃತ್ತಿಯಾದ ನಾಲ್ಕೇ ತಿಂಗಳಲ್ಲಿ ಮೋದಿ ಸರ್ಕಾರ ದೇಶದ ಅತ್ಯಂತ ದೊಡ್ಡ ಕಾರ್ಪೊರೇಟ್ ಗಳ ಕೋಟ್ಯಂತರ ಮೌಲ್ಯದ ವ್ಯಾಜ್ಯಗಳನ್ನು ಬಗೆಹರಿಸುವ National Company Law Appellate Tribunalನ ಅಧ್ಯಕ್ಷರನ್ನಾಗಿ 2021ರ ನವಂಬರ್‌ನಲ್ಲಿ ನೇಮಿಸಿತು. ಅಯೋಧ್ಯಾ ಪೀಠದಲ್ಲಿ ಏಕೈಕ ಮುಸ್ಲಿಂ ಸದಸ್ಯರಾಗಿದ್ದ ನ್ಯಾ. ಅಬ್ದುಲ್ ನಜಿರ್ ಅವರನ್ನು ನಿವೃತ್ತಿಯಾಗಿ ತಿಂಗಳು ಕಳೆಯುವ ಮುನ್ನವೇ ಇಂದು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ” ಎಂದು ವಿವರಿಸಿದ್ದಾರೆ.

“ಇನ್ನುಳಿದವರಲ್ಲಿ ಜಸ್ಟೀಸ್ ಬೋಬ್ಡೆ ಅವರು ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾದ ಮೇಲೆ ನಾಗಪುರದ ಪರವಾಗಿ ಸಿಕ್ಕಾಪಟ್ಟೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಪ್ರಾಯಶಃ ದೇಶಕ್ಕೆ ಇನ್ನೂ ದೊಡ್ಡದಾದ ಆಶ್ಚರ್ಯ ಕಾದಿರಬಹುದು. ಆ ಪೀಠದ ಸದಸ್ಯರಾಗಿದ್ದ ನ್ಯಾ. ಚಂದ್ರಚೂಡ್ (ಇವರೇ ಇಡೀ ಅಯೋಧ್ಯಾ ಆದೇಶವನ್ನು ಬರೆದವರು ಎಂಬ ಪರೋಕ್ಷ ಸೂಚನೆಯನ್ನು ಗೊಗೋಯ್ ಅವರು ತಮ್ಮ ಪುಸ್ತಕದಲ್ಲಿ ನೀಡಿದ್ದಾರೆ) ಅವರೀಗ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಇಷ್ಟೆಲ್ಲಾ ಆದರೂ ದೇಶ ಇವರ ಬಗ್ಗೆ ಅಪಾರ ನಿರೀಕ್ಷೆಗಳನ್ನು ಇನ್ನೂ ಇಟ್ಟುಕೊಂಡಿದೆ” ಎಂದಿದ್ದಾರೆ ಶಿವಸುಂದರ್‌.

ಮುಂದುವರಿದು, “ವಿಪರ್ಯಾಸವೆಂದರೆ ದೇಶ ಹಾಗೂ ಸಂಘಪರಿವಾರ ಇಬ್ಬರೂ ತದ್ವಿರುದ್ಧ ಕಾರಣಗಳಿಗಾಗಿ ನ್ಯಾ. ಚಂದ್ರಚೂಡ್‌ ಅವರ ಬಗ್ಗೆ ಏಕಕಾಲದಲ್ಲಿ ಆತಂಕ ಹಾಗೂ ಆಶಯಗಳನ್ನಿಟ್ಟುಕೊಂಡು ಗಮನಿಸುತ್ತಿದೆ. ಆದರೆ ಈವರೆಗೆ ನ್ಯಾ. ಚಂದ್ರಚೂಡ್‌ ಅವರು, ಅಗತ್ಯವಿದ್ದರೂ, ಅವಕಾಶವಿದ್ದರೂ ದೇಶಕ್ಕೆ ನಿರಾಳ ಒದಗಿಸಬಹುದಾದ ಹಾಗೂ ಮೋದಿ ಸರ್ಕಾರದ ಸಂವಿಧಾನ ವಿರೋಧಿ ಕೃತ್ಯಗಳಿಗೆ ಲಗಾಮು ಹಾಕುವಂತಹ ಯಾವುದೇ ದೊಡ್ಡ ನ್ಯಾಯ ತೀರ್ಮಾನ ಕೈಗೊಂಡಿಲ್ಲ” ಎಂದು ಅಭಿಪ್ರಾಯ ತಾಳಿದ್ದಾರೆ.

ನಿವೃತ್ತಿಯೋತ್ತರ ನ್ಯಾಯಮೂರ್ತಿಗಳ ಬದುಕಿನ ಕುರಿತು ಅಧ್ಯಯನವೂ ಆಗಿದೆ. “2004ರಿಂದ 2014ರ ನಡುವಿನ ಅವಧಿಯನ್ನು ಮುಖ್ಯವಾಗಿಟ್ಟುಕೊಂಡು ಸಿಂಗಾಪುರ ವಿಶ್ವವಿದ್ಯಾನಿಲಯ ಸಂಶೋಧನೆಯೊಂದನ್ನು ಮಾಡಿತು. ಕೇಂದ್ರ ಸರ್ಕಾರ ಪಾರ್ಟಿಯಾಗಿದ್ದ ಪ್ರಕರಣಗಳ ಪೈಕಿ ಸರ್ಕಾರದ ಪರ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಯಾವುದಾದರೂ ಲಾಭವಾಗಿದೆಯೇ ಎಂಬುದನ್ನು ಈ ಸಂಶೋಧನೆ ಶೋಧಿಸಿತು. ಸುಮಾರು 2,500 ತೀರ್ಪುಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಕೇಂದ್ರದ ಪರ ತೀರ್ಪು ಕೊಟ್ಟ ಶೇ. 92 ನ್ಯಾಯಮೂರ್ತಿಗಳು ನಿವೃತ್ತಿಯ ನಂತರ ಫಲಾನುಭವಿಗಳಾಗಿದ್ದಾರೆ” ಎಂದಿದೆ ವರದಿ.

ಚಿಂತಕರಾದ ಶಿವಸುಂದರ್‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ನಿವೃತ್ತಿಯ ನಂತರ ಫಲಾನುಭವಿಗಳಾಗಲು 2000ನೇ ಇಸವಿಯ ಬಳಿಕ ಸಾಕಷ್ಟು ಅವಕಾಶಗಳು ನ್ಯಾಯಮೂರ್ತಿಗಳಿಗೆ ಒದಗಿ ಬಂದಿವೆ. ಯಾಕೆಂದರೆ ಸಾಕಷ್ಟು ಟ್ರಿಬ್ಯೂನಲ್‌ಗಳು ಶುರುವಾಗಿದ್ದು ಇದಕ್ಕೆ ಕಾರಣ. ಕರ್ನಾಟಕ ಹೈಕೋರ್ಟ್‌ನಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದಾಗ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಿತು ರಾಜ್ ಅವಸ್ಥಿಯವರೀಗ ಕಾನೂನು ಆಯೋಗದ ಅಧ್ಯಕ್ಷರಾಗಿದ್ದಾರೆ” ಎಂದು ಮಾಹಿತಿ ನೀಡಿದರು.

ದೇಶಕ್ಕೆ ಸೇವೆ ಸಲ್ಲಿಸಿದ ನ್ಯಾಯಾಧೀಶರ ಅನುಭವವನ್ನು ಅವರ ನಿವೃತ್ತಿಯ ನಂತರವೂ ದೇಶಕ್ಕಾಗಿ ಬಳಸಿಕೊಳ್ಳಬಹುದಲ್ಲ? ಎಂಬ ಪ್ರಶ್ನೆಯೂ ಮಹತ್ವದ್ದಾಗಿದೆ. ಹೈಕೋರ್ಟ್ ವಕೀಲರಾದ ರಾಜಲಕ್ಷ್ಮಿ ಅಂಕಲಗಿಯವರು ಈ ಕುರಿತು ಪ್ರತಿಕ್ರಿಯಿಸಿ, “ನ್ಯಾಯಮೂರ್ತಿಗಳು ನಿವೃತ್ತಿಯ ನಂತರ ಆಯೋಗಗಳಲ್ಲಿ, ತನಿಖಾ ಸಮಿತಿಗಳಲ್ಲಿ ತಮ್ಮ ಅನುಭವವನ್ನು ಧಾರೆ ಎರೆಯಬಹುದು. ರಾಜಕಾರಣಿಯಾಗುವ ಅವಶ್ಯವಿರುವುದಿಲ್ಲ. ತಮ್ಮ ಅನುಭವದ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ದೇಶಕ್ಕೂ ಒಳಿತಾಗುತ್ತದೆ. ನಿವೃತ್ತ ನಂತರವೂ ಕಾನೂನಾತ್ಮಕವಾಗಿ ಮಾಡಬಹುದಾದ ಕೆಲಸಗಳು ಸಾಕಷ್ಟಿರುತ್ತವೆ. ಆದರೆ ರಂಜನ್ ಗೊಗಾಯ್‌ ಅವರು ಸಂಸದರಾಗಿ ಆಯ್ಕೆಯಾಗಿದ್ದು ಸರಿಯಲ್ಲ. ದೇಶದ ಮುಖ್ಯ ನ್ಯಾಯಮೂರ್ತಿಯಾಗಿದ್ದವರು ಸ್ಪೀಕರ್‌ಗಳಿಗೆ ಪ್ರಮಾಣ ವಚನ ಬೋಧಿಸಿರುತ್ತಾರೆ. ಅಂಥವರು ಹೋಗಿ ಸದನದಲ್ಲಿ ಕೂತಾಗ ಎದುರಾಳಿಯ ಕಟು ಟೀಕೆಗಳಿಗೆ ಗುರಿಯಾಗಬೇಕಾಗಿರುತ್ತದೆ. ವೈಯಕ್ತಿಕ ನೆಲೆಯಲ್ಲಿ ವಾಗ್ಯುದ್ಧಗಳನ್ನು ನಡೆಸಬೇಕಾಗುತ್ತದೆ. ಹೀಗಾಗಿ ನ್ಯಾಯಮೂರ್ತಿಗಳು ತಮ್ಮ ಅನುಭವವನ್ನು ಸರಿಯಾದ ಕ್ರಮದಲ್ಲಿ ವಿನಿಯೋಗಿಸಬೇಕು. ತಮ್ಮ ಅಧಿಕಾರವಧಿಯಲ್ಲಿ ಸರ್ಕಾರದ ಪರ ಕೆಲಸ ಮಾಡಿದರೆಂಬ ಕಾರಣಕ್ಕೆ ಈ ಹುದ್ದೆ ಸಿಕ್ಕಿದೆ ಎಂಬ ಟೀಕೆಗಳಿಗೆ ಗುರಿಯಾಗಬಾರದು. ಆ ರೀತಿಯ ಅಭಿಪ್ರಾಯಗಳು ಉಂಟಾಗುವುದರಿಂದ ಇಡೀ ನ್ಯಾಯಾಂಗದ ಹೆಸರು ಹಾಳಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...