Homeಮುಖಪುಟಬಹುಜನ ಭಾರತ : ಸಿಂಧ್ಯ ಅಧಿಕಾರದಾಹ ಮತ್ತು ಕಾಂಗ್ರೆಸ್-ಬಿಜೆಪಿಯ ಅಷಾಢಭೂತಿತನ

ಬಹುಜನ ಭಾರತ : ಸಿಂಧ್ಯ ಅಧಿಕಾರದಾಹ ಮತ್ತು ಕಾಂಗ್ರೆಸ್-ಬಿಜೆಪಿಯ ಅಷಾಢಭೂತಿತನ

- Advertisement -
- Advertisement -

ಸ್ವತಂತ್ರ ಭಾರತದ ಮಾಜಿ ರಾಜಪರಿವಾರಗಳು ‘ಜನತಾಂತ್ರಿಕ’ ರಾಜಕಾರಣದಲ್ಲೂ ರಾಜ್ಯವಾಳುತ್ತ ಬಂದಿವೆ. ಅಂತಹ ಪರಿವಾರಗಳ ಪೈಕಿ ಮಧ್ಯಪ್ರದೇಶದ ಗ್ವಾಲಿಯರ್-ಗುಣಾದ ಸಿಂಧ್ಯಾ ಪರಿವಾರ ಎದ್ದು ಕಾಣುವಂತಹುದು. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾನ್ಹರಖೇಡ ಗ್ರಾಮದ ಪಾಟೀಲ ಜನಕೋಜೀರಾವ್ ವಂಶಜರು 27 ಬಾರಿ ಸಂಸದರಾಗಿದ್ದಾರೆ. ಒಂಬತ್ತು ಬಾರಿ ವಿಧಾನಸಭೆಗಳಿಗೆ ಆರಿಸಿಬಂದಿದ್ದಾರೆ. ರಾಜಮಾತಾ ವಿಜಯರಾಜೇ ಸಿಂಧ್ಯಾ ಅವರಿಂದ ಆಕೆಯ ಮೊಮ್ಮಗ ಜ್ಯೋತಿರಾದಿತ್ಯ ಸಿಂಧ್ಯ ಅವರ ತನಕ ಈ ಕುಟುಂಬದ ರಾಜಕೀಯ ಮಹತ್ವಾಕಾಂಕ್ಷೆಗಳು ರಾಜಕೀಯ ಪಕ್ಷಗಳಿಗೆ ಚಳ್ಳೆ ಹಣ್ಣು ತಿನ್ನಿಸುತ್ತ ಬಂದಿವೆ.

ರಾಜಮಾತೆ ವಿಜಯರಾಜೇ ಸಿಂಧ್ಯ ಅವರು 1957ರಲ್ಲಿ ಗುಣಾ ಮತ್ತು 1962ರಲ್ಲಿ ಗ್ವಾಲಿಯರ್ ನಿಂದ ಕಾಂಗ್ರೆಸ್ ಸಂಸದರಾಗಿ ಆರಿಸಿ ಬಂದಿದ್ದರು. 1967ರ ಲೋಕಸಭಾ ಉಪಚುನಾವಣೆಯಲ್ಲಿ ಪಕ್ಷೇತರರಾಗಿ ಗುಣಾದಿಂದ ಗೆದ್ದರು. 1971ರಲ್ಲಿ ಜನಸಂಘ, 1989,1991, 1996, 1998ರಲ್ಲಿ ಬಿಜೆಪಿಯಿಂದ ಲೋಕಸಭೆಗೆ ಆರಿಸಿ ಬಂದರು.

ಜ್ಯೋತಿರಾದಿತ್ಯ ಅವರ ತಂದೆ ಮಾಧವರಾವ್ ಸಿಂಧ್ಯ 1971ರಲ್ಲಿ ಗುಣಾದಿಂದ ಜನಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು, 1977ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ, 1980, 1984, 1989, 1991ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂಸದರಾದರು. 1996ರಲ್ಲಿ ಮಧ್ಯಪ್ರದೇಶ ವಿಕಾಸ ಕಾಂಗ್ರೆಸ್ ಸ್ಥಾಪಿಸಿ ಆಯ್ಕೆ ಹೊಂದಿದರು. 1998 ಮತ್ತು 1999ರಲ್ಲಿ ಪುನಃ ಕಾಂಗ್ರೆಸ್ ನಿಂದ ಆಯ್ಕೆ ಹೊಂದಿದರು.

ವಸುಂಧರಾ ರಾಜೇ ಅವರು ಐದು ಬಾರಿ ಸಂಸದೆ ಮತ್ತು ಐದು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವೆಯಾಗಿದ್ದೇ ಅಲ್ಲದೆ ಎರಡು ಬಾರಿ ರಾಜಸ್ತಾನದ ಮುಖ್ಯಮಂತ್ರಿಯಾಗಿದ್ದರು.

ಯಶೋಧರಾ ರಾಜೇ ಐದು ಬಾರಿ ಶಾಸಕಿ ಮತ್ತು ಒಮ್ಮೆ ಸಂಸದೆಯಾಗಿದ್ದರು. ಕಾಂಗ್ರೆಸ್ಸಿನಲ್ಲಿದ್ದ ಜ್ಯೋತಿರಾದಿತ್ಯ ನಾಲ್ಕು ಬಾರಿ ಸಂಸದರು ಮತ್ತು ಎರಡು ಬಾರಿ ಕೇಂದ್ರ ಮಂತ್ರಿಯಾಗಿದ್ದರು.

ಹದಿನೆಂಟು ವರ್ಷಗಳಿಗೂ ಹೆಚ್ಚು ಕಾಲ ಕಾಂಗ್ರೆಸ್ಸಿನಲ್ಲಿದ್ದ ಜ್ಯೋತಿರಾದಿತ್ಯ ಬಿಜೆಪಿಯತ್ತ ನಡೆದಿದ್ದಾರೆ. ಸಿಂಧ್ಯಾ ಕುಟುಂಬದ ಅಧಿಕಾರದಾಹದ ಹೊಸ ಅಧ್ಯಾಯದ ಪುಟಗಳು ತೆರೆಯತೊಡಗಿವೆ. ಜ್ಯೋತಿರಾದಿತ್ಯ ಅವರ ಅತ್ತೆಯರಾದ (ತಂದೆ ಮಾಧವರಾವ್ ಸಿಂಧ್ಯಾ ಅವರ ಸೋದರಿಯರು) ವಸುಂಧರಾರಾಜೇ ಸಿಂಧ್ಯ ಮತ್ತು ಯಶೋಧರರಾಜೇ ಸಿಂಧ್ಯಾ ಈಗಾಗಲೇ ಬಿಜೆಪಿಯಲ್ಲಿ ಬೇರು ಬಿಟ್ಟ ತಲೆಯಾಳುಗಳು. ಜ್ಯೋತಿರಾದಿತ್ಯ ಅವರ ಹಾಲಿ ನಡೆಯನ್ನು ಇವರಿಬ್ಬರೂ ಸ್ವಾಗತಿಸಿದ್ದಾರೆ. ಜ್ಯೋತಿರಾದಿತ್ಯ ತವರಿಗೆ ಮರಳುತ್ತಿದ್ದಾನೆ ಎಂಬ ಅವರ ಮಾತು ನಿಜ.

ಜ್ಯೋತಿರಾದಿತ್ಯ ಅವರ ಅಜ್ಜಿ ರಾಜಮಾತಾ ವಿಜಯರಾಜೇ ಸಿಂಧ್ಯ ಅವರು ಹಿಂದೂ ಮಹಾಸಭಾದಲ್ಲಿ ಎತ್ತರದ ಸ್ಥಾನದಲ್ಲಿದ್ದವರು. ಆನಂತರ ಜನಸಂಘಕ್ಕೆ ಸೇರಿದ್ದರು. ಆನಂತರ ಬಿಜೆಪಿಯ ಸ್ಥಾಪಕ ಸದಸ್ಯರಷ್ಟೇ ಅಲ್ಲದೆ ಈ ಪಕ್ಷದ ಅಧ್ಯಕ್ಷರೂ ಆಗಿದ್ದವರು. ತಂದೆ ಮಾಧವರಾವ್ ಸಿಂಧ್ಯಾ ಕೂಡ 1972ರಲ್ಲಿ ಜನಸಂಘದಿಂದ ಲೋಕಸಭೆಗೆ ಆರಿಸಿ ಬಂದಿದ್ದವರು. ಇಂದಿರಾಗಾಂಧೀ ಅವರ ಕೃಪೆಯಿಂದಾಗಿ ತುರ್ತುಪರಿಸ್ಥಿತಿಯಲ್ಲಿ ಜೈಲು ತಪ್ಪಿಸಿಕೊಂಡಿದ್ದರು. 1977ರಲ್ಲಿ ಪಕ್ಷೇತರ ಸಂಸದ. 1980ರಲ್ಲಿ ಕಾಂಗ್ರೆಸ್ ಸೇರಿ 1996ರಲ್ಲಿ ಪ್ರಾದೇಶಿಕ ಪಕ್ಷ ಕಟ್ಟಿ ಪುನಃ ಕಾಂಗ್ರೆಸ್ ಸೇರಿದ್ದವರು. 2001ರಲ್ಲಿ ಅಪಘಾತದಲ್ಲಿ ನಿಧನರಾಗುವ ತನಕ ಕಾಂಗ್ರೆಸ್ಸಿನಲ್ಲೇ ಇದ್ದರು.

ಮಧ್ಯಪ್ರದೇಶದ ರಾಜಕಾರಣವನ್ನೇ ಗಣನೆಗೆ ತೆಗೆದುಕೊಳ್ಳುವುದಾದರೆ ಸಿಂಧ್ಯಾ ಕುಟುಂಬ 53 ವರ್ಷದ ಹಳೆಯ ಇತಿಹಾಸದ ದಾಳವನ್ನು ಪುನಃ ಉರುಳಿಸಿದೆ. 1967ರಲ್ಲಿ ವಿಜಯರಾಜೇ ಸಿಂಧ್ಯಾ ಅವರ ಕಾರಣ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಬೇಕಾಗಿತ್ತು. ಇದೀಗ ಅವರ ಮೊಮ್ಮಗನ ಕಾಂಗ್ರೆಸ್ ಸರ್ಕಾರವನ್ನು ಪತನದ ಅಂಚಿಗೆ ನೂಕಿದ್ದಾರೆ.

2018ರ ಡಿಸೆಂಬರ್ ನಲ್ಲಿ ಮಧ್ಯಪ್ರದೇಶದ ಮತದಾರರು ಅತಂತ್ರ ವಿಧಾನಸಭೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಬಹುಮತದ ಅಂಚಿಗೆ ಬಂದಿದ್ದ ಕಾಂಗ್ರೆಸ್ ಪಕ್ಷ ಬಿ.ಎಸ್.ಪಿ., ಪಕ್ಷೇತರರು ಮತ್ತು ಎಸ್.ಪಿ. ಬೆಂಬಲದೊಂದಿಗೆ ಸರ್ಕಾರ ರಚಿಸಿದಾಗ ಜ್ಯೋತಿರಾದಿತ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಹಾತೊರೆದಿದ್ದರು. ಆದರೆ ಕಾಂಗ್ರೆಸ್ ಪಕ್ಷ ಹಳೆಯ ಪಂಟ ಕಮಲನಾಥ್ ಅವರಿಗೆ ಮಣೆ ಹಾಕಿತು. ಆಗಲೇ ಮುನಿದಿದ್ದ ಜ್ಯೋತಿರಾದಿತ್ಯ ಅವರಿಗೆ ಬಿಜೆಪಿ ಬಲೆ ಬೀಸಿತ್ತು. ಕಮಲನಾಥ್ ಮತ್ತು ಸಿಂಧ್ಯ ನಡುವಣ ಕಂದಕ ಹಿರಿದಾಗುತ್ತಲೇ ಹೋಯಿತು. ಸೋನಿಯಾಗಾಂಧೀ-ರಾಹುಲ್ ಗಾಂಧೀ- ಪ್ರಿಯಾಂಕಾ ಗಾಂಧೀ ಈ ಕುರಿತು ತಲೆ ಕೆಡಿಸಿಕೊಳ್ಳಲಿಲ್ಲ. ಅದರ ಫಲಿತಾಂಶ ಇಂದು ಅನಾವರಣಗೊಂಡಿದೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುವ ಮೋದಿ ಸರ್ಕಾರದ ಕ್ರಮವನ್ನು ಜ್ಯೋತಿರಾದಿತ್ಯ ಸ್ವಾಗತಿಸಿದ್ದರು. ಹೈದರಾಬಾದಿನಲ್ಲಿ ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿ ಕೊಂದ ನಡೆಯನ್ನೂ ಅವರು ಬೆಂಬಲಿಸಿದ್ದರು. ಈ ನಡುವೆ ಸಾಮಾಜಿಕ ಜಾಲತಾಣದ ಅವರ ಅಕೌಂಟುಗಳಿಂದ ಕಾಂಗ್ರೆಸ್ ಬಾವುಟ ಕಾಣೆಯಾಗಿತ್ತು. ಈ ಎಲ್ಲ ಸುಳಿವು ಸಂಕೇತಗಳನ್ನು ಕಾಂಗ್ರೆಸ್ ಓದಲಾರದಾಯಿತು.

ಗ್ವಾಲಿಯರ್ ಸಂಸ್ಥಾನವನ್ನು ಆಳಿದ ಸಿಂಧ್ಯ ಪೂರ್ವಜರು ಬ್ರಿಟಿಷರೊಂದಿಗೆ ಗೆಳೆತನ ಹೊಂದಿದ್ದವರು. ಅವರಿಂದ ಬಿರುದು ಬಾವಲಿಗಳನ್ನು ಸ್ವೀಕರಿಸಿದ್ದವರು. 1857ರಲ್ಲಿ ಝಾನ್ಸಿಯ ರಾಣಿ ಲಕ್ಷ್ಮೀಬಾಯಿ ಮತ್ತು ಬ್ರಿಟಿಷರ ನಡುವೆ ನಡೆದ ಯುದ್ಧದಲ್ಲಿ ಲಕ್ಷ್ಮೀಬಾಯಿಯನ್ನು ಬೆಂಬಲಿಸಲಿಲ್ಲ ಎಂಬ ಆರೋಪ ಹೊತ್ತವರು. ಸಂಕಟದಲ್ಲಿದ್ದ ಲಕ್ಷ್ಮೀಬಾಯಿಗೆ ನಿಶ್ಯಕ್ತ ಕುದುರೆ ನೀಡಿ ಆಕೆಯ ಸಾವಿಗೆ ಕಾರಣನಾಗಿದ್ದ ಗ್ವಾಲಿಯರ್ ಮಹಾರಾಜ ಎಂಬ ಆರೋಪವನ್ನು ಬಿಜೆಪಿಯೇ ಮಾಡಿರುವುದುಂಟು.

ಜ್ಯೋತಿರಾದಿತ್ಯ ಸಿಂಧ್ಯ ಅವರನ್ನು ಬಿಜೆಪಿ ಮುಂಬರುವ ಕೆಲ ಕಾಲ ಹೆಗಲ ಮೇಲೆ ಹೊತ್ತು ಮೆರೆಸಿ ಡೋಲು ಬಾರಿಸೀತು. ಇತ್ತ ಕಾಂಗ್ರೆಸ್ಸು ಬಿಜೆಪಿ ಮಾಡಿದ್ದ ಆಪಾದನೆಯನ್ನೇ ಮಾಡಿ ರಾಣಿ ಲಕ್ಷ್ಮೀಬಾಯಿಯ ಬೆನ್ನಿಗೆ ಚೂರಿ ಹಾಕಿದ ವಂಶಸ್ಥನಿಂದ ಇನ್ನೇನು ನಿರೀಕ್ಷಿಸಲಾದೀತು ಎಂದು ಬಾಯಿ ಬಡಿದುಕೊಳ್ಳಲಿದೆ. ಎರಡೂ ಪಕ್ಷಗಳು ಆಷಾಢಭೂತಿಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...