Homeಮುಖಪುಟಮಧ್ಯಪ್ರದೇಶ ಬಿಕ್ಕಟ್ಟು: ಮೋದಿ, ಶಾ ಭೇಟಿ ನಂತರ ಕಾಂಗ್ರೆಸ್‌ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ..

ಮಧ್ಯಪ್ರದೇಶ ಬಿಕ್ಕಟ್ಟು: ಮೋದಿ, ಶಾ ಭೇಟಿ ನಂತರ ಕಾಂಗ್ರೆಸ್‌ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ..

- Advertisement -
- Advertisement -

ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ, ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಳಿಗ್ಗೆ ದೆಹಲಿಯಲ್ಲಿ ಭೇಟಿಯಾದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ಸಿನ ಪ್ರಭಾವಿ ನಾಯಕರಾದ ಸಿಂಧಿಯಾ ಬಿಜೆಪಿಗೆ ಸೇರುತ್ತಾರೆ ಎಂದು ಉಹಾಪೋಹಗಳನ್ನು ಅವರು ನಿಜಮಾಡಿದ್ದಾರೆ. ಈ ಬೆನ್ನಲ್ಲೇ ಮಧ್ಯಪ್ರದೇಶದ ಕಮಲ್ ನಾಥ್ ಸರ್ಕಾರವನ್ನು ಉರುಳಿಸಲು 20 ಕಾಂಗ್ರೆಸ್ ಶಾಸಕರು ಮಧ್ಯಪ್ರದೇಶದ ವಿಧಾನಸಭೆಯ ಸ್ಪೀಕರ್‌ಗೆ ರಾಜೀನಾಮೆ ಪತ್ರಗಳನ್ನು ಸಲ್ಲಿಸಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಟಕೀಯ ಬದಲಾವಣೆ ಪ್ರಾರಂಭವಾದಾಗಿನಿಂದ ಸಿಂಧಿಯಾ ಅವರನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಸೋಮವಾರ ರಾತ್ರಿ ಸುದ್ದಿಗಾರರಿಗೆ ತಿಳಿಸಿದರು. “ನಾವು ಸಿಂಧಿಯಾ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೆವು ಆದರೆ ಅವರಿಗೆ ಹಂದಿ ಜ್ವರವಿದೆ ಎಂದು ಹೇಳಲಾಗುತ್ತಿದೆ, ಆದ್ದರಿಂದ ಅವರೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ” ಎಂದು ದಿಗ್ವಿಜಯ ಸಿಂಗ್ ಹೇಳಿದ್ದಾರೆ.

ಶಕ್ತಿ ಪ್ರದರ್ಶನಕ್ಕಾಗಿ ತನ್ನ ಶಾಸಕರನ್ನು ಭೋಪಾಲ್‌ಗೆ ಕರೆಸಿಕೊಂಡಿದ್ದ ಬಿಜೆಪಿ ಸಂಜೆ 6 ಗಂಟೆಗೆ ನಗರದ ಹೋಟೆಲ್‌ವೊಂದರಲ್ಲಿ ಸಭೆ ನಡೆಸಲಿದೆ.

ಕಾಂಗ್ರೆಸ್ ನಾಯಕರಾದ ಸಚಿನ್ ಪೈಲಟ್ ಮತ್ತು ಕರಣ್ ಸಿಂಗ್ ಅವರು ಪಕ್ಷದ ಬಿಕ್ಕಟ್ಟು ಶಮನ ಮಾಡಲು ಶ್ರಮಿಸುತ್ತಿದ್ದಾರೆ. “ನಾಯಕರು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಸಮರ್ಥರಾಗಿದ್ದಾರೆ ಮಧ್ಯಪ್ರದೇಶದ ಬಿಕ್ಕಟ್ಟು ಶೀಘ್ರದಲ್ಲೇ ಕೊನೆಗೊಳ್ಳುತ್ತದೆ” ಎಂದು ಸಚಿನ್ ಪೈಲಟ್ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿದ್ದ ಸಿಂಧಿಯಾ ಕೆಲವು ಸಮಯದಿಂದ ಹಿರಿಯ ಕಾಂಗ್ರೆಸ್ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಜಮ್ಮು ಕಾಶ್ಮೀರದ 370 ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಬಹಿರಂಗವಾಗಿ ಬೆಂಬಲಿಸಿದ್ದರು.

230 ಸದಸ್ಯರಿರುವ ಮಧ್ಯಪ್ರದೇಶದ ವಿಧಾನಸಭೆಯಲ್ಲಿ ಸರ್ಕಾರವು ಒಟ್ಟು 120 ಶಾಸಕರ ಬೆಂಬಲವನ್ನು ಹೊಂದಿದೆ. ಇದರಲ್ಲಿ 114 ಮಂದಿ ಕಾಂಗ್ರೆಸ್ ಮೂಲದವರಾದರೆ, ಇಬ್ಬರು ಬಿಎಸ್ಪಿ, ಒಬ್ಬ ಸಮಾಜವಾದಿ ಪಕ್ಷ ಮತ್ತು ನಾಲ್ವರು ಪಕ್ಷೇತರರಾಗಿದ್ದಾರೆ. ಬಿಜೆಪಿಯಲ್ಲಿ 107 ಶಾಸಕರು ಇದ್ದಾರೆ ಹಾಗು ಎರಡು ಸ್ಥಾನಗಳು ಖಾಲಿ ಇವೆ. ಕಾಗ್ರೇಸ್ ನ 17-20 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಕಮಲ್ ನಾಥ್ ಸರಕಾರವನ್ನು ಉರುಳಿಸಲು 10 ಶಾಸಕರು ಕಳೆದವಾರ ದೆಹಲಿಯ ರೆಸಾರ್ಟ್ ಒಂದರಲ್ಲಿ ಬೀಡು ಬಿಟ್ಟಿದ್ದರು. ಅದರಲ್ಲಿ ದಿಗ್ವಿಜಯ ಸಿಂಗ್ ಆರು ಜನರನ್ನು ಮರಳಿ ಕರೆಸುವಲ್ಲಿ ಸಫಲಾಗಿದ್ದರು. ಆದರೆ ಉಳಿದಿದ್ದ ನಾಲ್ವರಲ್ಲಿ ಒಬ್ಬರಾದ ಹರ್ದೀಪ್ ಡಾಂಗ್ ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್‌ಗೆ ಕಳುಹಿಸಿದ ನಂತರ ಕಮಲ್ ನಾಥ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...