Homeಮುಖಪುಟಬಹುಜನ ಭಾರತ : ಸಿಂಧ್ಯ ಅಧಿಕಾರದಾಹ ಮತ್ತು ಕಾಂಗ್ರೆಸ್-ಬಿಜೆಪಿಯ ಅಷಾಢಭೂತಿತನ

ಬಹುಜನ ಭಾರತ : ಸಿಂಧ್ಯ ಅಧಿಕಾರದಾಹ ಮತ್ತು ಕಾಂಗ್ರೆಸ್-ಬಿಜೆಪಿಯ ಅಷಾಢಭೂತಿತನ

- Advertisement -
- Advertisement -

ಸ್ವತಂತ್ರ ಭಾರತದ ಮಾಜಿ ರಾಜಪರಿವಾರಗಳು ‘ಜನತಾಂತ್ರಿಕ’ ರಾಜಕಾರಣದಲ್ಲೂ ರಾಜ್ಯವಾಳುತ್ತ ಬಂದಿವೆ. ಅಂತಹ ಪರಿವಾರಗಳ ಪೈಕಿ ಮಧ್ಯಪ್ರದೇಶದ ಗ್ವಾಲಿಯರ್-ಗುಣಾದ ಸಿಂಧ್ಯಾ ಪರಿವಾರ ಎದ್ದು ಕಾಣುವಂತಹುದು. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾನ್ಹರಖೇಡ ಗ್ರಾಮದ ಪಾಟೀಲ ಜನಕೋಜೀರಾವ್ ವಂಶಜರು 27 ಬಾರಿ ಸಂಸದರಾಗಿದ್ದಾರೆ. ಒಂಬತ್ತು ಬಾರಿ ವಿಧಾನಸಭೆಗಳಿಗೆ ಆರಿಸಿಬಂದಿದ್ದಾರೆ. ರಾಜಮಾತಾ ವಿಜಯರಾಜೇ ಸಿಂಧ್ಯಾ ಅವರಿಂದ ಆಕೆಯ ಮೊಮ್ಮಗ ಜ್ಯೋತಿರಾದಿತ್ಯ ಸಿಂಧ್ಯ ಅವರ ತನಕ ಈ ಕುಟುಂಬದ ರಾಜಕೀಯ ಮಹತ್ವಾಕಾಂಕ್ಷೆಗಳು ರಾಜಕೀಯ ಪಕ್ಷಗಳಿಗೆ ಚಳ್ಳೆ ಹಣ್ಣು ತಿನ್ನಿಸುತ್ತ ಬಂದಿವೆ.

ರಾಜಮಾತೆ ವಿಜಯರಾಜೇ ಸಿಂಧ್ಯ ಅವರು 1957ರಲ್ಲಿ ಗುಣಾ ಮತ್ತು 1962ರಲ್ಲಿ ಗ್ವಾಲಿಯರ್ ನಿಂದ ಕಾಂಗ್ರೆಸ್ ಸಂಸದರಾಗಿ ಆರಿಸಿ ಬಂದಿದ್ದರು. 1967ರ ಲೋಕಸಭಾ ಉಪಚುನಾವಣೆಯಲ್ಲಿ ಪಕ್ಷೇತರರಾಗಿ ಗುಣಾದಿಂದ ಗೆದ್ದರು. 1971ರಲ್ಲಿ ಜನಸಂಘ, 1989,1991, 1996, 1998ರಲ್ಲಿ ಬಿಜೆಪಿಯಿಂದ ಲೋಕಸಭೆಗೆ ಆರಿಸಿ ಬಂದರು.

ಜ್ಯೋತಿರಾದಿತ್ಯ ಅವರ ತಂದೆ ಮಾಧವರಾವ್ ಸಿಂಧ್ಯ 1971ರಲ್ಲಿ ಗುಣಾದಿಂದ ಜನಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು, 1977ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ, 1980, 1984, 1989, 1991ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂಸದರಾದರು. 1996ರಲ್ಲಿ ಮಧ್ಯಪ್ರದೇಶ ವಿಕಾಸ ಕಾಂಗ್ರೆಸ್ ಸ್ಥಾಪಿಸಿ ಆಯ್ಕೆ ಹೊಂದಿದರು. 1998 ಮತ್ತು 1999ರಲ್ಲಿ ಪುನಃ ಕಾಂಗ್ರೆಸ್ ನಿಂದ ಆಯ್ಕೆ ಹೊಂದಿದರು.

ವಸುಂಧರಾ ರಾಜೇ ಅವರು ಐದು ಬಾರಿ ಸಂಸದೆ ಮತ್ತು ಐದು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವೆಯಾಗಿದ್ದೇ ಅಲ್ಲದೆ ಎರಡು ಬಾರಿ ರಾಜಸ್ತಾನದ ಮುಖ್ಯಮಂತ್ರಿಯಾಗಿದ್ದರು.

ಯಶೋಧರಾ ರಾಜೇ ಐದು ಬಾರಿ ಶಾಸಕಿ ಮತ್ತು ಒಮ್ಮೆ ಸಂಸದೆಯಾಗಿದ್ದರು. ಕಾಂಗ್ರೆಸ್ಸಿನಲ್ಲಿದ್ದ ಜ್ಯೋತಿರಾದಿತ್ಯ ನಾಲ್ಕು ಬಾರಿ ಸಂಸದರು ಮತ್ತು ಎರಡು ಬಾರಿ ಕೇಂದ್ರ ಮಂತ್ರಿಯಾಗಿದ್ದರು.

ಹದಿನೆಂಟು ವರ್ಷಗಳಿಗೂ ಹೆಚ್ಚು ಕಾಲ ಕಾಂಗ್ರೆಸ್ಸಿನಲ್ಲಿದ್ದ ಜ್ಯೋತಿರಾದಿತ್ಯ ಬಿಜೆಪಿಯತ್ತ ನಡೆದಿದ್ದಾರೆ. ಸಿಂಧ್ಯಾ ಕುಟುಂಬದ ಅಧಿಕಾರದಾಹದ ಹೊಸ ಅಧ್ಯಾಯದ ಪುಟಗಳು ತೆರೆಯತೊಡಗಿವೆ. ಜ್ಯೋತಿರಾದಿತ್ಯ ಅವರ ಅತ್ತೆಯರಾದ (ತಂದೆ ಮಾಧವರಾವ್ ಸಿಂಧ್ಯಾ ಅವರ ಸೋದರಿಯರು) ವಸುಂಧರಾರಾಜೇ ಸಿಂಧ್ಯ ಮತ್ತು ಯಶೋಧರರಾಜೇ ಸಿಂಧ್ಯಾ ಈಗಾಗಲೇ ಬಿಜೆಪಿಯಲ್ಲಿ ಬೇರು ಬಿಟ್ಟ ತಲೆಯಾಳುಗಳು. ಜ್ಯೋತಿರಾದಿತ್ಯ ಅವರ ಹಾಲಿ ನಡೆಯನ್ನು ಇವರಿಬ್ಬರೂ ಸ್ವಾಗತಿಸಿದ್ದಾರೆ. ಜ್ಯೋತಿರಾದಿತ್ಯ ತವರಿಗೆ ಮರಳುತ್ತಿದ್ದಾನೆ ಎಂಬ ಅವರ ಮಾತು ನಿಜ.

ಜ್ಯೋತಿರಾದಿತ್ಯ ಅವರ ಅಜ್ಜಿ ರಾಜಮಾತಾ ವಿಜಯರಾಜೇ ಸಿಂಧ್ಯ ಅವರು ಹಿಂದೂ ಮಹಾಸಭಾದಲ್ಲಿ ಎತ್ತರದ ಸ್ಥಾನದಲ್ಲಿದ್ದವರು. ಆನಂತರ ಜನಸಂಘಕ್ಕೆ ಸೇರಿದ್ದರು. ಆನಂತರ ಬಿಜೆಪಿಯ ಸ್ಥಾಪಕ ಸದಸ್ಯರಷ್ಟೇ ಅಲ್ಲದೆ ಈ ಪಕ್ಷದ ಅಧ್ಯಕ್ಷರೂ ಆಗಿದ್ದವರು. ತಂದೆ ಮಾಧವರಾವ್ ಸಿಂಧ್ಯಾ ಕೂಡ 1972ರಲ್ಲಿ ಜನಸಂಘದಿಂದ ಲೋಕಸಭೆಗೆ ಆರಿಸಿ ಬಂದಿದ್ದವರು. ಇಂದಿರಾಗಾಂಧೀ ಅವರ ಕೃಪೆಯಿಂದಾಗಿ ತುರ್ತುಪರಿಸ್ಥಿತಿಯಲ್ಲಿ ಜೈಲು ತಪ್ಪಿಸಿಕೊಂಡಿದ್ದರು. 1977ರಲ್ಲಿ ಪಕ್ಷೇತರ ಸಂಸದ. 1980ರಲ್ಲಿ ಕಾಂಗ್ರೆಸ್ ಸೇರಿ 1996ರಲ್ಲಿ ಪ್ರಾದೇಶಿಕ ಪಕ್ಷ ಕಟ್ಟಿ ಪುನಃ ಕಾಂಗ್ರೆಸ್ ಸೇರಿದ್ದವರು. 2001ರಲ್ಲಿ ಅಪಘಾತದಲ್ಲಿ ನಿಧನರಾಗುವ ತನಕ ಕಾಂಗ್ರೆಸ್ಸಿನಲ್ಲೇ ಇದ್ದರು.

ಮಧ್ಯಪ್ರದೇಶದ ರಾಜಕಾರಣವನ್ನೇ ಗಣನೆಗೆ ತೆಗೆದುಕೊಳ್ಳುವುದಾದರೆ ಸಿಂಧ್ಯಾ ಕುಟುಂಬ 53 ವರ್ಷದ ಹಳೆಯ ಇತಿಹಾಸದ ದಾಳವನ್ನು ಪುನಃ ಉರುಳಿಸಿದೆ. 1967ರಲ್ಲಿ ವಿಜಯರಾಜೇ ಸಿಂಧ್ಯಾ ಅವರ ಕಾರಣ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಬೇಕಾಗಿತ್ತು. ಇದೀಗ ಅವರ ಮೊಮ್ಮಗನ ಕಾಂಗ್ರೆಸ್ ಸರ್ಕಾರವನ್ನು ಪತನದ ಅಂಚಿಗೆ ನೂಕಿದ್ದಾರೆ.

2018ರ ಡಿಸೆಂಬರ್ ನಲ್ಲಿ ಮಧ್ಯಪ್ರದೇಶದ ಮತದಾರರು ಅತಂತ್ರ ವಿಧಾನಸಭೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಬಹುಮತದ ಅಂಚಿಗೆ ಬಂದಿದ್ದ ಕಾಂಗ್ರೆಸ್ ಪಕ್ಷ ಬಿ.ಎಸ್.ಪಿ., ಪಕ್ಷೇತರರು ಮತ್ತು ಎಸ್.ಪಿ. ಬೆಂಬಲದೊಂದಿಗೆ ಸರ್ಕಾರ ರಚಿಸಿದಾಗ ಜ್ಯೋತಿರಾದಿತ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಹಾತೊರೆದಿದ್ದರು. ಆದರೆ ಕಾಂಗ್ರೆಸ್ ಪಕ್ಷ ಹಳೆಯ ಪಂಟ ಕಮಲನಾಥ್ ಅವರಿಗೆ ಮಣೆ ಹಾಕಿತು. ಆಗಲೇ ಮುನಿದಿದ್ದ ಜ್ಯೋತಿರಾದಿತ್ಯ ಅವರಿಗೆ ಬಿಜೆಪಿ ಬಲೆ ಬೀಸಿತ್ತು. ಕಮಲನಾಥ್ ಮತ್ತು ಸಿಂಧ್ಯ ನಡುವಣ ಕಂದಕ ಹಿರಿದಾಗುತ್ತಲೇ ಹೋಯಿತು. ಸೋನಿಯಾಗಾಂಧೀ-ರಾಹುಲ್ ಗಾಂಧೀ- ಪ್ರಿಯಾಂಕಾ ಗಾಂಧೀ ಈ ಕುರಿತು ತಲೆ ಕೆಡಿಸಿಕೊಳ್ಳಲಿಲ್ಲ. ಅದರ ಫಲಿತಾಂಶ ಇಂದು ಅನಾವರಣಗೊಂಡಿದೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುವ ಮೋದಿ ಸರ್ಕಾರದ ಕ್ರಮವನ್ನು ಜ್ಯೋತಿರಾದಿತ್ಯ ಸ್ವಾಗತಿಸಿದ್ದರು. ಹೈದರಾಬಾದಿನಲ್ಲಿ ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿ ಕೊಂದ ನಡೆಯನ್ನೂ ಅವರು ಬೆಂಬಲಿಸಿದ್ದರು. ಈ ನಡುವೆ ಸಾಮಾಜಿಕ ಜಾಲತಾಣದ ಅವರ ಅಕೌಂಟುಗಳಿಂದ ಕಾಂಗ್ರೆಸ್ ಬಾವುಟ ಕಾಣೆಯಾಗಿತ್ತು. ಈ ಎಲ್ಲ ಸುಳಿವು ಸಂಕೇತಗಳನ್ನು ಕಾಂಗ್ರೆಸ್ ಓದಲಾರದಾಯಿತು.

ಗ್ವಾಲಿಯರ್ ಸಂಸ್ಥಾನವನ್ನು ಆಳಿದ ಸಿಂಧ್ಯ ಪೂರ್ವಜರು ಬ್ರಿಟಿಷರೊಂದಿಗೆ ಗೆಳೆತನ ಹೊಂದಿದ್ದವರು. ಅವರಿಂದ ಬಿರುದು ಬಾವಲಿಗಳನ್ನು ಸ್ವೀಕರಿಸಿದ್ದವರು. 1857ರಲ್ಲಿ ಝಾನ್ಸಿಯ ರಾಣಿ ಲಕ್ಷ್ಮೀಬಾಯಿ ಮತ್ತು ಬ್ರಿಟಿಷರ ನಡುವೆ ನಡೆದ ಯುದ್ಧದಲ್ಲಿ ಲಕ್ಷ್ಮೀಬಾಯಿಯನ್ನು ಬೆಂಬಲಿಸಲಿಲ್ಲ ಎಂಬ ಆರೋಪ ಹೊತ್ತವರು. ಸಂಕಟದಲ್ಲಿದ್ದ ಲಕ್ಷ್ಮೀಬಾಯಿಗೆ ನಿಶ್ಯಕ್ತ ಕುದುರೆ ನೀಡಿ ಆಕೆಯ ಸಾವಿಗೆ ಕಾರಣನಾಗಿದ್ದ ಗ್ವಾಲಿಯರ್ ಮಹಾರಾಜ ಎಂಬ ಆರೋಪವನ್ನು ಬಿಜೆಪಿಯೇ ಮಾಡಿರುವುದುಂಟು.

ಜ್ಯೋತಿರಾದಿತ್ಯ ಸಿಂಧ್ಯ ಅವರನ್ನು ಬಿಜೆಪಿ ಮುಂಬರುವ ಕೆಲ ಕಾಲ ಹೆಗಲ ಮೇಲೆ ಹೊತ್ತು ಮೆರೆಸಿ ಡೋಲು ಬಾರಿಸೀತು. ಇತ್ತ ಕಾಂಗ್ರೆಸ್ಸು ಬಿಜೆಪಿ ಮಾಡಿದ್ದ ಆಪಾದನೆಯನ್ನೇ ಮಾಡಿ ರಾಣಿ ಲಕ್ಷ್ಮೀಬಾಯಿಯ ಬೆನ್ನಿಗೆ ಚೂರಿ ಹಾಕಿದ ವಂಶಸ್ಥನಿಂದ ಇನ್ನೇನು ನಿರೀಕ್ಷಿಸಲಾದೀತು ಎಂದು ಬಾಯಿ ಬಡಿದುಕೊಳ್ಳಲಿದೆ. ಎರಡೂ ಪಕ್ಷಗಳು ಆಷಾಢಭೂತಿಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...