Homeಮುಖಪುಟಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

ಕೇಂದ್ರದ ಪರ ತೀರ್ಪು ಕೊಟ್ಟ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಲಾಭವಾಗಿದೆಯೇ?

- Advertisement -
- Advertisement -

2012, ಅಕ್ಟೋಬರ್‌ 1ರಂದು ರಾಜ್ಯಸಭೆಯಲ್ಲಿ ನಡೆದ ಘಟನೆ. ಬಿಜೆಪಿಯ ಬಹುದೊಡ್ಡ ನಾಯಕರಾಗಿದ್ದ ಅರುಣ್ ಜೇಟ್ಲಿಯವರು ಮಾತನಾಡುತ್ತಾ, “ಹಾಲಿ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಲ್ಲಿ ಕೆಲವರಿಗೆ ಕಾನೂನು ಗೊತ್ತು, ಕೆಲವರಿಗೆ ಕಾನೂನು ಮಂತ್ರಿಗಳು ಗೊತ್ತು” ಎನ್ನುತ್ತಾರೆ. ಸರ್ವೊಚ್ಚ ನ್ಯಾಯಾಲಯದ ಕೆಲವು ನ್ಯಾಯಮೂರ್ತಿಗಳು ವಸೂಲಿ ಬಾಜಿ ಮಾಡುತ್ತಿದ್ದಾರೆಂಬುದು ಜೇಟ್ಲಿಯವರ ಆರೋಪವಾಗಿತ್ತು.

ಮುಂದುವರಿದು ಅದೇ ಜೇಟ್ಲಿಯವರು, “ನಿವೃತ್ತಿ ಪೂರ್ವದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನೀಡುವ ತೀರ್ಮಾನಗಳು, ನಿವೃತ್ತಿಯ ನಂತರ ಸಿಗುವ ಲಾಭದ ಆಸೆಗಳನ್ನು ಹೊಂದಿರುತ್ತವೆ” ಎಂದು ದೂರಿದ್ದರು. ನ್ಯಾಯಮೂರ್ತಿಗಳು ನೀಡುವ ಜಡ್ಜ್‌ಮೆಂಟ್‌ಗಳು ಸರ್ಕಾರದ ಪರ ಪಕ್ಷಪಾತಿಯಾಗಿರುತ್ತವೆ ಎಂಬುದು ಜೇಟ್ಲಿಯವರ ನೇರ ಆರೋಪವಾಗಿತ್ತು.

ಪ್ರಮುಖ ಪ್ರಕರಣಗಳಲ್ಲಿ ಸರ್ಕಾರದ ಪರ ತೀರ್ಪು ನೀಡಿದ್ದರೆ ನಿವೃತ್ತಿಯ ನಂತರದಲ್ಲಿ ಅಂತಹ ನ್ಯಾಯಮೂರ್ತಿಗಳಿಗೆ ಪ್ರಭುತ್ವ ಆಯಕಟ್ಟಿನ ಜಾಗಗಳನ್ನು ನೀಡುತ್ತದೆ ಎಂಬ ಟೀಕೆಗಳು ಆಗಾಗ್ಗೆ ಕೇಳಿಬರುತ್ತವೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದ ಸಂವಿಧಾನ ಪೀಠದ ಭಾಗವಾಗಿದ್ದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಿರುವ ಹಿನ್ನೆಲೆಯಲ್ಲಿ ಈ ಹಳೆಯ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ (ಬಾಬ್ರಿ ಮಸೀದಿ ದ್ವಂಸ ಪ್ರಕರಣದಲ್ಲಿ ಸರ್ಕಾರವೇ ಪಾರ್ಟಿ ಅಲ್ಲದಿದ್ದರೂ ಹಿಂದುತ್ವ ಪ್ರಣೀತ ರಾಜಕೀಯ ಮಾಡುವ ಬಿಜೆಪಿಗೆ ಸೈದ್ಧಾಂತಿಕವಾಗಿ ಗೆಲುವು ಸಿಕ್ಕಿದ್ದು ಗಮನಾರ್ಹ).

ಬಾಬ್ರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮಂದಿರದ ಪರವಾಗಿ ತೀರ್ಪು ನೀಡಿದ ಐವರು ನ್ಯಾಯಮೂರ್ತಿಗಳ ಸದ್ಯದ ಸ್ಥಿತಿಗಳ ಕುರಿತು ಪಟ್ಟಿ ಮಾಡಿರುವ ಚಿಂತಕ ಶಿವಸುಂದರ್‌, “ಮೋದಿ ಸರ್ಕಾರ ನ್ಯಾ. ರಂಜನ್ ಗೊಗೋಯ್ ಅವರನ್ನು ನಿವೃತ್ತಿಯಾದ ನಾಲ್ಕೇ ತಿಂಗಳಲ್ಲಿ- 2020ರ ಮಾರ್ಚ್‌ನಲ್ಲಿ ರಾಜ್ಯಸಭಾ ಸದಸ್ಯರನ್ನಾಗಿ ನೇಮಿಸಿತು. ನ್ಯಾ. ಅಶೋಕ್ ಭೂಷಣ್ ಅವರನ್ನು ನಿವೃತ್ತಿಯಾದ ನಾಲ್ಕೇ ತಿಂಗಳಲ್ಲಿ ಮೋದಿ ಸರ್ಕಾರ ದೇಶದ ಅತ್ಯಂತ ದೊಡ್ಡ ಕಾರ್ಪೊರೇಟ್ ಗಳ ಕೋಟ್ಯಂತರ ಮೌಲ್ಯದ ವ್ಯಾಜ್ಯಗಳನ್ನು ಬಗೆಹರಿಸುವ National Company Law Appellate Tribunalನ ಅಧ್ಯಕ್ಷರನ್ನಾಗಿ 2021ರ ನವಂಬರ್‌ನಲ್ಲಿ ನೇಮಿಸಿತು. ಅಯೋಧ್ಯಾ ಪೀಠದಲ್ಲಿ ಏಕೈಕ ಮುಸ್ಲಿಂ ಸದಸ್ಯರಾಗಿದ್ದ ನ್ಯಾ. ಅಬ್ದುಲ್ ನಜಿರ್ ಅವರನ್ನು ನಿವೃತ್ತಿಯಾಗಿ ತಿಂಗಳು ಕಳೆಯುವ ಮುನ್ನವೇ ಇಂದು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ” ಎಂದು ವಿವರಿಸಿದ್ದಾರೆ.

“ಇನ್ನುಳಿದವರಲ್ಲಿ ಜಸ್ಟೀಸ್ ಬೋಬ್ಡೆ ಅವರು ಮುಖ್ಯ ನ್ಯಾಯಾಧೀಶರಾಗಿ ನಿವೃತ್ತರಾದ ಮೇಲೆ ನಾಗಪುರದ ಪರವಾಗಿ ಸಿಕ್ಕಾಪಟ್ಟೆ ಬ್ಯಾಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ ಪ್ರಾಯಶಃ ದೇಶಕ್ಕೆ ಇನ್ನೂ ದೊಡ್ಡದಾದ ಆಶ್ಚರ್ಯ ಕಾದಿರಬಹುದು. ಆ ಪೀಠದ ಸದಸ್ಯರಾಗಿದ್ದ ನ್ಯಾ. ಚಂದ್ರಚೂಡ್ (ಇವರೇ ಇಡೀ ಅಯೋಧ್ಯಾ ಆದೇಶವನ್ನು ಬರೆದವರು ಎಂಬ ಪರೋಕ್ಷ ಸೂಚನೆಯನ್ನು ಗೊಗೋಯ್ ಅವರು ತಮ್ಮ ಪುಸ್ತಕದಲ್ಲಿ ನೀಡಿದ್ದಾರೆ) ಅವರೀಗ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ. ಇಷ್ಟೆಲ್ಲಾ ಆದರೂ ದೇಶ ಇವರ ಬಗ್ಗೆ ಅಪಾರ ನಿರೀಕ್ಷೆಗಳನ್ನು ಇನ್ನೂ ಇಟ್ಟುಕೊಂಡಿದೆ” ಎಂದಿದ್ದಾರೆ ಶಿವಸುಂದರ್‌.

ಮುಂದುವರಿದು, “ವಿಪರ್ಯಾಸವೆಂದರೆ ದೇಶ ಹಾಗೂ ಸಂಘಪರಿವಾರ ಇಬ್ಬರೂ ತದ್ವಿರುದ್ಧ ಕಾರಣಗಳಿಗಾಗಿ ನ್ಯಾ. ಚಂದ್ರಚೂಡ್‌ ಅವರ ಬಗ್ಗೆ ಏಕಕಾಲದಲ್ಲಿ ಆತಂಕ ಹಾಗೂ ಆಶಯಗಳನ್ನಿಟ್ಟುಕೊಂಡು ಗಮನಿಸುತ್ತಿದೆ. ಆದರೆ ಈವರೆಗೆ ನ್ಯಾ. ಚಂದ್ರಚೂಡ್‌ ಅವರು, ಅಗತ್ಯವಿದ್ದರೂ, ಅವಕಾಶವಿದ್ದರೂ ದೇಶಕ್ಕೆ ನಿರಾಳ ಒದಗಿಸಬಹುದಾದ ಹಾಗೂ ಮೋದಿ ಸರ್ಕಾರದ ಸಂವಿಧಾನ ವಿರೋಧಿ ಕೃತ್ಯಗಳಿಗೆ ಲಗಾಮು ಹಾಕುವಂತಹ ಯಾವುದೇ ದೊಡ್ಡ ನ್ಯಾಯ ತೀರ್ಮಾನ ಕೈಗೊಂಡಿಲ್ಲ” ಎಂದು ಅಭಿಪ್ರಾಯ ತಾಳಿದ್ದಾರೆ.

ನಿವೃತ್ತಿಯೋತ್ತರ ನ್ಯಾಯಮೂರ್ತಿಗಳ ಬದುಕಿನ ಕುರಿತು ಅಧ್ಯಯನವೂ ಆಗಿದೆ. “2004ರಿಂದ 2014ರ ನಡುವಿನ ಅವಧಿಯನ್ನು ಮುಖ್ಯವಾಗಿಟ್ಟುಕೊಂಡು ಸಿಂಗಾಪುರ ವಿಶ್ವವಿದ್ಯಾನಿಲಯ ಸಂಶೋಧನೆಯೊಂದನ್ನು ಮಾಡಿತು. ಕೇಂದ್ರ ಸರ್ಕಾರ ಪಾರ್ಟಿಯಾಗಿದ್ದ ಪ್ರಕರಣಗಳ ಪೈಕಿ ಸರ್ಕಾರದ ಪರ ತೀರ್ಪು ನೀಡಿದ ನ್ಯಾಯಮೂರ್ತಿಗಳಿಗೆ ನಿವೃತ್ತಿಯ ನಂತರ ಯಾವುದಾದರೂ ಲಾಭವಾಗಿದೆಯೇ ಎಂಬುದನ್ನು ಈ ಸಂಶೋಧನೆ ಶೋಧಿಸಿತು. ಸುಮಾರು 2,500 ತೀರ್ಪುಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಕೇಂದ್ರದ ಪರ ತೀರ್ಪು ಕೊಟ್ಟ ಶೇ. 92 ನ್ಯಾಯಮೂರ್ತಿಗಳು ನಿವೃತ್ತಿಯ ನಂತರ ಫಲಾನುಭವಿಗಳಾಗಿದ್ದಾರೆ” ಎಂದಿದೆ ವರದಿ.

ಚಿಂತಕರಾದ ಶಿವಸುಂದರ್‌ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿ, “ನಿವೃತ್ತಿಯ ನಂತರ ಫಲಾನುಭವಿಗಳಾಗಲು 2000ನೇ ಇಸವಿಯ ಬಳಿಕ ಸಾಕಷ್ಟು ಅವಕಾಶಗಳು ನ್ಯಾಯಮೂರ್ತಿಗಳಿಗೆ ಒದಗಿ ಬಂದಿವೆ. ಯಾಕೆಂದರೆ ಸಾಕಷ್ಟು ಟ್ರಿಬ್ಯೂನಲ್‌ಗಳು ಶುರುವಾಗಿದ್ದು ಇದಕ್ಕೆ ಕಾರಣ. ಕರ್ನಾಟಕ ಹೈಕೋರ್ಟ್‌ನಲ್ಲಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿದಾಗ ಮುಖ್ಯ ನ್ಯಾಯಮೂರ್ತಿಯಾಗಿದ್ದ ರಿತು ರಾಜ್ ಅವಸ್ಥಿಯವರೀಗ ಕಾನೂನು ಆಯೋಗದ ಅಧ್ಯಕ್ಷರಾಗಿದ್ದಾರೆ” ಎಂದು ಮಾಹಿತಿ ನೀಡಿದರು.

ದೇಶಕ್ಕೆ ಸೇವೆ ಸಲ್ಲಿಸಿದ ನ್ಯಾಯಾಧೀಶರ ಅನುಭವವನ್ನು ಅವರ ನಿವೃತ್ತಿಯ ನಂತರವೂ ದೇಶಕ್ಕಾಗಿ ಬಳಸಿಕೊಳ್ಳಬಹುದಲ್ಲ? ಎಂಬ ಪ್ರಶ್ನೆಯೂ ಮಹತ್ವದ್ದಾಗಿದೆ. ಹೈಕೋರ್ಟ್ ವಕೀಲರಾದ ರಾಜಲಕ್ಷ್ಮಿ ಅಂಕಲಗಿಯವರು ಈ ಕುರಿತು ಪ್ರತಿಕ್ರಿಯಿಸಿ, “ನ್ಯಾಯಮೂರ್ತಿಗಳು ನಿವೃತ್ತಿಯ ನಂತರ ಆಯೋಗಗಳಲ್ಲಿ, ತನಿಖಾ ಸಮಿತಿಗಳಲ್ಲಿ ತಮ್ಮ ಅನುಭವವನ್ನು ಧಾರೆ ಎರೆಯಬಹುದು. ರಾಜಕಾರಣಿಯಾಗುವ ಅವಶ್ಯವಿರುವುದಿಲ್ಲ. ತಮ್ಮ ಅನುಭವದ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ದೇಶಕ್ಕೂ ಒಳಿತಾಗುತ್ತದೆ. ನಿವೃತ್ತ ನಂತರವೂ ಕಾನೂನಾತ್ಮಕವಾಗಿ ಮಾಡಬಹುದಾದ ಕೆಲಸಗಳು ಸಾಕಷ್ಟಿರುತ್ತವೆ. ಆದರೆ ರಂಜನ್ ಗೊಗಾಯ್‌ ಅವರು ಸಂಸದರಾಗಿ ಆಯ್ಕೆಯಾಗಿದ್ದು ಸರಿಯಲ್ಲ. ದೇಶದ ಮುಖ್ಯ ನ್ಯಾಯಮೂರ್ತಿಯಾಗಿದ್ದವರು ಸ್ಪೀಕರ್‌ಗಳಿಗೆ ಪ್ರಮಾಣ ವಚನ ಬೋಧಿಸಿರುತ್ತಾರೆ. ಅಂಥವರು ಹೋಗಿ ಸದನದಲ್ಲಿ ಕೂತಾಗ ಎದುರಾಳಿಯ ಕಟು ಟೀಕೆಗಳಿಗೆ ಗುರಿಯಾಗಬೇಕಾಗಿರುತ್ತದೆ. ವೈಯಕ್ತಿಕ ನೆಲೆಯಲ್ಲಿ ವಾಗ್ಯುದ್ಧಗಳನ್ನು ನಡೆಸಬೇಕಾಗುತ್ತದೆ. ಹೀಗಾಗಿ ನ್ಯಾಯಮೂರ್ತಿಗಳು ತಮ್ಮ ಅನುಭವವನ್ನು ಸರಿಯಾದ ಕ್ರಮದಲ್ಲಿ ವಿನಿಯೋಗಿಸಬೇಕು. ತಮ್ಮ ಅಧಿಕಾರವಧಿಯಲ್ಲಿ ಸರ್ಕಾರದ ಪರ ಕೆಲಸ ಮಾಡಿದರೆಂಬ ಕಾರಣಕ್ಕೆ ಈ ಹುದ್ದೆ ಸಿಕ್ಕಿದೆ ಎಂಬ ಟೀಕೆಗಳಿಗೆ ಗುರಿಯಾಗಬಾರದು. ಆ ರೀತಿಯ ಅಭಿಪ್ರಾಯಗಳು ಉಂಟಾಗುವುದರಿಂದ ಇಡೀ ನ್ಯಾಯಾಂಗದ ಹೆಸರು ಹಾಳಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...