Homeಮುಖಪುಟಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

- Advertisement -
- Advertisement -

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ (ಜ.6) ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ. ಆಡಳಿತಾರೂಢ ಲಿಬರಲ್ ಪಕ್ಷವು ಹೊಸ ನಾಯಕನನ್ನು ಆಯ್ಕೆ ಮಾಡಿದ ತಕ್ಷಣ ಅಧಿಕಾರವನ್ನು ತೊರೆಯುವುದಾಗಿ ಹೇಳಿದ್ದಾರೆ.

ಒಟ್ಟಾವಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಪಕ್ಷದ ನಾಯಕ ಹಾಗೂ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಉದ್ದೇಶಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಆಡಳಿತರೂಢ ಲಿಬರಲ್‌ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಉಂಟಾದ ಹಿನ್ನೆಲೆ, ಹುದ್ದೆ ತೊರೆಯುವಂತೆ ಟ್ರುಡೊ ಅವರಿಗೆ ಪಕ್ಷದ ಹಿರಿಯ ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಅವರ ರಾಜೀನಾಮೆ ಘೋಷಿಸಿದ್ದಾರೆ ಎಂದು ವರದಿಯಾಗಿದೆ.

“ನಾನು ಯಾವುದೇ ಹೋರಾಟದಲ್ಲಿ ಸುಲಭವಾಗಿ ಸೋಲಲು ಇಚ್ಚಿಸುವುದಿಲ್ಲ. ವಿಶೇಷವಾಗಿ ನಮ್ಮ ಪಕ್ಷ ಮತ್ತು ದೇಶಕ್ಕೆ ಸಂಬಂಧಿಸಿದ ವಿಷಯಗಳಲ್ಲಿ. ಆದರೂ, ನಾನು ಈ ಕೆಲಸ (ರಾಜೀನಾಮೆ) ಮಾಡುತ್ತೇನೆ. ಏಕೆಂದರೆ, ಕೆನಡಿಯನ್ನರ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವ ದೃಢವಾಗಿರಬೇಕು ಎನ್ನುವುದು ನನಗೆ ಬಹಳ ಮುಖ್ಯ” ಎಂದು ರಾಜೀನಾಮೆ ಘೋಷಣೆ ಬಳಿಕ ಟ್ರುಡೊ ಹೇಳಿದ್ದಾರೆ.

“ನಮ್ಮ ಮಹಾನ್ ದೇಶ ಮತ್ತು ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕೆನಡಾದ ಲಿಬರಲ್ ಪಕ್ಷವು ಒಂದು ಪ್ರಮುಖ ಸಂಸ್ಥೆಯಾಗಿದೆ. ಹೊಸ ಪ್ರಧಾನಮಂತ್ರಿ ಮತ್ತು ಲಿಬರಲ್ ಪಕ್ಷದ ನಾಯಕ ಮುಂದಿನ ಚುನಾವಣೆಯಲ್ಲಿ ಅದರ ಮೌಲ್ಯಗಳು ಮತ್ತು ಆದರ್ಶಗಳನ್ನು ಮುಂದುವರೆಸಲಿದ್ದಾರೆ. ಮುಂದಿನ ತಿಂಗಳು ಆ ಪ್ರಕ್ರಿಯೆ ನಡೆಯುವುದನ್ನು ನೋಡಲು ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ.

ಟ್ರುಡೊ ರಾಜೀನಾಮೆ ಘೋಷಣೆ ಹಿನ್ನೆಲೆ, ಜನವರಿ 27ರಂದು ಪುನರಾರಂಭಗೊಳ್ಳಬೇಕಿದ್ದ ಸಂಸತ್ ಅಧಿವೇಶನವನ್ನು ಮಾರ್ಚ್ 24ರವರೆಗೆ ಮುಂದೂಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಟ್ರುಡೊ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಲಿಬರಲ್ ಪಕ್ಷ ಯಾರನ್ನು ಆಯ್ಕೆ ಮಾಡಲಿದೆ ಎಂದು ತಿಳಿದು ಬಂದಿಲ್ಲ. ಆದರೂ, ಈ ಹುದ್ದೆಗಾಗಿ ಪಕ್ಷದಲ್ಲಿ ಆಂತರಿಕ ಪೈಪೋಟಿ ಏರ್ಪಡುವುದು ಖಚಿತ.

ಮತ್ತೊಂದೆಡೆ, ಸಂಸತ್ ಅಧಿವೇಶನ ಪುನರಾರಂಭಗೊಂಡರೆ ವಿಶ್ವಾಸ ಮತ ಯಾಚನೆ ವೇಳೆ ಲಿಬರಲ್‌ ಪಕ್ಷದ ನಾಯಕತ್ವವನ್ನು ಸೋಲಿಸಿ, ಸರ್ಕಾರ ಉರುಳಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ಈ ಮೂಲಕ ರಾಜಕೀಯ ಅಸ್ಥಿರತೆ ಉಂಟಾಗುವ ಸಾಧ್ಯತೆ ಇದೆ.

ನಿಗದಿತ ವೇಳಾಪಟ್ಟಿಯಂತೆ ಕೆನಡಾದಲ್ಲಿ ಮುಂದಿನ ವರ್ಷದ ಅಕ್ಟೋಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಬೇಕಿದೆ. ರಾಜಕೀಯ ಅಸ್ಥಿರತೆ ಉಂಟಾದರೆ ಅವಧಿಗೂ ಮುನ್ನವೇ ಚುನಾವಣೆ ನಡೆಯಬಹುದು.

ಹತ್ತು ವರ್ಷಗಳ ಕನ್ಸರ್ವೇಟಿವ್ ಪಕ್ಷದ ಆಡಳಿತದ ನಂತರ, 2015ರಲ್ಲಿ ಟ್ರುಡೊ ಅವರು ಕೆನಡಾ ಪ್ರಧಾನಿ ಹುದ್ದೆಗೇರಿದ್ದರು. ಅದಕ್ಕೂ ಮುನ್ನ 2013ರಲ್ಲಿ ಅವರು ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಪ್ರಧಾನಿಯಾಗಿ ಆಯ್ಕೆಯಾದ ಆರಂಭದಲ್ಲಿ ಜನಮನ್ನಣೆ ಗಳಿಸಿದ್ದ 53 ವರ್ಷದ ಜಸ್ಟಿನ್ ಟ್ರುಡೊ, ಆ ಬಳಿಕ ಆಹಾರ ಮತ್ತು ವಸತಿ ವೆಚ್ಚ ಹೆಚ್ಚಳ ಮತ್ತು ಅನಧಿಕೃತ ವಲಸೆ ಹೆಚ್ಚಳದಂತಹ ವಿಷಯಗಳಲ್ಲಿ ಜನರ ಆಕ್ರೋಶಕ್ಕೆ ಗುರಿಯಾದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹಳ ಪ್ರಸಿದ್ದಿಯನ್ನು ಪಡೆದಿರುವ ಟ್ರುಡೊ ಅವರು, ಆರಂಭದಲ್ಲಿ ಭಾರತದೊಂದಿಗೆ ಉತ್ತಮ ದ್ವಿಪಕ್ಷೀಯ ಸಂಬಂಧ ಮುಂದುವರೆಸಿದ್ದರು. ಆದರೆ, ಖಲಿಸ್ತಾನಿ ಪ್ರತ್ಯೇಕವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಎರಡು ರಾಷ್ಟ್ರಗಳ ಸಂಬಂಧ ಹಳಸಿದೆ. ಪ್ರಸ್ತುತ, ಭಾರತಕ್ಕೆ ಟ್ರುಡೊ ಶತ್ರುವಿನಂತೆ ಬಿಂಬಿತರಾಗಿದ್ದಾರೆ.

ಇದನ್ನೂ ಓದಿ : ಭಾರತ ಸೇರಿದಂತೆ ಜಾಗತಿಕವಾಗಿ ‘ಎಚ್‌ಎಂಪಿವಿ’ ಈಗಾಗಲೇ ಇದೆ: ಐಸಿಎಂಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...