Homeಮುಖಪುಟಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

- Advertisement -
- Advertisement -

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ (ಜ.6) ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ. ಆಡಳಿತಾರೂಢ ಲಿಬರಲ್ ಪಕ್ಷವು ಹೊಸ ನಾಯಕನನ್ನು ಆಯ್ಕೆ ಮಾಡಿದ ತಕ್ಷಣ ಅಧಿಕಾರವನ್ನು ತೊರೆಯುವುದಾಗಿ ಹೇಳಿದ್ದಾರೆ.

ಒಟ್ಟಾವಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಪಕ್ಷದ ನಾಯಕ ಹಾಗೂ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಉದ್ದೇಶಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಆಡಳಿತರೂಢ ಲಿಬರಲ್‌ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಉಂಟಾದ ಹಿನ್ನೆಲೆ, ಹುದ್ದೆ ತೊರೆಯುವಂತೆ ಟ್ರುಡೊ ಅವರಿಗೆ ಪಕ್ಷದ ಹಿರಿಯ ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಅವರ ರಾಜೀನಾಮೆ ಘೋಷಿಸಿದ್ದಾರೆ ಎಂದು ವರದಿಯಾಗಿದೆ.

“ನಾನು ಯಾವುದೇ ಹೋರಾಟದಲ್ಲಿ ಸುಲಭವಾಗಿ ಸೋಲಲು ಇಚ್ಚಿಸುವುದಿಲ್ಲ. ವಿಶೇಷವಾಗಿ ನಮ್ಮ ಪಕ್ಷ ಮತ್ತು ದೇಶಕ್ಕೆ ಸಂಬಂಧಿಸಿದ ವಿಷಯಗಳಲ್ಲಿ. ಆದರೂ, ನಾನು ಈ ಕೆಲಸ (ರಾಜೀನಾಮೆ) ಮಾಡುತ್ತೇನೆ. ಏಕೆಂದರೆ, ಕೆನಡಿಯನ್ನರ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವ ದೃಢವಾಗಿರಬೇಕು ಎನ್ನುವುದು ನನಗೆ ಬಹಳ ಮುಖ್ಯ” ಎಂದು ರಾಜೀನಾಮೆ ಘೋಷಣೆ ಬಳಿಕ ಟ್ರುಡೊ ಹೇಳಿದ್ದಾರೆ.

“ನಮ್ಮ ಮಹಾನ್ ದೇಶ ಮತ್ತು ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕೆನಡಾದ ಲಿಬರಲ್ ಪಕ್ಷವು ಒಂದು ಪ್ರಮುಖ ಸಂಸ್ಥೆಯಾಗಿದೆ. ಹೊಸ ಪ್ರಧಾನಮಂತ್ರಿ ಮತ್ತು ಲಿಬರಲ್ ಪಕ್ಷದ ನಾಯಕ ಮುಂದಿನ ಚುನಾವಣೆಯಲ್ಲಿ ಅದರ ಮೌಲ್ಯಗಳು ಮತ್ತು ಆದರ್ಶಗಳನ್ನು ಮುಂದುವರೆಸಲಿದ್ದಾರೆ. ಮುಂದಿನ ತಿಂಗಳು ಆ ಪ್ರಕ್ರಿಯೆ ನಡೆಯುವುದನ್ನು ನೋಡಲು ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ.

ಟ್ರುಡೊ ರಾಜೀನಾಮೆ ಘೋಷಣೆ ಹಿನ್ನೆಲೆ, ಜನವರಿ 27ರಂದು ಪುನರಾರಂಭಗೊಳ್ಳಬೇಕಿದ್ದ ಸಂಸತ್ ಅಧಿವೇಶನವನ್ನು ಮಾರ್ಚ್ 24ರವರೆಗೆ ಮುಂದೂಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಟ್ರುಡೊ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಲಿಬರಲ್ ಪಕ್ಷ ಯಾರನ್ನು ಆಯ್ಕೆ ಮಾಡಲಿದೆ ಎಂದು ತಿಳಿದು ಬಂದಿಲ್ಲ. ಆದರೂ, ಈ ಹುದ್ದೆಗಾಗಿ ಪಕ್ಷದಲ್ಲಿ ಆಂತರಿಕ ಪೈಪೋಟಿ ಏರ್ಪಡುವುದು ಖಚಿತ.

ಮತ್ತೊಂದೆಡೆ, ಸಂಸತ್ ಅಧಿವೇಶನ ಪುನರಾರಂಭಗೊಂಡರೆ ವಿಶ್ವಾಸ ಮತ ಯಾಚನೆ ವೇಳೆ ಲಿಬರಲ್‌ ಪಕ್ಷದ ನಾಯಕತ್ವವನ್ನು ಸೋಲಿಸಿ, ಸರ್ಕಾರ ಉರುಳಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ಈ ಮೂಲಕ ರಾಜಕೀಯ ಅಸ್ಥಿರತೆ ಉಂಟಾಗುವ ಸಾಧ್ಯತೆ ಇದೆ.

ನಿಗದಿತ ವೇಳಾಪಟ್ಟಿಯಂತೆ ಕೆನಡಾದಲ್ಲಿ ಮುಂದಿನ ವರ್ಷದ ಅಕ್ಟೋಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಬೇಕಿದೆ. ರಾಜಕೀಯ ಅಸ್ಥಿರತೆ ಉಂಟಾದರೆ ಅವಧಿಗೂ ಮುನ್ನವೇ ಚುನಾವಣೆ ನಡೆಯಬಹುದು.

ಹತ್ತು ವರ್ಷಗಳ ಕನ್ಸರ್ವೇಟಿವ್ ಪಕ್ಷದ ಆಡಳಿತದ ನಂತರ, 2015ರಲ್ಲಿ ಟ್ರುಡೊ ಅವರು ಕೆನಡಾ ಪ್ರಧಾನಿ ಹುದ್ದೆಗೇರಿದ್ದರು. ಅದಕ್ಕೂ ಮುನ್ನ 2013ರಲ್ಲಿ ಅವರು ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಪ್ರಧಾನಿಯಾಗಿ ಆಯ್ಕೆಯಾದ ಆರಂಭದಲ್ಲಿ ಜನಮನ್ನಣೆ ಗಳಿಸಿದ್ದ 53 ವರ್ಷದ ಜಸ್ಟಿನ್ ಟ್ರುಡೊ, ಆ ಬಳಿಕ ಆಹಾರ ಮತ್ತು ವಸತಿ ವೆಚ್ಚ ಹೆಚ್ಚಳ ಮತ್ತು ಅನಧಿಕೃತ ವಲಸೆ ಹೆಚ್ಚಳದಂತಹ ವಿಷಯಗಳಲ್ಲಿ ಜನರ ಆಕ್ರೋಶಕ್ಕೆ ಗುರಿಯಾದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹಳ ಪ್ರಸಿದ್ದಿಯನ್ನು ಪಡೆದಿರುವ ಟ್ರುಡೊ ಅವರು, ಆರಂಭದಲ್ಲಿ ಭಾರತದೊಂದಿಗೆ ಉತ್ತಮ ದ್ವಿಪಕ್ಷೀಯ ಸಂಬಂಧ ಮುಂದುವರೆಸಿದ್ದರು. ಆದರೆ, ಖಲಿಸ್ತಾನಿ ಪ್ರತ್ಯೇಕವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಎರಡು ರಾಷ್ಟ್ರಗಳ ಸಂಬಂಧ ಹಳಸಿದೆ. ಪ್ರಸ್ತುತ, ಭಾರತಕ್ಕೆ ಟ್ರುಡೊ ಶತ್ರುವಿನಂತೆ ಬಿಂಬಿತರಾಗಿದ್ದಾರೆ.

ಇದನ್ನೂ ಓದಿ : ಭಾರತ ಸೇರಿದಂತೆ ಜಾಗತಿಕವಾಗಿ ‘ಎಚ್‌ಎಂಪಿವಿ’ ಈಗಾಗಲೇ ಇದೆ: ಐಸಿಎಂಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...