Homeಮುಖಪುಟಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

- Advertisement -
- Advertisement -

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ (ಜ.6) ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ. ಆಡಳಿತಾರೂಢ ಲಿಬರಲ್ ಪಕ್ಷವು ಹೊಸ ನಾಯಕನನ್ನು ಆಯ್ಕೆ ಮಾಡಿದ ತಕ್ಷಣ ಅಧಿಕಾರವನ್ನು ತೊರೆಯುವುದಾಗಿ ಹೇಳಿದ್ದಾರೆ.

ಒಟ್ಟಾವಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು ಪಕ್ಷದ ನಾಯಕ ಹಾಗೂ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಉದ್ದೇಶಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಆಡಳಿತರೂಢ ಲಿಬರಲ್‌ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಉಂಟಾದ ಹಿನ್ನೆಲೆ, ಹುದ್ದೆ ತೊರೆಯುವಂತೆ ಟ್ರುಡೊ ಅವರಿಗೆ ಪಕ್ಷದ ಹಿರಿಯ ನಾಯಕರು ಸೂಚಿಸಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕೆ ಅವರ ರಾಜೀನಾಮೆ ಘೋಷಿಸಿದ್ದಾರೆ ಎಂದು ವರದಿಯಾಗಿದೆ.

“ನಾನು ಯಾವುದೇ ಹೋರಾಟದಲ್ಲಿ ಸುಲಭವಾಗಿ ಸೋಲಲು ಇಚ್ಚಿಸುವುದಿಲ್ಲ. ವಿಶೇಷವಾಗಿ ನಮ್ಮ ಪಕ್ಷ ಮತ್ತು ದೇಶಕ್ಕೆ ಸಂಬಂಧಿಸಿದ ವಿಷಯಗಳಲ್ಲಿ. ಆದರೂ, ನಾನು ಈ ಕೆಲಸ (ರಾಜೀನಾಮೆ) ಮಾಡುತ್ತೇನೆ. ಏಕೆಂದರೆ, ಕೆನಡಿಯನ್ನರ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವ ದೃಢವಾಗಿರಬೇಕು ಎನ್ನುವುದು ನನಗೆ ಬಹಳ ಮುಖ್ಯ” ಎಂದು ರಾಜೀನಾಮೆ ಘೋಷಣೆ ಬಳಿಕ ಟ್ರುಡೊ ಹೇಳಿದ್ದಾರೆ.

“ನಮ್ಮ ಮಹಾನ್ ದೇಶ ಮತ್ತು ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕೆನಡಾದ ಲಿಬರಲ್ ಪಕ್ಷವು ಒಂದು ಪ್ರಮುಖ ಸಂಸ್ಥೆಯಾಗಿದೆ. ಹೊಸ ಪ್ರಧಾನಮಂತ್ರಿ ಮತ್ತು ಲಿಬರಲ್ ಪಕ್ಷದ ನಾಯಕ ಮುಂದಿನ ಚುನಾವಣೆಯಲ್ಲಿ ಅದರ ಮೌಲ್ಯಗಳು ಮತ್ತು ಆದರ್ಶಗಳನ್ನು ಮುಂದುವರೆಸಲಿದ್ದಾರೆ. ಮುಂದಿನ ತಿಂಗಳು ಆ ಪ್ರಕ್ರಿಯೆ ನಡೆಯುವುದನ್ನು ನೋಡಲು ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ.

ಟ್ರುಡೊ ರಾಜೀನಾಮೆ ಘೋಷಣೆ ಹಿನ್ನೆಲೆ, ಜನವರಿ 27ರಂದು ಪುನರಾರಂಭಗೊಳ್ಳಬೇಕಿದ್ದ ಸಂಸತ್ ಅಧಿವೇಶನವನ್ನು ಮಾರ್ಚ್ 24ರವರೆಗೆ ಮುಂದೂಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಟ್ರುಡೊ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಲಿಬರಲ್ ಪಕ್ಷ ಯಾರನ್ನು ಆಯ್ಕೆ ಮಾಡಲಿದೆ ಎಂದು ತಿಳಿದು ಬಂದಿಲ್ಲ. ಆದರೂ, ಈ ಹುದ್ದೆಗಾಗಿ ಪಕ್ಷದಲ್ಲಿ ಆಂತರಿಕ ಪೈಪೋಟಿ ಏರ್ಪಡುವುದು ಖಚಿತ.

ಮತ್ತೊಂದೆಡೆ, ಸಂಸತ್ ಅಧಿವೇಶನ ಪುನರಾರಂಭಗೊಂಡರೆ ವಿಶ್ವಾಸ ಮತ ಯಾಚನೆ ವೇಳೆ ಲಿಬರಲ್‌ ಪಕ್ಷದ ನಾಯಕತ್ವವನ್ನು ಸೋಲಿಸಿ, ಸರ್ಕಾರ ಉರುಳಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ. ಈ ಮೂಲಕ ರಾಜಕೀಯ ಅಸ್ಥಿರತೆ ಉಂಟಾಗುವ ಸಾಧ್ಯತೆ ಇದೆ.

ನಿಗದಿತ ವೇಳಾಪಟ್ಟಿಯಂತೆ ಕೆನಡಾದಲ್ಲಿ ಮುಂದಿನ ವರ್ಷದ ಅಕ್ಟೋಬರ್‌ನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಬೇಕಿದೆ. ರಾಜಕೀಯ ಅಸ್ಥಿರತೆ ಉಂಟಾದರೆ ಅವಧಿಗೂ ಮುನ್ನವೇ ಚುನಾವಣೆ ನಡೆಯಬಹುದು.

ಹತ್ತು ವರ್ಷಗಳ ಕನ್ಸರ್ವೇಟಿವ್ ಪಕ್ಷದ ಆಡಳಿತದ ನಂತರ, 2015ರಲ್ಲಿ ಟ್ರುಡೊ ಅವರು ಕೆನಡಾ ಪ್ರಧಾನಿ ಹುದ್ದೆಗೇರಿದ್ದರು. ಅದಕ್ಕೂ ಮುನ್ನ 2013ರಲ್ಲಿ ಅವರು ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಪ್ರಧಾನಿಯಾಗಿ ಆಯ್ಕೆಯಾದ ಆರಂಭದಲ್ಲಿ ಜನಮನ್ನಣೆ ಗಳಿಸಿದ್ದ 53 ವರ್ಷದ ಜಸ್ಟಿನ್ ಟ್ರುಡೊ, ಆ ಬಳಿಕ ಆಹಾರ ಮತ್ತು ವಸತಿ ವೆಚ್ಚ ಹೆಚ್ಚಳ ಮತ್ತು ಅನಧಿಕೃತ ವಲಸೆ ಹೆಚ್ಚಳದಂತಹ ವಿಷಯಗಳಲ್ಲಿ ಜನರ ಆಕ್ರೋಶಕ್ಕೆ ಗುರಿಯಾದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹಳ ಪ್ರಸಿದ್ದಿಯನ್ನು ಪಡೆದಿರುವ ಟ್ರುಡೊ ಅವರು, ಆರಂಭದಲ್ಲಿ ಭಾರತದೊಂದಿಗೆ ಉತ್ತಮ ದ್ವಿಪಕ್ಷೀಯ ಸಂಬಂಧ ಮುಂದುವರೆಸಿದ್ದರು. ಆದರೆ, ಖಲಿಸ್ತಾನಿ ಪ್ರತ್ಯೇಕವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಎರಡು ರಾಷ್ಟ್ರಗಳ ಸಂಬಂಧ ಹಳಸಿದೆ. ಪ್ರಸ್ತುತ, ಭಾರತಕ್ಕೆ ಟ್ರುಡೊ ಶತ್ರುವಿನಂತೆ ಬಿಂಬಿತರಾಗಿದ್ದಾರೆ.

ಇದನ್ನೂ ಓದಿ : ಭಾರತ ಸೇರಿದಂತೆ ಜಾಗತಿಕವಾಗಿ ‘ಎಚ್‌ಎಂಪಿವಿ’ ಈಗಾಗಲೇ ಇದೆ: ಐಸಿಎಂಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...