Homeಮುಖಪುಟಬಹುಜನ ಭಾರತ : ಸಿಂಧ್ಯ ಅಧಿಕಾರದಾಹ ಮತ್ತು ಕಾಂಗ್ರೆಸ್-ಬಿಜೆಪಿಯ ಅಷಾಢಭೂತಿತನ

ಬಹುಜನ ಭಾರತ : ಸಿಂಧ್ಯ ಅಧಿಕಾರದಾಹ ಮತ್ತು ಕಾಂಗ್ರೆಸ್-ಬಿಜೆಪಿಯ ಅಷಾಢಭೂತಿತನ

- Advertisement -
- Advertisement -

ಸ್ವತಂತ್ರ ಭಾರತದ ಮಾಜಿ ರಾಜಪರಿವಾರಗಳು ‘ಜನತಾಂತ್ರಿಕ’ ರಾಜಕಾರಣದಲ್ಲೂ ರಾಜ್ಯವಾಳುತ್ತ ಬಂದಿವೆ. ಅಂತಹ ಪರಿವಾರಗಳ ಪೈಕಿ ಮಧ್ಯಪ್ರದೇಶದ ಗ್ವಾಲಿಯರ್-ಗುಣಾದ ಸಿಂಧ್ಯಾ ಪರಿವಾರ ಎದ್ದು ಕಾಣುವಂತಹುದು. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕಾನ್ಹರಖೇಡ ಗ್ರಾಮದ ಪಾಟೀಲ ಜನಕೋಜೀರಾವ್ ವಂಶಜರು 27 ಬಾರಿ ಸಂಸದರಾಗಿದ್ದಾರೆ. ಒಂಬತ್ತು ಬಾರಿ ವಿಧಾನಸಭೆಗಳಿಗೆ ಆರಿಸಿಬಂದಿದ್ದಾರೆ. ರಾಜಮಾತಾ ವಿಜಯರಾಜೇ ಸಿಂಧ್ಯಾ ಅವರಿಂದ ಆಕೆಯ ಮೊಮ್ಮಗ ಜ್ಯೋತಿರಾದಿತ್ಯ ಸಿಂಧ್ಯ ಅವರ ತನಕ ಈ ಕುಟುಂಬದ ರಾಜಕೀಯ ಮಹತ್ವಾಕಾಂಕ್ಷೆಗಳು ರಾಜಕೀಯ ಪಕ್ಷಗಳಿಗೆ ಚಳ್ಳೆ ಹಣ್ಣು ತಿನ್ನಿಸುತ್ತ ಬಂದಿವೆ.

ರಾಜಮಾತೆ ವಿಜಯರಾಜೇ ಸಿಂಧ್ಯ ಅವರು 1957ರಲ್ಲಿ ಗುಣಾ ಮತ್ತು 1962ರಲ್ಲಿ ಗ್ವಾಲಿಯರ್ ನಿಂದ ಕಾಂಗ್ರೆಸ್ ಸಂಸದರಾಗಿ ಆರಿಸಿ ಬಂದಿದ್ದರು. 1967ರ ಲೋಕಸಭಾ ಉಪಚುನಾವಣೆಯಲ್ಲಿ ಪಕ್ಷೇತರರಾಗಿ ಗುಣಾದಿಂದ ಗೆದ್ದರು. 1971ರಲ್ಲಿ ಜನಸಂಘ, 1989,1991, 1996, 1998ರಲ್ಲಿ ಬಿಜೆಪಿಯಿಂದ ಲೋಕಸಭೆಗೆ ಆರಿಸಿ ಬಂದರು.

ಜ್ಯೋತಿರಾದಿತ್ಯ ಅವರ ತಂದೆ ಮಾಧವರಾವ್ ಸಿಂಧ್ಯ 1971ರಲ್ಲಿ ಗುಣಾದಿಂದ ಜನಸಂಘದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು, 1977ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ, 1980, 1984, 1989, 1991ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂಸದರಾದರು. 1996ರಲ್ಲಿ ಮಧ್ಯಪ್ರದೇಶ ವಿಕಾಸ ಕಾಂಗ್ರೆಸ್ ಸ್ಥಾಪಿಸಿ ಆಯ್ಕೆ ಹೊಂದಿದರು. 1998 ಮತ್ತು 1999ರಲ್ಲಿ ಪುನಃ ಕಾಂಗ್ರೆಸ್ ನಿಂದ ಆಯ್ಕೆ ಹೊಂದಿದರು.

ವಸುಂಧರಾ ರಾಜೇ ಅವರು ಐದು ಬಾರಿ ಸಂಸದೆ ಮತ್ತು ಐದು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಸಚಿವೆಯಾಗಿದ್ದೇ ಅಲ್ಲದೆ ಎರಡು ಬಾರಿ ರಾಜಸ್ತಾನದ ಮುಖ್ಯಮಂತ್ರಿಯಾಗಿದ್ದರು.

ಯಶೋಧರಾ ರಾಜೇ ಐದು ಬಾರಿ ಶಾಸಕಿ ಮತ್ತು ಒಮ್ಮೆ ಸಂಸದೆಯಾಗಿದ್ದರು. ಕಾಂಗ್ರೆಸ್ಸಿನಲ್ಲಿದ್ದ ಜ್ಯೋತಿರಾದಿತ್ಯ ನಾಲ್ಕು ಬಾರಿ ಸಂಸದರು ಮತ್ತು ಎರಡು ಬಾರಿ ಕೇಂದ್ರ ಮಂತ್ರಿಯಾಗಿದ್ದರು.

ಹದಿನೆಂಟು ವರ್ಷಗಳಿಗೂ ಹೆಚ್ಚು ಕಾಲ ಕಾಂಗ್ರೆಸ್ಸಿನಲ್ಲಿದ್ದ ಜ್ಯೋತಿರಾದಿತ್ಯ ಬಿಜೆಪಿಯತ್ತ ನಡೆದಿದ್ದಾರೆ. ಸಿಂಧ್ಯಾ ಕುಟುಂಬದ ಅಧಿಕಾರದಾಹದ ಹೊಸ ಅಧ್ಯಾಯದ ಪುಟಗಳು ತೆರೆಯತೊಡಗಿವೆ. ಜ್ಯೋತಿರಾದಿತ್ಯ ಅವರ ಅತ್ತೆಯರಾದ (ತಂದೆ ಮಾಧವರಾವ್ ಸಿಂಧ್ಯಾ ಅವರ ಸೋದರಿಯರು) ವಸುಂಧರಾರಾಜೇ ಸಿಂಧ್ಯ ಮತ್ತು ಯಶೋಧರರಾಜೇ ಸಿಂಧ್ಯಾ ಈಗಾಗಲೇ ಬಿಜೆಪಿಯಲ್ಲಿ ಬೇರು ಬಿಟ್ಟ ತಲೆಯಾಳುಗಳು. ಜ್ಯೋತಿರಾದಿತ್ಯ ಅವರ ಹಾಲಿ ನಡೆಯನ್ನು ಇವರಿಬ್ಬರೂ ಸ್ವಾಗತಿಸಿದ್ದಾರೆ. ಜ್ಯೋತಿರಾದಿತ್ಯ ತವರಿಗೆ ಮರಳುತ್ತಿದ್ದಾನೆ ಎಂಬ ಅವರ ಮಾತು ನಿಜ.

ಜ್ಯೋತಿರಾದಿತ್ಯ ಅವರ ಅಜ್ಜಿ ರಾಜಮಾತಾ ವಿಜಯರಾಜೇ ಸಿಂಧ್ಯ ಅವರು ಹಿಂದೂ ಮಹಾಸಭಾದಲ್ಲಿ ಎತ್ತರದ ಸ್ಥಾನದಲ್ಲಿದ್ದವರು. ಆನಂತರ ಜನಸಂಘಕ್ಕೆ ಸೇರಿದ್ದರು. ಆನಂತರ ಬಿಜೆಪಿಯ ಸ್ಥಾಪಕ ಸದಸ್ಯರಷ್ಟೇ ಅಲ್ಲದೆ ಈ ಪಕ್ಷದ ಅಧ್ಯಕ್ಷರೂ ಆಗಿದ್ದವರು. ತಂದೆ ಮಾಧವರಾವ್ ಸಿಂಧ್ಯಾ ಕೂಡ 1972ರಲ್ಲಿ ಜನಸಂಘದಿಂದ ಲೋಕಸಭೆಗೆ ಆರಿಸಿ ಬಂದಿದ್ದವರು. ಇಂದಿರಾಗಾಂಧೀ ಅವರ ಕೃಪೆಯಿಂದಾಗಿ ತುರ್ತುಪರಿಸ್ಥಿತಿಯಲ್ಲಿ ಜೈಲು ತಪ್ಪಿಸಿಕೊಂಡಿದ್ದರು. 1977ರಲ್ಲಿ ಪಕ್ಷೇತರ ಸಂಸದ. 1980ರಲ್ಲಿ ಕಾಂಗ್ರೆಸ್ ಸೇರಿ 1996ರಲ್ಲಿ ಪ್ರಾದೇಶಿಕ ಪಕ್ಷ ಕಟ್ಟಿ ಪುನಃ ಕಾಂಗ್ರೆಸ್ ಸೇರಿದ್ದವರು. 2001ರಲ್ಲಿ ಅಪಘಾತದಲ್ಲಿ ನಿಧನರಾಗುವ ತನಕ ಕಾಂಗ್ರೆಸ್ಸಿನಲ್ಲೇ ಇದ್ದರು.

ಮಧ್ಯಪ್ರದೇಶದ ರಾಜಕಾರಣವನ್ನೇ ಗಣನೆಗೆ ತೆಗೆದುಕೊಳ್ಳುವುದಾದರೆ ಸಿಂಧ್ಯಾ ಕುಟುಂಬ 53 ವರ್ಷದ ಹಳೆಯ ಇತಿಹಾಸದ ದಾಳವನ್ನು ಪುನಃ ಉರುಳಿಸಿದೆ. 1967ರಲ್ಲಿ ವಿಜಯರಾಜೇ ಸಿಂಧ್ಯಾ ಅವರ ಕಾರಣ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಬೇಕಾಗಿತ್ತು. ಇದೀಗ ಅವರ ಮೊಮ್ಮಗನ ಕಾಂಗ್ರೆಸ್ ಸರ್ಕಾರವನ್ನು ಪತನದ ಅಂಚಿಗೆ ನೂಕಿದ್ದಾರೆ.

2018ರ ಡಿಸೆಂಬರ್ ನಲ್ಲಿ ಮಧ್ಯಪ್ರದೇಶದ ಮತದಾರರು ಅತಂತ್ರ ವಿಧಾನಸಭೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಬಹುಮತದ ಅಂಚಿಗೆ ಬಂದಿದ್ದ ಕಾಂಗ್ರೆಸ್ ಪಕ್ಷ ಬಿ.ಎಸ್.ಪಿ., ಪಕ್ಷೇತರರು ಮತ್ತು ಎಸ್.ಪಿ. ಬೆಂಬಲದೊಂದಿಗೆ ಸರ್ಕಾರ ರಚಿಸಿದಾಗ ಜ್ಯೋತಿರಾದಿತ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಹಾತೊರೆದಿದ್ದರು. ಆದರೆ ಕಾಂಗ್ರೆಸ್ ಪಕ್ಷ ಹಳೆಯ ಪಂಟ ಕಮಲನಾಥ್ ಅವರಿಗೆ ಮಣೆ ಹಾಕಿತು. ಆಗಲೇ ಮುನಿದಿದ್ದ ಜ್ಯೋತಿರಾದಿತ್ಯ ಅವರಿಗೆ ಬಿಜೆಪಿ ಬಲೆ ಬೀಸಿತ್ತು. ಕಮಲನಾಥ್ ಮತ್ತು ಸಿಂಧ್ಯ ನಡುವಣ ಕಂದಕ ಹಿರಿದಾಗುತ್ತಲೇ ಹೋಯಿತು. ಸೋನಿಯಾಗಾಂಧೀ-ರಾಹುಲ್ ಗಾಂಧೀ- ಪ್ರಿಯಾಂಕಾ ಗಾಂಧೀ ಈ ಕುರಿತು ತಲೆ ಕೆಡಿಸಿಕೊಳ್ಳಲಿಲ್ಲ. ಅದರ ಫಲಿತಾಂಶ ಇಂದು ಅನಾವರಣಗೊಂಡಿದೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುವ ಮೋದಿ ಸರ್ಕಾರದ ಕ್ರಮವನ್ನು ಜ್ಯೋತಿರಾದಿತ್ಯ ಸ್ವಾಗತಿಸಿದ್ದರು. ಹೈದರಾಬಾದಿನಲ್ಲಿ ಅತ್ಯಾಚಾರದ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್ ಮಾಡಿ ಕೊಂದ ನಡೆಯನ್ನೂ ಅವರು ಬೆಂಬಲಿಸಿದ್ದರು. ಈ ನಡುವೆ ಸಾಮಾಜಿಕ ಜಾಲತಾಣದ ಅವರ ಅಕೌಂಟುಗಳಿಂದ ಕಾಂಗ್ರೆಸ್ ಬಾವುಟ ಕಾಣೆಯಾಗಿತ್ತು. ಈ ಎಲ್ಲ ಸುಳಿವು ಸಂಕೇತಗಳನ್ನು ಕಾಂಗ್ರೆಸ್ ಓದಲಾರದಾಯಿತು.

ಗ್ವಾಲಿಯರ್ ಸಂಸ್ಥಾನವನ್ನು ಆಳಿದ ಸಿಂಧ್ಯ ಪೂರ್ವಜರು ಬ್ರಿಟಿಷರೊಂದಿಗೆ ಗೆಳೆತನ ಹೊಂದಿದ್ದವರು. ಅವರಿಂದ ಬಿರುದು ಬಾವಲಿಗಳನ್ನು ಸ್ವೀಕರಿಸಿದ್ದವರು. 1857ರಲ್ಲಿ ಝಾನ್ಸಿಯ ರಾಣಿ ಲಕ್ಷ್ಮೀಬಾಯಿ ಮತ್ತು ಬ್ರಿಟಿಷರ ನಡುವೆ ನಡೆದ ಯುದ್ಧದಲ್ಲಿ ಲಕ್ಷ್ಮೀಬಾಯಿಯನ್ನು ಬೆಂಬಲಿಸಲಿಲ್ಲ ಎಂಬ ಆರೋಪ ಹೊತ್ತವರು. ಸಂಕಟದಲ್ಲಿದ್ದ ಲಕ್ಷ್ಮೀಬಾಯಿಗೆ ನಿಶ್ಯಕ್ತ ಕುದುರೆ ನೀಡಿ ಆಕೆಯ ಸಾವಿಗೆ ಕಾರಣನಾಗಿದ್ದ ಗ್ವಾಲಿಯರ್ ಮಹಾರಾಜ ಎಂಬ ಆರೋಪವನ್ನು ಬಿಜೆಪಿಯೇ ಮಾಡಿರುವುದುಂಟು.

ಜ್ಯೋತಿರಾದಿತ್ಯ ಸಿಂಧ್ಯ ಅವರನ್ನು ಬಿಜೆಪಿ ಮುಂಬರುವ ಕೆಲ ಕಾಲ ಹೆಗಲ ಮೇಲೆ ಹೊತ್ತು ಮೆರೆಸಿ ಡೋಲು ಬಾರಿಸೀತು. ಇತ್ತ ಕಾಂಗ್ರೆಸ್ಸು ಬಿಜೆಪಿ ಮಾಡಿದ್ದ ಆಪಾದನೆಯನ್ನೇ ಮಾಡಿ ರಾಣಿ ಲಕ್ಷ್ಮೀಬಾಯಿಯ ಬೆನ್ನಿಗೆ ಚೂರಿ ಹಾಕಿದ ವಂಶಸ್ಥನಿಂದ ಇನ್ನೇನು ನಿರೀಕ್ಷಿಸಲಾದೀತು ಎಂದು ಬಾಯಿ ಬಡಿದುಕೊಳ್ಳಲಿದೆ. ಎರಡೂ ಪಕ್ಷಗಳು ಆಷಾಢಭೂತಿಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...