Homeಮುಖಪುಟಬಹುಜನ ಭಾರತ : ಸಿಂಧ್ಯ ಅಧಿಕಾರದಾಹ ಮತ್ತು ಕಾಂಗ್ರೆಸ್-ಬಿಜೆಪಿಯ ಅಷಾಢಭೂತಿತನ

ಬಹುಜನ ಭಾರತ : ಸಿಂಧ್ಯ ಅಧಿಕಾರದಾಹ ಮತ್ತು ಕಾಂಗ್ರೆಸ್-ಬಿಜೆಪಿಯ ಅಷಾಢಭೂತಿತನ

- Advertisement -
- Advertisement -

ಸ್ವತಂತ್ರ ಭಾರತದ ಮಾಜಿ ರಾಜಪರಿವಾರಗಳು ‘ಜನತಾಂತ್ರಿಕ’ ರಾಜಕಾರಣದಲ್ಲೂ ರಾಜ್ಯವಾಳುತ್ತ ಬಂದಿವೆ. ಅಂತಹ ಪರಿವಾರಗಳ ಪೈಕಿ ಮಧ್ಯಪ್ರದೇಶದ ಗ್ವಾಲಿಯರ್-ಗುಣಾದ ಸಿಂಧ್ಯಾ ಪರಿವಾರ ಎದ್ದು ಕಾಣುವಂತಹುದು. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾನ್ಹರಖೇಡ ಗ್ರಾಮದ ಪಾಟೀಲ ಜನಕೋಜೀರಾವ್ ವಂಶಜರು 27 ಬಾರಿ ಸಂಸದರಾಗಿದ್ದಾರೆ. ಒಂಬತ್ತು ಬಾರಿ ವಿಧಾನಸಭೆಗಳಿಗೆ ಆರಿಸಿಬಂದಿದ್ದಾರೆ. ರಾಜಮಾತಾ ವಿಜಯರಾಜೇ ಸಿಂಧ್ಯಾ ಅವರಿಂದ ಆಕೆಯ ಮೊಮ್ಮಗ ಜ್ಯೋತಿರಾದಿತ್ಯ ಸಿಂಧ್ಯ ಅವರ ತನಕ ಈ ಕುಟುಂಬದ ರಾಜಕೀಯ ಮಹತ್ವಾಕಾಂಕ್ಷೆಗಳು ರಾಜಕೀಯ ಪಕ್ಷಗಳಿಗೆ ಚಳ್ಳೆ ಹಣ್ಣು ತಿನ್ನಿಸುತ್ತ ಬಂದಿವೆ.

ರಾಜಮಾತೆ ವಿಜಯರಾಜೇ ಸಿಂಧ್ಯ ಅವರು 1957ರಲ್ಲಿ ಗುಣಾ ಮತ್ತು 1962ರಲ್ಲಿ ಗ್ವಾಲಿಯರ್ ನಿಂದ ಕಾಂಗ್ರೆಸ್ ಸಂಸದರಾಗಿ ಆರಿಸಿ ಬಂದಿದ್ದರು. 1967ರ ಲೋಕಸಭಾ ಉಪಚುನಾವಣೆಯಲ್ಲಿ ಪಕ್ಷೇತರರಾಗಿ ಗುಣಾದಿಂದ ಗೆದ್ದರು. 1971ರಲ್ಲಿ ಜನಸಂಘ, 1989,1991, 1996, 1998ರಲ್ಲಿ ಬಿಜೆಪಿಯಿಂದ ಲೋಕಸಭೆಗೆ ಆರಿಸಿ ಬಂದರು.

ಜ್ಯೋತಿರಾದಿತ್ಯ ಅವರ ತಂದೆ ಮಾಧವರಾವ್ ಸಿಂಧ್ಯ 1971ರಲ್ಲಿ ಗುಣಾದಿಂದ ಜನಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು, 1977ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ, 1980, 1984, 1989, 1991ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂಸದರಾದರು. 1996ರಲ್ಲಿ ಮಧ್ಯಪ್ರದೇಶ ವಿಕಾಸ ಕಾಂಗ್ರೆಸ್ ಸ್ಥಾಪಿಸಿ ಆಯ್ಕೆ ಹೊಂದಿದರು. 1998 ಮತ್ತು 1999ರಲ್ಲಿ ಪುನಃ ಕಾಂಗ್ರೆಸ್ ನಿಂದ ಆಯ್ಕೆ ಹೊಂದಿದರು.

ವಸುಂಧರಾ ರಾಜೇ ಅವರು ಐದು ಬಾರಿ ಸಂಸದೆ ಮತ್ತು ಐದು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವೆಯಾಗಿದ್ದೇ ಅಲ್ಲದೆ ಎರಡು ಬಾರಿ ರಾಜಸ್ತಾನದ ಮುಖ್ಯಮಂತ್ರಿಯಾಗಿದ್ದರು.

ಯಶೋಧರಾ ರಾಜೇ ಐದು ಬಾರಿ ಶಾಸಕಿ ಮತ್ತು ಒಮ್ಮೆ ಸಂಸದೆಯಾಗಿದ್ದರು. ಕಾಂಗ್ರೆಸ್ಸಿನಲ್ಲಿದ್ದ ಜ್ಯೋತಿರಾದಿತ್ಯ ನಾಲ್ಕು ಬಾರಿ ಸಂಸದರು ಮತ್ತು ಎರಡು ಬಾರಿ ಕೇಂದ್ರ ಮಂತ್ರಿಯಾಗಿದ್ದರು.

ಹದಿನೆಂಟು ವರ್ಷಗಳಿಗೂ ಹೆಚ್ಚು ಕಾಲ ಕಾಂಗ್ರೆಸ್ಸಿನಲ್ಲಿದ್ದ ಜ್ಯೋತಿರಾದಿತ್ಯ ಬಿಜೆಪಿಯತ್ತ ನಡೆದಿದ್ದಾರೆ. ಸಿಂಧ್ಯಾ ಕುಟುಂಬದ ಅಧಿಕಾರದಾಹದ ಹೊಸ ಅಧ್ಯಾಯದ ಪುಟಗಳು ತೆರೆಯತೊಡಗಿವೆ. ಜ್ಯೋತಿರಾದಿತ್ಯ ಅವರ ಅತ್ತೆಯರಾದ (ತಂದೆ ಮಾಧವರಾವ್ ಸಿಂಧ್ಯಾ ಅವರ ಸೋದರಿಯರು) ವಸುಂಧರಾರಾಜೇ ಸಿಂಧ್ಯ ಮತ್ತು ಯಶೋಧರರಾಜೇ ಸಿಂಧ್ಯಾ ಈಗಾಗಲೇ ಬಿಜೆಪಿಯಲ್ಲಿ ಬೇರು ಬಿಟ್ಟ ತಲೆಯಾಳುಗಳು. ಜ್ಯೋತಿರಾದಿತ್ಯ ಅವರ ಹಾಲಿ ನಡೆಯನ್ನು ಇವರಿಬ್ಬರೂ ಸ್ವಾಗತಿಸಿದ್ದಾರೆ. ಜ್ಯೋತಿರಾದಿತ್ಯ ತವರಿಗೆ ಮರಳುತ್ತಿದ್ದಾನೆ ಎಂಬ ಅವರ ಮಾತು ನಿಜ.

ಜ್ಯೋತಿರಾದಿತ್ಯ ಅವರ ಅಜ್ಜಿ ರಾಜಮಾತಾ ವಿಜಯರಾಜೇ ಸಿಂಧ್ಯ ಅವರು ಹಿಂದೂ ಮಹಾಸಭಾದಲ್ಲಿ ಎತ್ತರದ ಸ್ಥಾನದಲ್ಲಿದ್ದವರು. ಆನಂತರ ಜನಸಂಘಕ್ಕೆ ಸೇರಿದ್ದರು. ಆನಂತರ ಬಿಜೆಪಿಯ ಸ್ಥಾಪಕ ಸದಸ್ಯರಷ್ಟೇ ಅಲ್ಲದೆ ಈ ಪಕ್ಷದ ಅಧ್ಯಕ್ಷರೂ ಆಗಿದ್ದವರು. ತಂದೆ ಮಾಧವರಾವ್ ಸಿಂಧ್ಯಾ ಕೂಡ 1972ರಲ್ಲಿ ಜನಸಂಘದಿಂದ ಲೋಕಸಭೆಗೆ ಆರಿಸಿ ಬಂದಿದ್ದವರು. ಇಂದಿರಾಗಾಂಧೀ ಅವರ ಕೃಪೆಯಿಂದಾಗಿ ತುರ್ತುಪರಿಸ್ಥಿತಿಯಲ್ಲಿ ಜೈಲು ತಪ್ಪಿಸಿಕೊಂಡಿದ್ದರು. 1977ರಲ್ಲಿ ಪಕ್ಷೇತರ ಸಂಸದ. 1980ರಲ್ಲಿ ಕಾಂಗ್ರೆಸ್ ಸೇರಿ 1996ರಲ್ಲಿ ಪ್ರಾದೇಶಿಕ ಪಕ್ಷ ಕಟ್ಟಿ ಪುನಃ ಕಾಂಗ್ರೆಸ್ ಸೇರಿದ್ದವರು. 2001ರಲ್ಲಿ ಅಪಘಾತದಲ್ಲಿ ನಿಧನರಾಗುವ ತನಕ ಕಾಂಗ್ರೆಸ್ಸಿನಲ್ಲೇ ಇದ್ದರು.

ಮಧ್ಯಪ್ರದೇಶದ ರಾಜಕಾರಣವನ್ನೇ ಗಣನೆಗೆ ತೆಗೆದುಕೊಳ್ಳುವುದಾದರೆ ಸಿಂಧ್ಯಾ ಕುಟುಂಬ 53 ವರ್ಷದ ಹಳೆಯ ಇತಿಹಾಸದ ದಾಳವನ್ನು ಪುನಃ ಉರುಳಿಸಿದೆ. 1967ರಲ್ಲಿ ವಿಜಯರಾಜೇ ಸಿಂಧ್ಯಾ ಅವರ ಕಾರಣ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಬೇಕಾಗಿತ್ತು. ಇದೀಗ ಅವರ ಮೊಮ್ಮಗನ ಕಾಂಗ್ರೆಸ್ ಸರ್ಕಾರವನ್ನು ಪತನದ ಅಂಚಿಗೆ ನೂಕಿದ್ದಾರೆ.

2018ರ ಡಿಸೆಂಬರ್ ನಲ್ಲಿ ಮಧ್ಯಪ್ರದೇಶದ ಮತದಾರರು ಅತಂತ್ರ ವಿಧಾನಸಭೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಬಹುಮತದ ಅಂಚಿಗೆ ಬಂದಿದ್ದ ಕಾಂಗ್ರೆಸ್ ಪಕ್ಷ ಬಿ.ಎಸ್.ಪಿ., ಪಕ್ಷೇತರರು ಮತ್ತು ಎಸ್.ಪಿ. ಬೆಂಬಲದೊಂದಿಗೆ ಸರ್ಕಾರ ರಚಿಸಿದಾಗ ಜ್ಯೋತಿರಾದಿತ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಹಾತೊರೆದಿದ್ದರು. ಆದರೆ ಕಾಂಗ್ರೆಸ್ ಪಕ್ಷ ಹಳೆಯ ಪಂಟ ಕಮಲನಾಥ್ ಅವರಿಗೆ ಮಣೆ ಹಾಕಿತು. ಆಗಲೇ ಮುನಿದಿದ್ದ ಜ್ಯೋತಿರಾದಿತ್ಯ ಅವರಿಗೆ ಬಿಜೆಪಿ ಬಲೆ ಬೀಸಿತ್ತು. ಕಮಲನಾಥ್ ಮತ್ತು ಸಿಂಧ್ಯ ನಡುವಣ ಕಂದಕ ಹಿರಿದಾಗುತ್ತಲೇ ಹೋಯಿತು. ಸೋನಿಯಾಗಾಂಧೀ-ರಾಹುಲ್ ಗಾಂಧೀ- ಪ್ರಿಯಾಂಕಾ ಗಾಂಧೀ ಈ ಕುರಿತು ತಲೆ ಕೆಡಿಸಿಕೊಳ್ಳಲಿಲ್ಲ. ಅದರ ಫಲಿತಾಂಶ ಇಂದು ಅನಾವರಣಗೊಂಡಿದೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುವ ಮೋದಿ ಸರ್ಕಾರದ ಕ್ರಮವನ್ನು ಜ್ಯೋತಿರಾದಿತ್ಯ ಸ್ವಾಗತಿಸಿದ್ದರು. ಹೈದರಾಬಾದಿನಲ್ಲಿ ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿ ಕೊಂದ ನಡೆಯನ್ನೂ ಅವರು ಬೆಂಬಲಿಸಿದ್ದರು. ಈ ನಡುವೆ ಸಾಮಾಜಿಕ ಜಾಲತಾಣದ ಅವರ ಅಕೌಂಟುಗಳಿಂದ ಕಾಂಗ್ರೆಸ್ ಬಾವುಟ ಕಾಣೆಯಾಗಿತ್ತು. ಈ ಎಲ್ಲ ಸುಳಿವು ಸಂಕೇತಗಳನ್ನು ಕಾಂಗ್ರೆಸ್ ಓದಲಾರದಾಯಿತು.

ಗ್ವಾಲಿಯರ್ ಸಂಸ್ಥಾನವನ್ನು ಆಳಿದ ಸಿಂಧ್ಯ ಪೂರ್ವಜರು ಬ್ರಿಟಿಷರೊಂದಿಗೆ ಗೆಳೆತನ ಹೊಂದಿದ್ದವರು. ಅವರಿಂದ ಬಿರುದು ಬಾವಲಿಗಳನ್ನು ಸ್ವೀಕರಿಸಿದ್ದವರು. 1857ರಲ್ಲಿ ಝಾನ್ಸಿಯ ರಾಣಿ ಲಕ್ಷ್ಮೀಬಾಯಿ ಮತ್ತು ಬ್ರಿಟಿಷರ ನಡುವೆ ನಡೆದ ಯುದ್ಧದಲ್ಲಿ ಲಕ್ಷ್ಮೀಬಾಯಿಯನ್ನು ಬೆಂಬಲಿಸಲಿಲ್ಲ ಎಂಬ ಆರೋಪ ಹೊತ್ತವರು. ಸಂಕಟದಲ್ಲಿದ್ದ ಲಕ್ಷ್ಮೀಬಾಯಿಗೆ ನಿಶ್ಯಕ್ತ ಕುದುರೆ ನೀಡಿ ಆಕೆಯ ಸಾವಿಗೆ ಕಾರಣನಾಗಿದ್ದ ಗ್ವಾಲಿಯರ್ ಮಹಾರಾಜ ಎಂಬ ಆರೋಪವನ್ನು ಬಿಜೆಪಿಯೇ ಮಾಡಿರುವುದುಂಟು.

ಜ್ಯೋತಿರಾದಿತ್ಯ ಸಿಂಧ್ಯ ಅವರನ್ನು ಬಿಜೆಪಿ ಮುಂಬರುವ ಕೆಲ ಕಾಲ ಹೆಗಲ ಮೇಲೆ ಹೊತ್ತು ಮೆರೆಸಿ ಡೋಲು ಬಾರಿಸೀತು. ಇತ್ತ ಕಾಂಗ್ರೆಸ್ಸು ಬಿಜೆಪಿ ಮಾಡಿದ್ದ ಆಪಾದನೆಯನ್ನೇ ಮಾಡಿ ರಾಣಿ ಲಕ್ಷ್ಮೀಬಾಯಿಯ ಬೆನ್ನಿಗೆ ಚೂರಿ ಹಾಕಿದ ವಂಶಸ್ಥನಿಂದ ಇನ್ನೇನು ನಿರೀಕ್ಷಿಸಲಾದೀತು ಎಂದು ಬಾಯಿ ಬಡಿದುಕೊಳ್ಳಲಿದೆ. ಎರಡೂ ಪಕ್ಷಗಳು ಆಷಾಢಭೂತಿಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...