Homeಮುಖಪುಟಬಹುಜನ ಭಾರತ : ಸಿಂಧ್ಯ ಅಧಿಕಾರದಾಹ ಮತ್ತು ಕಾಂಗ್ರೆಸ್-ಬಿಜೆಪಿಯ ಅಷಾಢಭೂತಿತನ

ಬಹುಜನ ಭಾರತ : ಸಿಂಧ್ಯ ಅಧಿಕಾರದಾಹ ಮತ್ತು ಕಾಂಗ್ರೆಸ್-ಬಿಜೆಪಿಯ ಅಷಾಢಭೂತಿತನ

- Advertisement -
- Advertisement -

ಸ್ವತಂತ್ರ ಭಾರತದ ಮಾಜಿ ರಾಜಪರಿವಾರಗಳು ‘ಜನತಾಂತ್ರಿಕ’ ರಾಜಕಾರಣದಲ್ಲೂ ರಾಜ್ಯವಾಳುತ್ತ ಬಂದಿವೆ. ಅಂತಹ ಪರಿವಾರಗಳ ಪೈಕಿ ಮಧ್ಯಪ್ರದೇಶದ ಗ್ವಾಲಿಯರ್-ಗುಣಾದ ಸಿಂಧ್ಯಾ ಪರಿವಾರ ಎದ್ದು ಕಾಣುವಂತಹುದು. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾನ್ಹರಖೇಡ ಗ್ರಾಮದ ಪಾಟೀಲ ಜನಕೋಜೀರಾವ್ ವಂಶಜರು 27 ಬಾರಿ ಸಂಸದರಾಗಿದ್ದಾರೆ. ಒಂಬತ್ತು ಬಾರಿ ವಿಧಾನಸಭೆಗಳಿಗೆ ಆರಿಸಿಬಂದಿದ್ದಾರೆ. ರಾಜಮಾತಾ ವಿಜಯರಾಜೇ ಸಿಂಧ್ಯಾ ಅವರಿಂದ ಆಕೆಯ ಮೊಮ್ಮಗ ಜ್ಯೋತಿರಾದಿತ್ಯ ಸಿಂಧ್ಯ ಅವರ ತನಕ ಈ ಕುಟುಂಬದ ರಾಜಕೀಯ ಮಹತ್ವಾಕಾಂಕ್ಷೆಗಳು ರಾಜಕೀಯ ಪಕ್ಷಗಳಿಗೆ ಚಳ್ಳೆ ಹಣ್ಣು ತಿನ್ನಿಸುತ್ತ ಬಂದಿವೆ.

ರಾಜಮಾತೆ ವಿಜಯರಾಜೇ ಸಿಂಧ್ಯ ಅವರು 1957ರಲ್ಲಿ ಗುಣಾ ಮತ್ತು 1962ರಲ್ಲಿ ಗ್ವಾಲಿಯರ್ ನಿಂದ ಕಾಂಗ್ರೆಸ್ ಸಂಸದರಾಗಿ ಆರಿಸಿ ಬಂದಿದ್ದರು. 1967ರ ಲೋಕಸಭಾ ಉಪಚುನಾವಣೆಯಲ್ಲಿ ಪಕ್ಷೇತರರಾಗಿ ಗುಣಾದಿಂದ ಗೆದ್ದರು. 1971ರಲ್ಲಿ ಜನಸಂಘ, 1989,1991, 1996, 1998ರಲ್ಲಿ ಬಿಜೆಪಿಯಿಂದ ಲೋಕಸಭೆಗೆ ಆರಿಸಿ ಬಂದರು.

ಜ್ಯೋತಿರಾದಿತ್ಯ ಅವರ ತಂದೆ ಮಾಧವರಾವ್ ಸಿಂಧ್ಯ 1971ರಲ್ಲಿ ಗುಣಾದಿಂದ ಜನಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು, 1977ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ, 1980, 1984, 1989, 1991ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂಸದರಾದರು. 1996ರಲ್ಲಿ ಮಧ್ಯಪ್ರದೇಶ ವಿಕಾಸ ಕಾಂಗ್ರೆಸ್ ಸ್ಥಾಪಿಸಿ ಆಯ್ಕೆ ಹೊಂದಿದರು. 1998 ಮತ್ತು 1999ರಲ್ಲಿ ಪುನಃ ಕಾಂಗ್ರೆಸ್ ನಿಂದ ಆಯ್ಕೆ ಹೊಂದಿದರು.

ವಸುಂಧರಾ ರಾಜೇ ಅವರು ಐದು ಬಾರಿ ಸಂಸದೆ ಮತ್ತು ಐದು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವೆಯಾಗಿದ್ದೇ ಅಲ್ಲದೆ ಎರಡು ಬಾರಿ ರಾಜಸ್ತಾನದ ಮುಖ್ಯಮಂತ್ರಿಯಾಗಿದ್ದರು.

ಯಶೋಧರಾ ರಾಜೇ ಐದು ಬಾರಿ ಶಾಸಕಿ ಮತ್ತು ಒಮ್ಮೆ ಸಂಸದೆಯಾಗಿದ್ದರು. ಕಾಂಗ್ರೆಸ್ಸಿನಲ್ಲಿದ್ದ ಜ್ಯೋತಿರಾದಿತ್ಯ ನಾಲ್ಕು ಬಾರಿ ಸಂಸದರು ಮತ್ತು ಎರಡು ಬಾರಿ ಕೇಂದ್ರ ಮಂತ್ರಿಯಾಗಿದ್ದರು.

ಹದಿನೆಂಟು ವರ್ಷಗಳಿಗೂ ಹೆಚ್ಚು ಕಾಲ ಕಾಂಗ್ರೆಸ್ಸಿನಲ್ಲಿದ್ದ ಜ್ಯೋತಿರಾದಿತ್ಯ ಬಿಜೆಪಿಯತ್ತ ನಡೆದಿದ್ದಾರೆ. ಸಿಂಧ್ಯಾ ಕುಟುಂಬದ ಅಧಿಕಾರದಾಹದ ಹೊಸ ಅಧ್ಯಾಯದ ಪುಟಗಳು ತೆರೆಯತೊಡಗಿವೆ. ಜ್ಯೋತಿರಾದಿತ್ಯ ಅವರ ಅತ್ತೆಯರಾದ (ತಂದೆ ಮಾಧವರಾವ್ ಸಿಂಧ್ಯಾ ಅವರ ಸೋದರಿಯರು) ವಸುಂಧರಾರಾಜೇ ಸಿಂಧ್ಯ ಮತ್ತು ಯಶೋಧರರಾಜೇ ಸಿಂಧ್ಯಾ ಈಗಾಗಲೇ ಬಿಜೆಪಿಯಲ್ಲಿ ಬೇರು ಬಿಟ್ಟ ತಲೆಯಾಳುಗಳು. ಜ್ಯೋತಿರಾದಿತ್ಯ ಅವರ ಹಾಲಿ ನಡೆಯನ್ನು ಇವರಿಬ್ಬರೂ ಸ್ವಾಗತಿಸಿದ್ದಾರೆ. ಜ್ಯೋತಿರಾದಿತ್ಯ ತವರಿಗೆ ಮರಳುತ್ತಿದ್ದಾನೆ ಎಂಬ ಅವರ ಮಾತು ನಿಜ.

ಜ್ಯೋತಿರಾದಿತ್ಯ ಅವರ ಅಜ್ಜಿ ರಾಜಮಾತಾ ವಿಜಯರಾಜೇ ಸಿಂಧ್ಯ ಅವರು ಹಿಂದೂ ಮಹಾಸಭಾದಲ್ಲಿ ಎತ್ತರದ ಸ್ಥಾನದಲ್ಲಿದ್ದವರು. ಆನಂತರ ಜನಸಂಘಕ್ಕೆ ಸೇರಿದ್ದರು. ಆನಂತರ ಬಿಜೆಪಿಯ ಸ್ಥಾಪಕ ಸದಸ್ಯರಷ್ಟೇ ಅಲ್ಲದೆ ಈ ಪಕ್ಷದ ಅಧ್ಯಕ್ಷರೂ ಆಗಿದ್ದವರು. ತಂದೆ ಮಾಧವರಾವ್ ಸಿಂಧ್ಯಾ ಕೂಡ 1972ರಲ್ಲಿ ಜನಸಂಘದಿಂದ ಲೋಕಸಭೆಗೆ ಆರಿಸಿ ಬಂದಿದ್ದವರು. ಇಂದಿರಾಗಾಂಧೀ ಅವರ ಕೃಪೆಯಿಂದಾಗಿ ತುರ್ತುಪರಿಸ್ಥಿತಿಯಲ್ಲಿ ಜೈಲು ತಪ್ಪಿಸಿಕೊಂಡಿದ್ದರು. 1977ರಲ್ಲಿ ಪಕ್ಷೇತರ ಸಂಸದ. 1980ರಲ್ಲಿ ಕಾಂಗ್ರೆಸ್ ಸೇರಿ 1996ರಲ್ಲಿ ಪ್ರಾದೇಶಿಕ ಪಕ್ಷ ಕಟ್ಟಿ ಪುನಃ ಕಾಂಗ್ರೆಸ್ ಸೇರಿದ್ದವರು. 2001ರಲ್ಲಿ ಅಪಘಾತದಲ್ಲಿ ನಿಧನರಾಗುವ ತನಕ ಕಾಂಗ್ರೆಸ್ಸಿನಲ್ಲೇ ಇದ್ದರು.

ಮಧ್ಯಪ್ರದೇಶದ ರಾಜಕಾರಣವನ್ನೇ ಗಣನೆಗೆ ತೆಗೆದುಕೊಳ್ಳುವುದಾದರೆ ಸಿಂಧ್ಯಾ ಕುಟುಂಬ 53 ವರ್ಷದ ಹಳೆಯ ಇತಿಹಾಸದ ದಾಳವನ್ನು ಪುನಃ ಉರುಳಿಸಿದೆ. 1967ರಲ್ಲಿ ವಿಜಯರಾಜೇ ಸಿಂಧ್ಯಾ ಅವರ ಕಾರಣ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಬೇಕಾಗಿತ್ತು. ಇದೀಗ ಅವರ ಮೊಮ್ಮಗನ ಕಾಂಗ್ರೆಸ್ ಸರ್ಕಾರವನ್ನು ಪತನದ ಅಂಚಿಗೆ ನೂಕಿದ್ದಾರೆ.

2018ರ ಡಿಸೆಂಬರ್ ನಲ್ಲಿ ಮಧ್ಯಪ್ರದೇಶದ ಮತದಾರರು ಅತಂತ್ರ ವಿಧಾನಸಭೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಬಹುಮತದ ಅಂಚಿಗೆ ಬಂದಿದ್ದ ಕಾಂಗ್ರೆಸ್ ಪಕ್ಷ ಬಿ.ಎಸ್.ಪಿ., ಪಕ್ಷೇತರರು ಮತ್ತು ಎಸ್.ಪಿ. ಬೆಂಬಲದೊಂದಿಗೆ ಸರ್ಕಾರ ರಚಿಸಿದಾಗ ಜ್ಯೋತಿರಾದಿತ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಹಾತೊರೆದಿದ್ದರು. ಆದರೆ ಕಾಂಗ್ರೆಸ್ ಪಕ್ಷ ಹಳೆಯ ಪಂಟ ಕಮಲನಾಥ್ ಅವರಿಗೆ ಮಣೆ ಹಾಕಿತು. ಆಗಲೇ ಮುನಿದಿದ್ದ ಜ್ಯೋತಿರಾದಿತ್ಯ ಅವರಿಗೆ ಬಿಜೆಪಿ ಬಲೆ ಬೀಸಿತ್ತು. ಕಮಲನಾಥ್ ಮತ್ತು ಸಿಂಧ್ಯ ನಡುವಣ ಕಂದಕ ಹಿರಿದಾಗುತ್ತಲೇ ಹೋಯಿತು. ಸೋನಿಯಾಗಾಂಧೀ-ರಾಹುಲ್ ಗಾಂಧೀ- ಪ್ರಿಯಾಂಕಾ ಗಾಂಧೀ ಈ ಕುರಿತು ತಲೆ ಕೆಡಿಸಿಕೊಳ್ಳಲಿಲ್ಲ. ಅದರ ಫಲಿತಾಂಶ ಇಂದು ಅನಾವರಣಗೊಂಡಿದೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುವ ಮೋದಿ ಸರ್ಕಾರದ ಕ್ರಮವನ್ನು ಜ್ಯೋತಿರಾದಿತ್ಯ ಸ್ವಾಗತಿಸಿದ್ದರು. ಹೈದರಾಬಾದಿನಲ್ಲಿ ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿ ಕೊಂದ ನಡೆಯನ್ನೂ ಅವರು ಬೆಂಬಲಿಸಿದ್ದರು. ಈ ನಡುವೆ ಸಾಮಾಜಿಕ ಜಾಲತಾಣದ ಅವರ ಅಕೌಂಟುಗಳಿಂದ ಕಾಂಗ್ರೆಸ್ ಬಾವುಟ ಕಾಣೆಯಾಗಿತ್ತು. ಈ ಎಲ್ಲ ಸುಳಿವು ಸಂಕೇತಗಳನ್ನು ಕಾಂಗ್ರೆಸ್ ಓದಲಾರದಾಯಿತು.

ಗ್ವಾಲಿಯರ್ ಸಂಸ್ಥಾನವನ್ನು ಆಳಿದ ಸಿಂಧ್ಯ ಪೂರ್ವಜರು ಬ್ರಿಟಿಷರೊಂದಿಗೆ ಗೆಳೆತನ ಹೊಂದಿದ್ದವರು. ಅವರಿಂದ ಬಿರುದು ಬಾವಲಿಗಳನ್ನು ಸ್ವೀಕರಿಸಿದ್ದವರು. 1857ರಲ್ಲಿ ಝಾನ್ಸಿಯ ರಾಣಿ ಲಕ್ಷ್ಮೀಬಾಯಿ ಮತ್ತು ಬ್ರಿಟಿಷರ ನಡುವೆ ನಡೆದ ಯುದ್ಧದಲ್ಲಿ ಲಕ್ಷ್ಮೀಬಾಯಿಯನ್ನು ಬೆಂಬಲಿಸಲಿಲ್ಲ ಎಂಬ ಆರೋಪ ಹೊತ್ತವರು. ಸಂಕಟದಲ್ಲಿದ್ದ ಲಕ್ಷ್ಮೀಬಾಯಿಗೆ ನಿಶ್ಯಕ್ತ ಕುದುರೆ ನೀಡಿ ಆಕೆಯ ಸಾವಿಗೆ ಕಾರಣನಾಗಿದ್ದ ಗ್ವಾಲಿಯರ್ ಮಹಾರಾಜ ಎಂಬ ಆರೋಪವನ್ನು ಬಿಜೆಪಿಯೇ ಮಾಡಿರುವುದುಂಟು.

ಜ್ಯೋತಿರಾದಿತ್ಯ ಸಿಂಧ್ಯ ಅವರನ್ನು ಬಿಜೆಪಿ ಮುಂಬರುವ ಕೆಲ ಕಾಲ ಹೆಗಲ ಮೇಲೆ ಹೊತ್ತು ಮೆರೆಸಿ ಡೋಲು ಬಾರಿಸೀತು. ಇತ್ತ ಕಾಂಗ್ರೆಸ್ಸು ಬಿಜೆಪಿ ಮಾಡಿದ್ದ ಆಪಾದನೆಯನ್ನೇ ಮಾಡಿ ರಾಣಿ ಲಕ್ಷ್ಮೀಬಾಯಿಯ ಬೆನ್ನಿಗೆ ಚೂರಿ ಹಾಕಿದ ವಂಶಸ್ಥನಿಂದ ಇನ್ನೇನು ನಿರೀಕ್ಷಿಸಲಾದೀತು ಎಂದು ಬಾಯಿ ಬಡಿದುಕೊಳ್ಳಲಿದೆ. ಎರಡೂ ಪಕ್ಷಗಳು ಆಷಾಢಭೂತಿಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...